Homeಮುಖಪುಟ20 ಸಾವಿರ ಕೋಟಿ ರೂಪಾಯಿ ಕೊರೊನಾ ಪ್ಯಾಕೇಜ್ ಘೋಷಿಸಿದ ಕೇರಳ ಸರ್ಕಾರ

20 ಸಾವಿರ ಕೋಟಿ ರೂಪಾಯಿ ಕೊರೊನಾ ಪ್ಯಾಕೇಜ್ ಘೋಷಿಸಿದ ಕೇರಳ ಸರ್ಕಾರ

- Advertisement -
- Advertisement -

ಕೇರಳ ಹಣಕಾಸು ಸಚಿವ ಕೆ.ಎನ್.ಬಾಲಗೋಪಾಲ್ ಶುಕ್ರವಾರ ಮಂಡಿಸಿದ ಪರಿಷ್ಕೃತ ಬಜೆಟ್‌ನಲ್ಲಿ 20,000 ಕೋಟಿ ರೂಪಾಯಿ ಮೊತ್ತದ ಕೋವಿಡ್ ಪ್ಯಾಕೇಜ್ ಘೋಷಿಸಿದ್ದಾರೆ. 150 ಮೆಟ್ರಿಕ್ ಟನ್ ಸಾಮರ್ಥ್ಯದ ದ್ರವ ವೈದ್ಯಕೀಯ ಆಮ್ಲಜನಕ ಘಟಕ, ಕೋವಿಡ್ ಲಸಿಕೆಗಳ ಖರೀದಿಗೆ 1,000 ಕೋಟಿ ರೂಪಾಯಿ ಮೀಸಲಿಟ್ಟಿದ್ದಾರೆ.

ಕೇರಳ ವಿಧಾನಸಭೆಯಲ್ಲಿ 2021-22ರ ಹಣಕಾಸು ವರ್ಷದ ರಾಜ್ಯ ಬಜೆಟ್‌ನಲ್ಲಿ 20,000 ಕೋಟಿ ಪ್ಯಾಕೇಜ್ ಘೋಷಿಸಿದ್ದಾರೆ. 18 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಉಚಿತ ಲಸಿಕೆ ವಿತರಿಸಲು 1,000 ಕೋಟಿ ರೂಪಾಯಿ ಮೀಸಲಿಟ್ಟಿದ್ದು, ಯಾವುದೇ ಹೊಸ ತೆರಿಗೆಯನ್ನು ವಿಧಿಸಿಲ್ಲ.

ಪಿಣರಾಯಿ ವಿಜಯನ್ ನೇತೃತ್ವದ ಎಲ್‌ಡಿಎಫ್ ಕೇರಳದಲ್ಲಿ ಸತತ ಎರಡನೇ ಬಾರಿ ಐತಿಹಾಸಿಕ ಗೆಲುವು ದಾಖಲಿಸಿ ಅಧಿಕಾರಕ್ಕೆ ಬಂದಿದೆ. ಪರಿಷ್ಕೃತ ಬಜೆಟ್‌ ಗಮನಾರ್ಹವಾಗಿ ಕೋವಿಡ್ ಸಾಂಕ್ರಾಮಿಕ ರೋಗದಿಂದ ತತ್ತರಿಸಿರುವ ಕೇರಳದ ಆರೋಗ್ಯ ಮತ್ತು ವೈದ್ಯಕೀಯ ಸಾಮರ್ಥ್ಯ ಅಭಿವೃದ್ಧಿಯ ಮೇಲೆ ಕೇಂದ್ರೀಕರಿಸಿದೆ.

ಇದನ್ನೂ ಓದಿ: ಕನ್ನಡವನ್ನು ಕೊಳಕು ಭಾಷೆ ಎಂದು ತೋರಿಸಿದ್ದ ವೆಬ್‌ಸೈಟ್, ಕನ್ನಡಿಗರ ಆಕ್ರೋಶಕ್ಕೆ ಮಣಿದ ಗೂಗಲ್

ಕೋವಿಡ್, ಎಬೊಲಾ ಮುಂತಾದ ಸಾಂಕ್ರಾಮಿಕ ಕಾಯಿಲೆಗಳಿಗೆ ಚಿಕಿತ್ಸೆ ನೀಡಲು ಪ್ರತ್ಯೇಕ ವಾರ್ಡ್‌ಗಳನ್ನು ನಿರ್ಮಿಸಲು ಬಜೆಟ್‌ನಲ್ಲಿ ಹಂಚಿಕೆ ಮಾಡಲಾಗಿದೆ. ಪ್ರತಿ ಜಿಲ್ಲೆಯ ಸರ್ಕಾರಿ ಆಸ್ಪತ್ರೆಗಳಲ್ಲಿ ಐಸಿಯುಗಳನ್ನು ಸ್ಥಾಪಿಸುವುದು ಇದರಲ್ಲಿ ಸೇರಿದೆ.

