Homeಮುಖಪುಟಮೋದಿ ಕಾರ್ಯಕ್ರಮದಲ್ಲಿ ಸಮೋಸ ವಿತರಣೆಗೆ 2 ಕೋಟಿ ರೂ. ಖರ್ಚು : ಬಿಜೆಪಿ ವಿರುದ್ಧ ಕೇಜ್ರಿವಾಲ್...

ಮೋದಿ ಕಾರ್ಯಕ್ರಮದಲ್ಲಿ ಸಮೋಸ ವಿತರಣೆಗೆ 2 ಕೋಟಿ ರೂ. ಖರ್ಚು : ಬಿಜೆಪಿ ವಿರುದ್ಧ ಕೇಜ್ರಿವಾಲ್ ಆರೋಪ

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ಗುಜರಾತ್‌ನ ಬುಡಕಟ್ಟು ಪ್ರದೇಶಕ್ಕೆ ಭೇಟಿ ನೀಡಿದ ಕಾರ್ಯಕ್ರಮಕ್ಕೆ 50 ಕೋಟಿ ರೂಪಾಯಿ ಖರ್ಚು ಮಾಡಲಾಗಿದೆ ಎಂದು ಆಮ್ ಆದ್ಮಿ ಪಕ್ಷದ (ಎಎಪಿ) ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಸೋಮವಾರ (ಜ.19) ಆರೋಪಿಸಿದ್ದು, ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಆರ್‌ಟಿಐ ಮಾಹಿತಿಯನ್ನು ಉಲ್ಲೇಖಿಸಿದ ಕೇಜ್ರಿವಾಲ್, 50 ಕೋಟಿಯಲ್ಲಿ 2 ಕೋಟಿ ರೂಪಾಯಿಯನ್ನು ಸಮೋಸ ವಿತರಣೆಗೆ ಮಾತ್ರ ಖರ್ಚು ಮಾಡಲಾಗಿದೆ ಎಂದಿದ್ದಾರೆ.

“ಆದಿವಾಸಿ ಪ್ರದೇಶಗಳು ಇನ್ನೂ ಅತ್ಯಂತ ಹಿಂದುಳಿದಿವೆ? ಪ್ರತಿ ವರ್ಷ ಕೋಟ್ಯಂತರ ರೂಪಾಯಿ ಖರ್ಚು ಮಾಡುತಿದ್ದರೂ ಏಕೆ ಬದಲಾವಣೆ ಆಗುತ್ತಿಲ್ಲ? ನಾವು ಹಣವನ್ನು ಪ್ರಾಮಾಣಿಕವಾಗಿ ಖರ್ಚು ಮಾಡಿದರೆ, ಅದ್ಭುತ ಆಸ್ಪತ್ರೆಗಳನ್ನು ಕಟ್ಟಬಹುದು, ಉತ್ತಮ ಶಾಲೆಗಳನ್ನು ತೆರೆಯಬಹುದು, ಉಚಿತ ವಿದ್ಯುತ್ ಒದಗಿಸಬಹುದು, ಉತ್ತಮ ರಸ್ತೆಗಳನ್ನು ನಿರ್ಮಿಸಬಹುದು. ಆದರೆ, ಆದಿವಾಸಿಗಳಿಗೆ ಹಣ ಸರಿಯಾಗಿ ತಲುಪುತ್ತಿಲ್ಲ ಎಂದು ಕೇಜ್ರಿವಾಲ್ ತಮ್ಮ ಮೂರು ದಿನಗಳ ಗುಜರಾತ್ ಭೇಟಿಯ ಕೊನೆಯ ದಿನದಂದು ವಡೋದರಾದಲ್ಲಿ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡುತ್ತಾ ಹೇಳಿದ್ದಾರೆ.

