Homeಮುಖಪುಟ2022-23ರಲ್ಲಿ 2.09 ಲಕ್ಷ ಕೋಟಿ ರೂ ಸಾಲ ರೈಟ್ ಆಫ್: ನಮ್ಮೆಲ್ಲರ ಹಣ ಸೋರಿ ಹೋಗುತ್ತಿರುವುದು...

2022-23ರಲ್ಲಿ 2.09 ಲಕ್ಷ ಕೋಟಿ ರೂ ಸಾಲ ರೈಟ್ ಆಫ್: ನಮ್ಮೆಲ್ಲರ ಹಣ ಸೋರಿ ಹೋಗುತ್ತಿರುವುದು ಹೀಗೆ…

ಒಟ್ಟಾರೆಯಾಗಿ ಕಳೆದ ಹತ್ತು ವರ್ಷಗಳಲ್ಲಿ ಭಾರತೀಯ ಬ್ಯಾಂಕುಗಳು 15,31,453 ಕೋಟಿ ರೂಗಳನ್ನು ಮನ್ನಾ ಮಾಡಿವೆ ಎಂದು ಆರ್‌ಬಿಐ ಹೇಳಿದೆ.

- Advertisement -
- Advertisement -

2022-23ರ ಸಾಲಿನ ಆರ್ಥಿಕ ವರ್ಷದಲ್ಲಿ ಬ್ಯಾಂಕ್‌ಗಳು 2.09 ಲಕ್ಷ ಕೋಟಿ ರೂ ರೈಟ್ ಆಫ್ ಮಾಡಿವೆ ಎಂದು ಭಾರತೀಯ ರಿಸರ್ವ್ ಬ್ಯಾಂಕ್ ತಿಳಿಸಿದೆ. ಈ ರೀತಿಯಾಗಿ ಕಳೆದ 5 ವರ್ಷಗಳಲ್ಲಿ ಒಟ್ಟು 10.57 ಲಕ್ಷ ಕೋಟಿ ಸಾಲ ಮನ್ನಾವಾಗಿದೆ ಎಂದು ತಿಳಿದುಬಂದಿದೆ.

ಇಂಡಿಯನ್ ಎಕ್ಸ್‌ಪ್ರೆಸ್ ಸಲ್ಲಿಸಿದ ಮಾಹಿತಿ ಹಕ್ಕು ಅರ್ಜಿಗೆ ಉತ್ತರ ನೀಡಿರುವ ಆರ್‌ಬಿಐ “ಕಳೆದೊಂದು ವರ್ಷದಲ್ಲಿ 2,09,144 ಕೋಟಿ ರೂಗಳನ್ನು ಬ್ಯಾಂಕಿನ ಸಾಲದ ಪುಸ್ತಕರಿಂದ ಹೊಡೆದು ಹಾಕಲಾಗಿದೆ. 2021-22 ರಲ್ಲಿ 1,74,966 ಕೋಟಿ ರೂ. ಮತ್ತು 2020-21ರ ವರ್ಷದಲ್ಲಿ 2,02,781 ಕೋಟಿ ರೂಗಳನ್ನು ಇದೇ ರೀತಿ ಹೊಡೆದು ಹಾಕಲಾಗಿದೆ” ಎಂದು ಮಾಹಿತಿ ನೀಡಿದೆ.