“ಕೋವಿಡ್ ರೋಗಿಗಳ ಚಿಕಿತ್ಸೆಗಾಗಿ ಆಮ್ಲಜನಕ ಪೂರೈಕೆ ಅಗತ್ಯವಾಗಿದೆ. 150 ಮೆಟ್ರಿಕ್ ಟನ್ ದ್ರವ ಆಮ್ಲಜನಕದ ಸ್ಥಾವರವನ್ನು ಸ್ಥಾಪಿಸಲಾಗುವುದು. 1,000 ಮೆಟ್ರಿಕ್ ಟನ್ ಸಾಮರ್ಥ್ಯದ ಟ್ಯಾಂಕ್ ಮತ್ತು ತುರ್ತು ಸಾಗಣೆಗೆ ಟ್ಯಾಂಕರ್ ಲಭ್ಯವಾಗಲಿದೆ. ಯೋಜನೆಯ ಆರಂಭಿಕ ಹಂತಕ್ಕೆ 25 ಲಕ್ಷ ರೂಪಾಯಿ ನಿಗದಿಪಡಿಸಲಾಗಿದೆ. ಸೆಪ್ಟೆಂಬರ್ 14 ರೊಳಗೆ ಟೆಂಡರ್ ಪ್ರಕ್ರಿಯೆಯನ್ನು ಪ್ರಾರಂಭಿಸುವ ನಿರೀಕ್ಷೆಯಲ್ಲಿದ್ದೇವೆ” ಎಂದು ಕೆ.ಎನ್. ಬಾಲಗೋಪಾಲ್ ತಿಳಿಸಿದ್ದಾರೆ.

ಸಾಂಕ್ರಾಮಿಕ ರೋಗದ ಪರಿಣಾಮದಿಂದ ರಾಜ್ಯದ ಹೆಚ್ಚಿನ ಜನರು ತತ್ತರಿಸುತ್ತಿದ್ದಾರೆ. ಹೀಗಾಗಿ ಯಾವುದೇ ಹೊಸ ತೆರಿಗೆಗಳನ್ನು ಘೋಷಿಸಿಲ್ಲ ಎನ್ನಲಾಗಿದೆ.

14.3 ಲಕ್ಷಕ್ಕೂ ಹೆಚ್ಚು ಅನಿವಾಸಿ ಕೇರಳಿಗರು ರಾಜ್ಯಕ್ಕೆ ಮರಳಿದ್ದಾರೆ. ಅವರಲ್ಲಿ ಅನೇಕರು ಉದ್ಯೋಗ ಕಳೆದುಕೊಂಡಿದ್ದಾರೆ. ಅವರಿಗೆ ಕಡಿಮೆ ಬಡ್ಡಿಯಲ್ಲಿ ಸಾಲವನ್ನು ನೀಡಲು 1,000 ಕೋಟಿ ರೂಪಾಯಿ ಮೀಸಲಿಡಲಾಗಿದೆ.

ದಿವಂಗತ ಹಿರಿಯ ರಾಜಕಾರಣಿ ಕೆ.ಆರ್.ಗೌರಿಯಮ್ಮ ಮತ್ತು ಬಾಲಕೃಷ್ಣ ಪಿಳ್ಳೈ ಅವರಿ ಸ್ಮರಣಾರ್ಥವಾಗಿ, ಎರಡು ಹೊಸ ಸ್ಮಾರಕಗಳನ್ನು ನಿರ್ಮಿಸಲು ತಲಾ 2 ಕೋಟಿ ರೂಪಾಯಿಗಳನ್ನು ಬಜೆಟ್‌ನಲ್ಲಿ ಮೀಸಲಿಡಲಾಗಿದೆ.


ಇದನ್ನೂ ಓದಿ: ಮಹಾರಾಷ್ಟ್ರದ ಬದ್ಲಾಪುರ ಕೈಗಾರಿಕಾ ಘಟಕದಲ್ಲಿ ಅನಿಲ ಸೋರಿಕೆ : ಹಲವರಿಗೆ ಉಸಿರಾಟದ ಸಮಸ್ಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...