Homeಮುಖಪುಟಅಧಿಕಾರಕ್ಕೆ ಬಂದರೆ ಹುತಾತ್ಮ ರೈತರ ಕುಟುಂಬಕ್ಕೆ ತಲಾ 25 ಲಕ್ಷ ರೂ ಪರಿಹಾರ: ಅಖಿಲೇಶ್ ಯಾದವ್

ಅಧಿಕಾರಕ್ಕೆ ಬಂದರೆ ಹುತಾತ್ಮ ರೈತರ ಕುಟುಂಬಕ್ಕೆ ತಲಾ 25 ಲಕ್ಷ ರೂ ಪರಿಹಾರ: ಅಖಿಲೇಶ್ ಯಾದವ್

- Advertisement -
- Advertisement -

ಮುಂಬರುವ ಉತ್ತರಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ಕೇಂದ್ರದ ಮೂರು ಕೃಷಿ ಕಾನೂನುಗಳ ವಿರುದ್ಧ ನಡೆಸುತ್ತಿರುವ ಪ್ರತಿಭಟನೆಯಲ್ಲಿ ಪ್ರಾಣ ಕಳೆದುಕೊಂಡ ರೈತರ ಕುಟುಂಬಕ್ಕೆ ತಲಾ 25 ಲಕ್ಷ ರೂ ಪರಿಹಾರ ನೀಡುವುದಾಗಿ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಬುಧವಾರ ಘೋಷಿಸಿದ್ದಾರೆ.

‘ಇತರರ ಜೀವನಕ್ಕಾಗಿ ‘ಆಹಾರ’ವನ್ನು ಬೆಳೆಯುವ ರೈತರ ಜೀವನಕ್ಕೆ ಬೆಲೆಯಿಲ್ಲ. 2022ರಲ್ಲಿ ಸಮಾಜವಾದಿ ಪಕ್ಷವು ಅಧಿಕಾರಕ್ಕೆ ಬಂದ ಕೂಡಲೇ ರೈತ ಚಳವಳಿಯ ಹುತಾತ್ಮರಿಗೆ ತಲಾ 25 ಲಕ್ಷ ‘ಕಿಸಾನ್ ಶಹಾದತ್ ಸಮ್ಮಾನ್ ರಾಶಿ’ (ರೈತ ಹುತಾತ್ಮರಿಗೆ ಗೌರವಧನ) ನೀಡಲಾಗುವುದು ಎಂದು ಭರವಸೆ ನೀಡುತ್ತೇವೆ’ ಎಂದು ಅಖಿಲೇಶ್ ಹಿಂದಿಯಲ್ಲಿ ಟ್ವಿಟ್ ಮಾಡಿದ್ದಾರೆ.

ಕಳೆದ ವರ್ಷ ನವೆಂಬರ್‌ನಿಂದ ರೈತರು ದೆಹಲಿ ಗಡಿಗಳಲ್ಲಿ ವಿವಾದಾತ್ಮಕ ಮೂರು ಕೃಷಿ ಕಾನೂನುಗಳ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದಾರೆ. ಇತ್ತೀಚೆಗಷ್ಟೆ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಮೂರು ಕೃಷಿ ಕಾನೂನುಗಳನ್ನು ರದ್ದುಗೊಳಿಸುವುದಾಗಿ ಘೋಷಿಸಿತ್ತು. ಇದಾದ ಕೆಲವೇ ದಿನಗಳಲ್ಲಿ ಸಮಾಜವಾದಿ ಪಕ್ಷದಿಂದ ಈ ಘೋಷಣೆ ಬಂದಿದೆ.