ಒಟ್ಟಾರೆಯಾಗಿ ಕಳೆದ ಹತ್ತು ವರ್ಷಗಳಲ್ಲಿ ಭಾರತೀಯ ಬ್ಯಾಂಕುಗಳು 15,31,453 ಕೋಟಿ ರೂಗಳನ್ನು ಮನ್ನಾ ಮಾಡಿವೆ ಎಂದು ಆರ್‌ಬಿಐ ಹೇಳಿದೆ. ಬಹುತೇಕ ಉದ್ಯಮಿಗಳ ಸಾಲವೇ ಮನ್ನಾ ಆಗಿದೆ ಎನ್ನಲಾಗಿದೆ. ಆದರೆ ಅವರ ಹೆಸರುಗಳನ್ನು ಬಹಿರಂಗಪಡಿಸಲು ಆರ್‌ಬಿಐ ನಿರಾಕರಿಸಿದೆ. ಈ ಹೊಡೆದು ಹಾಕುವ (ರೈಟ್ ಆಫ್) ವಿಧಿಯನ್ನು ಭಾರತೀಯ ರಿಜ಼ರ್ವ್ ಬ್ಯಾಂಕಿನ ಮಾಜಿ ಡೆಪ್ಯೂಟಿ ಗವರ್ನರ್  ಕೆ.ಸಿ.ಚಕ್ರಬರ್ತಿಯವರು “ದೊಡ್ಡ ಹಗರಣ” ಎಂದು ಕರೆಯುತ್ತಾರೆ.

ರೈಟ್ ಆಫ್ ಎಂದರೇನು?

“ಸಾಲ ಮನ್ನಾ” ಎಂದ ಕೂಡಲೇ ಅದು ಏನೆಂದು ಎಲ್ಲರಿಗೂ ತಿಳಿಯುತ್ತದೆ. ಆದರೆ ಈ “ರೈಟ್-ಆಫ್” ಅಂದರೆ “ಸಾಲ ಮನ್ನಾ” ಅಷ್ಟೇ ಅಲ್ಲ ಎಂಬುದು ಬಹಳಷ್ಟು ಜನರಿಗೆ ತಿಳಿದಿರುವುದಿಲ್ಲ. ಯಾವುದೇ ಬ್ಯಾಂಕ್ ತನ್ನ ಸಾಲವನ್ನು ಮನ್ನಾ ಮಾಡಲು ಇಷ್ಟ ಪಡುವುದಿಲ್ಲ, ಏಕೆಂದರೆ ಜನರಿಗೆ/ಉದ್ದಿಮೆಗಳಿಗೆ ನೀಡಿರುವ ಸಾಲ ಬ್ಯಾಂಕಿನ “ಆಸ್ತಿ” ಯಾಗಿರುತ್ತದೆ.

ಉದಾಹರಣೆಗೆ ನೀವು ಬ್ಯಾಂಕಿನಿಂದ ಒಂದು ಲಕ್ಷ ರೂ. ಸಾಲ ಪಡೆದಿದ್ದೀರಿ ಎಂದುಕೊಳ್ಳೋಣ. ಬ್ಯಾಂಕಿನ ದೃಷ್ಟಿಯಲ್ಲಿ ನೀವು ತೆಗೆದುಕೊಂಡಿರುವ ಸಾಲ ಬ್ಯಾಂಕಿಗೆ “ಆಸ್ತಿ” ಮತ್ತು ಅದಕ್ಕೆ ನೀವು ಕಟ್ಟುವ ಬಡ್ಡಿ ಹಣ ಬ್ಯಾಂಕಿಗೆ “ಆದಾಯ” ಆಗುತ್ತದೆ. ಇಂತಹ ಪರಿಸ್ಥಿತಿಯಲ್ಲಿ ನಿಮ್ಮ ಖಾತೆ “ಸಾಮಾನ್ಯ” ಮತ್ತು ನಿಮಗೆ ನೀಡಿರುವ ಹಣ ಬ್ಯಾಂಕಿನ “ಆಸ್ತಿ” ಎಂದು ಪರಿಗಣಿಸಲಾಗುತ್ತದೆ. ಆದರೆ ನೀವು ಬಡ್ಡಿ ಕಟ್ಟುವುದನ್ನು ನಿಲ್ಲಿಸಿದ ನಂತರ ಅಂದರೆ ಬ್ಯಾಂಕಿಗೆ “ಆದಾಯ” ನಿಂತ ದಿನದಿಂದ ನಿಮ್ಮ ಸಾಲವನ್ನು ನಿಷ್ಕ್ರಿಯ ಆಸ್ತಿ ಅಥವಾ ವಸೂಲಾಗದ ಸಾಲ (ನಾನ್-ಪರ್ಫಾರ್ಮಿಂಗ್ ಅಸೆಟ್) ಎಂದು ಮತ್ತು ನಿಮ್ಮಿಂದ ಬರಬೇಕಾಗಿದ್ದ ಬಡ್ಡಿ ಹಣವನ್ನು “ಖರ್ಚು” ಎಂದು ಪರಿಗಣಿಸಲಾಗುತ್ತದೆ.

