Homeಮುಖಪುಟಕೇವಲ 5 ನಿಮಿಷದ ಕಿರು ಚಿತ್ರ ನಿರ್ಮಾಣಕ್ಕೆ 4.5ಕೋಟಿ ರೂ ಖರ್ಚು: KRS ಪಕ್ಷದಿಂದ ಖಂಡನೆ

ಕೇವಲ 5 ನಿಮಿಷದ ಕಿರು ಚಿತ್ರ ನಿರ್ಮಾಣಕ್ಕೆ 4.5ಕೋಟಿ ರೂ ಖರ್ಚು: KRS ಪಕ್ಷದಿಂದ ಖಂಡನೆ

ಇಂತಹ ಮಹತ್ವದ ನಿರ್ಧಾರವು ಇಲಾಖಾ ಸಚಿವ ಮುರುಗೇಶ್ ನಿರಾಣಿಯವರ ಗಮನಕ್ಕೆ ಬಂದಿಲ್ಲವೆಂಬುದು ಮತ್ತಷ್ಟು ಚರ್ಚೆಗೆ ಎಡೆಮಾಡಿಕೊಟ್ಟಿದೆ.

- Advertisement -
- Advertisement -

ನವೆಂಬರ್ 2, 3 ಮತ್ತು 4 ರಂದು ನಡೆಯುವ ಇನ್ವೆಸ್ಟ್ ಕರ್ನಾಟಕ-2022ರ ಜಾಗತಿಕ ಬಂಡವಾಳ ಹೂಡಿಕೆದಾರರ (GIM) ಸಮಾವೇಶಕ್ಕೆ ಸಂಬಂಧಿಸಿದ 5 ನಿಮಿಷದ ಕಿರು ಚಿತ್ರ ನಿರ್ಮಿಸಲು ಚಿತ್ರ ನಿರ್ಮಾಣ ಸಂಸ್ಥೆಯೊಂದಿಗೆ 4.5 ಕೋಟಿ ರೂಗಳ ಒಡಂಬಡಿಕೆ ಮಾಡಿಕೊಳ್ಳಲಾಗಿದೆ. ಇದನ್ನೊಂದು ಹಗರಣ ಎಂದು ಕರೆದಿರುವ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷ (KRS) ನ್ಯಯಾಂಗ ತನಿಖೆಗೆ ಆಗ್ರಹಿಸಿದೆ.

ಇಂತಹ ಮಹತ್ವದ ನಿರ್ಧಾರವು ಇಲಾಖೆ GIMಸಚಿವರ ಗಮನಕ್ಕೆ ಬಂದಿಲ್ಲವೆಂಬುದು ಮತ್ತಷ್ಟು ಚರ್ಚೆಗೆ ಎಡೆಮಾಡಿಕೊಟ್ಟಿದೆ. ಈ ಕುರಿತು ಸ್ವತಃ ಬೃಹತ್ ಮತ್ತು ಮಧ್ಯಮ ಕೈಗಾರಿಕೆಗಳ ಸಚಿವರಾದ ಮುರುಗೇಶ್ ನಿರಾಣಿಯವರು ಇಲಾಖಾ ಕಾರ್ಯದರ್ಶಿಗಳಿಗೆ ಪತ್ರ ಬರೆದಿದ್ದು ಸದರಿ ಒಡಂಬಡಿಕೆಯನ್ನು ವಜಾ ಮಾಡಬೇಕೆಂದು ಸೂಚಿಸಿದ್ದಾರೆ.

ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆಯು ಕಿರು ಚಿತ್ರ ನಿರ್ಮಾಣಕ್ಕಾಗಿ ಚಿತ್ರ ನಿರ್ಮಾಣ ಸಂಸ್ಥೆಯೊಂದಿಗೆ ಸುಮಾರ 450 ಲಕ್ಷ ರೂಗಳ ಒಡಂಬಡಿಕೆ ಮಾಡಿಕೊಂಡಿರುವುದು ತಿಳಿದುಬಂದಿದೆ. ಸುಮಾರು 5 ನಿಮಿಷಗಳ ಸದರಿ ಕಿರು ಚಿತ್ರ ನಿರ್ಮಾಣಕ್ಕೆ 450 ಲಕ್ಷ ರೂ ನಿಗಧಿಪಡಿಸಿರುವುದು ತುಂಬಾ ಹೆಚ್ಚಾಗಿರುವುದು ಕಂಡು ಬರುತ್ತದೆ. ಒಂದು ಪಕ್ಷ ಇಲಾಖೆಯು ಮೇಲ್ಕಂಡ ಮೌಲ್ಯಕ್ಕೆ ಒಡಂಬಡಿಕೆ ಮಾಡಿಕೊಂಡು ಕಾರ್ಯಾದೇಶ ನೀಡಿರುವುದು ನಿಜವೇ ಆದಲ್ಲಿ ಹೆಚ್ಚು ಮೌಲ್ಯವಾದ ಕಾರಣ ಕಾರ್ಯಾದೇಶವನ್ನು ವಜಾ ಮಾಡಬೇಕೆಂದು ಪತ್ರದಲ್ಲಿ ಸಚಿವರು ಆಗ್ರಹಿಸಿದ್ದಾರೆ.

