Homeಮುಖಪುಟಬಿಜೆಪಿ ಸೇರಲು ಸಚಿನ್ ಪೈಲಟ್‌ರಿಂದ 35 ಕೋಟಿ ರೂ ಆಮಿಷ: ಕಾಂಗ್ರೆಸ್ ಶಾಸಕನ ಆರೋಪ

ಬಿಜೆಪಿ ಸೇರಲು ಸಚಿನ್ ಪೈಲಟ್‌ರಿಂದ 35 ಕೋಟಿ ರೂ ಆಮಿಷ: ಕಾಂಗ್ರೆಸ್ ಶಾಸಕನ ಆರೋಪ

ಮಾಲಿಂಗ ಅವರು ಪೈಲಟ್ ಅವರೊಂದಿಗೆ 2-3 ಬಾರಿ ಸಂಭಾಷಣೆ ನಡೆಸಿದ್ದಾರೆ. ಮೊದಲು ಡಿಸೆಂಬರ್‌ನಲ್ಲಿ ಪಂಚಾಯತ್ ಚುನಾವಣೆ ಸಮಯದಲ್ಲಿ ಮತ್ತು ನಂತರ ಕಳೆದ ತಿಂಗಳು ರಾಜ್ಯಸಭಾ ಚುನಾವಣೆಗೆ ಮೊದಲು ಎಂದು ಅವರು ತಿಳಿಸಿದ್ದಾರೆ.

- Advertisement -
- Advertisement -

ತನ್ನನ್ನು ಬೆಂಬಲಿಸುವಂತೆ ನನಗೆ ಮಾಜಿ ಉಪಮುಖ್ಯಮಂತ್ರಿ ಸಚಿನ್ ಪೈಲಟ್ 35 ಕೋಟಿ ರೂಪಾಯಿ ಆಮಿಷವೊಡ್ಡಿದ್ದಾರೆ ಎಂದು ರಾಜಸ್ಥಾನದ ಕಾಂಗ್ರೆಸ್ ಶಾಸಕ ಗಿರಿರಾಜ್ ಸಿಂಗ್ ಮಾಲಿಂಗ ಆರೋಪಿಸಿದ್ದಾರೆ.

ರಾಜಸ್ಥಾನದಲ್ಲಿ ರಾಜಕೀಯ ಬಿಕ್ಕಟ್ಟು ಉಲ್ಬಣಗೊಂಡಿರುವ ನಡುವೆಯೇ ಕಾಂಗ್ರೆಸ್ ಶಾಸಕ ಗಿರಿರಾಜ್ ಸಿಂಗ್ ಪತ್ರಕರ್ತರೊಡನೆ ಮಾತನಾಡಿ ಶಾಸಕರ ಕುದುರೆ ವ್ಯಾಪಾರ ನಡೆಯುತ್ತಿದೆ ಎಂಬ ಆರೋಪಕ್ಕೆ ಮತ್ತಷ್ಟು ಪುಷ್ಠಿ ನೀಡಿದ್ದಾರೆ.

ರಾಜಸ್ಥಾನದ ಬಾರಿ ಕ್ಷೇತ್ರವನ್ನು ಪ್ರತಿನಿಧಿಸುವ ಗಿರಿರಾಜ್ ಸಿಂಗ್ ಮಾಲಿಂಗ ಈ ಕುರಿತು ಮುಖ್ಯಮಂತ್ರಿಗಳಿಗೆ ವರದಿ ಸಲ್ಲಿಸಿದ್ದೇನೆ ಎಂದಿದ್ದಾರೆ.

ಕಾಂಗ್ರೆಸ್ ತೊರೆದು ತನ್ನೊಡನೆ ಬಿಜೆಪಿ ಸೇರುವಂತೆ ಸಚಿನ್ ಪೈಲಟ್ ನನಗೂ ಆಮಿಷವೊಡ್ಡಿದ್ದರು. ಅದನ್ನು ನಾನು ನಿರಾಕರಿಸಿದೆ. ಇದು ಒಳ್ಳೇಯದಲ್ಲ ಮತ್ತು ನಾನು ಹಣಕ್ಕಾಗಿ ಕೆಲಸ ಮಾಡುವುದಿಲ್ಲ ಎಂದು ತಿಳಿಸಿದ್ದೆ. -ಸಿಂಗ್

ನಾನು ಬಿಎಸ್‌ಪಿ ಪಕ್ಷವನ್ನು 2008 ರಲ್ಲಿ ತೊರೆದೆ. ಏಕೆಂದರೆ ಅಲ್ಲಿ ಟಿಕೆಟ್ ಪಡೆಯಲು ಹಣ ನೀಡಬೇಕಾಗಿತ್ತು. ಆದರೆ ಕಾಂಗ್ರೆಸ್ ಮತ್ತು ಬಿಜೆಪಿಯಲ್ಲಿ ಆ ವ್ಯವಸ್ಥೆಯಿಲ್ಲ ಎಂದು ನಾನು ಕೇಳಿದ್ದೆ. ಸಚಿನ್ ನನಗೆ ಸಾಕಷ್ಟು ಹಣವನ್ನು ನೀಡುವುದಾಗಿ ತಿಳಿಸಿದರು. ಹಣದ ಬಗ್ಗೆ ಚಿಂತೆ ಬಿಡಿ ನಿಮಗೆಷ್ಟು ಬೇಕು ಹೇಳಿ, 35 ಕೋಟಿ ಅಥವಾ ಅದಕ್ಕಿಂತ ಹೆಚ್ಚು ಸಿಗುತ್ತದೆ ಎಂದು ಸಚಿನ್ ತಿಳಿಸಿದ್ದರು. ಆದರೆ ಅದು ತಪ್ಪು ಎಂದು ನಾನು ಹೇಳಿದೆ ಎಂದಿದ್ದಾರೆ.

