Homeಮುಖಪುಟ2022-23ರಲ್ಲಿ 2.09 ಲಕ್ಷ ಕೋಟಿ ರೂ ಸಾಲ ರೈಟ್ ಆಫ್: ನಮ್ಮೆಲ್ಲರ ಹಣ ಸೋರಿ ಹೋಗುತ್ತಿರುವುದು...

2022-23ರಲ್ಲಿ 2.09 ಲಕ್ಷ ಕೋಟಿ ರೂ ಸಾಲ ರೈಟ್ ಆಫ್: ನಮ್ಮೆಲ್ಲರ ಹಣ ಸೋರಿ ಹೋಗುತ್ತಿರುವುದು ಹೀಗೆ…

ಒಟ್ಟಾರೆಯಾಗಿ ಕಳೆದ ಹತ್ತು ವರ್ಷಗಳಲ್ಲಿ ಭಾರತೀಯ ಬ್ಯಾಂಕುಗಳು 15,31,453 ಕೋಟಿ ರೂಗಳನ್ನು ಮನ್ನಾ ಮಾಡಿವೆ ಎಂದು ಆರ್‌ಬಿಐ ಹೇಳಿದೆ.

- Advertisement -
- Advertisement -

2022-23ರ ಸಾಲಿನ ಆರ್ಥಿಕ ವರ್ಷದಲ್ಲಿ ಬ್ಯಾಂಕ್‌ಗಳು 2.09 ಲಕ್ಷ ಕೋಟಿ ರೂ ರೈಟ್ ಆಫ್ ಮಾಡಿವೆ ಎಂದು ಭಾರತೀಯ ರಿಸರ್ವ್ ಬ್ಯಾಂಕ್ ತಿಳಿಸಿದೆ. ಈ ರೀತಿಯಾಗಿ ಕಳೆದ 5 ವರ್ಷಗಳಲ್ಲಿ ಒಟ್ಟು 10.57 ಲಕ್ಷ ಕೋಟಿ ಸಾಲ ಮನ್ನಾವಾಗಿದೆ ಎಂದು ತಿಳಿದುಬಂದಿದೆ.

ಇಂಡಿಯನ್ ಎಕ್ಸ್‌ಪ್ರೆಸ್ ಸಲ್ಲಿಸಿದ ಮಾಹಿತಿ ಹಕ್ಕು ಅರ್ಜಿಗೆ ಉತ್ತರ ನೀಡಿರುವ ಆರ್‌ಬಿಐ “ಕಳೆದೊಂದು ವರ್ಷದಲ್ಲಿ 2,09,144 ಕೋಟಿ ರೂಗಳನ್ನು ಬ್ಯಾಂಕಿನ ಸಾಲದ ಪುಸ್ತಕರಿಂದ ಹೊಡೆದು ಹಾಕಲಾಗಿದೆ. 2021-22 ರಲ್ಲಿ 1,74,966 ಕೋಟಿ ರೂ. ಮತ್ತು 2020-21ರ ವರ್ಷದಲ್ಲಿ 2,02,781 ಕೋಟಿ ರೂಗಳನ್ನು ಇದೇ ರೀತಿ ಹೊಡೆದು ಹಾಕಲಾಗಿದೆ” ಎಂದು ಮಾಹಿತಿ ನೀಡಿದೆ.

