Homeಮುಖಪುಟ2022-23ರಲ್ಲಿ 2.09 ಲಕ್ಷ ಕೋಟಿ ರೂ ಸಾಲ ರೈಟ್ ಆಫ್: ನಮ್ಮೆಲ್ಲರ ಹಣ ಸೋರಿ ಹೋಗುತ್ತಿರುವುದು...

2022-23ರಲ್ಲಿ 2.09 ಲಕ್ಷ ಕೋಟಿ ರೂ ಸಾಲ ರೈಟ್ ಆಫ್: ನಮ್ಮೆಲ್ಲರ ಹಣ ಸೋರಿ ಹೋಗುತ್ತಿರುವುದು ಹೀಗೆ…

ಒಟ್ಟಾರೆಯಾಗಿ ಕಳೆದ ಹತ್ತು ವರ್ಷಗಳಲ್ಲಿ ಭಾರತೀಯ ಬ್ಯಾಂಕುಗಳು 15,31,453 ಕೋಟಿ ರೂಗಳನ್ನು ಮನ್ನಾ ಮಾಡಿವೆ ಎಂದು ಆರ್‌ಬಿಐ ಹೇಳಿದೆ.

- Advertisement -
- Advertisement -

2022-23ರ ಸಾಲಿನ ಆರ್ಥಿಕ ವರ್ಷದಲ್ಲಿ ಬ್ಯಾಂಕ್‌ಗಳು 2.09 ಲಕ್ಷ ಕೋಟಿ ರೂ ರೈಟ್ ಆಫ್ ಮಾಡಿವೆ ಎಂದು ಭಾರತೀಯ ರಿಸರ್ವ್ ಬ್ಯಾಂಕ್ ತಿಳಿಸಿದೆ. ಈ ರೀತಿಯಾಗಿ ಕಳೆದ 5 ವರ್ಷಗಳಲ್ಲಿ ಒಟ್ಟು 10.57 ಲಕ್ಷ ಕೋಟಿ ಸಾಲ ಮನ್ನಾವಾಗಿದೆ ಎಂದು ತಿಳಿದುಬಂದಿದೆ.

ಇಂಡಿಯನ್ ಎಕ್ಸ್‌ಪ್ರೆಸ್ ಸಲ್ಲಿಸಿದ ಮಾಹಿತಿ ಹಕ್ಕು ಅರ್ಜಿಗೆ ಉತ್ತರ ನೀಡಿರುವ ಆರ್‌ಬಿಐ “ಕಳೆದೊಂದು ವರ್ಷದಲ್ಲಿ 2,09,144 ಕೋಟಿ ರೂಗಳನ್ನು ಬ್ಯಾಂಕಿನ ಸಾಲದ ಪುಸ್ತಕರಿಂದ ಹೊಡೆದು ಹಾಕಲಾಗಿದೆ. 2021-22 ರಲ್ಲಿ 1,74,966 ಕೋಟಿ ರೂ. ಮತ್ತು 2020-21ರ ವರ್ಷದಲ್ಲಿ 2,02,781 ಕೋಟಿ ರೂಗಳನ್ನು ಇದೇ ರೀತಿ ಹೊಡೆದು ಹಾಕಲಾಗಿದೆ” ಎಂದು ಮಾಹಿತಿ ನೀಡಿದೆ.

