Homeಮುಖಪುಟಮೋದಿ ಕಾರ್ಯಕ್ರಮದಲ್ಲಿ ಸಮೋಸ ವಿತರಣೆಗೆ 2 ಕೋಟಿ ರೂ. ಖರ್ಚು : ಬಿಜೆಪಿ ವಿರುದ್ಧ ಕೇಜ್ರಿವಾಲ್...

ಮೋದಿ ಕಾರ್ಯಕ್ರಮದಲ್ಲಿ ಸಮೋಸ ವಿತರಣೆಗೆ 2 ಕೋಟಿ ರೂ. ಖರ್ಚು : ಬಿಜೆಪಿ ವಿರುದ್ಧ ಕೇಜ್ರಿವಾಲ್ ಆರೋಪ

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ಗುಜರಾತ್‌ನ ಬುಡಕಟ್ಟು ಪ್ರದೇಶಕ್ಕೆ ಭೇಟಿ ನೀಡಿದ ಕಾರ್ಯಕ್ರಮಕ್ಕೆ 50 ಕೋಟಿ ರೂಪಾಯಿ ಖರ್ಚು ಮಾಡಲಾಗಿದೆ ಎಂದು ಆಮ್ ಆದ್ಮಿ ಪಕ್ಷದ (ಎಎಪಿ) ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಸೋಮವಾರ (ಜ.19) ಆರೋಪಿಸಿದ್ದು, ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಆರ್‌ಟಿಐ ಮಾಹಿತಿಯನ್ನು ಉಲ್ಲೇಖಿಸಿದ ಕೇಜ್ರಿವಾಲ್, 50 ಕೋಟಿಯಲ್ಲಿ 2 ಕೋಟಿ ರೂಪಾಯಿಯನ್ನು ಸಮೋಸ ವಿತರಣೆಗೆ ಮಾತ್ರ ಖರ್ಚು ಮಾಡಲಾಗಿದೆ ಎಂದಿದ್ದಾರೆ.

“ಆದಿವಾಸಿ ಪ್ರದೇಶಗಳು ಇನ್ನೂ ಅತ್ಯಂತ ಹಿಂದುಳಿದಿವೆ? ಪ್ರತಿ ವರ್ಷ ಕೋಟ್ಯಂತರ ರೂಪಾಯಿ ಖರ್ಚು ಮಾಡುತಿದ್ದರೂ ಏಕೆ ಬದಲಾವಣೆ ಆಗುತ್ತಿಲ್ಲ? ನಾವು ಹಣವನ್ನು ಪ್ರಾಮಾಣಿಕವಾಗಿ ಖರ್ಚು ಮಾಡಿದರೆ, ಅದ್ಭುತ ಆಸ್ಪತ್ರೆಗಳನ್ನು ಕಟ್ಟಬಹುದು, ಉತ್ತಮ ಶಾಲೆಗಳನ್ನು ತೆರೆಯಬಹುದು, ಉಚಿತ ವಿದ್ಯುತ್ ಒದಗಿಸಬಹುದು, ಉತ್ತಮ ರಸ್ತೆಗಳನ್ನು ನಿರ್ಮಿಸಬಹುದು. ಆದರೆ, ಆದಿವಾಸಿಗಳಿಗೆ ಹಣ ಸರಿಯಾಗಿ ತಲುಪುತ್ತಿಲ್ಲ ಎಂದು ಕೇಜ್ರಿವಾಲ್ ತಮ್ಮ ಮೂರು ದಿನಗಳ ಗುಜರಾತ್ ಭೇಟಿಯ ಕೊನೆಯ ದಿನದಂದು ವಡೋದರಾದಲ್ಲಿ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡುತ್ತಾ ಹೇಳಿದ್ದಾರೆ.