ಆರ್.ಬಿ.ಐ. ನಿಯಮಾವಳಿ ಅನುಸಾರ ಒಂದು ಸಮಯ/ಹಂತದ ನಂತರ ಇದನ್ನು “ಆಸ್ತಿ” ಎಂದು ಪರಿಗಣಿಸಲು ಆಗುವುದಿಲ್ಲ, ಅದಕ್ಕಾಗಿ ಅದನ್ನು ಬ್ಯಾಂಕಿನ ಲೆಕ್ಕ-ಪತ್ರದಲ್ಲಿ ಆಸ್ತಿ ಪಟ್ಟಿಯಿಂದ ಹೊಡೆದು ಹಾಕಲಾಗುತ್ತದೆ. ಇದನ್ನು ರೈಟ್-ಆಫ್ ಎಂದು ಕರೆಯುತ್ತಾರೆ. ರೈಟ್-ಆಫ್ ಎಂದ ಕೂಡಲೇ ಬ್ಯಾಂಕು ಈ ಸಾಲವನ್ನು ಕೈ ಬಿಟ್ಟಿದೆ ಎಂಬ ಅರ್ಥವಲ್ಲ. ಕಾನೂನಿನ ಪ್ರಕಾರ ಸಾಲಗಾರರ ವಿರುದ್ಧ ಸಾಲ ಮತ್ತು ಬಡ್ದಿಯ ವಸೂಲಿಗೆ ಎಲ್ಲಾ ಕ್ರಮಗಳನ್ನು ಕೈಗೊಳ್ಳಲು ಅಧಿಕಾರವಿರುತ್ತದೆ. ಕೆಲವು ಬ್ಯಾಂಕುಗಳು ಈ “ಹೊಡೆದು ಹಾಕಿದ ಸಾಲ” ವನ್ನು ವಸೂಲಿಗಾಗಿ ವಸೂಲಿ ಕಂಪನಿಗಳಿಗೆ ಮಾರಲೂಬಹುದು. ಅಂತಹ ಸಂದರ್ಭದಲ್ಲಿ ವಸೂಲಿ ಕಂಪನಿಯ ದಾಂಢಿಗರು ನಿಮ್ಮ ಮನೆ ಬಾಗಿಲಿಗೆ ಬಂದು ಕದ ತಟ್ಟಬಹುದು. ನೀವು ಸಾಲದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ಇವಷ್ಟು ಪುಸ್ತಕದ ಬದನೇಕಾಯಿ.