ಒಟ್ಟಾರೆಯಾಗಿ ಕಳೆದ ಹತ್ತು ವರ್ಷಗಳಲ್ಲಿ ಭಾರತೀಯ ಬ್ಯಾಂಕುಗಳು 15,31,453 ಕೋಟಿ ರೂಗಳನ್ನು ಮನ್ನಾ ಮಾಡಿವೆ ಎಂದು ಆರ್‌ಬಿಐ ಹೇಳಿದೆ. ಬಹುತೇಕ ಉದ್ಯಮಿಗಳ ಸಾಲವೇ ಮನ್ನಾ ಆಗಿದೆ ಎನ್ನಲಾಗಿದೆ. ಆದರೆ ಅವರ ಹೆಸರುಗಳನ್ನು ಬಹಿರಂಗಪಡಿಸಲು ಆರ್‌ಬಿಐ ನಿರಾಕರಿಸಿದೆ. ಈ ಹೊಡೆದು ಹಾಕುವ (ರೈಟ್ ಆಫ್) ವಿಧಿಯನ್ನು ಭಾರತೀಯ ರಿಜ಼ರ್ವ್ ಬ್ಯಾಂಕಿನ ಮಾಜಿ ಡೆಪ್ಯೂಟಿ ಗವರ್ನರ್  ಕೆ.ಸಿ.ಚಕ್ರಬರ್ತಿಯವರು “ದೊಡ್ಡ ಹಗರಣ” ಎಂದು ಕರೆಯುತ್ತಾರೆ.

ರೈಟ್ ಆಫ್ ಎಂದರೇನು?

“ಸಾಲ ಮನ್ನಾ” ಎಂದ ಕೂಡಲೇ ಅದು ಏನೆಂದು ಎಲ್ಲರಿಗೂ ತಿಳಿಯುತ್ತದೆ. ಆದರೆ ಈ “ರೈಟ್-ಆಫ್” ಅಂದರೆ “ಸಾಲ ಮನ್ನಾ” ಅಷ್ಟೇ ಅಲ್ಲ ಎಂಬುದು ಬಹಳಷ್ಟು ಜನರಿಗೆ ತಿಳಿದಿರುವುದಿಲ್ಲ. ಯಾವುದೇ ಬ್ಯಾಂಕ್ ತನ್ನ ಸಾಲವನ್ನು ಮನ್ನಾ ಮಾಡಲು ಇಷ್ಟ ಪಡುವುದಿಲ್ಲ, ಏಕೆಂದರೆ ಜನರಿಗೆ/ಉದ್ದಿಮೆಗಳಿಗೆ ನೀಡಿರುವ ಸಾಲ ಬ್ಯಾಂಕಿನ “ಆಸ್ತಿ” ಯಾಗಿರುತ್ತದೆ.

ಉದಾಹರಣೆಗೆ ನೀವು ಬ್ಯಾಂಕಿನಿಂದ ಒಂದು ಲಕ್ಷ ರೂ. ಸಾಲ ಪಡೆದಿದ್ದೀರಿ ಎಂದುಕೊಳ್ಳೋಣ. ಬ್ಯಾಂಕಿನ ದೃಷ್ಟಿಯಲ್ಲಿ ನೀವು ತೆಗೆದುಕೊಂಡಿರುವ ಸಾಲ ಬ್ಯಾಂಕಿಗೆ “ಆಸ್ತಿ” ಮತ್ತು ಅದಕ್ಕೆ ನೀವು ಕಟ್ಟುವ ಬಡ್ಡಿ ಹಣ ಬ್ಯಾಂಕಿಗೆ “ಆದಾಯ” ಆಗುತ್ತದೆ. ಇಂತಹ ಪರಿಸ್ಥಿತಿಯಲ್ಲಿ ನಿಮ್ಮ ಖಾತೆ “ಸಾಮಾನ್ಯ” ಮತ್ತು ನಿಮಗೆ ನೀಡಿರುವ ಹಣ ಬ್ಯಾಂಕಿನ “ಆಸ್ತಿ” ಎಂದು ಪರಿಗಣಿಸಲಾಗುತ್ತದೆ. ಆದರೆ ನೀವು ಬಡ್ಡಿ ಕಟ್ಟುವುದನ್ನು ನಿಲ್ಲಿಸಿದ ನಂತರ ಅಂದರೆ ಬ್ಯಾಂಕಿಗೆ “ಆದಾಯ” ನಿಂತ ದಿನದಿಂದ ನಿಮ್ಮ ಸಾಲವನ್ನು ನಿಷ್ಕ್ರಿಯ ಆಸ್ತಿ ಅಥವಾ ವಸೂಲಾಗದ ಸಾಲ (ನಾನ್-ಪರ್ಫಾರ್ಮಿಂಗ್ ಅಸೆಟ್) ಎಂದು ಮತ್ತು ನಿಮ್ಮಿಂದ ಬರಬೇಕಾಗಿದ್ದ ಬಡ್ಡಿ ಹಣವನ್ನು “ಖರ್ಚು” ಎಂದು ಪರಿಗಣಿಸಲಾಗುತ್ತದೆ.

