Homeಎಕಾನಮಿಆರ್ಥಿಕ ಪುನರುಜ್ಜೀವನಕ್ಕೆ 15 ಲಕ್ಷ ಕೋಟಿ ರೂಗಳ ಪ್ಯಾಕೇಜ್‌ ಬೇಕಿದೆ : ಸಿಐಐ

ಆರ್ಥಿಕ ಪುನರುಜ್ಜೀವನಕ್ಕೆ 15 ಲಕ್ಷ ಕೋಟಿ ರೂಗಳ ಪ್ಯಾಕೇಜ್‌ ಬೇಕಿದೆ : ಸಿಐಐ

- Advertisement -
- Advertisement -

ಆರ್ಥಿಕತೆಯ ಮೇಲೆ ದೀರ್ಘಕಾಲದ ಲಾಕ್‌ಡೌನ್‌ನ ಪರಿಣಾಮ ತೀವ್ರವಾಗಿದೆ ಮತ್ತು 15 ಲಕ್ಷ ಕೋಟಿ ರೂ.ಗಳ ಉದ್ದೀಪನ ಪ್ಯಾಕೇಜ್‌ ಅಗತ್ಯವಿದೆ ಎಂದು ಕಾನ್ಫೆಡರೇಶನ್ ಆಫ್ ಇಂಡಿಯನ್ ಇಂಡಸ್ಟ್ರಿ (ಸಿಐಐ) ಶುಕ್ರವಾರ ತಿಳಿಸಿದೆ. ಇದು ಹಿಂದೆ ಅದು 4.5 ಲಕ್ಷ ಕೋಟಿ ರೂಗಳ ಪ್ಯಾಕೇಜ್‌ ಅಂದಾಜಿಸಿತ್ತು.

ಆರ್ಥಿಕತೆಯ ಮೇಲೆ ನಕಾರಾತ್ಮಕ ಪರಿಣಾಮವು ಉದ್ಯಮವು ಈ ಹಿಂದೆ ನಿರೀಕ್ಷಿಸಿದ್ದಕ್ಕಿಂತಲೂ ಹೆಚ್ಚಾಗಿದೆ. ಹಾಗಾಗಿ ದೊಡ್ಡ ಹಣಕಾಸಿನ ಉತ್ತೇಜನದಿಂದ ಅದನ್ನು ಸರಿದೂಗಿಸಬೇಕಾಗಿದೆ ಎಂದು ಸಿಐಐ ಅಧ್ಯಕ್ಷ ವಿಕ್ರಮ್ ಕಿರ್ಲೋಸ್ಕರ್ ತಿಳಿಸಿದ್ದಾರೆ.

ಲಾಕ್‌ಡೌನ್‌ನ ಮೂರನೇ ಹಂತವು ಮುಗಿಯುವ ಹೊತ್ತಿಗೆ, ಆರ್ಥಿಕತೆಯು ಸುಮಾರು ಎರಡು ತಿಂಗಳ ಉತ್ಪಾದನೆಯನ್ನು ಕಳೆದುಕೊಳ್ಳುತ್ತದೆ. ಹಾಗಗಿ “ಸಿಐಐ 15 ಲಕ್ಷ ಕೋಟಿ ರೂ.ಗಳ ತಕ್ಷಣದ ಪ್ರಚೋದಕ ಪ್ಯಾಕೇಜ್ ಅನ್ನು ಘೋಷಿಸಲು ಸರ್ಕಾರವನ್ನು ಒತ್ತಾಯಿಸುತ್ತದೆ. ಇದು ಜಿಡಿಪಿಯ 7.5% (ಒಟ್ಟು ದೇಶೀಯ ಉತ್ಪನ್ನ) ಆಗಿದೆ” ಎಂದು ಅವರು ಹೇಳಿದ್ದಾರೆ.

