Homeಮುಖಪುಟ2022-23ರಲ್ಲಿ 2.09 ಲಕ್ಷ ಕೋಟಿ ರೂ ಸಾಲ ರೈಟ್ ಆಫ್: ನಮ್ಮೆಲ್ಲರ ಹಣ ಸೋರಿ ಹೋಗುತ್ತಿರುವುದು...

2022-23ರಲ್ಲಿ 2.09 ಲಕ್ಷ ಕೋಟಿ ರೂ ಸಾಲ ರೈಟ್ ಆಫ್: ನಮ್ಮೆಲ್ಲರ ಹಣ ಸೋರಿ ಹೋಗುತ್ತಿರುವುದು ಹೀಗೆ…

ಒಟ್ಟಾರೆಯಾಗಿ ಕಳೆದ ಹತ್ತು ವರ್ಷಗಳಲ್ಲಿ ಭಾರತೀಯ ಬ್ಯಾಂಕುಗಳು 15,31,453 ಕೋಟಿ ರೂಗಳನ್ನು ಮನ್ನಾ ಮಾಡಿವೆ ಎಂದು ಆರ್‌ಬಿಐ ಹೇಳಿದೆ.

- Advertisement -
- Advertisement -

2022-23ರ ಸಾಲಿನ ಆರ್ಥಿಕ ವರ್ಷದಲ್ಲಿ ಬ್ಯಾಂಕ್‌ಗಳು 2.09 ಲಕ್ಷ ಕೋಟಿ ರೂ ರೈಟ್ ಆಫ್ ಮಾಡಿವೆ ಎಂದು ಭಾರತೀಯ ರಿಸರ್ವ್ ಬ್ಯಾಂಕ್ ತಿಳಿಸಿದೆ. ಈ ರೀತಿಯಾಗಿ ಕಳೆದ 5 ವರ್ಷಗಳಲ್ಲಿ ಒಟ್ಟು 10.57 ಲಕ್ಷ ಕೋಟಿ ಸಾಲ ಮನ್ನಾವಾಗಿದೆ ಎಂದು ತಿಳಿದುಬಂದಿದೆ.

ಇಂಡಿಯನ್ ಎಕ್ಸ್‌ಪ್ರೆಸ್ ಸಲ್ಲಿಸಿದ ಮಾಹಿತಿ ಹಕ್ಕು ಅರ್ಜಿಗೆ ಉತ್ತರ ನೀಡಿರುವ ಆರ್‌ಬಿಐ “ಕಳೆದೊಂದು ವರ್ಷದಲ್ಲಿ 2,09,144 ಕೋಟಿ ರೂಗಳನ್ನು ಬ್ಯಾಂಕಿನ ಸಾಲದ ಪುಸ್ತಕರಿಂದ ಹೊಡೆದು ಹಾಕಲಾಗಿದೆ. 2021-22 ರಲ್ಲಿ 1,74,966 ಕೋಟಿ ರೂ. ಮತ್ತು 2020-21ರ ವರ್ಷದಲ್ಲಿ 2,02,781 ಕೋಟಿ ರೂಗಳನ್ನು ಇದೇ ರೀತಿ ಹೊಡೆದು ಹಾಕಲಾಗಿದೆ” ಎಂದು ಮಾಹಿತಿ ನೀಡಿದೆ.

