Homeಎಕಾನಮಿಆರ್ಥಿಕ ಪುನರುಜ್ಜೀವನಕ್ಕೆ 15 ಲಕ್ಷ ಕೋಟಿ ರೂಗಳ ಪ್ಯಾಕೇಜ್‌ ಬೇಕಿದೆ : ಸಿಐಐ

ಆರ್ಥಿಕ ಪುನರುಜ್ಜೀವನಕ್ಕೆ 15 ಲಕ್ಷ ಕೋಟಿ ರೂಗಳ ಪ್ಯಾಕೇಜ್‌ ಬೇಕಿದೆ : ಸಿಐಐ

- Advertisement -
- Advertisement -

ಆರ್ಥಿಕತೆಯ ಮೇಲೆ ದೀರ್ಘಕಾಲದ ಲಾಕ್‌ಡೌನ್‌ನ ಪರಿಣಾಮ ತೀವ್ರವಾಗಿದೆ ಮತ್ತು 15 ಲಕ್ಷ ಕೋಟಿ ರೂ.ಗಳ ಉದ್ದೀಪನ ಪ್ಯಾಕೇಜ್‌ ಅಗತ್ಯವಿದೆ ಎಂದು ಕಾನ್ಫೆಡರೇಶನ್ ಆಫ್ ಇಂಡಿಯನ್ ಇಂಡಸ್ಟ್ರಿ (ಸಿಐಐ) ಶುಕ್ರವಾರ ತಿಳಿಸಿದೆ. ಇದು ಹಿಂದೆ ಅದು 4.5 ಲಕ್ಷ ಕೋಟಿ ರೂಗಳ ಪ್ಯಾಕೇಜ್‌ ಅಂದಾಜಿಸಿತ್ತು.

ಆರ್ಥಿಕತೆಯ ಮೇಲೆ ನಕಾರಾತ್ಮಕ ಪರಿಣಾಮವು ಉದ್ಯಮವು ಈ ಹಿಂದೆ ನಿರೀಕ್ಷಿಸಿದ್ದಕ್ಕಿಂತಲೂ ಹೆಚ್ಚಾಗಿದೆ. ಹಾಗಾಗಿ ದೊಡ್ಡ ಹಣಕಾಸಿನ ಉತ್ತೇಜನದಿಂದ ಅದನ್ನು ಸರಿದೂಗಿಸಬೇಕಾಗಿದೆ ಎಂದು ಸಿಐಐ ಅಧ್ಯಕ್ಷ ವಿಕ್ರಮ್ ಕಿರ್ಲೋಸ್ಕರ್ ತಿಳಿಸಿದ್ದಾರೆ.

ಲಾಕ್‌ಡೌನ್‌ನ ಮೂರನೇ ಹಂತವು ಮುಗಿಯುವ ಹೊತ್ತಿಗೆ, ಆರ್ಥಿಕತೆಯು ಸುಮಾರು ಎರಡು ತಿಂಗಳ ಉತ್ಪಾದನೆಯನ್ನು ಕಳೆದುಕೊಳ್ಳುತ್ತದೆ. ಹಾಗಗಿ “ಸಿಐಐ 15 ಲಕ್ಷ ಕೋಟಿ ರೂ.ಗಳ ತಕ್ಷಣದ ಪ್ರಚೋದಕ ಪ್ಯಾಕೇಜ್ ಅನ್ನು ಘೋಷಿಸಲು ಸರ್ಕಾರವನ್ನು ಒತ್ತಾಯಿಸುತ್ತದೆ. ಇದು ಜಿಡಿಪಿಯ 7.5% (ಒಟ್ಟು ದೇಶೀಯ ಉತ್ಪನ್ನ) ಆಗಿದೆ” ಎಂದು ಅವರು ಹೇಳಿದ್ದಾರೆ.