ಒಟ್ಟಾರೆಯಾಗಿ ಕಳೆದ ಹತ್ತು ವರ್ಷಗಳಲ್ಲಿ ಭಾರತೀಯ ಬ್ಯಾಂಕುಗಳು 15,31,453 ಕೋಟಿ ರೂಗಳನ್ನು ಮನ್ನಾ ಮಾಡಿವೆ ಎಂದು ಆರ್‌ಬಿಐ ಹೇಳಿದೆ. ಬಹುತೇಕ ಉದ್ಯಮಿಗಳ ಸಾಲವೇ ಮನ್ನಾ ಆಗಿದೆ ಎನ್ನಲಾಗಿದೆ. ಆದರೆ ಅವರ ಹೆಸರುಗಳನ್ನು ಬಹಿರಂಗಪಡಿಸಲು ಆರ್‌ಬಿಐ ನಿರಾಕರಿಸಿದೆ. ಈ ಹೊಡೆದು ಹಾಕುವ (ರೈಟ್ ಆಫ್) ವಿಧಿಯನ್ನು ಭಾರತೀಯ ರಿಜ಼ರ್ವ್ ಬ್ಯಾಂಕಿನ ಮಾಜಿ ಡೆಪ್ಯೂಟಿ ಗವರ್ನರ್  ಕೆ.ಸಿ.ಚಕ್ರಬರ್ತಿಯವರು “ದೊಡ್ಡ ಹಗರಣ” ಎಂದು ಕರೆಯುತ್ತಾರೆ.

ರೈಟ್ ಆಫ್ ಎಂದರೇನು?

“ಸಾಲ ಮನ್ನಾ” ಎಂದ ಕೂಡಲೇ ಅದು ಏನೆಂದು ಎಲ್ಲರಿಗೂ ತಿಳಿಯುತ್ತದೆ. ಆದರೆ ಈ “ರೈಟ್-ಆಫ್” ಅಂದರೆ “ಸಾಲ ಮನ್ನಾ” ಅಷ್ಟೇ ಅಲ್ಲ ಎಂಬುದು ಬಹಳಷ್ಟು ಜನರಿಗೆ ತಿಳಿದಿರುವುದಿಲ್ಲ. ಯಾವುದೇ ಬ್ಯಾಂಕ್ ತನ್ನ ಸಾಲವನ್ನು ಮನ್ನಾ ಮಾಡಲು ಇಷ್ಟ ಪಡುವುದಿಲ್ಲ, ಏಕೆಂದರೆ ಜನರಿಗೆ/ಉದ್ದಿಮೆಗಳಿಗೆ ನೀಡಿರುವ ಸಾಲ ಬ್ಯಾಂಕಿನ “ಆಸ್ತಿ” ಯಾಗಿರುತ್ತದೆ.

ಉದಾಹರಣೆಗೆ ನೀವು ಬ್ಯಾಂಕಿನಿಂದ ಒಂದು ಲಕ್ಷ ರೂ. ಸಾಲ ಪಡೆದಿದ್ದೀರಿ ಎಂದುಕೊಳ್ಳೋಣ. ಬ್ಯಾಂಕಿನ ದೃಷ್ಟಿಯಲ್ಲಿ ನೀವು ತೆಗೆದುಕೊಂಡಿರುವ ಸಾಲ ಬ್ಯಾಂಕಿಗೆ “ಆಸ್ತಿ” ಮತ್ತು ಅದಕ್ಕೆ ನೀವು ಕಟ್ಟುವ ಬಡ್ಡಿ ಹಣ ಬ್ಯಾಂಕಿಗೆ “ಆದಾಯ” ಆಗುತ್ತದೆ. ಇಂತಹ ಪರಿಸ್ಥಿತಿಯಲ್ಲಿ ನಿಮ್ಮ ಖಾತೆ “ಸಾಮಾನ್ಯ” ಮತ್ತು ನಿಮಗೆ ನೀಡಿರುವ ಹಣ ಬ್ಯಾಂಕಿನ “ಆಸ್ತಿ” ಎಂದು ಪರಿಗಣಿಸಲಾಗುತ್ತದೆ. ಆದರೆ ನೀವು ಬಡ್ಡಿ ಕಟ್ಟುವುದನ್ನು ನಿಲ್ಲಿಸಿದ ನಂತರ ಅಂದರೆ ಬ್ಯಾಂಕಿಗೆ “ಆದಾಯ” ನಿಂತ ದಿನದಿಂದ ನಿಮ್ಮ ಸಾಲವನ್ನು ನಿಷ್ಕ್ರಿಯ ಆಸ್ತಿ ಅಥವಾ ವಸೂಲಾಗದ ಸಾಲ (ನಾನ್-ಪರ್ಫಾರ್ಮಿಂಗ್ ಅಸೆಟ್) ಎಂದು ಮತ್ತು ನಿಮ್ಮಿಂದ ಬರಬೇಕಾಗಿದ್ದ ಬಡ್ಡಿ ಹಣವನ್ನು “ಖರ್ಚು” ಎಂದು ಪರಿಗಣಿಸಲಾಗುತ್ತದೆ.

