Homeಮುಖಪುಟಕೇವಲ 5 ನಿಮಿಷದ ಕಿರು ಚಿತ್ರ ನಿರ್ಮಾಣಕ್ಕೆ 4.5ಕೋಟಿ ರೂ ಖರ್ಚು: KRS ಪಕ್ಷದಿಂದ ಖಂಡನೆ

ಕೇವಲ 5 ನಿಮಿಷದ ಕಿರು ಚಿತ್ರ ನಿರ್ಮಾಣಕ್ಕೆ 4.5ಕೋಟಿ ರೂ ಖರ್ಚು: KRS ಪಕ್ಷದಿಂದ ಖಂಡನೆ

ಇಂತಹ ಮಹತ್ವದ ನಿರ್ಧಾರವು ಇಲಾಖಾ ಸಚಿವ ಮುರುಗೇಶ್ ನಿರಾಣಿಯವರ ಗಮನಕ್ಕೆ ಬಂದಿಲ್ಲವೆಂಬುದು ಮತ್ತಷ್ಟು ಚರ್ಚೆಗೆ ಎಡೆಮಾಡಿಕೊಟ್ಟಿದೆ.

- Advertisement -
- Advertisement -

ನವೆಂಬರ್ 2, 3 ಮತ್ತು 4 ರಂದು ನಡೆಯುವ ಇನ್ವೆಸ್ಟ್ ಕರ್ನಾಟಕ-2022ರ ಜಾಗತಿಕ ಬಂಡವಾಳ ಹೂಡಿಕೆದಾರರ (GIM) ಸಮಾವೇಶಕ್ಕೆ ಸಂಬಂಧಿಸಿದ 5 ನಿಮಿಷದ ಕಿರು ಚಿತ್ರ ನಿರ್ಮಿಸಲು ಚಿತ್ರ ನಿರ್ಮಾಣ ಸಂಸ್ಥೆಯೊಂದಿಗೆ 4.5 ಕೋಟಿ ರೂಗಳ ಒಡಂಬಡಿಕೆ ಮಾಡಿಕೊಳ್ಳಲಾಗಿದೆ. ಇದನ್ನೊಂದು ಹಗರಣ ಎಂದು ಕರೆದಿರುವ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷ (KRS) ನ್ಯಯಾಂಗ ತನಿಖೆಗೆ ಆಗ್ರಹಿಸಿದೆ.

ಇಂತಹ ಮಹತ್ವದ ನಿರ್ಧಾರವು ಇಲಾಖೆ GIMಸಚಿವರ ಗಮನಕ್ಕೆ ಬಂದಿಲ್ಲವೆಂಬುದು ಮತ್ತಷ್ಟು ಚರ್ಚೆಗೆ ಎಡೆಮಾಡಿಕೊಟ್ಟಿದೆ. ಈ ಕುರಿತು ಸ್ವತಃ ಬೃಹತ್ ಮತ್ತು ಮಧ್ಯಮ ಕೈಗಾರಿಕೆಗಳ ಸಚಿವರಾದ ಮುರುಗೇಶ್ ನಿರಾಣಿಯವರು ಇಲಾಖಾ ಕಾರ್ಯದರ್ಶಿಗಳಿಗೆ ಪತ್ರ ಬರೆದಿದ್ದು ಸದರಿ ಒಡಂಬಡಿಕೆಯನ್ನು ವಜಾ ಮಾಡಬೇಕೆಂದು ಸೂಚಿಸಿದ್ದಾರೆ.

ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆಯು ಕಿರು ಚಿತ್ರ ನಿರ್ಮಾಣಕ್ಕಾಗಿ ಚಿತ್ರ ನಿರ್ಮಾಣ ಸಂಸ್ಥೆಯೊಂದಿಗೆ ಸುಮಾರ 450 ಲಕ್ಷ ರೂಗಳ ಒಡಂಬಡಿಕೆ ಮಾಡಿಕೊಂಡಿರುವುದು ತಿಳಿದುಬಂದಿದೆ. ಸುಮಾರು 5 ನಿಮಿಷಗಳ ಸದರಿ ಕಿರು ಚಿತ್ರ ನಿರ್ಮಾಣಕ್ಕೆ 450 ಲಕ್ಷ ರೂ ನಿಗಧಿಪಡಿಸಿರುವುದು ತುಂಬಾ ಹೆಚ್ಚಾಗಿರುವುದು ಕಂಡು ಬರುತ್ತದೆ. ಒಂದು ಪಕ್ಷ ಇಲಾಖೆಯು ಮೇಲ್ಕಂಡ ಮೌಲ್ಯಕ್ಕೆ ಒಡಂಬಡಿಕೆ ಮಾಡಿಕೊಂಡು ಕಾರ್ಯಾದೇಶ ನೀಡಿರುವುದು ನಿಜವೇ ಆದಲ್ಲಿ ಹೆಚ್ಚು ಮೌಲ್ಯವಾದ ಕಾರಣ ಕಾರ್ಯಾದೇಶವನ್ನು ವಜಾ ಮಾಡಬೇಕೆಂದು ಪತ್ರದಲ್ಲಿ ಸಚಿವರು ಆಗ್ರಹಿಸಿದ್ದಾರೆ.

