Homeಮುಖಪುಟಮೋದಿ ಕಾರ್ಯಕ್ರಮದಲ್ಲಿ ಸಮೋಸ ವಿತರಣೆಗೆ 2 ಕೋಟಿ ರೂ. ಖರ್ಚು : ಬಿಜೆಪಿ ವಿರುದ್ಧ ಕೇಜ್ರಿವಾಲ್...

ಮೋದಿ ಕಾರ್ಯಕ್ರಮದಲ್ಲಿ ಸಮೋಸ ವಿತರಣೆಗೆ 2 ಕೋಟಿ ರೂ. ಖರ್ಚು : ಬಿಜೆಪಿ ವಿರುದ್ಧ ಕೇಜ್ರಿವಾಲ್ ಆರೋಪ

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ಗುಜರಾತ್‌ನ ಬುಡಕಟ್ಟು ಪ್ರದೇಶಕ್ಕೆ ಭೇಟಿ ನೀಡಿದ ಕಾರ್ಯಕ್ರಮಕ್ಕೆ 50 ಕೋಟಿ ರೂಪಾಯಿ ಖರ್ಚು ಮಾಡಲಾಗಿದೆ ಎಂದು ಆಮ್ ಆದ್ಮಿ ಪಕ್ಷದ (ಎಎಪಿ) ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಸೋಮವಾರ (ಜ.19) ಆರೋಪಿಸಿದ್ದು, ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಆರ್‌ಟಿಐ ಮಾಹಿತಿಯನ್ನು ಉಲ್ಲೇಖಿಸಿದ ಕೇಜ್ರಿವಾಲ್, 50 ಕೋಟಿಯಲ್ಲಿ 2 ಕೋಟಿ ರೂಪಾಯಿಯನ್ನು ಸಮೋಸ ವಿತರಣೆಗೆ ಮಾತ್ರ ಖರ್ಚು ಮಾಡಲಾಗಿದೆ ಎಂದಿದ್ದಾರೆ.

“ಆದಿವಾಸಿ ಪ್ರದೇಶಗಳು ಇನ್ನೂ ಅತ್ಯಂತ ಹಿಂದುಳಿದಿವೆ? ಪ್ರತಿ ವರ್ಷ ಕೋಟ್ಯಂತರ ರೂಪಾಯಿ ಖರ್ಚು ಮಾಡುತಿದ್ದರೂ ಏಕೆ ಬದಲಾವಣೆ ಆಗುತ್ತಿಲ್ಲ? ನಾವು ಹಣವನ್ನು ಪ್ರಾಮಾಣಿಕವಾಗಿ ಖರ್ಚು ಮಾಡಿದರೆ, ಅದ್ಭುತ ಆಸ್ಪತ್ರೆಗಳನ್ನು ಕಟ್ಟಬಹುದು, ಉತ್ತಮ ಶಾಲೆಗಳನ್ನು ತೆರೆಯಬಹುದು, ಉಚಿತ ವಿದ್ಯುತ್ ಒದಗಿಸಬಹುದು, ಉತ್ತಮ ರಸ್ತೆಗಳನ್ನು ನಿರ್ಮಿಸಬಹುದು. ಆದರೆ, ಆದಿವಾಸಿಗಳಿಗೆ ಹಣ ಸರಿಯಾಗಿ ತಲುಪುತ್ತಿಲ್ಲ ಎಂದು ಕೇಜ್ರಿವಾಲ್ ತಮ್ಮ ಮೂರು ದಿನಗಳ ಗುಜರಾತ್ ಭೇಟಿಯ ಕೊನೆಯ ದಿನದಂದು ವಡೋದರಾದಲ್ಲಿ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡುತ್ತಾ ಹೇಳಿದ್ದಾರೆ.