ಎಎಪಿಯ ದೇದಿಯಾಪಾಡಾದ ಶಾಸಕ ಚೈತರ್ ವಾಸವ ಅವರು ಆರ್‌ಟಿಐ ಮೂಲಕ ಪಡೆದ ಮಾಹಿತಿಯನ್ನು ಕೇಜ್ರಿವಾಲ್ ಉಲ್ಲೇಖಿಸಿದ್ದು, ಪ್ರಧಾನಿ ನರೇಂದ್ರ ಮೋದಿಯವರ ಸಾರ್ವಜನಿಕ ಸಭೆಯನ್ನು ಆಯೋಜಿಸಲು ನರ್ಮದಾ ಜಿಲ್ಲಾಡಳಿತವು 50 ಕೋಟಿ ರೂ.ಗಳನ್ನು ಖರ್ಚು ಮಾಡಿದೆ ಎಂದು ಹೇಳಿದ್ದಾರೆ ಎಂಬುವುದಾಗಿ ವರದಿಯಾಗಿದೆ.

2025ರ ನವೆಂಬರ್ 15 ರಂದು ಬಿರ್ಸಾ ಮುಂಡಾ ಅವರ 150ನೇ ಜನ್ಮ ದಿನಾಚರಣೆ ಪ್ರಯುಕ್ತ ಗುಜರಾತ್‌ನ ನರ್ಮದಾ ಜಿಲ್ಲೆಯ ದೇದಿಯಾಪಾಡಾದಲ್ಲಿ ಆಯೋಜಿಸಿದ್ದ ‘ಜನಜಾತೀಯ ಗೌರವ್ ದಿವಸ್’ ಕಾರ್ಯಕ್ರಮದಲ್ಲಿ ಭಾಗವಹಿಸಿ ಪ್ರಧಾನಿ ನರೇಂದ್ರ ಮೋದಿ ಭಾಷಣ ಮಾಡಿದ್ದರು.

“ದೇಶದ ಪ್ರಧಾನಿ ಬಂದಿದ್ದು ಒಳ್ಳೆಯದೇ ಆಯ್ತು, ಅದಕ್ಕಾಗಿ ಒಂದು ದೊಡ್ಡ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಆದಿವಾಸಿ ನಿಧಿಯಿಂದ ಎಷ್ಟು ಹಣ ಖರ್ಚು ಮಾಡಲಾಗಿದೆ ಎಂದು ವಾಸವ ಅವರು ಆರ್‌ಟಿಐ ಅಡಿ ಮಾಹಿತಿ ಕೇಳಿದ್ದರು. ಜಿಲ್ಲಾಡಳಿತ 50 ಕೋಟಿ ರೂ. ಖರ್ಚು ಮಾಡಿದೆ ಎಂದು ಆರ್‌ಟಿಐ ಪ್ರತಿಕ್ರಿಯೆಯಿಂದ ತಿಳಿದುಬಂದಿದೆ. ಅದರಲ್ಲಿ 5 ಕೋಟಿ ರೂ. ಪೆಂಡಾಲ್‌ಗೆ, 7 ಕೋಟಿ ರೂ. ಬಸ್‌ಗಳಿಗೆ ಮತ್ತು 2 ಕೋಟಿ ರೂ. ಸಮೋಸಗೆ ಖರ್ಚು ಮಾಡಲಾಗಿದೆ. ಬುಡಕಟ್ಟು ನಿಧಿಯಿಂದ 2 ಕೋಟಿ ರೂ. ಮೌಲ್ಯದ ಸಮೋಸವನ್ನು ತಿಂದವರು ಯಾರು? ಕೇಂದ್ರ ಸರ್ಕಾರದ ಹಣವನ್ನು ಏಕೆ ಬಳಸಿಲ್ಲ? ಪ್ರಧಾನಿಯವರು ಸಮೋಸಗೆ 20 ಕೋಟಿ ಅಥವಾ 30 ಕೋಟಿ ರೂ. ಖರ್ಚು ಮಾಡಬಹುದಿತ್ತು. ಆದರೆ, ಕೇಂದ್ರ ನಿಧಿಯಿಂದ ಏಕೆ ಖರ್ಚು ಮಾಡಿಲ್ಲ? 2 ಕೋಟಿ ರೂ.ಗಳಲ್ಲಿ, ಬುಡಕಟ್ಟು ಪ್ರದೇಶಗಳಲ್ಲಿ ಅನೇಕ ಆಸ್ಪತ್ರೆಗಳು ಮತ್ತು ಶಾಲೆಗಳನ್ನು ನಿರ್ಮಿಸಬಹುದಿತ್ತು” ಎಂದು ಕೇಜ್ರಿವಾಲ್ ಹೇಳಿದ್ದಾರೆ.