ಮುಂದುವರಿದು ಇನ್ನು ಮುಂದೆ ಇಂತಹ ಪ್ರಕರಣಗಳಲ್ಲಿ ಇಲಾಖಾ ಸಚಿವರು ಹಾಗೂ ಅನುಭವಿಗಳ ಜೊತೆ ಸಮಾಲೋಚನೆ, ಚರ್ಚೆ ನಡೆಸಿ ತೀರ್ಮಾನ ಕೈಗೊಳ್ಳಬೇಕೆಂದು ಪತ್ರದಲ್ಲಿ ಮುರುಗೇಶ್ ನಿರಾಣಿಯವರು ಸೂಚಿಸಿದ್ದಾರೆ.

ಲೋಕಾಯುಕ್ತಕ್ಕೆ ದೂರು ನೀಡುತ್ತೇವೆ – ರವಿಕೃಷ್ಣಾರೆಡ್ಡಿ

ಈ ಹಗರಣದ ಕುರಿತಾಗಿ ಈ ಕೂಡಲೇ ನ್ಯಾಯಾಂಗ ತನಿಖೆ ಆಗಬೇಕು ಎಂದು KRS ಪಕ್ಷ ಒತ್ತಾಯಿಸುತ್ತದೆ ಎಂದು ಪಕ್ಷದ ರಾಜ್ಯಾಧ್ಯಕ್ಷರಾದ ರವಿಕೃಷ್ಣಾರೆಡ್ಡಿಯವರು ಆಗ್ರಹಿಸಿದ್ದಾರೆ.

ಈ GIM ಹೆಸರಿನಲ್ಲಿ ರಾಜ್ಯ ಸರ್ಕಾರ ನೂರಿನ್ನೂರು ಕೋಟಿ ಖರ್ಚು ಮಾಡುತ್ತಿದೆ ಎನ್ನುವ ಮಾಹಿತಿ ಇದೆ. ಇಲ್ಲಿ ಯಾವುದೇ ಪಾರದರ್ಶಕತೆ ಇಲ್ಲ. ಟೆಂಡರ್ ಇಲ್ಲ. ಇದೊಂದು ದೊಡ್ಡ ಹಗರಣ. ಸಚಿವರು, ಹಿರಿಯ IAS ಅಧಿಕಾರಿಗಳ ನೆರವು ಮತ್ತು ಪಾಲುದಾರಿಕೆಯಲ್ಲಿ ಈ ಲೂಟಿ ನಡೆಯುತ್ತದೆ. ಸಂಬಂಧಪಟ್ಟ ಇಲಾಖೆಯ ಮಂತ್ರಿಯೇ ಈ ಪತ್ರ ಬರೆದಿರುವುದು ಅಧಿಕಾರಿಗಳ ಮಾಫಿಯಾ ಕುರಿತೂ ಯೋಚಿಸುವಂತೆ ಮಾಡುತ್ತದೆ.  ಹಾಗೆಯೇ ಲೋಕಾಯುಕ್ತದಲ್ಲಿಯೂ ದೂರು ದಾಖಲಿಸಲಾಗುತ್ತದೆ ಎಂದು ಅವರು ಫೇಸ್‌ಬುಕ್ ಪೋಸ್ಟ್ ಮೂಲಕ ತಿಳಿಸಿದ್ದಾರೆ.

ಇದನ್ನೂ ಓದಿ: ದಲಿತ ಶಾಸಕನಿಗೆ ಅಶ್ಲೀಲವಾಗಿ ನಿಂದಿಸಿ, ದಲಿತ ಸಮುದಾಯದ ಬಗ್ಗೆ ಹಗುರವಾಗಿ ಮಾತನಾಡಿದ ಬಿಜೆಪಿ ಶಾಸಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...