Homeಮುಖಪುಟಕೇಂದ್ರದಿಂದ ರಾಜ್ಯಕ್ಕೆ ಬರಬೇಕಿದ್ದ ಅನುದಾನದಲ್ಲಿ 19 ಸಾವಿರ ಕೋಟಿ ಕಡಿತ: ಬಿಎಸ್‌ವೈ

ಕೇಂದ್ರದಿಂದ ರಾಜ್ಯಕ್ಕೆ ಬರಬೇಕಿದ್ದ ಅನುದಾನದಲ್ಲಿ 19 ಸಾವಿರ ಕೋಟಿ ಕಡಿತ: ಬಿಎಸ್‌ವೈ

2020-21 ನೇ ಸಾಲಿನ ಬಜೆಟ್‌ನ ಪ್ರಮುಖ ಅಂಶಗಳು...

- Advertisement -
- Advertisement -

ಜಿಎಸ್‌ಟಿ ಪಾಲು ಮತ್ತು ಅನುದಾನ ಸೇರಿ ಕೇಂದ್ರದಿಂದ ರಾಜ್ಯಕ್ಕೆ ಬರಬೇಕಿದ್ದ ಅನುದಾನದಲ್ಲಿ ಅಂದಾಜು 19 ಸಾವಿರ ಕೋಟಿ ಕಡಿತವಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್‌ ಯಡಿಯೂರಪ್ಪ ತಿಳಿಸಿದ್ದಾರೆ.

ಬಜೆಟ್‌ ಭಾಷಣದ ವೇಳೆ ಈ ವಿಷಯ ಪ್ರಸ್ತಾಪಿಸಿದ ಅವರು, ತೆರಿಗೆ, ಮಾಹಿತಿ ತಂತ್ರಜ್ಞಾನ ಆಧರಿತ ಉತ್ಪನ್ನಗಳು ಸೇರಿದಂತೆ ಹಲವಾರು ವಿಚಾರದಲ್ಲಿ ಕರ್ನಾಟಕ ಕೇಂದ್ರಕ್ಕೆ ಹೆಚ್ಚಿನ ತೆರಿಗೆ ಸಲ್ಲಿಸುತ್ತಿದೆ. ಆದರೆ ಕೇಂದ್ರದಿಂದ ಕರ್ನಾಟಕಕ್ಕೆ ಅನುದಾನ ಬರುವಲ್ಲಿ ಕಡಿತವಾಗುತ್ತಿದೆ ಎಂದಿದ್ದಾರೆ.

ಹಾಗಾಗಿ ಕರ್ನಾಟಕದ ಹಲವು ಇಲಾಖೆಗಳ ವೆಚ್ಚ ಕಡಿತ ಮಾಡಿತ ಮಾಡಬೇಕಾದ ಅನಿವಾರ್ಯತೆ ಎದುರಾಗಿದೆ ಬಿಎಸ್‌ವೈ ಸ್ಪಷ್ಟಪಡಿಸಿದ್ದಾರೆ.

2020-21 ನೇ ಸಾಲಿನ ಬಜೆಟ್‌ನ ಪ್ರಮುಖ ಅಂಶಗಳು ಈ ಕೆಳಗಿನಂತಿವೆ.