ಒಟ್ಟಾರೆಯಾಗಿ ಕಳೆದ ಹತ್ತು ವರ್ಷಗಳಲ್ಲಿ ಭಾರತೀಯ ಬ್ಯಾಂಕುಗಳು 15,31,453 ಕೋಟಿ ರೂಗಳನ್ನು ಮನ್ನಾ ಮಾಡಿವೆ ಎಂದು ಆರ್‌ಬಿಐ ಹೇಳಿದೆ. ಬಹುತೇಕ ಉದ್ಯಮಿಗಳ ಸಾಲವೇ ಮನ್ನಾ ಆಗಿದೆ ಎನ್ನಲಾಗಿದೆ. ಆದರೆ ಅವರ ಹೆಸರುಗಳನ್ನು ಬಹಿರಂಗಪಡಿಸಲು ಆರ್‌ಬಿಐ ನಿರಾಕರಿಸಿದೆ. ಈ ಹೊಡೆದು ಹಾಕುವ (ರೈಟ್ ಆಫ್) ವಿಧಿಯನ್ನು ಭಾರತೀಯ ರಿಜ಼ರ್ವ್ ಬ್ಯಾಂಕಿನ ಮಾಜಿ ಡೆಪ್ಯೂಟಿ ಗವರ್ನರ್  ಕೆ.ಸಿ.ಚಕ್ರಬರ್ತಿಯವರು “ದೊಡ್ಡ ಹಗರಣ” ಎಂದು ಕರೆಯುತ್ತಾರೆ.

ರೈಟ್ ಆಫ್ ಎಂದರೇನು?

“ಸಾಲ ಮನ್ನಾ” ಎಂದ ಕೂಡಲೇ ಅದು ಏನೆಂದು ಎಲ್ಲರಿಗೂ ತಿಳಿಯುತ್ತದೆ. ಆದರೆ ಈ “ರೈಟ್-ಆಫ್” ಅಂದರೆ “ಸಾಲ ಮನ್ನಾ” ಅಷ್ಟೇ ಅಲ್ಲ ಎಂಬುದು ಬಹಳಷ್ಟು ಜನರಿಗೆ ತಿಳಿದಿರುವುದಿಲ್ಲ. ಯಾವುದೇ ಬ್ಯಾಂಕ್ ತನ್ನ ಸಾಲವನ್ನು ಮನ್ನಾ ಮಾಡಲು ಇಷ್ಟ ಪಡುವುದಿಲ್ಲ, ಏಕೆಂದರೆ ಜನರಿಗೆ/ಉದ್ದಿಮೆಗಳಿಗೆ ನೀಡಿರುವ ಸಾಲ ಬ್ಯಾಂಕಿನ “ಆಸ್ತಿ” ಯಾಗಿರುತ್ತದೆ.

ಉದಾಹರಣೆಗೆ ನೀವು ಬ್ಯಾಂಕಿನಿಂದ ಒಂದು ಲಕ್ಷ ರೂ. ಸಾಲ ಪಡೆದಿದ್ದೀರಿ ಎಂದುಕೊಳ್ಳೋಣ. ಬ್ಯಾಂಕಿನ ದೃಷ್ಟಿಯಲ್ಲಿ ನೀವು ತೆಗೆದುಕೊಂಡಿರುವ ಸಾಲ ಬ್ಯಾಂಕಿಗೆ “ಆಸ್ತಿ” ಮತ್ತು ಅದಕ್ಕೆ ನೀವು ಕಟ್ಟುವ ಬಡ್ಡಿ ಹಣ ಬ್ಯಾಂಕಿಗೆ “ಆದಾಯ” ಆಗುತ್ತದೆ. ಇಂತಹ ಪರಿಸ್ಥಿತಿಯಲ್ಲಿ ನಿಮ್ಮ ಖಾತೆ “ಸಾಮಾನ್ಯ” ಮತ್ತು ನಿಮಗೆ ನೀಡಿರುವ ಹಣ ಬ್ಯಾಂಕಿನ “ಆಸ್ತಿ” ಎಂದು ಪರಿಗಣಿಸಲಾಗುತ್ತದೆ. ಆದರೆ ನೀವು ಬಡ್ಡಿ ಕಟ್ಟುವುದನ್ನು ನಿಲ್ಲಿಸಿದ ನಂತರ ಅಂದರೆ ಬ್ಯಾಂಕಿಗೆ “ಆದಾಯ” ನಿಂತ ದಿನದಿಂದ ನಿಮ್ಮ ಸಾಲವನ್ನು ನಿಷ್ಕ್ರಿಯ ಆಸ್ತಿ ಅಥವಾ ವಸೂಲಾಗದ ಸಾಲ (ನಾನ್-ಪರ್ಫಾರ್ಮಿಂಗ್ ಅಸೆಟ್) ಎಂದು ಮತ್ತು ನಿಮ್ಮಿಂದ ಬರಬೇಕಾಗಿದ್ದ ಬಡ್ಡಿ ಹಣವನ್ನು “ಖರ್ಚು” ಎಂದು ಪರಿಗಣಿಸಲಾಗುತ್ತದೆ.

