Homeಮುಖಪುಟ2022-23ರಲ್ಲಿ 2.09 ಲಕ್ಷ ಕೋಟಿ ರೂ ಸಾಲ ರೈಟ್ ಆಫ್: ನಮ್ಮೆಲ್ಲರ ಹಣ ಸೋರಿ ಹೋಗುತ್ತಿರುವುದು...

2022-23ರಲ್ಲಿ 2.09 ಲಕ್ಷ ಕೋಟಿ ರೂ ಸಾಲ ರೈಟ್ ಆಫ್: ನಮ್ಮೆಲ್ಲರ ಹಣ ಸೋರಿ ಹೋಗುತ್ತಿರುವುದು ಹೀಗೆ…

ಒಟ್ಟಾರೆಯಾಗಿ ಕಳೆದ ಹತ್ತು ವರ್ಷಗಳಲ್ಲಿ ಭಾರತೀಯ ಬ್ಯಾಂಕುಗಳು 15,31,453 ಕೋಟಿ ರೂಗಳನ್ನು ಮನ್ನಾ ಮಾಡಿವೆ ಎಂದು ಆರ್‌ಬಿಐ ಹೇಳಿದೆ.

- Advertisement -
- Advertisement -

2022-23ರ ಸಾಲಿನ ಆರ್ಥಿಕ ವರ್ಷದಲ್ಲಿ ಬ್ಯಾಂಕ್‌ಗಳು 2.09 ಲಕ್ಷ ಕೋಟಿ ರೂ ರೈಟ್ ಆಫ್ ಮಾಡಿವೆ ಎಂದು ಭಾರತೀಯ ರಿಸರ್ವ್ ಬ್ಯಾಂಕ್ ತಿಳಿಸಿದೆ. ಈ ರೀತಿಯಾಗಿ ಕಳೆದ 5 ವರ್ಷಗಳಲ್ಲಿ ಒಟ್ಟು 10.57 ಲಕ್ಷ ಕೋಟಿ ಸಾಲ ಮನ್ನಾವಾಗಿದೆ ಎಂದು ತಿಳಿದುಬಂದಿದೆ.

ಇಂಡಿಯನ್ ಎಕ್ಸ್‌ಪ್ರೆಸ್ ಸಲ್ಲಿಸಿದ ಮಾಹಿತಿ ಹಕ್ಕು ಅರ್ಜಿಗೆ ಉತ್ತರ ನೀಡಿರುವ ಆರ್‌ಬಿಐ “ಕಳೆದೊಂದು ವರ್ಷದಲ್ಲಿ 2,09,144 ಕೋಟಿ ರೂಗಳನ್ನು ಬ್ಯಾಂಕಿನ ಸಾಲದ ಪುಸ್ತಕರಿಂದ ಹೊಡೆದು ಹಾಕಲಾಗಿದೆ. 2021-22 ರಲ್ಲಿ 1,74,966 ಕೋಟಿ ರೂ. ಮತ್ತು 2020-21ರ ವರ್ಷದಲ್ಲಿ 2,02,781 ಕೋಟಿ ರೂಗಳನ್ನು ಇದೇ ರೀತಿ ಹೊಡೆದು ಹಾಕಲಾಗಿದೆ” ಎಂದು ಮಾಹಿತಿ ನೀಡಿದೆ.

