Homeಮುಖಪುಟಮೋದಿ ಕಾರ್ಯಕ್ರಮದಲ್ಲಿ ಸಮೋಸ ವಿತರಣೆಗೆ 2 ಕೋಟಿ ರೂ. ಖರ್ಚು : ಬಿಜೆಪಿ ವಿರುದ್ಧ ಕೇಜ್ರಿವಾಲ್...

ಮೋದಿ ಕಾರ್ಯಕ್ರಮದಲ್ಲಿ ಸಮೋಸ ವಿತರಣೆಗೆ 2 ಕೋಟಿ ರೂ. ಖರ್ಚು : ಬಿಜೆಪಿ ವಿರುದ್ಧ ಕೇಜ್ರಿವಾಲ್ ಆರೋಪ

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ಗುಜರಾತ್‌ನ ಬುಡಕಟ್ಟು ಪ್ರದೇಶಕ್ಕೆ ಭೇಟಿ ನೀಡಿದ ಕಾರ್ಯಕ್ರಮಕ್ಕೆ 50 ಕೋಟಿ ರೂಪಾಯಿ ಖರ್ಚು ಮಾಡಲಾಗಿದೆ ಎಂದು ಆಮ್ ಆದ್ಮಿ ಪಕ್ಷದ (ಎಎಪಿ) ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಸೋಮವಾರ (ಜ.19) ಆರೋಪಿಸಿದ್ದು, ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಆರ್‌ಟಿಐ ಮಾಹಿತಿಯನ್ನು ಉಲ್ಲೇಖಿಸಿದ ಕೇಜ್ರಿವಾಲ್, 50 ಕೋಟಿಯಲ್ಲಿ 2 ಕೋಟಿ ರೂಪಾಯಿಯನ್ನು ಸಮೋಸ ವಿತರಣೆಗೆ ಮಾತ್ರ ಖರ್ಚು ಮಾಡಲಾಗಿದೆ ಎಂದಿದ್ದಾರೆ.

“ಆದಿವಾಸಿ ಪ್ರದೇಶಗಳು ಇನ್ನೂ ಅತ್ಯಂತ ಹಿಂದುಳಿದಿವೆ? ಪ್ರತಿ ವರ್ಷ ಕೋಟ್ಯಂತರ ರೂಪಾಯಿ ಖರ್ಚು ಮಾಡುತಿದ್ದರೂ ಏಕೆ ಬದಲಾವಣೆ ಆಗುತ್ತಿಲ್ಲ? ನಾವು ಹಣವನ್ನು ಪ್ರಾಮಾಣಿಕವಾಗಿ ಖರ್ಚು ಮಾಡಿದರೆ, ಅದ್ಭುತ ಆಸ್ಪತ್ರೆಗಳನ್ನು ಕಟ್ಟಬಹುದು, ಉತ್ತಮ ಶಾಲೆಗಳನ್ನು ತೆರೆಯಬಹುದು, ಉಚಿತ ವಿದ್ಯುತ್ ಒದಗಿಸಬಹುದು, ಉತ್ತಮ ರಸ್ತೆಗಳನ್ನು ನಿರ್ಮಿಸಬಹುದು. ಆದರೆ, ಆದಿವಾಸಿಗಳಿಗೆ ಹಣ ಸರಿಯಾಗಿ ತಲುಪುತ್ತಿಲ್ಲ ಎಂದು ಕೇಜ್ರಿವಾಲ್ ತಮ್ಮ ಮೂರು ದಿನಗಳ ಗುಜರಾತ್ ಭೇಟಿಯ ಕೊನೆಯ ದಿನದಂದು ವಡೋದರಾದಲ್ಲಿ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡುತ್ತಾ ಹೇಳಿದ್ದಾರೆ.

