Homeಮುಖಪುಟಮುಖ್ಯಮಂತ್ರಿ ಕಚೇರಿಯಿಂದ ಆಯ್ದ ಪತ್ರಕರ್ತರಿಗೆ ತಲಾ 2.5 ಲಕ್ಷ ರೂ ಗಿಫ್ಟ್ ರೂಪದ ಲಂಚದ ಆರೋಪ

ಮುಖ್ಯಮಂತ್ರಿ ಕಚೇರಿಯಿಂದ ಆಯ್ದ ಪತ್ರಕರ್ತರಿಗೆ ತಲಾ 2.5 ಲಕ್ಷ ರೂ ಗಿಫ್ಟ್ ರೂಪದ ಲಂಚದ ಆರೋಪ

ಕೆಲ ಪತ್ರಕರ್ತರು ಸಿಹಿ ತಿಂಡಿಯ ಪೊಟ್ಟಣದ ಜೊತೆ ನೋಟಿನ ಕಂತೆ ನೋಡಿದ ಕೂಡಲೇ ಸಿಎಂ ಕಚೇರಿಗೆ ವಾಪಸ್ ಮಾಡಿದ್ದಲ್ಲದೆ ಸರ್ಕಾರದ ಈ ಭ್ರಷ್ಟಾಚಾರವನ್ನು ಖಂಡಿಸಿದ್ದಾರೆ ಎಂದು ತಿಳಿದುಬಂದಿದೆ.

- Advertisement -
- Advertisement -

ದೀಪಾವಳಿಯ ಸಂದರ್ಭದಲ್ಲಿ ಕರ್ನಾಟಕದ ಆಯ್ದ ಪತ್ರಕರ್ತರಿಗೆ ಮುಖ್ಯಮಂತ್ರಿಗಳ ಕಚೇರಿಯಿಂದ ಸಿಹಿತಿಂಡಿಗಳ ಜೊತೆಗೆ ತಲಾ 2.5 ಲಕ್ಷ ರೂಗಳನ್ನು ಗಿಫ್ಟ್ ರೂಪದಲ್ಲಿ ಲಂಚ ನೀಡಿರುವ ಆರೋಪದ ಆಘಾತಕಾರಿ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.

“ದೀಪಾವಳಿಯ ಸಂದರ್ಭದಲ್ಲಿ, ಕರ್ನಾಟಕದ ಬಹುತೇಕ ಎಲ್ಲಾ ಪತ್ರಕರ್ತರು ಮುಖ್ಯಮಂತ್ರಿಗಳ ಕಚೇರಿಯಿಂದ ಸಿಹಿತಿಂಡಿಗಳು ಮತ್ತು ತಲಾ 2.5 ಲಕ್ಷ ನಗದು ಉಡುಗೊರೆಯಾಗಿ ನೀಡಿದ್ದಾರೆ. ದಯವಿಟ್ಟು ಚುನಾವಣೆಯವರೆಗೂ ಮಾಧ್ಯಮಗಳಿಂದ ಸರ್ಕಾರದ ವಿರೋಧಿ ಸುದ್ದಿಗಳನ್ನು ನಿರೀಕ್ಷಿಸಬೇಡಿ” ಎಂಬ ವೈರಲ್ ವಾಟ್ಸಾಪ್ ಸಂದೇಶದ ಜಾಡು ಹಿಡಿದು ಹೊರಟಾಗ ಸರ್ಕಾರದ ಬೃಹತ್ ಭ್ರಷ್ಟಾಚಾರ ಬಯಲಿಗೆ ಬಂದಿದೆ.

ಕೆಲ ಪತ್ರಕರ್ತರು ಸಿಹಿ ತಿಂಡಿಯ ಪೊಟ್ಟಣದ ಜೊತೆ ನೋಟಿನ ಕಂತೆ ನೋಡಿದ ಕೂಡಲೇ ಸಿಎಂ ಕಚೇರಿಗೆ ವಾಪಸ್ ಮಾಡಿದ್ದಲ್ಲದೆ ಸರ್ಕಾರದ ಈ ಭ್ರಷ್ಟಾಚಾರವನ್ನು ಖಂಡಿಸಿದ್ದಾರೆ ಎಂದು ತಿಳಿದುಬಂದಿದೆ.