ಇತರ ಉದ್ಯಮ ಸಂಘಗಳು ಸಹ ಆರ್ಥಿಕತೆಯನ್ನು ಮತ್ತೆ ಹಳಿಗೆ ತರಲು ದೊಡ್ಡ ಉದ್ದೀಪನ ಪ್ಯಾಕೇಜ್ ಕೇಳಿವೆ. ಫೆಡರೇಶನ್ ಆಫ್ ಇಂಡಿಯನ್ ಚೇಂಬರ್ಸ್ ಆಫ್ ಕಾಮರ್ಸ್ ಅಂಡ್ ಇಂಡಸ್ಟ್ರಿ (ಫಿಕ್ಕಿ) 10 ಲಕ್ಷ ಕೋಟಿ ರೂಗಳ ಪ್ಯಾಕೇಜ್ ಕೇಳಿದ್ದರೆ, ಪಿಎಚ್‌ಡಿ ಚೇಂಬರ್ಸ್ ಆಫ್ ಕಾಮರ್ಸ್ ಅಂಡ್ ಇಂಡಸ್ಟ್ರಿ 16 ಲಕ್ಷ ಕೋಟಿ ರೂಗಳ ನೆರವು ನೀರಿಕ್ಷಿಸಿದೆ.

ಅಸೋಸಿಯೇಟೆಡ್ ಚೇಂಬರ್ಸ್ ಆಫ್ ಕಾಮರ್ಸ್ ಅಂಡ್ ಇಂಡಸ್ಟ್ರಿ ಆಫ್ ಇಂಡಿಯಾ (ಅಸ್ಸೋಚಾಮ್) ಅಧ್ಯಕ್ಷ ನಿರಂಜನ್ ಹಿರಾನಂದಾನಿ ಅವರು ಪ್ರಚೋದಕ ಪ್ಯಾಕೇಜ್‌ನ ತುರ್ತು ಅಗತ್ಯವನ್ನು ಒತ್ತಿ ಹೇಳಿದ್ದಾರೆ. “ನೀತಿ ಆಯೋಗವು 10 ಲಕ್ಷ ಕೋಟಿ ರೂ.ಗಳ ಉದ್ದೀಪನ ಪ್ಯಾಕೇಜ್ ಅನ್ನು ಪ್ರಸ್ತಾಪಿಸಿದೆ ಮತ್ತು ನಾವು 14 ಲಕ್ಷ ಕೋಟಿ ರೂ.ಗೆ ಪ್ಯಾಕೇಜ್ ಅನ್ನು ಸೂಚಿಸಿದ್ದೇವೆ” ಎಂದು ಅವರು ಹೇಳಿದ್ದಾರೆ.

ಪ್ರಧಾನ ಮಂತ್ರಿ ಗರಿಬ್ ಕಲ್ಯಾಣ್ ಯೋಜನೆ (ಪಿಎಂಜಿಕೆವೈ) ಅಡಿಯಲ್ಲಿ ಸರ್ಕಾರದ ಆರಂಭಿಕ ಪ್ರತಿಕ್ರಿಯೆಯನ್ನು ಉದ್ಯಮ ಸಂಸ್ಥೆಗಳು ಅನುಮೋದಿಸಿದ್ದು, ಜೀವ ಮತ್ತು ಜೀವನೋಪಾಯ ಎರಡನ್ನೂ ಉಳಿಸುವ ದೊಡ್ಡ ಪ್ರಚೋದಕ ಪ್ಯಾಕೇಜ್ ಬಗ್ಗೆ ಅವರು ಸರ್ವಾನುಮತದಿಂದ ಒತ್ತಾಯಿಸಿದ್ದಾರೆ. ಮಾರ್ಚ್ 26 ರಂದು ಪಿಎಂಜಿಕೆವೈ ಅಡಿಯಲ್ಲಿ 1.7 ಲಕ್ಷ ಕೋಟಿ ರೂ.ಗಳ ಪ್ಯಾಕೇಜ್ ಘೋಷಿಸಿತು, ಇದು ಜಿಡಿಪಿಯ ಸುಮಾರು 0.8%. ಬಡವರಿಗೆ ಮೂರು ತಿಂಗಳ ಪಡಿತರ ಮತ್ತು ಅಡುಗೆ ಅನಿಲವನ್ನು ಉಚಿತ ಮತ್ತು ನೇರ ನಗದು ವರ್ಗಾವಣೆಗೆ ದೀನದಲಿತ ಮಹಿಳೆಯರು, ವೃದ್ಧರು ಮತ್ತು ಅಂಗವಿಕಲರಿಗೆ ಒದಗಿಸುವ ಮೂಲಕ ಕಲ್ಯಾಣ ಪ್ಯಾಕೇಜ್ ಉದ್ದೇಶಿಸಲಾಗಿದೆ. ಅಂದಿನಿಂದ, ಉದ್ಯಮಕ್ಕಾಗಿ ಶೀಘ್ರದಲ್ಲೇ ಹಣಕಾಸಿನ ಪ್ಯಾಕೇಜ್ ಘೋಷಿಸಲಾಗುತ್ತದೆ ಎಂಬ ವರದಿಗಳು ಬಂದವು, ಆದರೆ ಇದುವರೆಗೆ ಯಾವುದೂ ಆಗಿಲ್ಲ.