ವಡೋದರಾದ ಐವರು ಹಾಲಿ ಬಿಜೆಪಿ ಶಾಸಕರು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಅವರಿಗೆ ಪತ್ರ ಬರೆದಿರುವುದನ್ನು ಉಲ್ಲೇಖಿಸಿದ ಕೇಜ್ರಿವಾಲ್, ಅಧಿಕಾರಶಾಹಿ ತಮ್ಮ ಕ್ಷೇತ್ರಗಳಲ್ಲಿ ಸಾರ್ವಜನಿಕ ಸಮಸ್ಯೆಗಳನ್ನು ನಿರ್ಲಕ್ಷಿಸುತ್ತಿದೆ ಎಂದು ದೂರಿದ್ದಾರೆ.

“ವಡೋದರಾದ ಬಿಜೆಪಿ ಶಾಸಕರಾದ ಶೈಲೇಶ್ ಮೆಹ್ತಾ, ಕೇತನ್ ಇನಾಮದಾರ್, ಧರ್ಮೇಂದ್ರ ಸಿಂಗ್ ವಘೇಲಾ, ಅಕ್ಷಯ್ ಪಟೇಲ್ ಮತ್ತು ಚೈತನ್ಯ ಸಿಂಗ್ ಜಾಲಾ ಮುಖ್ಯಮಂತ್ರಿಗೆ ಪತ್ರ ಬರೆದು, ಅಧಿಕಾರಿಗಳು ತಮ್ಮ ಮನವಿಗಳನ್ನು ಕೇಳುತ್ತಿಲ್ಲ ಎಂದು ಹೇಳಿದ್ದಾರೆ. ನನಗೆ ತಿಳಿದಿರುವ ಮಾಹಿತಿ ಪ್ರಕಾರ, ಪತ್ರ ಸ್ವೀಕರಿಸಿರುವ ಮುಖ್ಯಮಂತ್ರಿ, “ಅಧಿಕಾರಿಗಳು ಸ್ವತಃ ನನ್ನ ಮಾತೇ ಕೇಳುತ್ತಿಲ್ಲ” ಎಂದಿದ್ದಾರೆ. ಶಾಸಕರ ಪತ್ರವು ಆಡಳಿತ ವ್ಯವಸ್ಥೆಯಲ್ಲಿನ ಕುಸಿತವನ್ನು ಎತ್ತಿ ತೋರಿಸಿದೆ” ಎಂದು ಕೇಜ್ರಿವಾಲ್ ಹೇಳಿದ್ದಾರೆ.

“ಸಾಮಾನ್ಯ ಜನರು ಸಣ್ಣಪುಟ್ಟ ಕೆಲಸಗಳನ್ನು ಮಾಡಿಕೊಳ್ಳುವುದು ಕೂಡ ಯುದ್ದದಂತಾಗಿದೆ ಎಂದು ಸ್ವತಃ ಬಿಜೆಪಿ ಶಾಸಕರೇ ಹೇಳಿದ್ದಾರೆ. ಇದು ಕಳೆದ 30 ವರ್ಷಗಳಿಂದ ಬಿಜೆಪಿಗೆ ಮತ ಹಾಕಿದ್ದರ ಪರಿಣಾಮ” ಎಂದು ಕೇಜ್ರಿವಾಲ್ ವಾಗ್ದಾಳಿ ನಡೆಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...