ಆರ್.ಬಿ.ಐ. ನಿಯಮಾವಳಿ ಅನುಸಾರ ಒಂದು ಸಮಯ/ಹಂತದ ನಂತರ ಇದನ್ನು “ಆಸ್ತಿ” ಎಂದು ಪರಿಗಣಿಸಲು ಆಗುವುದಿಲ್ಲ, ಅದಕ್ಕಾಗಿ ಅದನ್ನು ಬ್ಯಾಂಕಿನ ಲೆಕ್ಕ-ಪತ್ರದಲ್ಲಿ ಆಸ್ತಿ ಪಟ್ಟಿಯಿಂದ ಹೊಡೆದು ಹಾಕಲಾಗುತ್ತದೆ. ಇದನ್ನು ರೈಟ್-ಆಫ್ ಎಂದು ಕರೆಯುತ್ತಾರೆ. ರೈಟ್-ಆಫ್ ಎಂದ ಕೂಡಲೇ ಬ್ಯಾಂಕು ಈ ಸಾಲವನ್ನು ಕೈ ಬಿಟ್ಟಿದೆ ಎಂಬ ಅರ್ಥವಲ್ಲ. ಕಾನೂನಿನ ಪ್ರಕಾರ ಸಾಲಗಾರರ ವಿರುದ್ಧ ಸಾಲ ಮತ್ತು ಬಡ್ದಿಯ ವಸೂಲಿಗೆ ಎಲ್ಲಾ ಕ್ರಮಗಳನ್ನು ಕೈಗೊಳ್ಳಲು ಅಧಿಕಾರವಿರುತ್ತದೆ. ಕೆಲವು ಬ್ಯಾಂಕುಗಳು ಈ “ಹೊಡೆದು ಹಾಕಿದ ಸಾಲ” ವನ್ನು ವಸೂಲಿಗಾಗಿ ವಸೂಲಿ ಕಂಪನಿಗಳಿಗೆ ಮಾರಲೂಬಹುದು. ಅಂತಹ ಸಂದರ್ಭದಲ್ಲಿ ವಸೂಲಿ ಕಂಪನಿಯ ದಾಂಢಿಗರು ನಿಮ್ಮ ಮನೆ ಬಾಗಿಲಿಗೆ ಬಂದು ಕದ ತಟ್ಟಬಹುದು. ನೀವು ಸಾಲದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ಇವಷ್ಟು ಪುಸ್ತಕದ ಬದನೇಕಾಯಿ.