ಒಟ್ಟಾರೆಯಾಗಿ ಕಳೆದ ಹತ್ತು ವರ್ಷಗಳಲ್ಲಿ ಭಾರತೀಯ ಬ್ಯಾಂಕುಗಳು 15,31,453 ಕೋಟಿ ರೂಗಳನ್ನು ಮನ್ನಾ ಮಾಡಿವೆ ಎಂದು ಆರ್‌ಬಿಐ ಹೇಳಿದೆ. ಬಹುತೇಕ ಉದ್ಯಮಿಗಳ ಸಾಲವೇ ಮನ್ನಾ ಆಗಿದೆ ಎನ್ನಲಾಗಿದೆ. ಆದರೆ ಅವರ ಹೆಸರುಗಳನ್ನು ಬಹಿರಂಗಪಡಿಸಲು ಆರ್‌ಬಿಐ ನಿರಾಕರಿಸಿದೆ. ಈ ಹೊಡೆದು ಹಾಕುವ (ರೈಟ್ ಆಫ್) ವಿಧಿಯನ್ನು ಭಾರತೀಯ ರಿಜ಼ರ್ವ್ ಬ್ಯಾಂಕಿನ ಮಾಜಿ ಡೆಪ್ಯೂಟಿ ಗವರ್ನರ್  ಕೆ.ಸಿ.ಚಕ್ರಬರ್ತಿಯವರು “ದೊಡ್ಡ ಹಗರಣ” ಎಂದು ಕರೆಯುತ್ತಾರೆ.

ರೈಟ್ ಆಫ್ ಎಂದರೇನು?

“ಸಾಲ ಮನ್ನಾ” ಎಂದ ಕೂಡಲೇ ಅದು ಏನೆಂದು ಎಲ್ಲರಿಗೂ ತಿಳಿಯುತ್ತದೆ. ಆದರೆ ಈ “ರೈಟ್-ಆಫ್” ಅಂದರೆ “ಸಾಲ ಮನ್ನಾ” ಅಷ್ಟೇ ಅಲ್ಲ ಎಂಬುದು ಬಹಳಷ್ಟು ಜನರಿಗೆ ತಿಳಿದಿರುವುದಿಲ್ಲ. ಯಾವುದೇ ಬ್ಯಾಂಕ್ ತನ್ನ ಸಾಲವನ್ನು ಮನ್ನಾ ಮಾಡಲು ಇಷ್ಟ ಪಡುವುದಿಲ್ಲ, ಏಕೆಂದರೆ ಜನರಿಗೆ/ಉದ್ದಿಮೆಗಳಿಗೆ ನೀಡಿರುವ ಸಾಲ ಬ್ಯಾಂಕಿನ “ಆಸ್ತಿ” ಯಾಗಿರುತ್ತದೆ.

ಉದಾಹರಣೆಗೆ ನೀವು ಬ್ಯಾಂಕಿನಿಂದ ಒಂದು ಲಕ್ಷ ರೂ. ಸಾಲ ಪಡೆದಿದ್ದೀರಿ ಎಂದುಕೊಳ್ಳೋಣ. ಬ್ಯಾಂಕಿನ ದೃಷ್ಟಿಯಲ್ಲಿ ನೀವು ತೆಗೆದುಕೊಂಡಿರುವ ಸಾಲ ಬ್ಯಾಂಕಿಗೆ “ಆಸ್ತಿ” ಮತ್ತು ಅದಕ್ಕೆ ನೀವು ಕಟ್ಟುವ ಬಡ್ಡಿ ಹಣ ಬ್ಯಾಂಕಿಗೆ “ಆದಾಯ” ಆಗುತ್ತದೆ. ಇಂತಹ ಪರಿಸ್ಥಿತಿಯಲ್ಲಿ ನಿಮ್ಮ ಖಾತೆ “ಸಾಮಾನ್ಯ” ಮತ್ತು ನಿಮಗೆ ನೀಡಿರುವ ಹಣ ಬ್ಯಾಂಕಿನ “ಆಸ್ತಿ” ಎಂದು ಪರಿಗಣಿಸಲಾಗುತ್ತದೆ. ಆದರೆ ನೀವು ಬಡ್ಡಿ ಕಟ್ಟುವುದನ್ನು ನಿಲ್ಲಿಸಿದ ನಂತರ ಅಂದರೆ ಬ್ಯಾಂಕಿಗೆ “ಆದಾಯ” ನಿಂತ ದಿನದಿಂದ ನಿಮ್ಮ ಸಾಲವನ್ನು ನಿಷ್ಕ್ರಿಯ ಆಸ್ತಿ ಅಥವಾ ವಸೂಲಾಗದ ಸಾಲ (ನಾನ್-ಪರ್ಫಾರ್ಮಿಂಗ್ ಅಸೆಟ್) ಎಂದು ಮತ್ತು ನಿಮ್ಮಿಂದ ಬರಬೇಕಾಗಿದ್ದ ಬಡ್ಡಿ ಹಣವನ್ನು “ಖರ್ಚು” ಎಂದು ಪರಿಗಣಿಸಲಾಗುತ್ತದೆ.