ಇದರಲ್ಲಿ ಬ್ಯಾಂಕಿಗೆ ಆಗುವ ನಷ್ಟ-ಲಾಭವೇನು ನೋಡೋಣ. ಸಾಲರೂಪದಲ್ಲಿ ನೀಡಿರುವ ಹಣ ಸಂಪೂರ್ಣವಾಗಿ ಹಿಂದಕ್ಕೆ ಬಂದೇ ಬರುವುದೆಂಬ ನಂಬಿಕೆ ಯಾವ ಬ್ಯಾಂಕಿಗೂ ಇರುವುದಿಲ್ಲ ಹಾಗಾಗಿ ಸಾಲದ ಮೊತ್ತದ ಒಂದು ಅಂಶವನ್ನು ಅದು ತನ್ನ ಖರ್ಚೆಂದು ಲೆಕ್ಕದ ಪುಸ್ತಕದಲ್ಲಿ ಮೊದಲೇ ತೋರಿಸುತ್ತದೆ. ಇದು ಒಟ್ಟು ಸಾಲದ 5% ಆಗಿರಬಹುದು ಅಥವಾ ಸಾಲದ ಗುಣಮಟ್ಟದ ಆಧಾರದ ಮೇಲೆ ಇನ್ನೂ ಹೆಚ್ಚಾಗಿರಬಹುದು. ನಿಷ್ಕ್ರಿಯ ಸಾಲವನ್ನು ಆಸ್ತಿ ಪಟ್ಟಿಯಿಂದ ಹೊಡೆದು ಹಾಕಿದ ನಂತರ ಬ್ಯಾಂಕಿಗೆ ಖರ್ಚು ಹೆಚ್ಚಾಗಿ ಅದರ ವಾರ್ಷಿಕ ಲಾಭ ಕಡಿಮೆ ಆಗುತ್ತದೆ. ಅಂದರೆ ಆದಾಯ ತೆರಿಗೆಯಲ್ಲಿ ಬ್ಯಾಂಕುಗಳಿಗೆ ವಿನಾಯಿತಿ ದೊರೆಯುತ್ತದೆ. ಇದರಿಂದ ಬ್ಯಾಂಕಿನ ಲೆಕ್ಕ-ಪತ್ರ ಸ್ವಲ್ಪ ಮಟ್ಟಿಗೆ ಸ್ವಚ್ಛವಾಗುತ್ತದೆ. ಆದರೆ ಇದರಿಂದ ಸರಕಾರಕ್ಕೆ ಆದಾಯ ಕಡಿಮೆ (ತೆರಿಗೆ ಖೋತಾ) ಆಗುತ್ತದೆ. ಈ ನಿಷ್ಪ್ರಯೋಜಕ ಆಸ್ತಿಗಳನ್ನು ಕೈ ಬಿಟ್ಟ ನಂತರ ಬ್ಯಾಂಕ್ ಮತ್ತೆ ಬೇರೆಯವರಿಗೆ ಸಾಲ ನೀಡಲು ಸಾಧ್ಯವಾಗುತ್ತದೆ. ಸಾಲ ನೀಡಲು ಬ್ಯಾಂಕಿನ ಬಳಿ ಹಣ ಇಲ್ಲದೆ ಇದ್ದಾಗ ಸರಕಾರ ಅವಕ್ಕೆ “ರಿ-ಫೈನಾನ್ಸಿಂಗ್” ಮಾಡುತ್ತದೆ. ಅಂದರೆ ಸರಕಾರವೂ ಸಹ ಇಂತಹ “ರೈಟ್-ಆಫ್” ಗೆ ಬೆಂಬಲ ನೀಡುತ್ತವೆ ಎಂದರ್ಥ.

ಟೆಕ್ನಿಕಲ್ ರೈಟ್-ಆಫ್ ಎಂದರೇನು?

ಇತ್ತೀಚೆಗೆ ಬ್ಯಾಂಕಿನವರು ಹೊಸ “ಟೆಕ್ನಿಕಲ್ ರೈಟ್-ಆಫ್” ಎಂಬ ಪದ ಉಪಯೋಗಿಸಿ ಜನ ಸಾಮಾನ್ಯರನ್ನು ದಾರಿ ತಪ್ಪಿಸುತ್ತಿವೆ. ಇದನ್ನು ಮಾಜಿ ಡೆಪ್ಯೂಟಿ ಗವರ್ನರ್ ಕೆ.ಸಿ.ಚಕ್ರಬರ್ತಿಯವರು “ದೊಡ್ಡ ಹಗರಣ” ಎಂದು ಕರೆಯುತ್ತಾರೆ. ಇದರಲ್ಲಿ ಯಾವುದೇ “ಟೆಕ್ನಿಕಲ್” ಪ್ರಶ್ನೆ ಇಲ್ಲ. ಸಾಲ ತೆಗೆದುಕೊಂಡಿರುವ ಉದ್ದಿಮೆಗಳ ನಿವ್ವಳ ಆದಾಯ ಬ್ಯಾಂಕಿಗೆ ಬರಬೇಕಾಗಿರುವ ಬಡ್ಡಿಯಷ್ಟೂ ಇಲ್ಲದಿರುವುದು ಅವರ ಲೆಕ್ಕ-ಪತ್ರದಲ್ಲಿ ಸ್ಪಷ್ಟವಾಗಿರುವಾಗ ಸಾಲ ತೆಗೆದುಕೊಂಡಿರುವುದು ಮೋಸದ ಉದ್ದೇಶ. ರೈಟ್-ಆಫ್ ಎನ್ನುವುದು ಬ್ಯಾಂಕಿಂಗ್ ಕ್ಷೇತ್ರದ ಸರ್ವೇ ಸಾಮಾನ್ಯ ಪ್ರಕ್ರಿಯೆ ಅದನ್ನು ಮೀರಿ ನಡೆದಿರುವ ಎಲ್ಲಾ “ಟೆಕ್ನಿಕಲ್ ರೈಟ್-ಆಫ್”ಗಳೂ ಕೇವಲ ಹಗರಣ ಎಂಬುದು ಅವರ ಅನಿಸಿಕೆ.

