Homeಮುಖಪುಟಅಧಿಕಾರಕ್ಕೆ ಬಂದರೆ ಹುತಾತ್ಮ ರೈತರ ಕುಟುಂಬಕ್ಕೆ ತಲಾ 25 ಲಕ್ಷ ರೂ ಪರಿಹಾರ: ಅಖಿಲೇಶ್ ಯಾದವ್

ಅಧಿಕಾರಕ್ಕೆ ಬಂದರೆ ಹುತಾತ್ಮ ರೈತರ ಕುಟುಂಬಕ್ಕೆ ತಲಾ 25 ಲಕ್ಷ ರೂ ಪರಿಹಾರ: ಅಖಿಲೇಶ್ ಯಾದವ್

- Advertisement -
- Advertisement -

ಮುಂಬರುವ ಉತ್ತರಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ಕೇಂದ್ರದ ಮೂರು ಕೃಷಿ ಕಾನೂನುಗಳ ವಿರುದ್ಧ ನಡೆಸುತ್ತಿರುವ ಪ್ರತಿಭಟನೆಯಲ್ಲಿ ಪ್ರಾಣ ಕಳೆದುಕೊಂಡ ರೈತರ ಕುಟುಂಬಕ್ಕೆ ತಲಾ 25 ಲಕ್ಷ ರೂ ಪರಿಹಾರ ನೀಡುವುದಾಗಿ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಬುಧವಾರ ಘೋಷಿಸಿದ್ದಾರೆ.

‘ಇತರರ ಜೀವನಕ್ಕಾಗಿ ‘ಆಹಾರ’ವನ್ನು ಬೆಳೆಯುವ ರೈತರ ಜೀವನಕ್ಕೆ ಬೆಲೆಯಿಲ್ಲ. 2022ರಲ್ಲಿ ಸಮಾಜವಾದಿ ಪಕ್ಷವು ಅಧಿಕಾರಕ್ಕೆ ಬಂದ ಕೂಡಲೇ ರೈತ ಚಳವಳಿಯ ಹುತಾತ್ಮರಿಗೆ ತಲಾ 25 ಲಕ್ಷ ‘ಕಿಸಾನ್ ಶಹಾದತ್ ಸಮ್ಮಾನ್ ರಾಶಿ’ (ರೈತ ಹುತಾತ್ಮರಿಗೆ ಗೌರವಧನ) ನೀಡಲಾಗುವುದು ಎಂದು ಭರವಸೆ ನೀಡುತ್ತೇವೆ’ ಎಂದು ಅಖಿಲೇಶ್ ಹಿಂದಿಯಲ್ಲಿ ಟ್ವಿಟ್ ಮಾಡಿದ್ದಾರೆ.

ಕಳೆದ ವರ್ಷ ನವೆಂಬರ್‌ನಿಂದ ರೈತರು ದೆಹಲಿ ಗಡಿಗಳಲ್ಲಿ ವಿವಾದಾತ್ಮಕ ಮೂರು ಕೃಷಿ ಕಾನೂನುಗಳ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದಾರೆ. ಇತ್ತೀಚೆಗಷ್ಟೆ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಮೂರು ಕೃಷಿ ಕಾನೂನುಗಳನ್ನು ರದ್ದುಗೊಳಿಸುವುದಾಗಿ ಘೋಷಿಸಿತ್ತು. ಇದಾದ ಕೆಲವೇ ದಿನಗಳಲ್ಲಿ ಸಮಾಜವಾದಿ ಪಕ್ಷದಿಂದ ಈ ಘೋಷಣೆ ಬಂದಿದೆ.

ರೈತ ಆಂದೋಲನದ ವೇಳೆ ಸಾವನ್ನಪ್ಪಿದ ರೈತರ ಕುಟುಂಬಕ್ಕೆ ತಮ್ಮ ಸರ್ಕಾರ ತಲಾ 3 ಲಕ್ಷ ರೂಪಾಯಿ ಪರಿಹಾರವನ್ನು ನೀಡಲಿದೆ. ಮೃತರ ಕುಟುಂಬಗಳಿಗೆ ತಲಾ 25 ಲಕ್ಷ ರೂಪಾಯಿ ಪರಿಹಾರವನ್ನು ಕೇಂದ್ರ ಸರ್ಕಾರ ಘೋಷಿಸಬೇಕು” ಎಂದು ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ ರಾವ್ ಒತ್ತಾಯಿಸಿದ್ದಾರೆ.