ಆರ್.ಬಿ.ಐ. ನಿಯಮಾವಳಿ ಅನುಸಾರ ಒಂದು ಸಮಯ/ಹಂತದ ನಂತರ ಇದನ್ನು “ಆಸ್ತಿ” ಎಂದು ಪರಿಗಣಿಸಲು ಆಗುವುದಿಲ್ಲ, ಅದಕ್ಕಾಗಿ ಅದನ್ನು ಬ್ಯಾಂಕಿನ ಲೆಕ್ಕ-ಪತ್ರದಲ್ಲಿ ಆಸ್ತಿ ಪಟ್ಟಿಯಿಂದ ಹೊಡೆದು ಹಾಕಲಾಗುತ್ತದೆ. ಇದನ್ನು ರೈಟ್-ಆಫ್ ಎಂದು ಕರೆಯುತ್ತಾರೆ. ರೈಟ್-ಆಫ್ ಎಂದ ಕೂಡಲೇ ಬ್ಯಾಂಕು ಈ ಸಾಲವನ್ನು ಕೈ ಬಿಟ್ಟಿದೆ ಎಂಬ ಅರ್ಥವಲ್ಲ. ಕಾನೂನಿನ ಪ್ರಕಾರ ಸಾಲಗಾರರ ವಿರುದ್ಧ ಸಾಲ ಮತ್ತು ಬಡ್ದಿಯ ವಸೂಲಿಗೆ ಎಲ್ಲಾ ಕ್ರಮಗಳನ್ನು ಕೈಗೊಳ್ಳಲು ಅಧಿಕಾರವಿರುತ್ತದೆ. ಕೆಲವು ಬ್ಯಾಂಕುಗಳು ಈ “ಹೊಡೆದು ಹಾಕಿದ ಸಾಲ” ವನ್ನು ವಸೂಲಿಗಾಗಿ ವಸೂಲಿ ಕಂಪನಿಗಳಿಗೆ ಮಾರಲೂಬಹುದು. ಅಂತಹ ಸಂದರ್ಭದಲ್ಲಿ ವಸೂಲಿ ಕಂಪನಿಯ ದಾಂಢಿಗರು ನಿಮ್ಮ ಮನೆ ಬಾಗಿಲಿಗೆ ಬಂದು ಕದ ತಟ್ಟಬಹುದು. ನೀವು ಸಾಲದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ಇವಷ್ಟು ಪುಸ್ತಕದ ಬದನೇಕಾಯಿ.