ಎಎಪಿಯ ದೇದಿಯಾಪಾಡಾದ ಶಾಸಕ ಚೈತರ್ ವಾಸವ ಅವರು ಆರ್‌ಟಿಐ ಮೂಲಕ ಪಡೆದ ಮಾಹಿತಿಯನ್ನು ಕೇಜ್ರಿವಾಲ್ ಉಲ್ಲೇಖಿಸಿದ್ದು, ಪ್ರಧಾನಿ ನರೇಂದ್ರ ಮೋದಿಯವರ ಸಾರ್ವಜನಿಕ ಸಭೆಯನ್ನು ಆಯೋಜಿಸಲು ನರ್ಮದಾ ಜಿಲ್ಲಾಡಳಿತವು 50 ಕೋಟಿ ರೂ.ಗಳನ್ನು ಖರ್ಚು ಮಾಡಿದೆ ಎಂದು ಹೇಳಿದ್ದಾರೆ ಎಂಬುವುದಾಗಿ ವರದಿಯಾಗಿದೆ.

2025ರ ನವೆಂಬರ್ 15 ರಂದು ಬಿರ್ಸಾ ಮುಂಡಾ ಅವರ 150ನೇ ಜನ್ಮ ದಿನಾಚರಣೆ ಪ್ರಯುಕ್ತ ಗುಜರಾತ್‌ನ ನರ್ಮದಾ ಜಿಲ್ಲೆಯ ದೇದಿಯಾಪಾಡಾದಲ್ಲಿ ಆಯೋಜಿಸಿದ್ದ ‘ಜನಜಾತೀಯ ಗೌರವ್ ದಿವಸ್’ ಕಾರ್ಯಕ್ರಮದಲ್ಲಿ ಭಾಗವಹಿಸಿ ಪ್ರಧಾನಿ ನರೇಂದ್ರ ಮೋದಿ ಭಾಷಣ ಮಾಡಿದ್ದರು.

“ದೇಶದ ಪ್ರಧಾನಿ ಬಂದಿದ್ದು ಒಳ್ಳೆಯದೇ ಆಯ್ತು, ಅದಕ್ಕಾಗಿ ಒಂದು ದೊಡ್ಡ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಆದಿವಾಸಿ ನಿಧಿಯಿಂದ ಎಷ್ಟು ಹಣ ಖರ್ಚು ಮಾಡಲಾಗಿದೆ ಎಂದು ವಾಸವ ಅವರು ಆರ್‌ಟಿಐ ಅಡಿ ಮಾಹಿತಿ ಕೇಳಿದ್ದರು. ಜಿಲ್ಲಾಡಳಿತ 50 ಕೋಟಿ ರೂ. ಖರ್ಚು ಮಾಡಿದೆ ಎಂದು ಆರ್‌ಟಿಐ ಪ್ರತಿಕ್ರಿಯೆಯಿಂದ ತಿಳಿದುಬಂದಿದೆ. ಅದರಲ್ಲಿ 5 ಕೋಟಿ ರೂ. ಪೆಂಡಾಲ್‌ಗೆ, 7 ಕೋಟಿ ರೂ. ಬಸ್‌ಗಳಿಗೆ ಮತ್ತು 2 ಕೋಟಿ ರೂ. ಸಮೋಸಗೆ ಖರ್ಚು ಮಾಡಲಾಗಿದೆ. ಬುಡಕಟ್ಟು ನಿಧಿಯಿಂದ 2 ಕೋಟಿ ರೂ. ಮೌಲ್ಯದ ಸಮೋಸವನ್ನು ತಿಂದವರು ಯಾರು? ಕೇಂದ್ರ ಸರ್ಕಾರದ ಹಣವನ್ನು ಏಕೆ ಬಳಸಿಲ್ಲ? ಪ್ರಧಾನಿಯವರು ಸಮೋಸಗೆ 20 ಕೋಟಿ ಅಥವಾ 30 ಕೋಟಿ ರೂ. ಖರ್ಚು ಮಾಡಬಹುದಿತ್ತು. ಆದರೆ, ಕೇಂದ್ರ ನಿಧಿಯಿಂದ ಏಕೆ ಖರ್ಚು ಮಾಡಿಲ್ಲ? 2 ಕೋಟಿ ರೂ.ಗಳಲ್ಲಿ, ಬುಡಕಟ್ಟು ಪ್ರದೇಶಗಳಲ್ಲಿ ಅನೇಕ ಆಸ್ಪತ್ರೆಗಳು ಮತ್ತು ಶಾಲೆಗಳನ್ನು ನಿರ್ಮಿಸಬಹುದಿತ್ತು” ಎಂದು ಕೇಜ್ರಿವಾಲ್ ಹೇಳಿದ್ದಾರೆ.