ಎಎಪಿಯ ದೇದಿಯಾಪಾಡಾದ ಶಾಸಕ ಚೈತರ್ ವಾಸವ ಅವರು ಆರ್‌ಟಿಐ ಮೂಲಕ ಪಡೆದ ಮಾಹಿತಿಯನ್ನು ಕೇಜ್ರಿವಾಲ್ ಉಲ್ಲೇಖಿಸಿದ್ದು, ಪ್ರಧಾನಿ ನರೇಂದ್ರ ಮೋದಿಯವರ ಸಾರ್ವಜನಿಕ ಸಭೆಯನ್ನು ಆಯೋಜಿಸಲು ನರ್ಮದಾ ಜಿಲ್ಲಾಡಳಿತವು 50 ಕೋಟಿ ರೂ.ಗಳನ್ನು ಖರ್ಚು ಮಾಡಿದೆ ಎಂದು ಹೇಳಿದ್ದಾರೆ ಎಂಬುವುದಾಗಿ ವರದಿಯಾಗಿದೆ.

2025ರ ನವೆಂಬರ್ 15 ರಂದು ಬಿರ್ಸಾ ಮುಂಡಾ ಅವರ 150ನೇ ಜನ್ಮ ದಿನಾಚರಣೆ ಪ್ರಯುಕ್ತ ಗುಜರಾತ್‌ನ ನರ್ಮದಾ ಜಿಲ್ಲೆಯ ದೇದಿಯಾಪಾಡಾದಲ್ಲಿ ಆಯೋಜಿಸಿದ್ದ ‘ಜನಜಾತೀಯ ಗೌರವ್ ದಿವಸ್’ ಕಾರ್ಯಕ್ರಮದಲ್ಲಿ ಭಾಗವಹಿಸಿ ಪ್ರಧಾನಿ ನರೇಂದ್ರ ಮೋದಿ ಭಾಷಣ ಮಾಡಿದ್ದರು.

“ದೇಶದ ಪ್ರಧಾನಿ ಬಂದಿದ್ದು ಒಳ್ಳೆಯದೇ ಆಯ್ತು, ಅದಕ್ಕಾಗಿ ಒಂದು ದೊಡ್ಡ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಆದಿವಾಸಿ ನಿಧಿಯಿಂದ ಎಷ್ಟು ಹಣ ಖರ್ಚು ಮಾಡಲಾಗಿದೆ ಎಂದು ವಾಸವ ಅವರು ಆರ್‌ಟಿಐ ಅಡಿ ಮಾಹಿತಿ ಕೇಳಿದ್ದರು. ಜಿಲ್ಲಾಡಳಿತ 50 ಕೋಟಿ ರೂ. ಖರ್ಚು ಮಾಡಿದೆ ಎಂದು ಆರ್‌ಟಿಐ ಪ್ರತಿಕ್ರಿಯೆಯಿಂದ ತಿಳಿದುಬಂದಿದೆ. ಅದರಲ್ಲಿ 5 ಕೋಟಿ ರೂ. ಪೆಂಡಾಲ್‌ಗೆ, 7 ಕೋಟಿ ರೂ. ಬಸ್‌ಗಳಿಗೆ ಮತ್ತು 2 ಕೋಟಿ ರೂ. ಸಮೋಸಗೆ ಖರ್ಚು ಮಾಡಲಾಗಿದೆ. ಬುಡಕಟ್ಟು ನಿಧಿಯಿಂದ 2 ಕೋಟಿ ರೂ. ಮೌಲ್ಯದ ಸಮೋಸವನ್ನು ತಿಂದವರು ಯಾರು? ಕೇಂದ್ರ ಸರ್ಕಾರದ ಹಣವನ್ನು ಏಕೆ ಬಳಸಿಲ್ಲ? ಪ್ರಧಾನಿಯವರು ಸಮೋಸಗೆ 20 ಕೋಟಿ ಅಥವಾ 30 ಕೋಟಿ ರೂ. ಖರ್ಚು ಮಾಡಬಹುದಿತ್ತು. ಆದರೆ, ಕೇಂದ್ರ ನಿಧಿಯಿಂದ ಏಕೆ ಖರ್ಚು ಮಾಡಿಲ್ಲ? 2 ಕೋಟಿ ರೂ.ಗಳಲ್ಲಿ, ಬುಡಕಟ್ಟು ಪ್ರದೇಶಗಳಲ್ಲಿ ಅನೇಕ ಆಸ್ಪತ್ರೆಗಳು ಮತ್ತು ಶಾಲೆಗಳನ್ನು ನಿರ್ಮಿಸಬಹುದಿತ್ತು” ಎಂದು ಕೇಜ್ರಿವಾಲ್ ಹೇಳಿದ್ದಾರೆ.