ಇದರಲ್ಲಿ ಬ್ಯಾಂಕಿಗೆ ಆಗುವ ನಷ್ಟ-ಲಾಭವೇನು ನೋಡೋಣ. ಸಾಲರೂಪದಲ್ಲಿ ನೀಡಿರುವ ಹಣ ಸಂಪೂರ್ಣವಾಗಿ ಹಿಂದಕ್ಕೆ ಬಂದೇ ಬರುವುದೆಂಬ ನಂಬಿಕೆ ಯಾವ ಬ್ಯಾಂಕಿಗೂ ಇರುವುದಿಲ್ಲ ಹಾಗಾಗಿ ಸಾಲದ ಮೊತ್ತದ ಒಂದು ಅಂಶವನ್ನು ಅದು ತನ್ನ ಖರ್ಚೆಂದು ಲೆಕ್ಕದ ಪುಸ್ತಕದಲ್ಲಿ ಮೊದಲೇ ತೋರಿಸುತ್ತದೆ. ಇದು ಒಟ್ಟು ಸಾಲದ 5% ಆಗಿರಬಹುದು ಅಥವಾ ಸಾಲದ ಗುಣಮಟ್ಟದ ಆಧಾರದ ಮೇಲೆ ಇನ್ನೂ ಹೆಚ್ಚಾಗಿರಬಹುದು. ನಿಷ್ಕ್ರಿಯ ಸಾಲವನ್ನು ಆಸ್ತಿ ಪಟ್ಟಿಯಿಂದ ಹೊಡೆದು ಹಾಕಿದ ನಂತರ ಬ್ಯಾಂಕಿಗೆ ಖರ್ಚು ಹೆಚ್ಚಾಗಿ ಅದರ ವಾರ್ಷಿಕ ಲಾಭ ಕಡಿಮೆ ಆಗುತ್ತದೆ. ಅಂದರೆ ಆದಾಯ ತೆರಿಗೆಯಲ್ಲಿ ಬ್ಯಾಂಕುಗಳಿಗೆ ವಿನಾಯಿತಿ ದೊರೆಯುತ್ತದೆ. ಇದರಿಂದ ಬ್ಯಾಂಕಿನ ಲೆಕ್ಕ-ಪತ್ರ ಸ್ವಲ್ಪ ಮಟ್ಟಿಗೆ ಸ್ವಚ್ಛವಾಗುತ್ತದೆ. ಆದರೆ ಇದರಿಂದ ಸರಕಾರಕ್ಕೆ ಆದಾಯ ಕಡಿಮೆ (ತೆರಿಗೆ ಖೋತಾ) ಆಗುತ್ತದೆ. ಈ ನಿಷ್ಪ್ರಯೋಜಕ ಆಸ್ತಿಗಳನ್ನು ಕೈ ಬಿಟ್ಟ ನಂತರ ಬ್ಯಾಂಕ್ ಮತ್ತೆ ಬೇರೆಯವರಿಗೆ ಸಾಲ ನೀಡಲು ಸಾಧ್ಯವಾಗುತ್ತದೆ. ಸಾಲ ನೀಡಲು ಬ್ಯಾಂಕಿನ ಬಳಿ ಹಣ ಇಲ್ಲದೆ ಇದ್ದಾಗ ಸರಕಾರ ಅವಕ್ಕೆ “ರಿ-ಫೈನಾನ್ಸಿಂಗ್” ಮಾಡುತ್ತದೆ. ಅಂದರೆ ಸರಕಾರವೂ ಸಹ ಇಂತಹ “ರೈಟ್-ಆಫ್” ಗೆ ಬೆಂಬಲ ನೀಡುತ್ತವೆ ಎಂದರ್ಥ.

ಟೆಕ್ನಿಕಲ್ ರೈಟ್-ಆಫ್ ಎಂದರೇನು?

ಇತ್ತೀಚೆಗೆ ಬ್ಯಾಂಕಿನವರು ಹೊಸ “ಟೆಕ್ನಿಕಲ್ ರೈಟ್-ಆಫ್” ಎಂಬ ಪದ ಉಪಯೋಗಿಸಿ ಜನ ಸಾಮಾನ್ಯರನ್ನು ದಾರಿ ತಪ್ಪಿಸುತ್ತಿವೆ. ಇದನ್ನು ಮಾಜಿ ಡೆಪ್ಯೂಟಿ ಗವರ್ನರ್ ಕೆ.ಸಿ.ಚಕ್ರಬರ್ತಿಯವರು “ದೊಡ್ಡ ಹಗರಣ” ಎಂದು ಕರೆಯುತ್ತಾರೆ. ಇದರಲ್ಲಿ ಯಾವುದೇ “ಟೆಕ್ನಿಕಲ್” ಪ್ರಶ್ನೆ ಇಲ್ಲ. ಸಾಲ ತೆಗೆದುಕೊಂಡಿರುವ ಉದ್ದಿಮೆಗಳ ನಿವ್ವಳ ಆದಾಯ ಬ್ಯಾಂಕಿಗೆ ಬರಬೇಕಾಗಿರುವ ಬಡ್ಡಿಯಷ್ಟೂ ಇಲ್ಲದಿರುವುದು ಅವರ ಲೆಕ್ಕ-ಪತ್ರದಲ್ಲಿ ಸ್ಪಷ್ಟವಾಗಿರುವಾಗ ಸಾಲ ತೆಗೆದುಕೊಂಡಿರುವುದು ಮೋಸದ ಉದ್ದೇಶ. ರೈಟ್-ಆಫ್ ಎನ್ನುವುದು ಬ್ಯಾಂಕಿಂಗ್ ಕ್ಷೇತ್ರದ ಸರ್ವೇ ಸಾಮಾನ್ಯ ಪ್ರಕ್ರಿಯೆ ಅದನ್ನು ಮೀರಿ ನಡೆದಿರುವ ಎಲ್ಲಾ “ಟೆಕ್ನಿಕಲ್ ರೈಟ್-ಆಫ್”ಗಳೂ ಕೇವಲ ಹಗರಣ ಎಂಬುದು ಅವರ ಅನಿಸಿಕೆ.