  • ಬಜೆಟ್ ಶೇಕಡಾ 6 ರಷ್ಟು ಅಬಕಾರಿ ಸುಂಕ ಹೆಚ್ಚಳ, ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ. ಬೆಂಗಳೂರು ಕೆರೆಗಳ ಅಭಿವೃದ್ಧಿ ಗೆ 100 ಕೋಟಿ.
  • ಶುಭ್ರ ಬೆಂಗಳೂರು ಯೋಜನೆಗೆ 900 ಕೋಟಿ ಮೀಸಲು, ಮಹಾದಾಯಿ ಯೋಜನೆಗೆ 500 ಕೋಟಿ ಘೋಷಣೆ,
  • ಎತ್ತಿನಹೊಳೆ ನೀರಾವರಿ ಯೋಜನೆಗೆ 1500 ಕೋಟಿ ಮೊದಲ ಬಾರಿಗೆ ಮಕ್ಕಳ ಬಜೆಟ್ ಮಂಡನೆ.
  • ಕಿಸಾನ್ ಸಮ್ಮಾನ್ ಯೋಜನೆಗೆ 2600 ಕೋಟಿ, ಮನೆ ಖರೀದಿ ನೋಂದಣಿ ಶುಲ್ಕ 5 ರಿಂದ 2ಕ್ಕೆ ಇಳಿಕೆ.
  • ಶನಿವಾರ ಮಕ್ಕಳು ಶಾಲೆಗೆ ಬ್ಯಾಗ್ ತರುವಂತಿಲ್ಲ. ಶಿಕ್ಷಕ ಮಿತ್ರ ಮೊಬೈಲ್ ಆಪ್ 10 ಲಕ್ಷ ಮನೆಗಳಿಗೆ ಮನೆ ಮನೆಗೆ ಗಂಗೆ ಜಲಭಾಗ್ಯ ಯೋಜನೆ ಜಾರಿ.
  • ರಾಜ್ಯದಲ್ಲಿ 2450 ಹೊಸ ಬಸ್ ಖರೀದಿ, ಮಹಿಳಾ ಕಾರ್ಮಿಕರಿಗೆ ಉಚಿತ ಬಸ್ ಪಾಸ್. ಒಂದು ಲಕ್ಷ ಮಹಿಳೆಯರಿಗೆ ಉಚಿತ ಬಿಎಂಟಿಸಿ ಪಾಸ್..
  • ಬೆಂಗಳೂರಿಗೆ 90 ಎಲೆಕ್ಟ್ರಿಕ್ ಬಸ್ ಖರೀದಿ, ಬೆಂಗಳೂರು ನಗರ ಅಭಿವೃದ್ದಿಗೆ 8772 ಕೋಟಿ ರೂ. 60 ವರ್ಷ ಮಿರಿದವರಿಗೆ ಹೊಸ ಯೋಜನೆ ಜಾರಿ.
  • ಬಡವರ ಜೀವನ ಚೈತ್ರಯಾತ್ರೆ ಯೋಜನೆಗೆ 20 ಕೋಟಿ ಮೀಸಲು. ಕೆ.ಸಿ.ಜನರಲ್, ಸಿವಿ ರಾಮನ್ ಆಸ್ಪತ್ರೆಯಲ್ಲಿ ನೂತನ ಲ್ಯಾಬ್ ಸ್ಥಾಪನೆ.
  • ಎಸ್ ಎಸ್ ಎಲ್ ಸಿಯಲ್ಲಿ ರ್‍ಯಾಂಕ್ ಪಡೆದ ವಿದ್ಯಾರ್ಥಿಗಳಿಗೆ ಒಂದು ಲಕ್ಷ ರೂ ನಗದು ಬಹುಮಾನ.
  • ಎಸ್ಸಿ ಎಸ್ಪಿ ನಿರುದ್ಯೋಗಿ ಯುವಕರಿಗೆ ಉಚಿತ ಉದ್ಯೋಗ ತರಬೇತಿ.
  • ಅಡಿಕೆ ಬೆಳೆಗಾರರಿಗೆ 2 ಲಕ್ಷ ರೂವರೆಗೆ ಸಾಲಕ್ಕೆ ಶೇಕಡ 5 ರಷ್ಟು ಬಡ್ಡಿ ವಿನಾಯಿತಿ.
  • ಪೊಲೀಸ್ ಸಿಬ್ಬಂದಿಗೆ ಗೃಹ ಭಾಗ್ಯ ಯೋಜನೆಗೆ 200 ಕೋಟಿ.
  • ಪತ್ರಕರ್ತರ ಕ್ಷೇಮಾಭಿವೃದ್ಧಿಗೆ 5 ಕೋಟಿ ಮೀಸಲು
  • ಗೊಲ್ಲ ಸಮುದಾಯದ ಅಭಿವೃದ್ಧಿಗೆ 10 ಕೋಟಿ
  • ಮಂಗಳೂರು ಹಾಗೂ ಉಡುಪಿಯಲ್ಲಿ ಹೊಸ ಮೀನುಗಾರಿಕಾ ಬಂದರು.