ಬಡವರು ಮತ್ತು ಉದ್ಯಮ ಇಬ್ಬರಿಗೂ ವಿಶೇಷವಾಗಿ ಸಣ್ಣ, ಅತಿಸಣ್ಣ ಮತ್ತು ಮಧ್ಯಮ ಉದ್ಯಮಗಳಿಗೆ (ಎಂಎಸ್‌ಎಂಇ) ಸರ್ಕಾರದಿಂದ ತಕ್ಷಣದ ಸಬ್ಸ್ಟಾಂಟಿವ್ ಪ್ರಚೋದನೆ ಅಗತ್ಯವಾಗಿದೆ ಎಂದು ಸಿಐಐ ತಿಳಿಸಿದೆ.

“ಸ್ಪಷ್ಟವಾಗಿ, ಆರ್ಥಿಕತೆಯನ್ನು ರಕ್ಷಿಸಲು ಹಣಕಾಸಿನ ಪ್ರಚೋದಕ ಪ್ಯಾಕೇಜ್ ಘೋಷಿಸುವ ಸಮಯ ಮೀರಿದೆ. ಲಾಕ್‌ಡೌನ್ ಅಡಿಯಲ್ಲಿ ಕುಸಿತದಲ್ಲಿರುವ ಉದ್ಯಮಗಳಿಗೆ ಹಣಕಾಸಿನ ಪರಿಹಾರ ವಿಳಂಬವಾಗುವುದು ಅವರಿಗೆ ಚೇತರಿಸಿಕೊಳ್ಳಲು ಕಷ್ಟವಾಗುತ್ತದೆ ”ಎಂದು ಸಿಐಐ ಮಹಾನಿರ್ದೇಶಕ ಚಂದ್ರಜಿತ್ ಬ್ಯಾನರ್ಜಿ ಹೇಳಿದ್ದಾರೆ.

1.7 ಲಕ್ಷ ರೂ.ಗಳ ಪಿಎಂಜಿಕೆವೈ ಪ್ಯಾಕೇಜ್ ಜೊತೆಗೆ ಜಾಮ್ ಟ್ರಿನಿಟಿ (ಜನ-ಧನ್, ಆಧಾರ್ ಮತ್ತು ಮೊಬೈಲ್) ಮೂಲಕ ಬ್ಯಾಂಕ್ ಖಾತೆಗಳನ್ನು ಹೊಂದಿರುವ ಬಡವರಿಗೆ 2 ಲಕ್ಷ ಕೋಟಿ ರೂ.ಗಳ ನೇರ ನಗದು ವರ್ಗಾವಣೆಯನ್ನು ಅದು ಪ್ರಸ್ತಾಪಿಸಿದೆ. ವಲಸೆ ಕಾರ್ಮಿಕರನ್ನು ಉದ್ದೇಶಿತ ನಗದು ವರ್ಗಾವಣೆಯ ವ್ಯಾಪ್ತಿಯಲ್ಲಿ ಇರಿಸಲಾಗಿದೆಯೆ ಎಂದು ಖಚಿತಪಡಿಸಿಕೊಳ್ಳಬೇಕು ಎಂದು ಬ್ಯಾನರ್ಜಿ ಹೇಳಿದರು.


ಇದನ್ನೂ ಓದಿ: ದಿನಕ್ಕೆ ಕೇವಲ ಒಂದೇ ಹೊತ್ತು ಊಟ : ಅಹಮದಾಬಾದ್‌ನ ಹಲವರ ಪರಿಸ್ಥಿತಿ

Also read: Canada: Indian man loses his job over Islamophobic Tweet

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...