Homeಮುಖಪುಟಮುಖ್ಯಮಂತ್ರಿ ಕಚೇರಿಯಿಂದ ಆಯ್ದ ಪತ್ರಕರ್ತರಿಗೆ ತಲಾ 2.5 ಲಕ್ಷ ರೂ ಗಿಫ್ಟ್ ರೂಪದ ಲಂಚದ ಆರೋಪ

ಮುಖ್ಯಮಂತ್ರಿ ಕಚೇರಿಯಿಂದ ಆಯ್ದ ಪತ್ರಕರ್ತರಿಗೆ ತಲಾ 2.5 ಲಕ್ಷ ರೂ ಗಿಫ್ಟ್ ರೂಪದ ಲಂಚದ ಆರೋಪ

ಕೆಲ ಪತ್ರಕರ್ತರು ಸಿಹಿ ತಿಂಡಿಯ ಪೊಟ್ಟಣದ ಜೊತೆ ನೋಟಿನ ಕಂತೆ ನೋಡಿದ ಕೂಡಲೇ ಸಿಎಂ ಕಚೇರಿಗೆ ವಾಪಸ್ ಮಾಡಿದ್ದಲ್ಲದೆ ಸರ್ಕಾರದ ಈ ಭ್ರಷ್ಟಾಚಾರವನ್ನು ಖಂಡಿಸಿದ್ದಾರೆ ಎಂದು ತಿಳಿದುಬಂದಿದೆ.

- Advertisement -
- Advertisement -

ದೀಪಾವಳಿಯ ಸಂದರ್ಭದಲ್ಲಿ ಕರ್ನಾಟಕದ ಆಯ್ದ ಪತ್ರಕರ್ತರಿಗೆ ಮುಖ್ಯಮಂತ್ರಿಗಳ ಕಚೇರಿಯಿಂದ ಸಿಹಿತಿಂಡಿಗಳ ಜೊತೆಗೆ ತಲಾ 2.5 ಲಕ್ಷ ರೂಗಳನ್ನು ಗಿಫ್ಟ್ ರೂಪದಲ್ಲಿ ಲಂಚ ನೀಡಿರುವ ಆರೋಪದ ಆಘಾತಕಾರಿ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.

“ದೀಪಾವಳಿಯ ಸಂದರ್ಭದಲ್ಲಿ, ಕರ್ನಾಟಕದ ಬಹುತೇಕ ಎಲ್ಲಾ ಪತ್ರಕರ್ತರು ಮುಖ್ಯಮಂತ್ರಿಗಳ ಕಚೇರಿಯಿಂದ ಸಿಹಿತಿಂಡಿಗಳು ಮತ್ತು ತಲಾ 2.5 ಲಕ್ಷ ನಗದು ಉಡುಗೊರೆಯಾಗಿ ನೀಡಿದ್ದಾರೆ. ದಯವಿಟ್ಟು ಚುನಾವಣೆಯವರೆಗೂ ಮಾಧ್ಯಮಗಳಿಂದ ಸರ್ಕಾರದ ವಿರೋಧಿ ಸುದ್ದಿಗಳನ್ನು ನಿರೀಕ್ಷಿಸಬೇಡಿ” ಎಂಬ ವೈರಲ್ ವಾಟ್ಸಾಪ್ ಸಂದೇಶದ ಜಾಡು ಹಿಡಿದು ಹೊರಟಾಗ ಸರ್ಕಾರದ ಬೃಹತ್ ಭ್ರಷ್ಟಾಚಾರ ಬಯಲಿಗೆ ಬಂದಿದೆ.

ಕೆಲ ಪತ್ರಕರ್ತರು ಸಿಹಿ ತಿಂಡಿಯ ಪೊಟ್ಟಣದ ಜೊತೆ ನೋಟಿನ ಕಂತೆ ನೋಡಿದ ಕೂಡಲೇ ಸಿಎಂ ಕಚೇರಿಗೆ ವಾಪಸ್ ಮಾಡಿದ್ದಲ್ಲದೆ ಸರ್ಕಾರದ ಈ ಭ್ರಷ್ಟಾಚಾರವನ್ನು ಖಂಡಿಸಿದ್ದಾರೆ ಎಂದು ತಿಳಿದುಬಂದಿದೆ.