  • ಬಸವ ಕಲ್ಯಾಣದಲ್ಲಿ 500 ಕೋಟಿ ವೆಚ್ಚದಲ್ಲಿ ಅನುಭವ ಮಂಟಪ ನಿರ್ಮಾಣ.
  • ಮಹಿಳಾ ಮೀನುಗಾರರಿಗೆ ದ್ವಿಚಕ್ರ ವಾಹನಕ್ಕೆ ಐದು ಕೋಟಿ ಮೀಸಲು.
  • ಕೈಸ್ತ ಸಮುದಾಯ ಅಭಿವೃದ್ಧಿಗೆ 200 ಕೋಟಿ ರೂ. ಮೀಸಲು.
  • ವಿಶ್ವಕರ್ಮ ಸಮುದಾಯ ಅಭಿವೃದ್ಧಿಗೆ 25 ಕೋಟಿ ರೂ ಮೀಸಲು.
  • ಹನಿ ನೀರಾವರಿಗೆ ಶೇ. 90 ರಷ್ಟು ಸಹಾಯಧನ ನೀಡಲಾಗುವುದು. ಇಸ್ರೇಲ್ ಮಾದರಿಯಲ್ಲಿ ನೀರಿನ ರಕ್ಷಣೆಗೆ ಕ್ರಮ ಕಯಗೊಳ್ಳಲಾಗುವುದು.
  • 10 ಲಕ್ಷ ಮನೆಗಳಿಗೆ ಮನೆ ಮನೆಗೆ ಗಂಗೆ ನೀರು ಯೋಜನ.
  • ಚಿತ್ರದುರ್ಗದ ಮುರುಘಾಮಠದಲ್ಲಿ 325 ಅಡಿ ಎತ್ತರದ ಬಸವಣ್ಣ ಪ್ರತಿಮೆ ಸ್ಥಾಪನೆ,
  • ಎಸ್.ಎಲ್.ಭೈರಪ್ಪ ಹುಟ್ಟೂರು ಅಭಿವೃದ್ಧಿ ಗೆ 5 ಕೋಟಿ.
  • ಇತರೆ ರಾಜ್ಯಗಳಿಗೆ ಹೋಲಿಸಿದರೆ, ರಾಜ್ಯದ ಆದಾಯ ಹೆಚ್ಚಾಗಿದೆ. ಜಿಡಿಪಿಯಲ್ಲಿ ಶೇ. 6- 8 ವೃದ್ಧಿ ನಿರೀಕ್ಷೆಯಿದೆ.
  • 1 ಲಕ್ಷ ಎಕರೆ ಭೂಮಿಗೆ ನೀರಾವರಿ ಸೌಲಭ್ಯ.
  • ರೂ. 100 ಕೋಟಿ ಅನುದಾನದಲ್ಲಿ 278 ಪಬ್ಲಿಕ್ ಶಾಲೆಗಳ ಆರಂಭಕ್ಕೆ ಚಿಂತನೆ.
  •  ಮಹದಾಯಿ ಯೋಜನೆಗೆ ರೂ. 500 ಕೋಟಿ ಕೇಂದ್ರ ಸರ್ಕಾರ ನೀಡಿದೆ.
  •  ಭಾಗ್ಯಲಕ್ಷ್ಮೀ ಯೋಜನೆ, ಶಾಲಾ ಮಕ್ಕಳಿಗೆ ನೀಡುವ ಸೈಕಲ್ ಯೋಜನೆ ಮುಂದುವರಿಕೆ.
  •  ಬಾದಾಮಿ ಕ್ಷೇತ್ರದ ಅಭಿವೃದ್ದಿಗೆ 25 ಕೋಟಿ ರೂ.
  • ಸರ್ಕಾರದಿಂದಲೇ ಎಲೆಕ್ಟ್ರಿಕ್ ಬೈಕ್, ಟ್ಯಾಕ್ಸಿ, ಯೋಜನೆ ಆರಂಭ.
  • ನೇಕಾರರ ಸಾಲ ಮನ್ನಾ ಯೋಜನೆಗೆ 79.57 ಕೋಟಿ.
  • ರಾಜೀವ್ ಗಾಂಧಿ ವಸತಿ ನಿಗಮಕ್ಕೆ 1 ಸಾವಿರ ಕೋಟಿ.
  • ಪ್ರತಿ ಶಾಸಕರು ತಮ್ಮ ಕ್ಷೇತ್ರದಲ್ಲಿ ಮೂರು ಶಾಲೆಗಳನ್ನು ದತ್ತು ಪಡೆಯುವ ಆದೇಶ,
  • ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಗೆ 1500 ಕೋಟಿ.
  • ಆಟೋ ಚಾಲಕರ ಮಕ್ಕಳಿಗೆ ಪ್ರತಿ ವರ್ಷ 2 ಸಾವಿರ. ಇದಕ್ಕಾಗಿ 40 ಕೋಟಿ ಮೀಸಲು.
  •  ವಿಶ್ವೇಶ್ವರಯ್ಯ ತಾಂತ್ರಿಕ ಕಾಲೇಜು ಅಭಿವೃದ್ಧಿಗೆ 10 ಕೋಟಿ.