ವಡೋದರಾದ ಐವರು ಹಾಲಿ ಬಿಜೆಪಿ ಶಾಸಕರು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಅವರಿಗೆ ಪತ್ರ ಬರೆದಿರುವುದನ್ನು ಉಲ್ಲೇಖಿಸಿದ ಕೇಜ್ರಿವಾಲ್, ಅಧಿಕಾರಶಾಹಿ ತಮ್ಮ ಕ್ಷೇತ್ರಗಳಲ್ಲಿ ಸಾರ್ವಜನಿಕ ಸಮಸ್ಯೆಗಳನ್ನು ನಿರ್ಲಕ್ಷಿಸುತ್ತಿದೆ ಎಂದು ದೂರಿದ್ದಾರೆ.

“ವಡೋದರಾದ ಬಿಜೆಪಿ ಶಾಸಕರಾದ ಶೈಲೇಶ್ ಮೆಹ್ತಾ, ಕೇತನ್ ಇನಾಮದಾರ್, ಧರ್ಮೇಂದ್ರ ಸಿಂಗ್ ವಘೇಲಾ, ಅಕ್ಷಯ್ ಪಟೇಲ್ ಮತ್ತು ಚೈತನ್ಯ ಸಿಂಗ್ ಜಾಲಾ ಮುಖ್ಯಮಂತ್ರಿಗೆ ಪತ್ರ ಬರೆದು, ಅಧಿಕಾರಿಗಳು ತಮ್ಮ ಮನವಿಗಳನ್ನು ಕೇಳುತ್ತಿಲ್ಲ ಎಂದು ಹೇಳಿದ್ದಾರೆ. ನನಗೆ ತಿಳಿದಿರುವ ಮಾಹಿತಿ ಪ್ರಕಾರ, ಪತ್ರ ಸ್ವೀಕರಿಸಿರುವ ಮುಖ್ಯಮಂತ್ರಿ, “ಅಧಿಕಾರಿಗಳು ಸ್ವತಃ ನನ್ನ ಮಾತೇ ಕೇಳುತ್ತಿಲ್ಲ” ಎಂದಿದ್ದಾರೆ. ಶಾಸಕರ ಪತ್ರವು ಆಡಳಿತ ವ್ಯವಸ್ಥೆಯಲ್ಲಿನ ಕುಸಿತವನ್ನು ಎತ್ತಿ ತೋರಿಸಿದೆ” ಎಂದು ಕೇಜ್ರಿವಾಲ್ ಹೇಳಿದ್ದಾರೆ.

“ಸಾಮಾನ್ಯ ಜನರು ಸಣ್ಣಪುಟ್ಟ ಕೆಲಸಗಳನ್ನು ಮಾಡಿಕೊಳ್ಳುವುದು ಕೂಡ ಯುದ್ದದಂತಾಗಿದೆ ಎಂದು ಸ್ವತಃ ಬಿಜೆಪಿ ಶಾಸಕರೇ ಹೇಳಿದ್ದಾರೆ. ಇದು ಕಳೆದ 30 ವರ್ಷಗಳಿಂದ ಬಿಜೆಪಿಗೆ ಮತ ಹಾಕಿದ್ದರ ಪರಿಣಾಮ” ಎಂದು ಕೇಜ್ರಿವಾಲ್ ವಾಗ್ದಾಳಿ ನಡೆಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...