Homeಮುಖಪುಟಕೇವಲ 5 ನಿಮಿಷದ ಕಿರು ಚಿತ್ರ ನಿರ್ಮಾಣಕ್ಕೆ 4.5ಕೋಟಿ ರೂ ಖರ್ಚು: KRS ಪಕ್ಷದಿಂದ ಖಂಡನೆ

ಕೇವಲ 5 ನಿಮಿಷದ ಕಿರು ಚಿತ್ರ ನಿರ್ಮಾಣಕ್ಕೆ 4.5ಕೋಟಿ ರೂ ಖರ್ಚು: KRS ಪಕ್ಷದಿಂದ ಖಂಡನೆ

ಇಂತಹ ಮಹತ್ವದ ನಿರ್ಧಾರವು ಇಲಾಖಾ ಸಚಿವ ಮುರುಗೇಶ್ ನಿರಾಣಿಯವರ ಗಮನಕ್ಕೆ ಬಂದಿಲ್ಲವೆಂಬುದು ಮತ್ತಷ್ಟು ಚರ್ಚೆಗೆ ಎಡೆಮಾಡಿಕೊಟ್ಟಿದೆ.

- Advertisement -
- Advertisement -

ನವೆಂಬರ್ 2, 3 ಮತ್ತು 4 ರಂದು ನಡೆಯುವ ಇನ್ವೆಸ್ಟ್ ಕರ್ನಾಟಕ-2022ರ ಜಾಗತಿಕ ಬಂಡವಾಳ ಹೂಡಿಕೆದಾರರ (GIM) ಸಮಾವೇಶಕ್ಕೆ ಸಂಬಂಧಿಸಿದ 5 ನಿಮಿಷದ ಕಿರು ಚಿತ್ರ ನಿರ್ಮಿಸಲು ಚಿತ್ರ ನಿರ್ಮಾಣ ಸಂಸ್ಥೆಯೊಂದಿಗೆ 4.5 ಕೋಟಿ ರೂಗಳ ಒಡಂಬಡಿಕೆ ಮಾಡಿಕೊಳ್ಳಲಾಗಿದೆ. ಇದನ್ನೊಂದು ಹಗರಣ ಎಂದು ಕರೆದಿರುವ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷ (KRS) ನ್ಯಯಾಂಗ ತನಿಖೆಗೆ ಆಗ್ರಹಿಸಿದೆ.

ಇಂತಹ ಮಹತ್ವದ ನಿರ್ಧಾರವು ಇಲಾಖೆ GIMಸಚಿವರ ಗಮನಕ್ಕೆ ಬಂದಿಲ್ಲವೆಂಬುದು ಮತ್ತಷ್ಟು ಚರ್ಚೆಗೆ ಎಡೆಮಾಡಿಕೊಟ್ಟಿದೆ. ಈ ಕುರಿತು ಸ್ವತಃ ಬೃಹತ್ ಮತ್ತು ಮಧ್ಯಮ ಕೈಗಾರಿಕೆಗಳ ಸಚಿವರಾದ ಮುರುಗೇಶ್ ನಿರಾಣಿಯವರು ಇಲಾಖಾ ಕಾರ್ಯದರ್ಶಿಗಳಿಗೆ ಪತ್ರ ಬರೆದಿದ್ದು ಸದರಿ ಒಡಂಬಡಿಕೆಯನ್ನು ವಜಾ ಮಾಡಬೇಕೆಂದು ಸೂಚಿಸಿದ್ದಾರೆ.

ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆಯು ಕಿರು ಚಿತ್ರ ನಿರ್ಮಾಣಕ್ಕಾಗಿ ಚಿತ್ರ ನಿರ್ಮಾಣ ಸಂಸ್ಥೆಯೊಂದಿಗೆ ಸುಮಾರ 450 ಲಕ್ಷ ರೂಗಳ ಒಡಂಬಡಿಕೆ ಮಾಡಿಕೊಂಡಿರುವುದು ತಿಳಿದುಬಂದಿದೆ. ಸುಮಾರು 5 ನಿಮಿಷಗಳ ಸದರಿ ಕಿರು ಚಿತ್ರ ನಿರ್ಮಾಣಕ್ಕೆ 450 ಲಕ್ಷ ರೂ ನಿಗಧಿಪಡಿಸಿರುವುದು ತುಂಬಾ ಹೆಚ್ಚಾಗಿರುವುದು ಕಂಡು ಬರುತ್ತದೆ. ಒಂದು ಪಕ್ಷ ಇಲಾಖೆಯು ಮೇಲ್ಕಂಡ ಮೌಲ್ಯಕ್ಕೆ ಒಡಂಬಡಿಕೆ ಮಾಡಿಕೊಂಡು ಕಾರ್ಯಾದೇಶ ನೀಡಿರುವುದು ನಿಜವೇ ಆದಲ್ಲಿ ಹೆಚ್ಚು ಮೌಲ್ಯವಾದ ಕಾರಣ ಕಾರ್ಯಾದೇಶವನ್ನು ವಜಾ ಮಾಡಬೇಕೆಂದು ಪತ್ರದಲ್ಲಿ ಸಚಿವರು ಆಗ್ರಹಿಸಿದ್ದಾರೆ.