ಹಾಗಾದರೆ ಈ ಹೊಡೆದು ಹಾಕಿದ ಮೊತ್ತ ಬ್ಯಾಂಕಿಗೆ ಮತ್ತೆ ಬರುತ್ತದೆಯೇ? ವಿಷಯ ಪರಿಣಿತರಲ್ಲಿ ಇದರ ಬಗ್ಗೆ ಏಕಾಭಿಪ್ರಾಯ ಇಲ್ಲ. ಕೆಲವರು ಕೇವಲ 20% ಮಾತ್ರ ಬರುತ್ತದೆ. ಅದೂ ಸಹ ಹತ್ತಾರು ವರ್ಷಗಳ ನ್ಯಾಯಾಲಯದ ಹೋರಾಟದ ನಂತರ, ಎಂದರೆ ಕೆಲವರು ಸುಮಾರು ಅರ್ಧದಷ್ಟು ಬರುತ್ತದೆ ಎನ್ನುತ್ತಾರೆ.

ಏನೇ ಆಗಲಿ ದೊಡ್ಡವರ ದೊಡ್ಡ ಮೊತ್ತದ ಸಾಲ ದೊಡ್ಡ ಹಗರಣವೇ ಸರಿ. ಇದರಲ್ಲಿ ಎಲ್ಲರೂ ಸಹಭಾಗಿ. ಕೊನೆಗೆ ಸರಕಾರಿ ಬ್ಯಾಂಕಿನ ಹಣ ನಮ್ಮ ನಿಮ್ಮ ತೆರಿಗೆಯಿಂದಲೇ ಬರಬೇಕು. ಆದ್ದರಿಂದ ಈಗ ಸರಕಾರ ಹೊಡೆದು ಹಾಕಿರುವ ರೂ.15,31,453 ಕೋಟಿ ರೂ ಸರಿಯೋ ತಪ್ಪೋ ನೀವೇ ಮತ್ತೊಮ್ಮೆ ಯೋಚಿಸಿ.

ಜಿ. ಆರ್. ವಿದ್ಯಾರಣ್ಯ

(ಡಿಸ್ಕ್ಲೇಮರ್: ಲೇಖಕರು ಬ್ಯಾಂಕಿಂಗ್/ಫೈನಾನ್ಸ್ ಪರಿಣಿತರಲ್ಲ. ಬಲ್ಲವರೊಂದಿಗೆ ಚರ್ಚಿಸಿ ಲೇಖನ ತಯಾರಿಸಿದ್ದಾರೆ. ನಿಮ್ಮ ಅನಿಸಿಕೆಗೆ ಸ್ವಾಗತ.)

ಇದನ್ನೂ ಓದಿ; 11.68 ಲಕ್ಷ ಕೋಟಿ ರೈಟ್ ಆಫ್ – 20 ಲಕ್ಷ ಕೋಟಿ NPA: ನಮ್ಮೆಲ್ಲರ ಹಣ ಸೋರಿ ಹೋಗುತ್ತಿರುವುದು ಹೀಗೆ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...