ವಡೋದರಾದ ಐವರು ಹಾಲಿ ಬಿಜೆಪಿ ಶಾಸಕರು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಅವರಿಗೆ ಪತ್ರ ಬರೆದಿರುವುದನ್ನು ಉಲ್ಲೇಖಿಸಿದ ಕೇಜ್ರಿವಾಲ್, ಅಧಿಕಾರಶಾಹಿ ತಮ್ಮ ಕ್ಷೇತ್ರಗಳಲ್ಲಿ ಸಾರ್ವಜನಿಕ ಸಮಸ್ಯೆಗಳನ್ನು ನಿರ್ಲಕ್ಷಿಸುತ್ತಿದೆ ಎಂದು ದೂರಿದ್ದಾರೆ.

“ವಡೋದರಾದ ಬಿಜೆಪಿ ಶಾಸಕರಾದ ಶೈಲೇಶ್ ಮೆಹ್ತಾ, ಕೇತನ್ ಇನಾಮದಾರ್, ಧರ್ಮೇಂದ್ರ ಸಿಂಗ್ ವಘೇಲಾ, ಅಕ್ಷಯ್ ಪಟೇಲ್ ಮತ್ತು ಚೈತನ್ಯ ಸಿಂಗ್ ಜಾಲಾ ಮುಖ್ಯಮಂತ್ರಿಗೆ ಪತ್ರ ಬರೆದು, ಅಧಿಕಾರಿಗಳು ತಮ್ಮ ಮನವಿಗಳನ್ನು ಕೇಳುತ್ತಿಲ್ಲ ಎಂದು ಹೇಳಿದ್ದಾರೆ. ನನಗೆ ತಿಳಿದಿರುವ ಮಾಹಿತಿ ಪ್ರಕಾರ, ಪತ್ರ ಸ್ವೀಕರಿಸಿರುವ ಮುಖ್ಯಮಂತ್ರಿ, “ಅಧಿಕಾರಿಗಳು ಸ್ವತಃ ನನ್ನ ಮಾತೇ ಕೇಳುತ್ತಿಲ್ಲ” ಎಂದಿದ್ದಾರೆ. ಶಾಸಕರ ಪತ್ರವು ಆಡಳಿತ ವ್ಯವಸ್ಥೆಯಲ್ಲಿನ ಕುಸಿತವನ್ನು ಎತ್ತಿ ತೋರಿಸಿದೆ” ಎಂದು ಕೇಜ್ರಿವಾಲ್ ಹೇಳಿದ್ದಾರೆ.

“ಸಾಮಾನ್ಯ ಜನರು ಸಣ್ಣಪುಟ್ಟ ಕೆಲಸಗಳನ್ನು ಮಾಡಿಕೊಳ್ಳುವುದು ಕೂಡ ಯುದ್ದದಂತಾಗಿದೆ ಎಂದು ಸ್ವತಃ ಬಿಜೆಪಿ ಶಾಸಕರೇ ಹೇಳಿದ್ದಾರೆ. ಇದು ಕಳೆದ 30 ವರ್ಷಗಳಿಂದ ಬಿಜೆಪಿಗೆ ಮತ ಹಾಕಿದ್ದರ ಪರಿಣಾಮ” ಎಂದು ಕೇಜ್ರಿವಾಲ್ ವಾಗ್ದಾಳಿ ನಡೆಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...