Homeಮುಖಪುಟಮತ್ತೆ 25 ರೂ ಹೆಚ್ಚಳ: ನಾಲ್ಕು ದಿನಗಳಲ್ಲಿ ಎರಡನೇ ಬಾರಿಗೆ ಗ್ಯಾಸ್ ಬೆಲೆ ಏರಿಕೆ

ಮತ್ತೆ 25 ರೂ ಹೆಚ್ಚಳ: ನಾಲ್ಕು ದಿನಗಳಲ್ಲಿ ಎರಡನೇ ಬಾರಿಗೆ ಗ್ಯಾಸ್ ಬೆಲೆ ಏರಿಕೆ

- Advertisement -
- Advertisement -

ನಾಲ್ಕು ದಿನಗಳಲ್ಲಿ ಎರಡನೇ ಬಾರಿಗೆ, ಸಬ್ಸಿಡಿ ರಹಿತ ಧ್ರುವೀಕೃತ ಪೆಟ್ರೋಲಿಯಂ ಗ್ಯಾಸ್ (ಎಲ್‌ಪಿಜಿ) ಸಿಲಿಂಡರ್‌ನ ಬೆಲೆಯನ್ನು ಮತ್ತೆ ಏರಿಸಲಾಗಿದೆ. ಇಂದು ಮಾರ್ಚ್ 1 ರ ಸೋಮವಾರ 25 ರೂ. ಹೆಚ್ಚಿಸಲಾಗಿದ್ದು, ದೆಹಲಿಯಲ್ಲಿ 14.2 ಕೆಜಿ ಎಲ್‌ಪಿಜಿ ಸಿಲಿಂಡರ್‌ಗೆ ಈಗ 819 ರೂ. ಪಾವತಿಸಬೇಕು!

ಫೆಬ್ರವರಿ 25 ರಂದು, ಅಡುಗೆ ಅನಿಲದ ಬೆಲೆಯನ್ನು 25 ರೂ.ಗೆ ಏರಿಸಲಾಯಿತು. ವಾಸ್ತವವಾಗಿ, ಫೆಬ್ರವರಿ ತಿಂಗಳಲ್ಲಿ ಇದು ಮೂರನೆಯ ಹೆಚ್ಚಳವಾಗಿದೆ. ಫೆಬ್ರವರಿ 4 ಮತ್ತು ಫೆಬ್ರವರಿ 14 ರಂದು ಗ್ಯಾಸ್ ಬೆಲೆಗಳನ್ನು ಹೆಚ್ಚಿಸಲಾಗಿತ್ತು.

ಕಳೆದ ವರ್ಷ ಡಿಸೆಂಬರ್‌ನಿಂದ ಅಡುಗೆ ಅನಿಲ ಬೆಲೆ ಸ್ಥಿರವಾಗಿ ಏರಿಕೆಯಾಗುತ್ತಿದೆ. ಸಬ್ಸಿಡಿ ರಹಿತ ಎಲ್‌ಪಿಜಿ ಸಿಲಿಂಡರ್‌ನ ಬೆಲೆಯನ್ನು ಡಿಸೆಂಬರ್ 1 ರಂದು 594 ರಿಂದ 644 ರೂ.ಗೆ ಹೆಚ್ಚಿಸಲಾಯಿತು. ಹದಿನೈದು ದಿನಗಳಲ್ಲಿ, ಡಿಸೆಂಬರ್ 15 ರಂದು, ಬೆಲೆಗಳು ಮತ್ತೆ 644 ರೂ.ಗಳಿಂದ 694 ರೂ.ಗೆ ಏರಿಕೆಯಾಗಿತ್ತು. ಡಿಸೆಂಬರ್ ತಿಂಗಳಲ್ಲಿ ಅಡುಗೆ ಅನಿಲದ ಬೆಲೆ 100 ರೂ.ಗಳಷ್ಟು ಏರಿಕೆ ಕಂಡಿತ್ತು. ಆದಾಗ್ಯೂ, ಜನವರಿ ತಿಂಗಳಲ್ಲಿ ಯಾವುದೇ ಸಿಲಿಂಡರ್ ಅನ್ನು 694 ರೂಗಳಿಗೆ ಯಾವುದೇ ಹೆಚ್ಚಳವಿಲ್ಲದೆ ಮಾರಾಟ ಮಾಡಲಾಯಿತು.

ಫೆಬ್ರವರಿಯಲ್ಲಿ ಏನಾಯಿತು?