ಆರ್.ಬಿ.ಐ. ನಿಯಮಾವಳಿ ಅನುಸಾರ ಒಂದು ಸಮಯ/ಹಂತದ ನಂತರ ಇದನ್ನು “ಆಸ್ತಿ” ಎಂದು ಪರಿಗಣಿಸಲು ಆಗುವುದಿಲ್ಲ, ಅದಕ್ಕಾಗಿ ಅದನ್ನು ಬ್ಯಾಂಕಿನ ಲೆಕ್ಕ-ಪತ್ರದಲ್ಲಿ ಆಸ್ತಿ ಪಟ್ಟಿಯಿಂದ ಹೊಡೆದು ಹಾಕಲಾಗುತ್ತದೆ. ಇದನ್ನು ರೈಟ್-ಆಫ್ ಎಂದು ಕರೆಯುತ್ತಾರೆ. ರೈಟ್-ಆಫ್ ಎಂದ ಕೂಡಲೇ ಬ್ಯಾಂಕು ಈ ಸಾಲವನ್ನು ಕೈ ಬಿಟ್ಟಿದೆ ಎಂಬ ಅರ್ಥವಲ್ಲ. ಕಾನೂನಿನ ಪ್ರಕಾರ ಸಾಲಗಾರರ ವಿರುದ್ಧ ಸಾಲ ಮತ್ತು ಬಡ್ದಿಯ ವಸೂಲಿಗೆ ಎಲ್ಲಾ ಕ್ರಮಗಳನ್ನು ಕೈಗೊಳ್ಳಲು ಅಧಿಕಾರವಿರುತ್ತದೆ. ಕೆಲವು ಬ್ಯಾಂಕುಗಳು ಈ “ಹೊಡೆದು ಹಾಕಿದ ಸಾಲ” ವನ್ನು ವಸೂಲಿಗಾಗಿ ವಸೂಲಿ ಕಂಪನಿಗಳಿಗೆ ಮಾರಲೂಬಹುದು. ಅಂತಹ ಸಂದರ್ಭದಲ್ಲಿ ವಸೂಲಿ ಕಂಪನಿಯ ದಾಂಢಿಗರು ನಿಮ್ಮ ಮನೆ ಬಾಗಿಲಿಗೆ ಬಂದು ಕದ ತಟ್ಟಬಹುದು. ನೀವು ಸಾಲದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ಇವಷ್ಟು ಪುಸ್ತಕದ ಬದನೇಕಾಯಿ.