ಇದರಲ್ಲಿ ಬ್ಯಾಂಕಿಗೆ ಆಗುವ ನಷ್ಟ-ಲಾಭವೇನು ನೋಡೋಣ. ಸಾಲರೂಪದಲ್ಲಿ ನೀಡಿರುವ ಹಣ ಸಂಪೂರ್ಣವಾಗಿ ಹಿಂದಕ್ಕೆ ಬಂದೇ ಬರುವುದೆಂಬ ನಂಬಿಕೆ ಯಾವ ಬ್ಯಾಂಕಿಗೂ ಇರುವುದಿಲ್ಲ ಹಾಗಾಗಿ ಸಾಲದ ಮೊತ್ತದ ಒಂದು ಅಂಶವನ್ನು ಅದು ತನ್ನ ಖರ್ಚೆಂದು ಲೆಕ್ಕದ ಪುಸ್ತಕದಲ್ಲಿ ಮೊದಲೇ ತೋರಿಸುತ್ತದೆ. ಇದು ಒಟ್ಟು ಸಾಲದ 5% ಆಗಿರಬಹುದು ಅಥವಾ ಸಾಲದ ಗುಣಮಟ್ಟದ ಆಧಾರದ ಮೇಲೆ ಇನ್ನೂ ಹೆಚ್ಚಾಗಿರಬಹುದು. ನಿಷ್ಕ್ರಿಯ ಸಾಲವನ್ನು ಆಸ್ತಿ ಪಟ್ಟಿಯಿಂದ ಹೊಡೆದು ಹಾಕಿದ ನಂತರ ಬ್ಯಾಂಕಿಗೆ ಖರ್ಚು ಹೆಚ್ಚಾಗಿ ಅದರ ವಾರ್ಷಿಕ ಲಾಭ ಕಡಿಮೆ ಆಗುತ್ತದೆ. ಅಂದರೆ ಆದಾಯ ತೆರಿಗೆಯಲ್ಲಿ ಬ್ಯಾಂಕುಗಳಿಗೆ ವಿನಾಯಿತಿ ದೊರೆಯುತ್ತದೆ. ಇದರಿಂದ ಬ್ಯಾಂಕಿನ ಲೆಕ್ಕ-ಪತ್ರ ಸ್ವಲ್ಪ ಮಟ್ಟಿಗೆ ಸ್ವಚ್ಛವಾಗುತ್ತದೆ. ಆದರೆ ಇದರಿಂದ ಸರಕಾರಕ್ಕೆ ಆದಾಯ ಕಡಿಮೆ (ತೆರಿಗೆ ಖೋತಾ) ಆಗುತ್ತದೆ. ಈ ನಿಷ್ಪ್ರಯೋಜಕ ಆಸ್ತಿಗಳನ್ನು ಕೈ ಬಿಟ್ಟ ನಂತರ ಬ್ಯಾಂಕ್ ಮತ್ತೆ ಬೇರೆಯವರಿಗೆ ಸಾಲ ನೀಡಲು ಸಾಧ್ಯವಾಗುತ್ತದೆ. ಸಾಲ ನೀಡಲು ಬ್ಯಾಂಕಿನ ಬಳಿ ಹಣ ಇಲ್ಲದೆ ಇದ್ದಾಗ ಸರಕಾರ ಅವಕ್ಕೆ “ರಿ-ಫೈನಾನ್ಸಿಂಗ್” ಮಾಡುತ್ತದೆ. ಅಂದರೆ ಸರಕಾರವೂ ಸಹ ಇಂತಹ “ರೈಟ್-ಆಫ್” ಗೆ ಬೆಂಬಲ ನೀಡುತ್ತವೆ ಎಂದರ್ಥ.

ಟೆಕ್ನಿಕಲ್ ರೈಟ್-ಆಫ್ ಎಂದರೇನು?

ಇತ್ತೀಚೆಗೆ ಬ್ಯಾಂಕಿನವರು ಹೊಸ “ಟೆಕ್ನಿಕಲ್ ರೈಟ್-ಆಫ್” ಎಂಬ ಪದ ಉಪಯೋಗಿಸಿ ಜನ ಸಾಮಾನ್ಯರನ್ನು ದಾರಿ ತಪ್ಪಿಸುತ್ತಿವೆ. ಇದನ್ನು ಮಾಜಿ ಡೆಪ್ಯೂಟಿ ಗವರ್ನರ್ ಕೆ.ಸಿ.ಚಕ್ರಬರ್ತಿಯವರು “ದೊಡ್ಡ ಹಗರಣ” ಎಂದು ಕರೆಯುತ್ತಾರೆ. ಇದರಲ್ಲಿ ಯಾವುದೇ “ಟೆಕ್ನಿಕಲ್” ಪ್ರಶ್ನೆ ಇಲ್ಲ. ಸಾಲ ತೆಗೆದುಕೊಂಡಿರುವ ಉದ್ದಿಮೆಗಳ ನಿವ್ವಳ ಆದಾಯ ಬ್ಯಾಂಕಿಗೆ ಬರಬೇಕಾಗಿರುವ ಬಡ್ಡಿಯಷ್ಟೂ ಇಲ್ಲದಿರುವುದು ಅವರ ಲೆಕ್ಕ-ಪತ್ರದಲ್ಲಿ ಸ್ಪಷ್ಟವಾಗಿರುವಾಗ ಸಾಲ ತೆಗೆದುಕೊಂಡಿರುವುದು ಮೋಸದ ಉದ್ದೇಶ. ರೈಟ್-ಆಫ್ ಎನ್ನುವುದು ಬ್ಯಾಂಕಿಂಗ್ ಕ್ಷೇತ್ರದ ಸರ್ವೇ ಸಾಮಾನ್ಯ ಪ್ರಕ್ರಿಯೆ ಅದನ್ನು ಮೀರಿ ನಡೆದಿರುವ ಎಲ್ಲಾ “ಟೆಕ್ನಿಕಲ್ ರೈಟ್-ಆಫ್”ಗಳೂ ಕೇವಲ ಹಗರಣ ಎಂಬುದು ಅವರ ಅನಿಸಿಕೆ.