ಉತ್ತರ ಪ್ರದೇಶದ 403 ವಿಧಾನಸಭಾ ಸ್ಥಾನಗಳಲ್ಲಿ, ಪಶ್ಚಿಮ ಯುಪಿಯು ಸುಮಾರು 100 ಸ್ಥಾನಗಳನ್ನು ಹೊಂದಿದೆ. 2017ರ ಚುನಾವಣೆಯಲ್ಲಿ ಬಿಜೆಪಿಯು ಆ 100 ಸ್ಥಾನಗಳಲ್ಲಿ 76 ಸ್ಥಾನಗಳನ್ನು ಗೆದ್ದಿತ್ತು. ಆದರೆ, ಈ ಬಾರಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿರುದ್ಧ ರೈತರ ಆಕ್ರೋಶದಿಂದ ಈ ಪ್ರದೇಶದಲ್ಲಿ ಬಿಜೆಪಿಗೆ ಸ್ಥಾನಗಳು ಕೈತಪ್ಪಲಿದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

2020 ನವೆಂಬರ್ ತಿಂಗಳಿನಲ್ಲಿ ಆರಂಭವಾದ ರೈತ ಹೋರಾಟ ಹಲವು ಏಳು ಬೀಳುಗಳ ನಡುವೆಯೂ ಯಶಸ್ವಿ ಕಂಡಿದೆ. ನವೆಂಬರ್ 19ರಂದು ಪ್ರಧಾನಿ ನರೇಂದ್ರ ಮೋದಿ ಅವರು ಕೃಷಿ ಕಾಯ್ದೆಗಳನ್ನು ಹಿಂಪಡೆಯುವುದಾಗಿ ಘೋಷಿಸಿದ್ದರು. ಈ ಕುರಿತು ಪ್ರತಿಕ್ರಿಯಿಸಿದ್ದ ಸಂಯುಕ್ತ ಕಿಸಾನ್ ಮೋರ್ಚಾ ಸಂಸತ್ತಿನಲ್ಲಿ ಕಾಯ್ದೆಗಳು ಅಧಿಕೃತವಾಗಿ ರದ್ಧಾಗುವವರೆಗೂ ಕಾಯುವುದಾಗಿ ತಿಳಿಸಿತ್ತು. ಅದರೊಂದಿಗೆ ಇನ್ನು ಮುಖ್ಯ ಬೇಡಿಕೆಗಳಾಗಿರುವ ಕನಿಷ್ಠ ಬೆಂಬಲ ಬೆಲೆಯನ್ನು ಕಾನೂನುಬದ್ಧಗೊಳಿಸುವುದು, ವಿದ್ಯುತ್ ಕಾಯ್ದೆಯನ್ನು ಹಿಂಪಡೆಯುವುದು ಸೇರಿದಂತೆ ಹಲವು ಪ್ರಮುಖ ಬೇಡಿಕೆಗಳನ್ನು ಪೂರೈಸುವವರೆಗೂ ಹೋರಾಟವನ್ನು ನಡೆಸುವುದಾಗಿ ನಿರ್ಧರಿಸಿದೆ.


ಇದನ್ನೂ ಓದಿ: ದೆಹಲಿ ಗಡಿಗಳಲ್ಲಿ ಹುತಾತ್ಮರಾದ ರೈತರಿಗೆ ತಲಾ 3 ಲಕ್ಷ ಪರಿಹಾರ ಘೋಷಿಸಿದ ತೆಲಂಗಾಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...

ಉದ್ಯಮಿ ಸಿಜೆ ರಾಯ್ ಮರಣೋತ್ತರ ಪರೀಕ್ಷೆ; ಹೃದಯ-ಶ್ವಾಸಕೋಶದಲ್ಲಿ 6.35 ಎಂಎಂ ಗುಂಡಿನ ಗಾಯ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಅವರ ಆತ್ಮಹತ್ಯೆಯ ಮರಣೋತ್ತರ ಪರೀಕ್ಷೆಯ ವರದಿಗಯನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅರವಿಂದ್ ಎಂಎನ್ ವಿವರಿಸಿದ್ದಾರೆ. 6.35 ಎಂಎಂ ಗುಂಡಿನ ದಾಳಿಯು ತಕ್ಷಣದ...

ಮುಂಬೈ| ನಿರ್ದೇಶಕ ರೋಹಿತ್ ಶೆಟ್ಟಿ ಮನೆಯ ಹೊರಗೆ 4 ಸುತ್ತು ಗುಂಡು ಹಾರಿಸಿದ ಅಪರಿಚಿತರು

ಶನಿವಾರ ತಡರಾತ್ರಿ, ಬಾಲಿವುಡ್ ನಿರ್ದೇಶಕ ರೋಹಿತ್ ಶೆಟ್ಟಿ ಅವರ ಮುಂಬೈನ ಜುಹು ನಿವಾಸದ ಹೊರಗೆ ನಾಲ್ಕು ಸುತ್ತು ಗುಂಡು ಹಾರಿಸಲಾಗಿದ್ದು, ಘಟನೆಯಲ್ಲಿ ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಚಿತ್ರ ನಿರ್ಮಾಪಕ-ನಿರ್ದೇಶಕರ ಕಟ್ಟಡದ ಬಳಿ ಅಪರಿಚಿತ...

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....