ಇನ್ನು ಕೆಲವು ಟಿವಿ ಚಾನೆಲ್‌ ನಿರೂಪಕರಿಗೆ ಮತ್ತು ರಾಜಕೀಯ ವಿಷಯಗಳನ್ನು ಕವರ್ ಮಾಡುವವರಿಗೆ ಸಹ 5 ಲಕ್ಷ ರೂಗಳ ವರೆಗೆ ಹಣ ನೀಡಿರುವುದನ್ನು ಮೂಲಗಳು ಖಚಿತಪಡಿಸಿವೆ. ಅದೇ ಸಂದರ್ಭದಲ್ಲಿ ಕೆಲ ಪತ್ರಿಕೆಗಳಿಗೆ ಕೇವಲ ಸಿಹಿ ತಿಂಡಿಗಳ ಪೊಟ್ಟಣಗಳನ್ನು ನೀಡಲಾಗಿದೆ ಎಂದು ತಿಳಿದುಬಂದಿದೆ. ಈ ಕುರಿತು ಪ್ರಜಾವಾಣಿಯ ಸಿಇಓ ಸೀತಾರಾಮನ್ ಶಂಕರ್‌ರವರಿಗೆ ಕರೆ ಮಾಡಿದಾಗ, “ಸಾರಿ, ನೋ ಕಮೆಂಟ್” ಎಂದು ಪ್ರತಿಕ್ರಿಯಿಸಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯೆ ಪಡೆಯಲು ಸಿಎಂ ಕಚೇರಿಯ ಮಾಧ್ಯಮ ಕಾರ್ಯದರ್ಶಿ ಮೋಹನ್ ಕೃಷ್ಣರವರನ್ನು ನಾನುಗೌರಿ.ಕಾಂ ವತಿಯಿಂದ ಸಂಪರ್ಕಿಸಲಾಯಿತು. ಅವರು, “ನಾನು ಯಾರಿಗೂ ಹಣ ಕೊಟ್ಟಿಲ್ಲ, ಹುಷಾರಿಲ್ಲದ ಕಾರಣದಿಂದ 15 ದಿನದಿಂದ ಕಚೇರಿಗೆ ನಾನು ಹೋಗಿಲ್ಲ, ಹಾಗಾಗಿ ಈ ಬಗ್ಗೆ ನನಗೆ ತಿಳಿದಿಲ್ಲ” ಎಂದರು.

ಈ ಕುರಿತು ಸ್ಪಷ್ಟೀಕರಣ ಪಡೆಯಲು ಮುಖ್ಯಮಂತ್ರಿಗಳ ಮಾಧ್ಯಮ ಸಂಯೋಜಕರಾದ ಪಾಗೋಜಿ ಶಂಕರ್‌ರವರಿಗೆ ಸಂಪರ್ಕಿಸಲು ಯತ್ನಿಸಲಾದರೂ ಅವರು ಕರೆಗೆ ಲಭ್ಯವಾಗಿಲ್ಲ. ಅವರ ಪ್ರತಿಕ್ರಿಯೆ ಸಿಕ್ಕ ನಂತರ ಅಪ್ಡೇಟ್ ಮಾಡಲಾಗುತ್ತದೆ.

ಸರ್ಕಾರದ ಈ ನಡೆಯಿಂದ ಹಬ್ಬದ ಉಡುಗೊರೆ ರೂಪದಲ್ಲಿ ಕೋಟ್ಯಾಂತರ ರೂಗಳನ್ನು ಪತ್ರಕರ್ತರಿಗೆ ನೀಡುವ ಮೂಲಕ ಸರ್ಕಾರ ಏನನ್ನು ಸಾಧಿಸಲು ಹೊರಟಿದೆ? ಇಷ್ಟು ಹಣ ಎಲ್ಲಿಂದ ಬಂತು? ಅದರ ಮೂಲವೇನು? ಎಂಬ ಪ್ರಶ್ನೆಗಳು ಹುಟ್ಟಿಕೊಂಡಿವೆ.

ರಾಜ್ಯ ವಿಧಾನಸಭಾ ಚುನಾವಣೆಗೆ ಕೆಲವೇ ತಿಂಗಳುಗಳು ಬಾಕಿ ಇರುವಾಗ ಸರ್ಕಾರ ಪತ್ರಕರ್ತರಿಗೆ ಹಣದ ರೂಪದಲ್ಲಿ ಉಡುಗೊರೆ ನೀಡುವ ಮೂಲಕ ಅವರು ಪಕ್ಷಪಾಗಿಗಳಾಗಿ ವರ್ತಿಸಲು ಲಂಚದ ಆಮಿಷ ಒಡ್ಡುತ್ತಿದೆ ಎಂಬ ಆರೋಪಗಳು ಕೇಳಿಬಂದಿವೆ. ಇದೇ ಸಂದರ್ಭದಲ್ಲಿ ಸಚಿವರೊಬ್ಬರು ಪತ್ರಕರ್ತರಿಗೆ ಚಿನ್ನದ ನಾಣ್ಯಗಳನ್ನು ಉಡುಗೊರೆಯಾಗಿ ನೀಡಿದ್ದಾರೆ ಎಂಬ ಮಾತುಗಳು ಸಹ ಹರಿದಾಡುತ್ತಿವೆ.

ಇದನ್ನೂ ಓದಿ; ರಾಜಸ್ಥಾನ: ಸಾಲ ತೀರಿಸಲು ಹುಡುಗಿಯರ ಮಾರಾಟ; ನಿರಾಕರಿಸಿದರೆ ಜಾತಿ ಮಂಡಳಿಗಳ ಆದೇಶದ ಮೇರೆಗೆ ಅವರ ತಾಯಿಯ ಮೇಲೆ ಅತ್ಯಾಚಾರ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ದೇಶದ ಪರಿಸ್ಥಿತಿ ಭಿನ್ನವಾಗಿಲ್ಲ
    ನ್ಯಾಯಾಂಗ ದ ಆದೇಶಕ್ಕೂ ಮುನ್ನ ತೀರ್ಪು ಗಳು ಹೇಳುವ ಕೆಲವು ಪತ್ರಕರ್ತರು ಜ್ಯೋತಿಷಿಗಳು ರಾಜಕಾರಣಿ ಗಳು ಇದು ನಮ್ಮ ದೇಶದ ವ್ಯವಸ್ಥೆ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...