Homeಮುಖಪುಟಮುಖ್ಯಮಂತ್ರಿ ಕಚೇರಿಯಿಂದ ಆಯ್ದ ಪತ್ರಕರ್ತರಿಗೆ ತಲಾ 2.5 ಲಕ್ಷ ರೂ ಗಿಫ್ಟ್ ರೂಪದ ಲಂಚದ ಆರೋಪ

ಮುಖ್ಯಮಂತ್ರಿ ಕಚೇರಿಯಿಂದ ಆಯ್ದ ಪತ್ರಕರ್ತರಿಗೆ ತಲಾ 2.5 ಲಕ್ಷ ರೂ ಗಿಫ್ಟ್ ರೂಪದ ಲಂಚದ ಆರೋಪ

ಕೆಲ ಪತ್ರಕರ್ತರು ಸಿಹಿ ತಿಂಡಿಯ ಪೊಟ್ಟಣದ ಜೊತೆ ನೋಟಿನ ಕಂತೆ ನೋಡಿದ ಕೂಡಲೇ ಸಿಎಂ ಕಚೇರಿಗೆ ವಾಪಸ್ ಮಾಡಿದ್ದಲ್ಲದೆ ಸರ್ಕಾರದ ಈ ಭ್ರಷ್ಟಾಚಾರವನ್ನು ಖಂಡಿಸಿದ್ದಾರೆ ಎಂದು ತಿಳಿದುಬಂದಿದೆ.

- Advertisement -
- Advertisement -

ದೀಪಾವಳಿಯ ಸಂದರ್ಭದಲ್ಲಿ ಕರ್ನಾಟಕದ ಆಯ್ದ ಪತ್ರಕರ್ತರಿಗೆ ಮುಖ್ಯಮಂತ್ರಿಗಳ ಕಚೇರಿಯಿಂದ ಸಿಹಿತಿಂಡಿಗಳ ಜೊತೆಗೆ ತಲಾ 2.5 ಲಕ್ಷ ರೂಗಳನ್ನು ಗಿಫ್ಟ್ ರೂಪದಲ್ಲಿ ಲಂಚ ನೀಡಿರುವ ಆರೋಪದ ಆಘಾತಕಾರಿ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.

“ದೀಪಾವಳಿಯ ಸಂದರ್ಭದಲ್ಲಿ, ಕರ್ನಾಟಕದ ಬಹುತೇಕ ಎಲ್ಲಾ ಪತ್ರಕರ್ತರು ಮುಖ್ಯಮಂತ್ರಿಗಳ ಕಚೇರಿಯಿಂದ ಸಿಹಿತಿಂಡಿಗಳು ಮತ್ತು ತಲಾ 2.5 ಲಕ್ಷ ನಗದು ಉಡುಗೊರೆಯಾಗಿ ನೀಡಿದ್ದಾರೆ. ದಯವಿಟ್ಟು ಚುನಾವಣೆಯವರೆಗೂ ಮಾಧ್ಯಮಗಳಿಂದ ಸರ್ಕಾರದ ವಿರೋಧಿ ಸುದ್ದಿಗಳನ್ನು ನಿರೀಕ್ಷಿಸಬೇಡಿ” ಎಂಬ ವೈರಲ್ ವಾಟ್ಸಾಪ್ ಸಂದೇಶದ ಜಾಡು ಹಿಡಿದು ಹೊರಟಾಗ ಸರ್ಕಾರದ ಬೃಹತ್ ಭ್ರಷ್ಟಾಚಾರ ಬಯಲಿಗೆ ಬಂದಿದೆ.

ಕೆಲ ಪತ್ರಕರ್ತರು ಸಿಹಿ ತಿಂಡಿಯ ಪೊಟ್ಟಣದ ಜೊತೆ ನೋಟಿನ ಕಂತೆ ನೋಡಿದ ಕೂಡಲೇ ಸಿಎಂ ಕಚೇರಿಗೆ ವಾಪಸ್ ಮಾಡಿದ್ದಲ್ಲದೆ ಸರ್ಕಾರದ ಈ ಭ್ರಷ್ಟಾಚಾರವನ್ನು ಖಂಡಿಸಿದ್ದಾರೆ ಎಂದು ತಿಳಿದುಬಂದಿದೆ.