ಎಎಪಿಯ ದೇದಿಯಾಪಾಡಾದ ಶಾಸಕ ಚೈತರ್ ವಾಸವ ಅವರು ಆರ್‌ಟಿಐ ಮೂಲಕ ಪಡೆದ ಮಾಹಿತಿಯನ್ನು ಕೇಜ್ರಿವಾಲ್ ಉಲ್ಲೇಖಿಸಿದ್ದು, ಪ್ರಧಾನಿ ನರೇಂದ್ರ ಮೋದಿಯವರ ಸಾರ್ವಜನಿಕ ಸಭೆಯನ್ನು ಆಯೋಜಿಸಲು ನರ್ಮದಾ ಜಿಲ್ಲಾಡಳಿತವು 50 ಕೋಟಿ ರೂ.ಗಳನ್ನು ಖರ್ಚು ಮಾಡಿದೆ ಎಂದು ಹೇಳಿದ್ದಾರೆ ಎಂಬುವುದಾಗಿ ವರದಿಯಾಗಿದೆ.

2025ರ ನವೆಂಬರ್ 15 ರಂದು ಬಿರ್ಸಾ ಮುಂಡಾ ಅವರ 150ನೇ ಜನ್ಮ ದಿನಾಚರಣೆ ಪ್ರಯುಕ್ತ ಗುಜರಾತ್‌ನ ನರ್ಮದಾ ಜಿಲ್ಲೆಯ ದೇದಿಯಾಪಾಡಾದಲ್ಲಿ ಆಯೋಜಿಸಿದ್ದ ‘ಜನಜಾತೀಯ ಗೌರವ್ ದಿವಸ್’ ಕಾರ್ಯಕ್ರಮದಲ್ಲಿ ಭಾಗವಹಿಸಿ ಪ್ರಧಾನಿ ನರೇಂದ್ರ ಮೋದಿ ಭಾಷಣ ಮಾಡಿದ್ದರು.

“ದೇಶದ ಪ್ರಧಾನಿ ಬಂದಿದ್ದು ಒಳ್ಳೆಯದೇ ಆಯ್ತು, ಅದಕ್ಕಾಗಿ ಒಂದು ದೊಡ್ಡ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಆದಿವಾಸಿ ನಿಧಿಯಿಂದ ಎಷ್ಟು ಹಣ ಖರ್ಚು ಮಾಡಲಾಗಿದೆ ಎಂದು ವಾಸವ ಅವರು ಆರ್‌ಟಿಐ ಅಡಿ ಮಾಹಿತಿ ಕೇಳಿದ್ದರು. ಜಿಲ್ಲಾಡಳಿತ 50 ಕೋಟಿ ರೂ. ಖರ್ಚು ಮಾಡಿದೆ ಎಂದು ಆರ್‌ಟಿಐ ಪ್ರತಿಕ್ರಿಯೆಯಿಂದ ತಿಳಿದುಬಂದಿದೆ. ಅದರಲ್ಲಿ 5 ಕೋಟಿ ರೂ. ಪೆಂಡಾಲ್‌ಗೆ, 7 ಕೋಟಿ ರೂ. ಬಸ್‌ಗಳಿಗೆ ಮತ್ತು 2 ಕೋಟಿ ರೂ. ಸಮೋಸಗೆ ಖರ್ಚು ಮಾಡಲಾಗಿದೆ. ಬುಡಕಟ್ಟು ನಿಧಿಯಿಂದ 2 ಕೋಟಿ ರೂ. ಮೌಲ್ಯದ ಸಮೋಸವನ್ನು ತಿಂದವರು ಯಾರು? ಕೇಂದ್ರ ಸರ್ಕಾರದ ಹಣವನ್ನು ಏಕೆ ಬಳಸಿಲ್ಲ? ಪ್ರಧಾನಿಯವರು ಸಮೋಸಗೆ 20 ಕೋಟಿ ಅಥವಾ 30 ಕೋಟಿ ರೂ. ಖರ್ಚು ಮಾಡಬಹುದಿತ್ತು. ಆದರೆ, ಕೇಂದ್ರ ನಿಧಿಯಿಂದ ಏಕೆ ಖರ್ಚು ಮಾಡಿಲ್ಲ? 2 ಕೋಟಿ ರೂ.ಗಳಲ್ಲಿ, ಬುಡಕಟ್ಟು ಪ್ರದೇಶಗಳಲ್ಲಿ ಅನೇಕ ಆಸ್ಪತ್ರೆಗಳು ಮತ್ತು ಶಾಲೆಗಳನ್ನು ನಿರ್ಮಿಸಬಹುದಿತ್ತು” ಎಂದು ಕೇಜ್ರಿವಾಲ್ ಹೇಳಿದ್ದಾರೆ.