ಆರ್.ಬಿ.ಐ. ನಿಯಮಾವಳಿ ಅನುಸಾರ ಒಂದು ಸಮಯ/ಹಂತದ ನಂತರ ಇದನ್ನು “ಆಸ್ತಿ” ಎಂದು ಪರಿಗಣಿಸಲು ಆಗುವುದಿಲ್ಲ, ಅದಕ್ಕಾಗಿ ಅದನ್ನು ಬ್ಯಾಂಕಿನ ಲೆಕ್ಕ-ಪತ್ರದಲ್ಲಿ ಆಸ್ತಿ ಪಟ್ಟಿಯಿಂದ ಹೊಡೆದು ಹಾಕಲಾಗುತ್ತದೆ. ಇದನ್ನು ರೈಟ್-ಆಫ್ ಎಂದು ಕರೆಯುತ್ತಾರೆ. ರೈಟ್-ಆಫ್ ಎಂದ ಕೂಡಲೇ ಬ್ಯಾಂಕು ಈ ಸಾಲವನ್ನು ಕೈ ಬಿಟ್ಟಿದೆ ಎಂಬ ಅರ್ಥವಲ್ಲ. ಕಾನೂನಿನ ಪ್ರಕಾರ ಸಾಲಗಾರರ ವಿರುದ್ಧ ಸಾಲ ಮತ್ತು ಬಡ್ದಿಯ ವಸೂಲಿಗೆ ಎಲ್ಲಾ ಕ್ರಮಗಳನ್ನು ಕೈಗೊಳ್ಳಲು ಅಧಿಕಾರವಿರುತ್ತದೆ. ಕೆಲವು ಬ್ಯಾಂಕುಗಳು ಈ “ಹೊಡೆದು ಹಾಕಿದ ಸಾಲ” ವನ್ನು ವಸೂಲಿಗಾಗಿ ವಸೂಲಿ ಕಂಪನಿಗಳಿಗೆ ಮಾರಲೂಬಹುದು. ಅಂತಹ ಸಂದರ್ಭದಲ್ಲಿ ವಸೂಲಿ ಕಂಪನಿಯ ದಾಂಢಿಗರು ನಿಮ್ಮ ಮನೆ ಬಾಗಿಲಿಗೆ ಬಂದು ಕದ ತಟ್ಟಬಹುದು. ನೀವು ಸಾಲದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ಇವಷ್ಟು ಪುಸ್ತಕದ ಬದನೇಕಾಯಿ.