ಬೆಲೆಗಳು ಮತ್ತೆ ಏರಿಕೆಯಾಗಲು ಪ್ರಾರಂಭಿಸಿದವು. ಫೆಬ್ರವರಿ 4 ರಂದು, ಎಲ್‌ಪಿಜಿ ಸಿಲಿಂಡರ್‌ನ ಬೆಲೆಯನ್ನು ಮತ್ತೆ ಪರಿಷ್ಕರಿಸಲಾಯಿತು ಅದನ್ನು 719 ರೂ.ಗೆ ಮಾರಾಟ ಮಾಡಲಾಯಿತು. ಫೆಬ್ರವರಿ 14 ರಂದು ಅಸ್ತಿತ್ವದಲ್ಲಿರುವ ಬೆಲೆಗೆ ಮತ್ತೊಂದು 50 ರೂಗಳನ್ನು ಸೇರಿಸಲಾಯಿತು. ಆಗ ಸಿಲಿಂಡರ್ ಬೆಲೆ 769 ರೂಗಳಿಗೆ ಮುಟ್ಟಿತು.

ಅಡುಗೆ ಅನಿಲದ ಹೆಚ್ಚುತ್ತಿರುವ ವೆಚ್ಚಗಳು ಮತ್ತು ಏರುತ್ತಿರುವ ಡೀಸೆಲ್ ಮತ್ತು ಪೆಟ್ರೋಲ್ ಬೆಲೆಗಳು ಸಾಮಾನ್ಯ ಜನರ ಜೇಬಿಗೆ ಹೊರೆಯಾಗುತ್ತಿವೆ. ಇಂದು ಮಾರ್ಚ್ 1, ಸೋಮವಾರ ದೆಹಲಿಯಲ್ಲಿ ಪೆಟ್ರೋಲ್ ಪ್ರತಿ ಲೀಟರ್‌ಗೆ 91.17 ರೂ.ಗೆ ಮಾರಾಟವಾಗಿದ್ದರೆ, ಡೀಸೆಲ್ ಬೆಲೆ 81.47 ರೂ.

ಮೇ 2020ರಿಂದ ಉಜ್ವಲಾ ಯೋಜನೆಯಡಿ ಲಭ್ಯವಿರುವ ಎಲ್‌ಪಿಜಿ ಸಿಲಿಂಡರ್‌ಗಳಿಗೆ ಸಬ್ಸಿಡಿ ನೀಡುವುದನ್ನು ಸರ್ಕಾರ ಹೆಚ್ಚಾಗಿ ನಿಲ್ಲಿಸಿರುವುದರಿಂದ, ಹೆಚ್ಚಿನ ಸಂಖ್ಯೆಯ ಕುಟುಂಬಗಳಿಗೆ ಈಗ ಮಾರುಕಟ್ಟೆ ಬೆಲೆಯನ್ನು ನೀಡುವುದನ್ನು ಬಿಟ್ಟು ಬೇರೆ ದಾರಿಯಿಲ್ಲ. ಕಳೆದ ವರ್ಷದ ಆರಂಭದಿಂದ ಜಾಗತಿಕ ಕಚ್ಚಾ ತೈಲ ಬೆಲೆಯಲ್ಲಿ ಕುಸಿತವಾಗಿದ್ದರೂ ಸರ್ಕಾರ ಮಾತ್ರ ಸಬ್ಸಿಡಿ ಹಿಂತೆಗೆತ ಮಾಡಿ ತೆರಿಗೆ ಹೆಚ್ಚಿಸುತ್ತಿದೆ ಎಂದು ಪ್ರತಿಪಕ್ಷಗಳು ಅಸಮಾಧಾನ ವ್ಯಕ್ತಪಡಿಸಿವೆ.

ಕಳೆದ ವರ್ಷ ಮಂಡಿಸಿದ ಬಜೆಟ್‌ನಲ್ಲಿ ಎಲ್‌ಪಿಜಿ ಸಬ್ಸಿಡಿಗಳ ಹಂಚಿಕೆಯನ್ನು 35,605 ಕೋಟಿ ರೂ.ಗಳಿಂದ ಕೇವಲ 12,480 ಕೋಟಿ ರೂ.ಗೆ ಇಳಿಸಲಾಗಿದೆ.


ಇದನ್ನೂ ಓದಿ: ಇಂಧನ ಬೆಲೆ ಏರಿಕೆಗೆ ವ್ಯಂಗ್ಯ: ಚಾಕೋಲೆಟ್ ಹಂಚಿ, ಟ್ರ್ಯಾಕ್ಟರ್ ಎಳೆದು ವಿಭಿನ್ನ ಪ್ರತಿಭಟನೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...