  •  ಹೂಸ ಏತ ನೀರಾವರಿ ಯೋಜನೆಗಳ ಜಾರಿಗೆ 5 ಸಾವಿರ ಕೋಟಿ.
  • ನೋಂದಾಯಿತ 1 ಲಕ್ಷ ಕಟ್ಟಡ ಕಾರ್ಮಿಕರಿಗೆ ಹೆಲ್ತ್‌ ಕಾರ್ಡ್‌ ವಿತರಣೆ.
  •  ಬೆಂಗಳೂರು ಕೆರೆ ಅಭಿವೃದ್ಧಿಗೆ ರೂ. 100 ಕೋಟಿ ಬಿಡುಗಡೆ.
  •  ಸಾವಯವ ಕೃಷಿ ಪ್ರೋತ್ಸಾಹಕ್ಕೆ ರೂ. 200 ಕೋಟಿ.
  •  ಕೆರೆಗಳ ಅಭಿವೃದ್ಧಿಯ ಕ್ರೀಯಾಯೋಜನೆಗೆ ರೂ. 100 ಕೋಟಿ ಮೀಸಲು.
  •  ಮಳೆಯಿಂದ ಮನೆಗಳಿಗೆ ನೀರು ನುಗ್ಗುವುದನ್ನು ತಡೆಯಲು ರೂ. 200 ಕೋಟಿ ನಿಗದಿ.
  • ರಾಜ ಕಾಲುವೆಗಳ ಅಭಿವೃದ್ಧಿಗೆ ರೂ. 200 ಕೋಟಿ.
  •  ಹಳ್ಳಿಗಳಲ್ಲಿ ಮೂಲಸೌಕರ್ಯ, ಕುಡಿಯುವ ನೀರು ಮತ್ತು ಒಳ ಚರಂಡಿ ಅಭಿವೃದ್ಧಿಗೆ ರೂ. 1 ಸಾವಿರ ಕೋಟಿ ಮೀಸಲು,
  •  ಪಿಯುಸಿ ವಿದ್ಯಾರ್ಥಿಗಳಿಗೆ ಎರಡು ವರ್ಷ ಶಿಷ್ಯವೇತನ.
  • ಸಣ್ಣ ಮಧ್ಯಮ ಕಾಫಿ ಬೆಳೆಗಾರರ ಪಂಪ್ ಸೆಟ್ ಗಳ ವಿದ್ಯುತ್ ಶುಲ್ಕ ವಾಪಾಸ್,
  • ಹೆಬ್ಬಾಳದಿಂದ ಜೆಪಿ ನಗರವರೆಗೆ ಮೆಟ್ರೋ ಸೇವೆ ವಿಸ್ತರಣೆ.
  •  ರಾಜ್ಯದ ಸರ್ವತೋಮುಖ ಅಭಿವೃದ್ಧಿಗಾಗಿ ವಿವಿಧ ಇಲಾಖೆಗಳ ಸಮನ್ವಯ ಸಾಧಿಸಲು ಇಲಾಖಾವಾರು ವಿಂಗಡಿಸದೇ ಆರು ವಲಯಗಳನ್ನಾಗಿ ವಿಂಗಡಿಸಿ ಆಯವ್ಯಯ ಮಂಡನೆ.
  •  “ಪ್ರಧಾನ ಮಂತ್ರಿ ಕಿಸಾನ್ ಸಮಾನ್ ನಿಧಿ ಯೋಜನೆ” ಫಲಾನುಭವಿಗಳಿಗೆ ರಾಜ್ಯ ಸರ್ಕಾರ 4000 ರೂ, ಹೆಚ್ಚುವರಿ ನೆರವು ನೀಡುವ ಯೋಜನೆಯನ್ನು ಮುಂದುವರೆಸಲು 2600 ಕೋಟಿ ರೂ. ಅನುದಾನ
  • ಎಲ್ಲಾ ರೈತರಿಗೆ ಹಾಗೂ ಮೀನುಗಾರರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್ ಸೌಲಭ್ಯ.
  •  ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯ ರಾಜ್ಯದ ವಿಮಾ ಕಂತಿನ ಪಾಲು ಬಿಡುಗಡೆಗೆ 900 ಕೋಟಿ ರೂ.
  •  ರೈತ ಸಿರಿ ಯೋಜನೆಯಡಿ ಟೆಫ್, ಚಿಯಾ ಮತ್ತು ಕೈನೋವಾ ಸಿರಿಧಾನ್ಯಗಳ ಸೇರ್ಪಡೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...