ಇದರಲ್ಲಿ ಬ್ಯಾಂಕಿಗೆ ಆಗುವ ನಷ್ಟ-ಲಾಭವೇನು ನೋಡೋಣ. ಸಾಲರೂಪದಲ್ಲಿ ನೀಡಿರುವ ಹಣ ಸಂಪೂರ್ಣವಾಗಿ ಹಿಂದಕ್ಕೆ ಬಂದೇ ಬರುವುದೆಂಬ ನಂಬಿಕೆ ಯಾವ ಬ್ಯಾಂಕಿಗೂ ಇರುವುದಿಲ್ಲ ಹಾಗಾಗಿ ಸಾಲದ ಮೊತ್ತದ ಒಂದು ಅಂಶವನ್ನು ಅದು ತನ್ನ ಖರ್ಚೆಂದು ಲೆಕ್ಕದ ಪುಸ್ತಕದಲ್ಲಿ ಮೊದಲೇ ತೋರಿಸುತ್ತದೆ. ಇದು ಒಟ್ಟು ಸಾಲದ 5% ಆಗಿರಬಹುದು ಅಥವಾ ಸಾಲದ ಗುಣಮಟ್ಟದ ಆಧಾರದ ಮೇಲೆ ಇನ್ನೂ ಹೆಚ್ಚಾಗಿರಬಹುದು. ನಿಷ್ಕ್ರಿಯ ಸಾಲವನ್ನು ಆಸ್ತಿ ಪಟ್ಟಿಯಿಂದ ಹೊಡೆದು ಹಾಕಿದ ನಂತರ ಬ್ಯಾಂಕಿಗೆ ಖರ್ಚು ಹೆಚ್ಚಾಗಿ ಅದರ ವಾರ್ಷಿಕ ಲಾಭ ಕಡಿಮೆ ಆಗುತ್ತದೆ. ಅಂದರೆ ಆದಾಯ ತೆರಿಗೆಯಲ್ಲಿ ಬ್ಯಾಂಕುಗಳಿಗೆ ವಿನಾಯಿತಿ ದೊರೆಯುತ್ತದೆ. ಇದರಿಂದ ಬ್ಯಾಂಕಿನ ಲೆಕ್ಕ-ಪತ್ರ ಸ್ವಲ್ಪ ಮಟ್ಟಿಗೆ ಸ್ವಚ್ಛವಾಗುತ್ತದೆ. ಆದರೆ ಇದರಿಂದ ಸರಕಾರಕ್ಕೆ ಆದಾಯ ಕಡಿಮೆ (ತೆರಿಗೆ ಖೋತಾ) ಆಗುತ್ತದೆ. ಈ ನಿಷ್ಪ್ರಯೋಜಕ ಆಸ್ತಿಗಳನ್ನು ಕೈ ಬಿಟ್ಟ ನಂತರ ಬ್ಯಾಂಕ್ ಮತ್ತೆ ಬೇರೆಯವರಿಗೆ ಸಾಲ ನೀಡಲು ಸಾಧ್ಯವಾಗುತ್ತದೆ. ಸಾಲ ನೀಡಲು ಬ್ಯಾಂಕಿನ ಬಳಿ ಹಣ ಇಲ್ಲದೆ ಇದ್ದಾಗ ಸರಕಾರ ಅವಕ್ಕೆ “ರಿ-ಫೈನಾನ್ಸಿಂಗ್” ಮಾಡುತ್ತದೆ. ಅಂದರೆ ಸರಕಾರವೂ ಸಹ ಇಂತಹ “ರೈಟ್-ಆಫ್” ಗೆ ಬೆಂಬಲ ನೀಡುತ್ತವೆ ಎಂದರ್ಥ.

ಟೆಕ್ನಿಕಲ್ ರೈಟ್-ಆಫ್ ಎಂದರೇನು?

ಇತ್ತೀಚೆಗೆ ಬ್ಯಾಂಕಿನವರು ಹೊಸ “ಟೆಕ್ನಿಕಲ್ ರೈಟ್-ಆಫ್” ಎಂಬ ಪದ ಉಪಯೋಗಿಸಿ ಜನ ಸಾಮಾನ್ಯರನ್ನು ದಾರಿ ತಪ್ಪಿಸುತ್ತಿವೆ. ಇದನ್ನು ಮಾಜಿ ಡೆಪ್ಯೂಟಿ ಗವರ್ನರ್ ಕೆ.ಸಿ.ಚಕ್ರಬರ್ತಿಯವರು “ದೊಡ್ಡ ಹಗರಣ” ಎಂದು ಕರೆಯುತ್ತಾರೆ. ಇದರಲ್ಲಿ ಯಾವುದೇ “ಟೆಕ್ನಿಕಲ್” ಪ್ರಶ್ನೆ ಇಲ್ಲ. ಸಾಲ ತೆಗೆದುಕೊಂಡಿರುವ ಉದ್ದಿಮೆಗಳ ನಿವ್ವಳ ಆದಾಯ ಬ್ಯಾಂಕಿಗೆ ಬರಬೇಕಾಗಿರುವ ಬಡ್ಡಿಯಷ್ಟೂ ಇಲ್ಲದಿರುವುದು ಅವರ ಲೆಕ್ಕ-ಪತ್ರದಲ್ಲಿ ಸ್ಪಷ್ಟವಾಗಿರುವಾಗ ಸಾಲ ತೆಗೆದುಕೊಂಡಿರುವುದು ಮೋಸದ ಉದ್ದೇಶ. ರೈಟ್-ಆಫ್ ಎನ್ನುವುದು ಬ್ಯಾಂಕಿಂಗ್ ಕ್ಷೇತ್ರದ ಸರ್ವೇ ಸಾಮಾನ್ಯ ಪ್ರಕ್ರಿಯೆ ಅದನ್ನು ಮೀರಿ ನಡೆದಿರುವ ಎಲ್ಲಾ “ಟೆಕ್ನಿಕಲ್ ರೈಟ್-ಆಫ್”ಗಳೂ ಕೇವಲ ಹಗರಣ ಎಂಬುದು ಅವರ ಅನಿಸಿಕೆ.