ಹಾಗಾದರೆ ಈ ಹೊಡೆದು ಹಾಕಿದ ಮೊತ್ತ ಬ್ಯಾಂಕಿಗೆ ಮತ್ತೆ ಬರುತ್ತದೆಯೇ? ವಿಷಯ ಪರಿಣಿತರಲ್ಲಿ ಇದರ ಬಗ್ಗೆ ಏಕಾಭಿಪ್ರಾಯ ಇಲ್ಲ. ಕೆಲವರು ಕೇವಲ 20% ಮಾತ್ರ ಬರುತ್ತದೆ. ಅದೂ ಸಹ ಹತ್ತಾರು ವರ್ಷಗಳ ನ್ಯಾಯಾಲಯದ ಹೋರಾಟದ ನಂತರ, ಎಂದರೆ ಕೆಲವರು ಸುಮಾರು ಅರ್ಧದಷ್ಟು ಬರುತ್ತದೆ ಎನ್ನುತ್ತಾರೆ.

ಏನೇ ಆಗಲಿ ದೊಡ್ಡವರ ದೊಡ್ಡ ಮೊತ್ತದ ಸಾಲ ದೊಡ್ಡ ಹಗರಣವೇ ಸರಿ. ಇದರಲ್ಲಿ ಎಲ್ಲರೂ ಸಹಭಾಗಿ. ಕೊನೆಗೆ ಸರಕಾರಿ ಬ್ಯಾಂಕಿನ ಹಣ ನಮ್ಮ ನಿಮ್ಮ ತೆರಿಗೆಯಿಂದಲೇ ಬರಬೇಕು. ಆದ್ದರಿಂದ ಈಗ ಸರಕಾರ ಹೊಡೆದು ಹಾಕಿರುವ ರೂ.15,31,453 ಕೋಟಿ ರೂ ಸರಿಯೋ ತಪ್ಪೋ ನೀವೇ ಮತ್ತೊಮ್ಮೆ ಯೋಚಿಸಿ.

ಜಿ. ಆರ್. ವಿದ್ಯಾರಣ್ಯ

(ಡಿಸ್ಕ್ಲೇಮರ್: ಲೇಖಕರು ಬ್ಯಾಂಕಿಂಗ್/ಫೈನಾನ್ಸ್ ಪರಿಣಿತರಲ್ಲ. ಬಲ್ಲವರೊಂದಿಗೆ ಚರ್ಚಿಸಿ ಲೇಖನ ತಯಾರಿಸಿದ್ದಾರೆ. ನಿಮ್ಮ ಅನಿಸಿಕೆಗೆ ಸ್ವಾಗತ.)

ಇದನ್ನೂ ಓದಿ; 11.68 ಲಕ್ಷ ಕೋಟಿ ರೈಟ್ ಆಫ್ – 20 ಲಕ್ಷ ಕೋಟಿ NPA: ನಮ್ಮೆಲ್ಲರ ಹಣ ಸೋರಿ ಹೋಗುತ್ತಿರುವುದು ಹೀಗೆ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...