ಮುಂದುವರಿದು ಇನ್ನು ಮುಂದೆ ಇಂತಹ ಪ್ರಕರಣಗಳಲ್ಲಿ ಇಲಾಖಾ ಸಚಿವರು ಹಾಗೂ ಅನುಭವಿಗಳ ಜೊತೆ ಸಮಾಲೋಚನೆ, ಚರ್ಚೆ ನಡೆಸಿ ತೀರ್ಮಾನ ಕೈಗೊಳ್ಳಬೇಕೆಂದು ಪತ್ರದಲ್ಲಿ ಮುರುಗೇಶ್ ನಿರಾಣಿಯವರು ಸೂಚಿಸಿದ್ದಾರೆ.

ಲೋಕಾಯುಕ್ತಕ್ಕೆ ದೂರು ನೀಡುತ್ತೇವೆ – ರವಿಕೃಷ್ಣಾರೆಡ್ಡಿ

ಈ ಹಗರಣದ ಕುರಿತಾಗಿ ಈ ಕೂಡಲೇ ನ್ಯಾಯಾಂಗ ತನಿಖೆ ಆಗಬೇಕು ಎಂದು KRS ಪಕ್ಷ ಒತ್ತಾಯಿಸುತ್ತದೆ ಎಂದು ಪಕ್ಷದ ರಾಜ್ಯಾಧ್ಯಕ್ಷರಾದ ರವಿಕೃಷ್ಣಾರೆಡ್ಡಿಯವರು ಆಗ್ರಹಿಸಿದ್ದಾರೆ.

ಈ GIM ಹೆಸರಿನಲ್ಲಿ ರಾಜ್ಯ ಸರ್ಕಾರ ನೂರಿನ್ನೂರು ಕೋಟಿ ಖರ್ಚು ಮಾಡುತ್ತಿದೆ ಎನ್ನುವ ಮಾಹಿತಿ ಇದೆ. ಇಲ್ಲಿ ಯಾವುದೇ ಪಾರದರ್ಶಕತೆ ಇಲ್ಲ. ಟೆಂಡರ್ ಇಲ್ಲ. ಇದೊಂದು ದೊಡ್ಡ ಹಗರಣ. ಸಚಿವರು, ಹಿರಿಯ IAS ಅಧಿಕಾರಿಗಳ ನೆರವು ಮತ್ತು ಪಾಲುದಾರಿಕೆಯಲ್ಲಿ ಈ ಲೂಟಿ ನಡೆಯುತ್ತದೆ. ಸಂಬಂಧಪಟ್ಟ ಇಲಾಖೆಯ ಮಂತ್ರಿಯೇ ಈ ಪತ್ರ ಬರೆದಿರುವುದು ಅಧಿಕಾರಿಗಳ ಮಾಫಿಯಾ ಕುರಿತೂ ಯೋಚಿಸುವಂತೆ ಮಾಡುತ್ತದೆ.  ಹಾಗೆಯೇ ಲೋಕಾಯುಕ್ತದಲ್ಲಿಯೂ ದೂರು ದಾಖಲಿಸಲಾಗುತ್ತದೆ ಎಂದು ಅವರು ಫೇಸ್‌ಬುಕ್ ಪೋಸ್ಟ್ ಮೂಲಕ ತಿಳಿಸಿದ್ದಾರೆ.

ಇದನ್ನೂ ಓದಿ: ದಲಿತ ಶಾಸಕನಿಗೆ ಅಶ್ಲೀಲವಾಗಿ ನಿಂದಿಸಿ, ದಲಿತ ಸಮುದಾಯದ ಬಗ್ಗೆ ಹಗುರವಾಗಿ ಮಾತನಾಡಿದ ಬಿಜೆಪಿ ಶಾಸಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...