ವಡೋದರಾದ ಐವರು ಹಾಲಿ ಬಿಜೆಪಿ ಶಾಸಕರು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಅವರಿಗೆ ಪತ್ರ ಬರೆದಿರುವುದನ್ನು ಉಲ್ಲೇಖಿಸಿದ ಕೇಜ್ರಿವಾಲ್, ಅಧಿಕಾರಶಾಹಿ ತಮ್ಮ ಕ್ಷೇತ್ರಗಳಲ್ಲಿ ಸಾರ್ವಜನಿಕ ಸಮಸ್ಯೆಗಳನ್ನು ನಿರ್ಲಕ್ಷಿಸುತ್ತಿದೆ ಎಂದು ದೂರಿದ್ದಾರೆ.

“ವಡೋದರಾದ ಬಿಜೆಪಿ ಶಾಸಕರಾದ ಶೈಲೇಶ್ ಮೆಹ್ತಾ, ಕೇತನ್ ಇನಾಮದಾರ್, ಧರ್ಮೇಂದ್ರ ಸಿಂಗ್ ವಘೇಲಾ, ಅಕ್ಷಯ್ ಪಟೇಲ್ ಮತ್ತು ಚೈತನ್ಯ ಸಿಂಗ್ ಜಾಲಾ ಮುಖ್ಯಮಂತ್ರಿಗೆ ಪತ್ರ ಬರೆದು, ಅಧಿಕಾರಿಗಳು ತಮ್ಮ ಮನವಿಗಳನ್ನು ಕೇಳುತ್ತಿಲ್ಲ ಎಂದು ಹೇಳಿದ್ದಾರೆ. ನನಗೆ ತಿಳಿದಿರುವ ಮಾಹಿತಿ ಪ್ರಕಾರ, ಪತ್ರ ಸ್ವೀಕರಿಸಿರುವ ಮುಖ್ಯಮಂತ್ರಿ, “ಅಧಿಕಾರಿಗಳು ಸ್ವತಃ ನನ್ನ ಮಾತೇ ಕೇಳುತ್ತಿಲ್ಲ” ಎಂದಿದ್ದಾರೆ. ಶಾಸಕರ ಪತ್ರವು ಆಡಳಿತ ವ್ಯವಸ್ಥೆಯಲ್ಲಿನ ಕುಸಿತವನ್ನು ಎತ್ತಿ ತೋರಿಸಿದೆ” ಎಂದು ಕೇಜ್ರಿವಾಲ್ ಹೇಳಿದ್ದಾರೆ.

“ಸಾಮಾನ್ಯ ಜನರು ಸಣ್ಣಪುಟ್ಟ ಕೆಲಸಗಳನ್ನು ಮಾಡಿಕೊಳ್ಳುವುದು ಕೂಡ ಯುದ್ದದಂತಾಗಿದೆ ಎಂದು ಸ್ವತಃ ಬಿಜೆಪಿ ಶಾಸಕರೇ ಹೇಳಿದ್ದಾರೆ. ಇದು ಕಳೆದ 30 ವರ್ಷಗಳಿಂದ ಬಿಜೆಪಿಗೆ ಮತ ಹಾಕಿದ್ದರ ಪರಿಣಾಮ” ಎಂದು ಕೇಜ್ರಿವಾಲ್ ವಾಗ್ದಾಳಿ ನಡೆಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...