ಇದರಲ್ಲಿ ಬ್ಯಾಂಕಿಗೆ ಆಗುವ ನಷ್ಟ-ಲಾಭವೇನು ನೋಡೋಣ. ಸಾಲರೂಪದಲ್ಲಿ ನೀಡಿರುವ ಹಣ ಸಂಪೂರ್ಣವಾಗಿ ಹಿಂದಕ್ಕೆ ಬಂದೇ ಬರುವುದೆಂಬ ನಂಬಿಕೆ ಯಾವ ಬ್ಯಾಂಕಿಗೂ ಇರುವುದಿಲ್ಲ ಹಾಗಾಗಿ ಸಾಲದ ಮೊತ್ತದ ಒಂದು ಅಂಶವನ್ನು ಅದು ತನ್ನ ಖರ್ಚೆಂದು ಲೆಕ್ಕದ ಪುಸ್ತಕದಲ್ಲಿ ಮೊದಲೇ ತೋರಿಸುತ್ತದೆ. ಇದು ಒಟ್ಟು ಸಾಲದ 5% ಆಗಿರಬಹುದು ಅಥವಾ ಸಾಲದ ಗುಣಮಟ್ಟದ ಆಧಾರದ ಮೇಲೆ ಇನ್ನೂ ಹೆಚ್ಚಾಗಿರಬಹುದು. ನಿಷ್ಕ್ರಿಯ ಸಾಲವನ್ನು ಆಸ್ತಿ ಪಟ್ಟಿಯಿಂದ ಹೊಡೆದು ಹಾಕಿದ ನಂತರ ಬ್ಯಾಂಕಿಗೆ ಖರ್ಚು ಹೆಚ್ಚಾಗಿ ಅದರ ವಾರ್ಷಿಕ ಲಾಭ ಕಡಿಮೆ ಆಗುತ್ತದೆ. ಅಂದರೆ ಆದಾಯ ತೆರಿಗೆಯಲ್ಲಿ ಬ್ಯಾಂಕುಗಳಿಗೆ ವಿನಾಯಿತಿ ದೊರೆಯುತ್ತದೆ. ಇದರಿಂದ ಬ್ಯಾಂಕಿನ ಲೆಕ್ಕ-ಪತ್ರ ಸ್ವಲ್ಪ ಮಟ್ಟಿಗೆ ಸ್ವಚ್ಛವಾಗುತ್ತದೆ. ಆದರೆ ಇದರಿಂದ ಸರಕಾರಕ್ಕೆ ಆದಾಯ ಕಡಿಮೆ (ತೆರಿಗೆ ಖೋತಾ) ಆಗುತ್ತದೆ. ಈ ನಿಷ್ಪ್ರಯೋಜಕ ಆಸ್ತಿಗಳನ್ನು ಕೈ ಬಿಟ್ಟ ನಂತರ ಬ್ಯಾಂಕ್ ಮತ್ತೆ ಬೇರೆಯವರಿಗೆ ಸಾಲ ನೀಡಲು ಸಾಧ್ಯವಾಗುತ್ತದೆ. ಸಾಲ ನೀಡಲು ಬ್ಯಾಂಕಿನ ಬಳಿ ಹಣ ಇಲ್ಲದೆ ಇದ್ದಾಗ ಸರಕಾರ ಅವಕ್ಕೆ “ರಿ-ಫೈನಾನ್ಸಿಂಗ್” ಮಾಡುತ್ತದೆ. ಅಂದರೆ ಸರಕಾರವೂ ಸಹ ಇಂತಹ “ರೈಟ್-ಆಫ್” ಗೆ ಬೆಂಬಲ ನೀಡುತ್ತವೆ ಎಂದರ್ಥ.

ಟೆಕ್ನಿಕಲ್ ರೈಟ್-ಆಫ್ ಎಂದರೇನು?

ಇತ್ತೀಚೆಗೆ ಬ್ಯಾಂಕಿನವರು ಹೊಸ “ಟೆಕ್ನಿಕಲ್ ರೈಟ್-ಆಫ್” ಎಂಬ ಪದ ಉಪಯೋಗಿಸಿ ಜನ ಸಾಮಾನ್ಯರನ್ನು ದಾರಿ ತಪ್ಪಿಸುತ್ತಿವೆ. ಇದನ್ನು ಮಾಜಿ ಡೆಪ್ಯೂಟಿ ಗವರ್ನರ್ ಕೆ.ಸಿ.ಚಕ್ರಬರ್ತಿಯವರು “ದೊಡ್ಡ ಹಗರಣ” ಎಂದು ಕರೆಯುತ್ತಾರೆ. ಇದರಲ್ಲಿ ಯಾವುದೇ “ಟೆಕ್ನಿಕಲ್” ಪ್ರಶ್ನೆ ಇಲ್ಲ. ಸಾಲ ತೆಗೆದುಕೊಂಡಿರುವ ಉದ್ದಿಮೆಗಳ ನಿವ್ವಳ ಆದಾಯ ಬ್ಯಾಂಕಿಗೆ ಬರಬೇಕಾಗಿರುವ ಬಡ್ಡಿಯಷ್ಟೂ ಇಲ್ಲದಿರುವುದು ಅವರ ಲೆಕ್ಕ-ಪತ್ರದಲ್ಲಿ ಸ್ಪಷ್ಟವಾಗಿರುವಾಗ ಸಾಲ ತೆಗೆದುಕೊಂಡಿರುವುದು ಮೋಸದ ಉದ್ದೇಶ. ರೈಟ್-ಆಫ್ ಎನ್ನುವುದು ಬ್ಯಾಂಕಿಂಗ್ ಕ್ಷೇತ್ರದ ಸರ್ವೇ ಸಾಮಾನ್ಯ ಪ್ರಕ್ರಿಯೆ ಅದನ್ನು ಮೀರಿ ನಡೆದಿರುವ ಎಲ್ಲಾ “ಟೆಕ್ನಿಕಲ್ ರೈಟ್-ಆಫ್”ಗಳೂ ಕೇವಲ ಹಗರಣ ಎಂಬುದು ಅವರ ಅನಿಸಿಕೆ.

