Homeಮುಖಪುಟ20 ಸಾವಿರ ಕೋಟಿ ರೂಪಾಯಿ ಕೊರೊನಾ ಪ್ಯಾಕೇಜ್ ಘೋಷಿಸಿದ ಕೇರಳ ಸರ್ಕಾರ

20 ಸಾವಿರ ಕೋಟಿ ರೂಪಾಯಿ ಕೊರೊನಾ ಪ್ಯಾಕೇಜ್ ಘೋಷಿಸಿದ ಕೇರಳ ಸರ್ಕಾರ

- Advertisement -
- Advertisement -

ಕೇರಳ ಹಣಕಾಸು ಸಚಿವ ಕೆ.ಎನ್.ಬಾಲಗೋಪಾಲ್ ಶುಕ್ರವಾರ ಮಂಡಿಸಿದ ಪರಿಷ್ಕೃತ ಬಜೆಟ್‌ನಲ್ಲಿ 20,000 ಕೋಟಿ ರೂಪಾಯಿ ಮೊತ್ತದ ಕೋವಿಡ್ ಪ್ಯಾಕೇಜ್ ಘೋಷಿಸಿದ್ದಾರೆ. 150 ಮೆಟ್ರಿಕ್ ಟನ್ ಸಾಮರ್ಥ್ಯದ ದ್ರವ ವೈದ್ಯಕೀಯ ಆಮ್ಲಜನಕ ಘಟಕ, ಕೋವಿಡ್ ಲಸಿಕೆಗಳ ಖರೀದಿಗೆ 1,000 ಕೋಟಿ ರೂಪಾಯಿ ಮೀಸಲಿಟ್ಟಿದ್ದಾರೆ.

ಕೇರಳ ವಿಧಾನಸಭೆಯಲ್ಲಿ 2021-22ರ ಹಣಕಾಸು ವರ್ಷದ ರಾಜ್ಯ ಬಜೆಟ್‌ನಲ್ಲಿ 20,000 ಕೋಟಿ ಪ್ಯಾಕೇಜ್ ಘೋಷಿಸಿದ್ದಾರೆ. 18 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಉಚಿತ ಲಸಿಕೆ ವಿತರಿಸಲು 1,000 ಕೋಟಿ ರೂಪಾಯಿ ಮೀಸಲಿಟ್ಟಿದ್ದು, ಯಾವುದೇ ಹೊಸ ತೆರಿಗೆಯನ್ನು ವಿಧಿಸಿಲ್ಲ.

ಪಿಣರಾಯಿ ವಿಜಯನ್ ನೇತೃತ್ವದ ಎಲ್‌ಡಿಎಫ್ ಕೇರಳದಲ್ಲಿ ಸತತ ಎರಡನೇ ಬಾರಿ ಐತಿಹಾಸಿಕ ಗೆಲುವು ದಾಖಲಿಸಿ ಅಧಿಕಾರಕ್ಕೆ ಬಂದಿದೆ. ಪರಿಷ್ಕೃತ ಬಜೆಟ್‌ ಗಮನಾರ್ಹವಾಗಿ ಕೋವಿಡ್ ಸಾಂಕ್ರಾಮಿಕ ರೋಗದಿಂದ ತತ್ತರಿಸಿರುವ ಕೇರಳದ ಆರೋಗ್ಯ ಮತ್ತು ವೈದ್ಯಕೀಯ ಸಾಮರ್ಥ್ಯ ಅಭಿವೃದ್ಧಿಯ ಮೇಲೆ ಕೇಂದ್ರೀಕರಿಸಿದೆ.

ಇದನ್ನೂ ಓದಿ: ಕನ್ನಡವನ್ನು ಕೊಳಕು ಭಾಷೆ ಎಂದು ತೋರಿಸಿದ್ದ ವೆಬ್‌ಸೈಟ್, ಕನ್ನಡಿಗರ ಆಕ್ರೋಶಕ್ಕೆ ಮಣಿದ ಗೂಗಲ್

ಕೋವಿಡ್, ಎಬೊಲಾ ಮುಂತಾದ ಸಾಂಕ್ರಾಮಿಕ ಕಾಯಿಲೆಗಳಿಗೆ ಚಿಕಿತ್ಸೆ ನೀಡಲು ಪ್ರತ್ಯೇಕ ವಾರ್ಡ್‌ಗಳನ್ನು ನಿರ್ಮಿಸಲು ಬಜೆಟ್‌ನಲ್ಲಿ ಹಂಚಿಕೆ ಮಾಡಲಾಗಿದೆ. ಪ್ರತಿ ಜಿಲ್ಲೆಯ ಸರ್ಕಾರಿ ಆಸ್ಪತ್ರೆಗಳಲ್ಲಿ ಐಸಿಯುಗಳನ್ನು ಸ್ಥಾಪಿಸುವುದು ಇದರಲ್ಲಿ ಸೇರಿದೆ.