ಹಾಗಾದರೆ ಈ ಹೊಡೆದು ಹಾಕಿದ ಮೊತ್ತ ಬ್ಯಾಂಕಿಗೆ ಮತ್ತೆ ಬರುತ್ತದೆಯೇ? ವಿಷಯ ಪರಿಣಿತರಲ್ಲಿ ಇದರ ಬಗ್ಗೆ ಏಕಾಭಿಪ್ರಾಯ ಇಲ್ಲ. ಕೆಲವರು ಕೇವಲ 20% ಮಾತ್ರ ಬರುತ್ತದೆ. ಅದೂ ಸಹ ಹತ್ತಾರು ವರ್ಷಗಳ ನ್ಯಾಯಾಲಯದ ಹೋರಾಟದ ನಂತರ, ಎಂದರೆ ಕೆಲವರು ಸುಮಾರು ಅರ್ಧದಷ್ಟು ಬರುತ್ತದೆ ಎನ್ನುತ್ತಾರೆ.

ಏನೇ ಆಗಲಿ ದೊಡ್ಡವರ ದೊಡ್ಡ ಮೊತ್ತದ ಸಾಲ ದೊಡ್ಡ ಹಗರಣವೇ ಸರಿ. ಇದರಲ್ಲಿ ಎಲ್ಲರೂ ಸಹಭಾಗಿ. ಕೊನೆಗೆ ಸರಕಾರಿ ಬ್ಯಾಂಕಿನ ಹಣ ನಮ್ಮ ನಿಮ್ಮ ತೆರಿಗೆಯಿಂದಲೇ ಬರಬೇಕು. ಆದ್ದರಿಂದ ಈಗ ಸರಕಾರ ಹೊಡೆದು ಹಾಕಿರುವ ರೂ.15,31,453 ಕೋಟಿ ರೂ ಸರಿಯೋ ತಪ್ಪೋ ನೀವೇ ಮತ್ತೊಮ್ಮೆ ಯೋಚಿಸಿ.

ಜಿ. ಆರ್. ವಿದ್ಯಾರಣ್ಯ

(ಡಿಸ್ಕ್ಲೇಮರ್: ಲೇಖಕರು ಬ್ಯಾಂಕಿಂಗ್/ಫೈನಾನ್ಸ್ ಪರಿಣಿತರಲ್ಲ. ಬಲ್ಲವರೊಂದಿಗೆ ಚರ್ಚಿಸಿ ಲೇಖನ ತಯಾರಿಸಿದ್ದಾರೆ. ನಿಮ್ಮ ಅನಿಸಿಕೆಗೆ ಸ್ವಾಗತ.)

ಇದನ್ನೂ ಓದಿ; 11.68 ಲಕ್ಷ ಕೋಟಿ ರೈಟ್ ಆಫ್ – 20 ಲಕ್ಷ ಕೋಟಿ NPA: ನಮ್ಮೆಲ್ಲರ ಹಣ ಸೋರಿ ಹೋಗುತ್ತಿರುವುದು ಹೀಗೆ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...