ಹಾಗಾದರೆ ಈ ಹೊಡೆದು ಹಾಕಿದ ಮೊತ್ತ ಬ್ಯಾಂಕಿಗೆ ಮತ್ತೆ ಬರುತ್ತದೆಯೇ? ವಿಷಯ ಪರಿಣಿತರಲ್ಲಿ ಇದರ ಬಗ್ಗೆ ಏಕಾಭಿಪ್ರಾಯ ಇಲ್ಲ. ಕೆಲವರು ಕೇವಲ 20% ಮಾತ್ರ ಬರುತ್ತದೆ. ಅದೂ ಸಹ ಹತ್ತಾರು ವರ್ಷಗಳ ನ್ಯಾಯಾಲಯದ ಹೋರಾಟದ ನಂತರ, ಎಂದರೆ ಕೆಲವರು ಸುಮಾರು ಅರ್ಧದಷ್ಟು ಬರುತ್ತದೆ ಎನ್ನುತ್ತಾರೆ.

ಏನೇ ಆಗಲಿ ದೊಡ್ಡವರ ದೊಡ್ಡ ಮೊತ್ತದ ಸಾಲ ದೊಡ್ಡ ಹಗರಣವೇ ಸರಿ. ಇದರಲ್ಲಿ ಎಲ್ಲರೂ ಸಹಭಾಗಿ. ಕೊನೆಗೆ ಸರಕಾರಿ ಬ್ಯಾಂಕಿನ ಹಣ ನಮ್ಮ ನಿಮ್ಮ ತೆರಿಗೆಯಿಂದಲೇ ಬರಬೇಕು. ಆದ್ದರಿಂದ ಈಗ ಸರಕಾರ ಹೊಡೆದು ಹಾಕಿರುವ ರೂ.15,31,453 ಕೋಟಿ ರೂ ಸರಿಯೋ ತಪ್ಪೋ ನೀವೇ ಮತ್ತೊಮ್ಮೆ ಯೋಚಿಸಿ.

ಜಿ. ಆರ್. ವಿದ್ಯಾರಣ್ಯ

(ಡಿಸ್ಕ್ಲೇಮರ್: ಲೇಖಕರು ಬ್ಯಾಂಕಿಂಗ್/ಫೈನಾನ್ಸ್ ಪರಿಣಿತರಲ್ಲ. ಬಲ್ಲವರೊಂದಿಗೆ ಚರ್ಚಿಸಿ ಲೇಖನ ತಯಾರಿಸಿದ್ದಾರೆ. ನಿಮ್ಮ ಅನಿಸಿಕೆಗೆ ಸ್ವಾಗತ.)

ಇದನ್ನೂ ಓದಿ; 11.68 ಲಕ್ಷ ಕೋಟಿ ರೈಟ್ ಆಫ್ – 20 ಲಕ್ಷ ಕೋಟಿ NPA: ನಮ್ಮೆಲ್ಲರ ಹಣ ಸೋರಿ ಹೋಗುತ್ತಿರುವುದು ಹೀಗೆ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...