ರೈತ ಆಂದೋಲನದ ವೇಳೆ ಸಾವನ್ನಪ್ಪಿದ ರೈತರ ಕುಟುಂಬಕ್ಕೆ ತಮ್ಮ ಸರ್ಕಾರ ತಲಾ 3 ಲಕ್ಷ ರೂಪಾಯಿ ಪರಿಹಾರವನ್ನು ನೀಡಲಿದೆ. ಮೃತರ ಕುಟುಂಬಗಳಿಗೆ ತಲಾ 25 ಲಕ್ಷ ರೂಪಾಯಿ ಪರಿಹಾರವನ್ನು ಕೇಂದ್ರ ಸರ್ಕಾರ ಘೋಷಿಸಬೇಕು” ಎಂದು ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ ರಾವ್ ಒತ್ತಾಯಿಸಿದ್ದಾರೆ.

ಉತ್ತರ ಪ್ರದೇಶದ 403 ವಿಧಾನಸಭಾ ಸ್ಥಾನಗಳಲ್ಲಿ, ಪಶ್ಚಿಮ ಯುಪಿಯು ಸುಮಾರು 100 ಸ್ಥಾನಗಳನ್ನು ಹೊಂದಿದೆ. 2017ರ ಚುನಾವಣೆಯಲ್ಲಿ ಬಿಜೆಪಿಯು ಆ 100 ಸ್ಥಾನಗಳಲ್ಲಿ 76 ಸ್ಥಾನಗಳನ್ನು ಗೆದ್ದಿತ್ತು. ಆದರೆ, ಈ ಬಾರಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿರುದ್ಧ ರೈತರ ಆಕ್ರೋಶದಿಂದ ಈ ಪ್ರದೇಶದಲ್ಲಿ ಬಿಜೆಪಿಗೆ ಸ್ಥಾನಗಳು ಕೈತಪ್ಪಲಿದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

2020 ನವೆಂಬರ್ ತಿಂಗಳಿನಲ್ಲಿ ಆರಂಭವಾದ ರೈತ ಹೋರಾಟ ಹಲವು ಏಳು ಬೀಳುಗಳ ನಡುವೆಯೂ ಯಶಸ್ವಿ ಕಂಡಿದೆ. ನವೆಂಬರ್ 19ರಂದು ಪ್ರಧಾನಿ ನರೇಂದ್ರ ಮೋದಿ ಅವರು ಕೃಷಿ ಕಾಯ್ದೆಗಳನ್ನು ಹಿಂಪಡೆಯುವುದಾಗಿ ಘೋಷಿಸಿದ್ದರು. ಈ ಕುರಿತು ಪ್ರತಿಕ್ರಿಯಿಸಿದ್ದ ಸಂಯುಕ್ತ ಕಿಸಾನ್ ಮೋರ್ಚಾ ಸಂಸತ್ತಿನಲ್ಲಿ ಕಾಯ್ದೆಗಳು ಅಧಿಕೃತವಾಗಿ ರದ್ಧಾಗುವವರೆಗೂ ಕಾಯುವುದಾಗಿ ತಿಳಿಸಿತ್ತು. ಅದರೊಂದಿಗೆ ಇನ್ನು ಮುಖ್ಯ ಬೇಡಿಕೆಗಳಾಗಿರುವ ಕನಿಷ್ಠ ಬೆಂಬಲ ಬೆಲೆಯನ್ನು ಕಾನೂನುಬದ್ಧಗೊಳಿಸುವುದು, ವಿದ್ಯುತ್ ಕಾಯ್ದೆಯನ್ನು ಹಿಂಪಡೆಯುವುದು ಸೇರಿದಂತೆ ಹಲವು ಪ್ರಮುಖ ಬೇಡಿಕೆಗಳನ್ನು ಪೂರೈಸುವವರೆಗೂ ಹೋರಾಟವನ್ನು ನಡೆಸುವುದಾಗಿ ನಿರ್ಧರಿಸಿದೆ.


ಇದನ್ನೂ ಓದಿ: ದೆಹಲಿ ಗಡಿಗಳಲ್ಲಿ ಹುತಾತ್ಮರಾದ ರೈತರಿಗೆ ತಲಾ 3 ಲಕ್ಷ ಪರಿಹಾರ ಘೋಷಿಸಿದ ತೆಲಂಗಾಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...