“ಕೋವಿಡ್ ರೋಗಿಗಳ ಚಿಕಿತ್ಸೆಗಾಗಿ ಆಮ್ಲಜನಕ ಪೂರೈಕೆ ಅಗತ್ಯವಾಗಿದೆ. 150 ಮೆಟ್ರಿಕ್ ಟನ್ ದ್ರವ ಆಮ್ಲಜನಕದ ಸ್ಥಾವರವನ್ನು ಸ್ಥಾಪಿಸಲಾಗುವುದು. 1,000 ಮೆಟ್ರಿಕ್ ಟನ್ ಸಾಮರ್ಥ್ಯದ ಟ್ಯಾಂಕ್ ಮತ್ತು ತುರ್ತು ಸಾಗಣೆಗೆ ಟ್ಯಾಂಕರ್ ಲಭ್ಯವಾಗಲಿದೆ. ಯೋಜನೆಯ ಆರಂಭಿಕ ಹಂತಕ್ಕೆ 25 ಲಕ್ಷ ರೂಪಾಯಿ ನಿಗದಿಪಡಿಸಲಾಗಿದೆ. ಸೆಪ್ಟೆಂಬರ್ 14 ರೊಳಗೆ ಟೆಂಡರ್ ಪ್ರಕ್ರಿಯೆಯನ್ನು ಪ್ರಾರಂಭಿಸುವ ನಿರೀಕ್ಷೆಯಲ್ಲಿದ್ದೇವೆ” ಎಂದು ಕೆ.ಎನ್. ಬಾಲಗೋಪಾಲ್ ತಿಳಿಸಿದ್ದಾರೆ.

ಸಾಂಕ್ರಾಮಿಕ ರೋಗದ ಪರಿಣಾಮದಿಂದ ರಾಜ್ಯದ ಹೆಚ್ಚಿನ ಜನರು ತತ್ತರಿಸುತ್ತಿದ್ದಾರೆ. ಹೀಗಾಗಿ ಯಾವುದೇ ಹೊಸ ತೆರಿಗೆಗಳನ್ನು ಘೋಷಿಸಿಲ್ಲ ಎನ್ನಲಾಗಿದೆ.

14.3 ಲಕ್ಷಕ್ಕೂ ಹೆಚ್ಚು ಅನಿವಾಸಿ ಕೇರಳಿಗರು ರಾಜ್ಯಕ್ಕೆ ಮರಳಿದ್ದಾರೆ. ಅವರಲ್ಲಿ ಅನೇಕರು ಉದ್ಯೋಗ ಕಳೆದುಕೊಂಡಿದ್ದಾರೆ. ಅವರಿಗೆ ಕಡಿಮೆ ಬಡ್ಡಿಯಲ್ಲಿ ಸಾಲವನ್ನು ನೀಡಲು 1,000 ಕೋಟಿ ರೂಪಾಯಿ ಮೀಸಲಿಡಲಾಗಿದೆ.

ದಿವಂಗತ ಹಿರಿಯ ರಾಜಕಾರಣಿ ಕೆ.ಆರ್.ಗೌರಿಯಮ್ಮ ಮತ್ತು ಬಾಲಕೃಷ್ಣ ಪಿಳ್ಳೈ ಅವರಿ ಸ್ಮರಣಾರ್ಥವಾಗಿ, ಎರಡು ಹೊಸ ಸ್ಮಾರಕಗಳನ್ನು ನಿರ್ಮಿಸಲು ತಲಾ 2 ಕೋಟಿ ರೂಪಾಯಿಗಳನ್ನು ಬಜೆಟ್‌ನಲ್ಲಿ ಮೀಸಲಿಡಲಾಗಿದೆ.


ಇದನ್ನೂ ಓದಿ: ಮಹಾರಾಷ್ಟ್ರದ ಬದ್ಲಾಪುರ ಕೈಗಾರಿಕಾ ಘಟಕದಲ್ಲಿ ಅನಿಲ ಸೋರಿಕೆ : ಹಲವರಿಗೆ ಉಸಿರಾಟದ ಸಮಸ್ಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...