ಮುಂದುವರಿದು ಇನ್ನು ಮುಂದೆ ಇಂತಹ ಪ್ರಕರಣಗಳಲ್ಲಿ ಇಲಾಖಾ ಸಚಿವರು ಹಾಗೂ ಅನುಭವಿಗಳ ಜೊತೆ ಸಮಾಲೋಚನೆ, ಚರ್ಚೆ ನಡೆಸಿ ತೀರ್ಮಾನ ಕೈಗೊಳ್ಳಬೇಕೆಂದು ಪತ್ರದಲ್ಲಿ ಮುರುಗೇಶ್ ನಿರಾಣಿಯವರು ಸೂಚಿಸಿದ್ದಾರೆ.

ಲೋಕಾಯುಕ್ತಕ್ಕೆ ದೂರು ನೀಡುತ್ತೇವೆ – ರವಿಕೃಷ್ಣಾರೆಡ್ಡಿ

ಈ ಹಗರಣದ ಕುರಿತಾಗಿ ಈ ಕೂಡಲೇ ನ್ಯಾಯಾಂಗ ತನಿಖೆ ಆಗಬೇಕು ಎಂದು KRS ಪಕ್ಷ ಒತ್ತಾಯಿಸುತ್ತದೆ ಎಂದು ಪಕ್ಷದ ರಾಜ್ಯಾಧ್ಯಕ್ಷರಾದ ರವಿಕೃಷ್ಣಾರೆಡ್ಡಿಯವರು ಆಗ್ರಹಿಸಿದ್ದಾರೆ.

ಈ GIM ಹೆಸರಿನಲ್ಲಿ ರಾಜ್ಯ ಸರ್ಕಾರ ನೂರಿನ್ನೂರು ಕೋಟಿ ಖರ್ಚು ಮಾಡುತ್ತಿದೆ ಎನ್ನುವ ಮಾಹಿತಿ ಇದೆ. ಇಲ್ಲಿ ಯಾವುದೇ ಪಾರದರ್ಶಕತೆ ಇಲ್ಲ. ಟೆಂಡರ್ ಇಲ್ಲ. ಇದೊಂದು ದೊಡ್ಡ ಹಗರಣ. ಸಚಿವರು, ಹಿರಿಯ IAS ಅಧಿಕಾರಿಗಳ ನೆರವು ಮತ್ತು ಪಾಲುದಾರಿಕೆಯಲ್ಲಿ ಈ ಲೂಟಿ ನಡೆಯುತ್ತದೆ. ಸಂಬಂಧಪಟ್ಟ ಇಲಾಖೆಯ ಮಂತ್ರಿಯೇ ಈ ಪತ್ರ ಬರೆದಿರುವುದು ಅಧಿಕಾರಿಗಳ ಮಾಫಿಯಾ ಕುರಿತೂ ಯೋಚಿಸುವಂತೆ ಮಾಡುತ್ತದೆ.  ಹಾಗೆಯೇ ಲೋಕಾಯುಕ್ತದಲ್ಲಿಯೂ ದೂರು ದಾಖಲಿಸಲಾಗುತ್ತದೆ ಎಂದು ಅವರು ಫೇಸ್‌ಬುಕ್ ಪೋಸ್ಟ್ ಮೂಲಕ ತಿಳಿಸಿದ್ದಾರೆ.

ಇದನ್ನೂ ಓದಿ: ದಲಿತ ಶಾಸಕನಿಗೆ ಅಶ್ಲೀಲವಾಗಿ ನಿಂದಿಸಿ, ದಲಿತ ಸಮುದಾಯದ ಬಗ್ಗೆ ಹಗುರವಾಗಿ ಮಾತನಾಡಿದ ಬಿಜೆಪಿ ಶಾಸಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಿಶಾ ಸಾಲ್ಯಾನ್ ಸಾವು ಪ್ರಕರಣ: ಸಿಬಿಐ ತನಿಖೆಗೆ ಬಾಂಬೆ ಹೈಕೋರ್ಟ್ ಆದೇಶ

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ಆಗಿದ್ದ ದಿಶಾ ಸಾಲಿಯಾನ್ ಅವರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಂಬೆ ಹೈಕೋರ್ಟ್ ಬುಧವಾರ (ಸೆಪ್ಟೆಂಬರ್ 2) ಸಿಬಿಐ ತನಿಖೆಗೆ ಆದೇಶಿಸಿದೆ. ಜೂನ್...

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...