ಇತರ ಉದ್ಯಮ ಸಂಘಗಳು ಸಹ ಆರ್ಥಿಕತೆಯನ್ನು ಮತ್ತೆ ಹಳಿಗೆ ತರಲು ದೊಡ್ಡ ಉದ್ದೀಪನ ಪ್ಯಾಕೇಜ್ ಕೇಳಿವೆ. ಫೆಡರೇಶನ್ ಆಫ್ ಇಂಡಿಯನ್ ಚೇಂಬರ್ಸ್ ಆಫ್ ಕಾಮರ್ಸ್ ಅಂಡ್ ಇಂಡಸ್ಟ್ರಿ (ಫಿಕ್ಕಿ) 10 ಲಕ್ಷ ಕೋಟಿ ರೂಗಳ ಪ್ಯಾಕೇಜ್ ಕೇಳಿದ್ದರೆ, ಪಿಎಚ್‌ಡಿ ಚೇಂಬರ್ಸ್ ಆಫ್ ಕಾಮರ್ಸ್ ಅಂಡ್ ಇಂಡಸ್ಟ್ರಿ 16 ಲಕ್ಷ ಕೋಟಿ ರೂಗಳ ನೆರವು ನೀರಿಕ್ಷಿಸಿದೆ.

ಅಸೋಸಿಯೇಟೆಡ್ ಚೇಂಬರ್ಸ್ ಆಫ್ ಕಾಮರ್ಸ್ ಅಂಡ್ ಇಂಡಸ್ಟ್ರಿ ಆಫ್ ಇಂಡಿಯಾ (ಅಸ್ಸೋಚಾಮ್) ಅಧ್ಯಕ್ಷ ನಿರಂಜನ್ ಹಿರಾನಂದಾನಿ ಅವರು ಪ್ರಚೋದಕ ಪ್ಯಾಕೇಜ್‌ನ ತುರ್ತು ಅಗತ್ಯವನ್ನು ಒತ್ತಿ ಹೇಳಿದ್ದಾರೆ. “ನೀತಿ ಆಯೋಗವು 10 ಲಕ್ಷ ಕೋಟಿ ರೂ.ಗಳ ಉದ್ದೀಪನ ಪ್ಯಾಕೇಜ್ ಅನ್ನು ಪ್ರಸ್ತಾಪಿಸಿದೆ ಮತ್ತು ನಾವು 14 ಲಕ್ಷ ಕೋಟಿ ರೂ.ಗೆ ಪ್ಯಾಕೇಜ್ ಅನ್ನು ಸೂಚಿಸಿದ್ದೇವೆ” ಎಂದು ಅವರು ಹೇಳಿದ್ದಾರೆ.

ಪ್ರಧಾನ ಮಂತ್ರಿ ಗರಿಬ್ ಕಲ್ಯಾಣ್ ಯೋಜನೆ (ಪಿಎಂಜಿಕೆವೈ) ಅಡಿಯಲ್ಲಿ ಸರ್ಕಾರದ ಆರಂಭಿಕ ಪ್ರತಿಕ್ರಿಯೆಯನ್ನು ಉದ್ಯಮ ಸಂಸ್ಥೆಗಳು ಅನುಮೋದಿಸಿದ್ದು, ಜೀವ ಮತ್ತು ಜೀವನೋಪಾಯ ಎರಡನ್ನೂ ಉಳಿಸುವ ದೊಡ್ಡ ಪ್ರಚೋದಕ ಪ್ಯಾಕೇಜ್ ಬಗ್ಗೆ ಅವರು ಸರ್ವಾನುಮತದಿಂದ ಒತ್ತಾಯಿಸಿದ್ದಾರೆ. ಮಾರ್ಚ್ 26 ರಂದು ಪಿಎಂಜಿಕೆವೈ ಅಡಿಯಲ್ಲಿ 1.7 ಲಕ್ಷ ಕೋಟಿ ರೂ.ಗಳ ಪ್ಯಾಕೇಜ್ ಘೋಷಿಸಿತು, ಇದು ಜಿಡಿಪಿಯ ಸುಮಾರು 0.8%. ಬಡವರಿಗೆ ಮೂರು ತಿಂಗಳ ಪಡಿತರ ಮತ್ತು ಅಡುಗೆ ಅನಿಲವನ್ನು ಉಚಿತ ಮತ್ತು ನೇರ ನಗದು ವರ್ಗಾವಣೆಗೆ ದೀನದಲಿತ ಮಹಿಳೆಯರು, ವೃದ್ಧರು ಮತ್ತು ಅಂಗವಿಕಲರಿಗೆ ಒದಗಿಸುವ ಮೂಲಕ ಕಲ್ಯಾಣ ಪ್ಯಾಕೇಜ್ ಉದ್ದೇಶಿಸಲಾಗಿದೆ. ಅಂದಿನಿಂದ, ಉದ್ಯಮಕ್ಕಾಗಿ ಶೀಘ್ರದಲ್ಲೇ ಹಣಕಾಸಿನ ಪ್ಯಾಕೇಜ್ ಘೋಷಿಸಲಾಗುತ್ತದೆ ಎಂಬ ವರದಿಗಳು ಬಂದವು, ಆದರೆ ಇದುವರೆಗೆ ಯಾವುದೂ ಆಗಿಲ್ಲ.