ಹಾಗಾದರೆ ಈ ಹೊಡೆದು ಹಾಕಿದ ಮೊತ್ತ ಬ್ಯಾಂಕಿಗೆ ಮತ್ತೆ ಬರುತ್ತದೆಯೇ? ವಿಷಯ ಪರಿಣಿತರಲ್ಲಿ ಇದರ ಬಗ್ಗೆ ಏಕಾಭಿಪ್ರಾಯ ಇಲ್ಲ. ಕೆಲವರು ಕೇವಲ 20% ಮಾತ್ರ ಬರುತ್ತದೆ. ಅದೂ ಸಹ ಹತ್ತಾರು ವರ್ಷಗಳ ನ್ಯಾಯಾಲಯದ ಹೋರಾಟದ ನಂತರ, ಎಂದರೆ ಕೆಲವರು ಸುಮಾರು ಅರ್ಧದಷ್ಟು ಬರುತ್ತದೆ ಎನ್ನುತ್ತಾರೆ.

ಏನೇ ಆಗಲಿ ದೊಡ್ಡವರ ದೊಡ್ಡ ಮೊತ್ತದ ಸಾಲ ದೊಡ್ಡ ಹಗರಣವೇ ಸರಿ. ಇದರಲ್ಲಿ ಎಲ್ಲರೂ ಸಹಭಾಗಿ. ಕೊನೆಗೆ ಸರಕಾರಿ ಬ್ಯಾಂಕಿನ ಹಣ ನಮ್ಮ ನಿಮ್ಮ ತೆರಿಗೆಯಿಂದಲೇ ಬರಬೇಕು. ಆದ್ದರಿಂದ ಈಗ ಸರಕಾರ ಹೊಡೆದು ಹಾಕಿರುವ ರೂ.15,31,453 ಕೋಟಿ ರೂ ಸರಿಯೋ ತಪ್ಪೋ ನೀವೇ ಮತ್ತೊಮ್ಮೆ ಯೋಚಿಸಿ.

ಜಿ. ಆರ್. ವಿದ್ಯಾರಣ್ಯ

(ಡಿಸ್ಕ್ಲೇಮರ್: ಲೇಖಕರು ಬ್ಯಾಂಕಿಂಗ್/ಫೈನಾನ್ಸ್ ಪರಿಣಿತರಲ್ಲ. ಬಲ್ಲವರೊಂದಿಗೆ ಚರ್ಚಿಸಿ ಲೇಖನ ತಯಾರಿಸಿದ್ದಾರೆ. ನಿಮ್ಮ ಅನಿಸಿಕೆಗೆ ಸ್ವಾಗತ.)

ಇದನ್ನೂ ಓದಿ; 11.68 ಲಕ್ಷ ಕೋಟಿ ರೈಟ್ ಆಫ್ – 20 ಲಕ್ಷ ಕೋಟಿ NPA: ನಮ್ಮೆಲ್ಲರ ಹಣ ಸೋರಿ ಹೋಗುತ್ತಿರುವುದು ಹೀಗೆ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...