ಮಾಲಿಂಗ ಅವರು ಪೈಲಟ್ ಅವರೊಂದಿಗೆ 2-3 ಬಾರಿ ಸಂಭಾಷಣೆ ನಡೆಸಿದ್ದಾರೆ. ಮೊದಲು ಡಿಸೆಂಬರ್‌ನಲ್ಲಿ ಪಂಚಾಯತ್ ಚುನಾವಣೆ ಸಮಯದಲ್ಲಿ ಮತ್ತು ನಂತರ ಕಳೆದ ತಿಂಗಳು ರಾಜ್ಯಸಭಾ ಚುನಾವಣೆಗೆ ಮೊದಲು ಎಂದು ಅವರು ತಿಳಿಸಿದ್ದಾರೆ.

ಈ ಮಧ್ಯೆ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಬೆಂಬಲಿಗ ಶಾಸಕರು ಫೆರ್ ಮೌಂಟ್ ಹೋಟೆಲ್ ನಲ್ಲಿ ತಂಗಿದ್ದು ಹಾಡು-ಆಟದಲ್ಲಿ ತೊಡಗಿದ್ದಾರೆ. ಶಾಸಕರು ನಾವು ಗೆದ್ದೆ ಗೆಲ್ಲುವೆವು ಹಾಡು ಮತ್ತು ಅಂತ್ಯಾಕ್ಷರಿಯಲ್ಲಿ ತೊಡಗಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಇನ್ನೊಂದೆಡೆ ಮಾಜಿ ಉಪಮುಖ್ಯಮಂತ್ರಿ ಸಚಿನ್ ಪೈಲಟ್ ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ಜೊತೆ ಸಂಪರ್ಕದಲ್ಲಿದ್ದಾರೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.

19 ಮಂದಿ ಬಂಡಾಯ ಕಾಂಗ್ರೆಸ್ ಶಾಸಕರು, ಇಬ್ಬರು ಪಕ್ಷೇತರರು ಸೇರಿದಂತೆ ಒಟ್ಟು 21 ಮಂದಿ ಶಾಸಕರು ಸಚಿನ್ ಪೈಲಟ್ ಅವರ ಬೆಂಬಲಕ್ಕೆ ನಿಂತಿದ್ದಾರೆ ಎಂದು ವರಿದಿಗಳು ತಿಳಿಸಿವೆ.

ಈ ಮುಂಚೆ ಕೇಂದ್ರ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಮತ್ತು ಕಾಂಗ್ರೆಸ್ ಶಾಸಕನ ನಡುವಿನ ಕುದುರೆ ವ್ಯಾಪಾರದ ಆಡಿಯೋ ವೈರಲ್ ಆಗಿತ್ತು. ಆ ಕುರಿತು ಸಚಿವರು ಸೇರಿದಂತೆ ಎಲ್ಲರ ಹೇಳಿಕೆ ಪಡೆದು ವಿಚಾರಣೆ ನಡೆಯುತ್ತಿದೆ. ಈ ನಡುವೆಯೇ ಕಾಂಗ್ರೆಸ್ ಶಾಸಕರನ್ನು ತಮ್ಮತ್ತ ಸೆಳೆಯಲು ಮಾಜಿ ಉಪಮುಖ್ಯಮಂತ್ರಿ ಸಚಿನ್ ಪೈಲಟ್ ಕೂಡ ಹಣದ ಆಮಿಷವೊಡ್ಡಿರುವ ಸುದ್ದಿ ವೈರಲ್ ಆಗಿದೆ.


ಇದನ್ನೂ ಓದಿ: ರಾಜಸ್ಥಾನ ಬಿಕ್ಕಟ್ಟು: ಕೋರ್ಟ್ ಮಧ್ಯಪ್ರವೇಶಿಸುವಂತಿಲ್ಲ- ಅಭಿಷೇಕ್ ಸಿಂಗ್ವಿ ವಾದ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR | ಸೆಕ್ಸ್ ವರ್ಕರ್ಸ್, ಅವರ ಮಕ್ಕಳ ಬಳಿ ದಾಖಲೆಗಳಿಲ್ಲ : ಮಹಾರಾಷ್ಟ್ರ ಸಿಇಒಗೆ ಪತ್ರ ಬರೆದ ರಾಷ್ಟ್ರೀಯ ಸಂಸ್ಥೆ

ದಾಖಲಾತಿ ಮತ್ತು ಪರಿಶೀಲನೆ ಅಗತ್ಯತೆಗಳ ಕಾರಣದಿಂದಾಗಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಿಂದ ಲೈಂಗಿಕ ಕಾರ್ಯಕರ್ತೆಯರು ಮತ್ತು ಅವರ ಮಕ್ಕಳನ್ನು ಹೊರಗಿಡದಂತೆ ನೋಡಿಕೊಳ್ಳಲು ವಿಶೇಷ ಕ್ರಮಗಳನ್ನು ಕೈಗೊಳ್ಳಬೇಕೆಂದು...

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...