ಬಡವರು ಮತ್ತು ಉದ್ಯಮ ಇಬ್ಬರಿಗೂ ವಿಶೇಷವಾಗಿ ಸಣ್ಣ, ಅತಿಸಣ್ಣ ಮತ್ತು ಮಧ್ಯಮ ಉದ್ಯಮಗಳಿಗೆ (ಎಂಎಸ್‌ಎಂಇ) ಸರ್ಕಾರದಿಂದ ತಕ್ಷಣದ ಸಬ್ಸ್ಟಾಂಟಿವ್ ಪ್ರಚೋದನೆ ಅಗತ್ಯವಾಗಿದೆ ಎಂದು ಸಿಐಐ ತಿಳಿಸಿದೆ.

“ಸ್ಪಷ್ಟವಾಗಿ, ಆರ್ಥಿಕತೆಯನ್ನು ರಕ್ಷಿಸಲು ಹಣಕಾಸಿನ ಪ್ರಚೋದಕ ಪ್ಯಾಕೇಜ್ ಘೋಷಿಸುವ ಸಮಯ ಮೀರಿದೆ. ಲಾಕ್‌ಡೌನ್ ಅಡಿಯಲ್ಲಿ ಕುಸಿತದಲ್ಲಿರುವ ಉದ್ಯಮಗಳಿಗೆ ಹಣಕಾಸಿನ ಪರಿಹಾರ ವಿಳಂಬವಾಗುವುದು ಅವರಿಗೆ ಚೇತರಿಸಿಕೊಳ್ಳಲು ಕಷ್ಟವಾಗುತ್ತದೆ ”ಎಂದು ಸಿಐಐ ಮಹಾನಿರ್ದೇಶಕ ಚಂದ್ರಜಿತ್ ಬ್ಯಾನರ್ಜಿ ಹೇಳಿದ್ದಾರೆ.

1.7 ಲಕ್ಷ ರೂ.ಗಳ ಪಿಎಂಜಿಕೆವೈ ಪ್ಯಾಕೇಜ್ ಜೊತೆಗೆ ಜಾಮ್ ಟ್ರಿನಿಟಿ (ಜನ-ಧನ್, ಆಧಾರ್ ಮತ್ತು ಮೊಬೈಲ್) ಮೂಲಕ ಬ್ಯಾಂಕ್ ಖಾತೆಗಳನ್ನು ಹೊಂದಿರುವ ಬಡವರಿಗೆ 2 ಲಕ್ಷ ಕೋಟಿ ರೂ.ಗಳ ನೇರ ನಗದು ವರ್ಗಾವಣೆಯನ್ನು ಅದು ಪ್ರಸ್ತಾಪಿಸಿದೆ. ವಲಸೆ ಕಾರ್ಮಿಕರನ್ನು ಉದ್ದೇಶಿತ ನಗದು ವರ್ಗಾವಣೆಯ ವ್ಯಾಪ್ತಿಯಲ್ಲಿ ಇರಿಸಲಾಗಿದೆಯೆ ಎಂದು ಖಚಿತಪಡಿಸಿಕೊಳ್ಳಬೇಕು ಎಂದು ಬ್ಯಾನರ್ಜಿ ಹೇಳಿದರು.


ಇದನ್ನೂ ಓದಿ: ದಿನಕ್ಕೆ ಕೇವಲ ಒಂದೇ ಹೊತ್ತು ಊಟ : ಅಹಮದಾಬಾದ್‌ನ ಹಲವರ ಪರಿಸ್ಥಿತಿ

Also read: Canada: Indian man loses his job over Islamophobic Tweet

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...