ಇನ್ನು ಕೆಲವು ಟಿವಿ ಚಾನೆಲ್‌ ನಿರೂಪಕರಿಗೆ ಮತ್ತು ರಾಜಕೀಯ ವಿಷಯಗಳನ್ನು ಕವರ್ ಮಾಡುವವರಿಗೆ ಸಹ 5 ಲಕ್ಷ ರೂಗಳ ವರೆಗೆ ಹಣ ನೀಡಿರುವುದನ್ನು ಮೂಲಗಳು ಖಚಿತಪಡಿಸಿವೆ. ಅದೇ ಸಂದರ್ಭದಲ್ಲಿ ಕೆಲ ಪತ್ರಿಕೆಗಳಿಗೆ ಕೇವಲ ಸಿಹಿ ತಿಂಡಿಗಳ ಪೊಟ್ಟಣಗಳನ್ನು ನೀಡಲಾಗಿದೆ ಎಂದು ತಿಳಿದುಬಂದಿದೆ. ಈ ಕುರಿತು ಪ್ರಜಾವಾಣಿಯ ಸಿಇಓ ಸೀತಾರಾಮನ್ ಶಂಕರ್‌ರವರಿಗೆ ಕರೆ ಮಾಡಿದಾಗ, “ಸಾರಿ, ನೋ ಕಮೆಂಟ್” ಎಂದು ಪ್ರತಿಕ್ರಿಯಿಸಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯೆ ಪಡೆಯಲು ಸಿಎಂ ಕಚೇರಿಯ ಮಾಧ್ಯಮ ಕಾರ್ಯದರ್ಶಿ ಮೋಹನ್ ಕೃಷ್ಣರವರನ್ನು ನಾನುಗೌರಿ.ಕಾಂ ವತಿಯಿಂದ ಸಂಪರ್ಕಿಸಲಾಯಿತು. ಅವರು, “ನಾನು ಯಾರಿಗೂ ಹಣ ಕೊಟ್ಟಿಲ್ಲ, ಹುಷಾರಿಲ್ಲದ ಕಾರಣದಿಂದ 15 ದಿನದಿಂದ ಕಚೇರಿಗೆ ನಾನು ಹೋಗಿಲ್ಲ, ಹಾಗಾಗಿ ಈ ಬಗ್ಗೆ ನನಗೆ ತಿಳಿದಿಲ್ಲ” ಎಂದರು.

ಈ ಕುರಿತು ಸ್ಪಷ್ಟೀಕರಣ ಪಡೆಯಲು ಮುಖ್ಯಮಂತ್ರಿಗಳ ಮಾಧ್ಯಮ ಸಂಯೋಜಕರಾದ ಪಾಗೋಜಿ ಶಂಕರ್‌ರವರಿಗೆ ಸಂಪರ್ಕಿಸಲು ಯತ್ನಿಸಲಾದರೂ ಅವರು ಕರೆಗೆ ಲಭ್ಯವಾಗಿಲ್ಲ. ಅವರ ಪ್ರತಿಕ್ರಿಯೆ ಸಿಕ್ಕ ನಂತರ ಅಪ್ಡೇಟ್ ಮಾಡಲಾಗುತ್ತದೆ.

ಸರ್ಕಾರದ ಈ ನಡೆಯಿಂದ ಹಬ್ಬದ ಉಡುಗೊರೆ ರೂಪದಲ್ಲಿ ಕೋಟ್ಯಾಂತರ ರೂಗಳನ್ನು ಪತ್ರಕರ್ತರಿಗೆ ನೀಡುವ ಮೂಲಕ ಸರ್ಕಾರ ಏನನ್ನು ಸಾಧಿಸಲು ಹೊರಟಿದೆ? ಇಷ್ಟು ಹಣ ಎಲ್ಲಿಂದ ಬಂತು? ಅದರ ಮೂಲವೇನು? ಎಂಬ ಪ್ರಶ್ನೆಗಳು ಹುಟ್ಟಿಕೊಂಡಿವೆ.

ರಾಜ್ಯ ವಿಧಾನಸಭಾ ಚುನಾವಣೆಗೆ ಕೆಲವೇ ತಿಂಗಳುಗಳು ಬಾಕಿ ಇರುವಾಗ ಸರ್ಕಾರ ಪತ್ರಕರ್ತರಿಗೆ ಹಣದ ರೂಪದಲ್ಲಿ ಉಡುಗೊರೆ ನೀಡುವ ಮೂಲಕ ಅವರು ಪಕ್ಷಪಾಗಿಗಳಾಗಿ ವರ್ತಿಸಲು ಲಂಚದ ಆಮಿಷ ಒಡ್ಡುತ್ತಿದೆ ಎಂಬ ಆರೋಪಗಳು ಕೇಳಿಬಂದಿವೆ. ಇದೇ ಸಂದರ್ಭದಲ್ಲಿ ಸಚಿವರೊಬ್ಬರು ಪತ್ರಕರ್ತರಿಗೆ ಚಿನ್ನದ ನಾಣ್ಯಗಳನ್ನು ಉಡುಗೊರೆಯಾಗಿ ನೀಡಿದ್ದಾರೆ ಎಂಬ ಮಾತುಗಳು ಸಹ ಹರಿದಾಡುತ್ತಿವೆ.

ಇದನ್ನೂ ಓದಿ; ರಾಜಸ್ಥಾನ: ಸಾಲ ತೀರಿಸಲು ಹುಡುಗಿಯರ ಮಾರಾಟ; ನಿರಾಕರಿಸಿದರೆ ಜಾತಿ ಮಂಡಳಿಗಳ ಆದೇಶದ ಮೇರೆಗೆ ಅವರ ತಾಯಿಯ ಮೇಲೆ ಅತ್ಯಾಚಾರ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ದೇಶದ ಪರಿಸ್ಥಿತಿ ಭಿನ್ನವಾಗಿಲ್ಲ
    ನ್ಯಾಯಾಂಗ ದ ಆದೇಶಕ್ಕೂ ಮುನ್ನ ತೀರ್ಪು ಗಳು ಹೇಳುವ ಕೆಲವು ಪತ್ರಕರ್ತರು ಜ್ಯೋತಿಷಿಗಳು ರಾಜಕಾರಣಿ ಗಳು ಇದು ನಮ್ಮ ದೇಶದ ವ್ಯವಸ್ಥೆ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...