ಇನ್ನು ಕೆಲವು ಟಿವಿ ಚಾನೆಲ್‌ ನಿರೂಪಕರಿಗೆ ಮತ್ತು ರಾಜಕೀಯ ವಿಷಯಗಳನ್ನು ಕವರ್ ಮಾಡುವವರಿಗೆ ಸಹ 5 ಲಕ್ಷ ರೂಗಳ ವರೆಗೆ ಹಣ ನೀಡಿರುವುದನ್ನು ಮೂಲಗಳು ಖಚಿತಪಡಿಸಿವೆ. ಅದೇ ಸಂದರ್ಭದಲ್ಲಿ ಕೆಲ ಪತ್ರಿಕೆಗಳಿಗೆ ಕೇವಲ ಸಿಹಿ ತಿಂಡಿಗಳ ಪೊಟ್ಟಣಗಳನ್ನು ನೀಡಲಾಗಿದೆ ಎಂದು ತಿಳಿದುಬಂದಿದೆ. ಈ ಕುರಿತು ಪ್ರಜಾವಾಣಿಯ ಸಿಇಓ ಸೀತಾರಾಮನ್ ಶಂಕರ್‌ರವರಿಗೆ ಕರೆ ಮಾಡಿದಾಗ, “ಸಾರಿ, ನೋ ಕಮೆಂಟ್” ಎಂದು ಪ್ರತಿಕ್ರಿಯಿಸಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯೆ ಪಡೆಯಲು ಸಿಎಂ ಕಚೇರಿಯ ಮಾಧ್ಯಮ ಕಾರ್ಯದರ್ಶಿ ಮೋಹನ್ ಕೃಷ್ಣರವರನ್ನು ನಾನುಗೌರಿ.ಕಾಂ ವತಿಯಿಂದ ಸಂಪರ್ಕಿಸಲಾಯಿತು. ಅವರು, “ನಾನು ಯಾರಿಗೂ ಹಣ ಕೊಟ್ಟಿಲ್ಲ, ಹುಷಾರಿಲ್ಲದ ಕಾರಣದಿಂದ 15 ದಿನದಿಂದ ಕಚೇರಿಗೆ ನಾನು ಹೋಗಿಲ್ಲ, ಹಾಗಾಗಿ ಈ ಬಗ್ಗೆ ನನಗೆ ತಿಳಿದಿಲ್ಲ” ಎಂದರು.

ಈ ಕುರಿತು ಸ್ಪಷ್ಟೀಕರಣ ಪಡೆಯಲು ಮುಖ್ಯಮಂತ್ರಿಗಳ ಮಾಧ್ಯಮ ಸಂಯೋಜಕರಾದ ಪಾಗೋಜಿ ಶಂಕರ್‌ರವರಿಗೆ ಸಂಪರ್ಕಿಸಲು ಯತ್ನಿಸಲಾದರೂ ಅವರು ಕರೆಗೆ ಲಭ್ಯವಾಗಿಲ್ಲ. ಅವರ ಪ್ರತಿಕ್ರಿಯೆ ಸಿಕ್ಕ ನಂತರ ಅಪ್ಡೇಟ್ ಮಾಡಲಾಗುತ್ತದೆ.

ಸರ್ಕಾರದ ಈ ನಡೆಯಿಂದ ಹಬ್ಬದ ಉಡುಗೊರೆ ರೂಪದಲ್ಲಿ ಕೋಟ್ಯಾಂತರ ರೂಗಳನ್ನು ಪತ್ರಕರ್ತರಿಗೆ ನೀಡುವ ಮೂಲಕ ಸರ್ಕಾರ ಏನನ್ನು ಸಾಧಿಸಲು ಹೊರಟಿದೆ? ಇಷ್ಟು ಹಣ ಎಲ್ಲಿಂದ ಬಂತು? ಅದರ ಮೂಲವೇನು? ಎಂಬ ಪ್ರಶ್ನೆಗಳು ಹುಟ್ಟಿಕೊಂಡಿವೆ.

ರಾಜ್ಯ ವಿಧಾನಸಭಾ ಚುನಾವಣೆಗೆ ಕೆಲವೇ ತಿಂಗಳುಗಳು ಬಾಕಿ ಇರುವಾಗ ಸರ್ಕಾರ ಪತ್ರಕರ್ತರಿಗೆ ಹಣದ ರೂಪದಲ್ಲಿ ಉಡುಗೊರೆ ನೀಡುವ ಮೂಲಕ ಅವರು ಪಕ್ಷಪಾಗಿಗಳಾಗಿ ವರ್ತಿಸಲು ಲಂಚದ ಆಮಿಷ ಒಡ್ಡುತ್ತಿದೆ ಎಂಬ ಆರೋಪಗಳು ಕೇಳಿಬಂದಿವೆ. ಇದೇ ಸಂದರ್ಭದಲ್ಲಿ ಸಚಿವರೊಬ್ಬರು ಪತ್ರಕರ್ತರಿಗೆ ಚಿನ್ನದ ನಾಣ್ಯಗಳನ್ನು ಉಡುಗೊರೆಯಾಗಿ ನೀಡಿದ್ದಾರೆ ಎಂಬ ಮಾತುಗಳು ಸಹ ಹರಿದಾಡುತ್ತಿವೆ.

ಇದನ್ನೂ ಓದಿ; ರಾಜಸ್ಥಾನ: ಸಾಲ ತೀರಿಸಲು ಹುಡುಗಿಯರ ಮಾರಾಟ; ನಿರಾಕರಿಸಿದರೆ ಜಾತಿ ಮಂಡಳಿಗಳ ಆದೇಶದ ಮೇರೆಗೆ ಅವರ ತಾಯಿಯ ಮೇಲೆ ಅತ್ಯಾಚಾರ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ದೇಶದ ಪರಿಸ್ಥಿತಿ ಭಿನ್ನವಾಗಿಲ್ಲ
    ನ್ಯಾಯಾಂಗ ದ ಆದೇಶಕ್ಕೂ ಮುನ್ನ ತೀರ್ಪು ಗಳು ಹೇಳುವ ಕೆಲವು ಪತ್ರಕರ್ತರು ಜ್ಯೋತಿಷಿಗಳು ರಾಜಕಾರಣಿ ಗಳು ಇದು ನಮ್ಮ ದೇಶದ ವ್ಯವಸ್ಥೆ

LEAVE A REPLY

Please enter your comment!
Please enter your name here

- Advertisment -

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...