Homeಮುಖಪುಟಚೋರ್ಲಾ ಘಾಟ್‌ನಲ್ಲಿ 400 ಕೋಟಿ ರೂ. ದರೋಡೆ: ಏನಿದು ಪ್ರಕರಣ..ಬೆಳಗಾವಿ ಎಸ್ಪಿ ಹೇಳಿದ್ದೇನು?

ಚೋರ್ಲಾ ಘಾಟ್‌ನಲ್ಲಿ 400 ಕೋಟಿ ರೂ. ದರೋಡೆ: ಏನಿದು ಪ್ರಕರಣ..ಬೆಳಗಾವಿ ಎಸ್ಪಿ ಹೇಳಿದ್ದೇನು?

- Advertisement -
- Advertisement -

ಕರ್ನಾಟಕ, ಗೋವಾ ಮತ್ತು ಮಹಾರಾಷ್ಟ್ರ ರಾಜ್ಯಗಳ ಗಡಿಯಲ್ಲಿರುವ ಪಶ್ಚಿಮ ಘಟ್ಟಗಳ ವ್ಯಾಪ್ತಿಯ ಚೋರ್ಲಾ ಘಾಟ್‌ನಲ್ಲಿ ಬರೋಬ್ಬರಿ 400 ಕೋಟಿ ರೂಪಾಯಿ ಹಣ ಸಾಗಿಸುತ್ತಿದ್ದ ಕಂಟೇನರ್‌ಗಳನ್ನು ದರೋಡೆ ಮಾಡಲಾಗಿದೆ ಎಂಬ ವಿಚಾರ ದೊಡ್ಡ ಮಟ್ಟದಲ್ಲಿ ಚರ್ಚೆಯಾಗುತ್ತಿದೆ.

2025ರ ಅಕ್ಟೋಬರ್ 16ರಂದು ಗೋವಾದಿಂದ ಕರ್ನಾಟಕ ಮಾರ್ಗವಾಗಿ ಹಣ ಸಾಗಿಸುತ್ತಿದ್ದ ಎರಡು ಕಂಟೇನರ್‌ಗಳನ್ನು ಅಪಹರಿಸಿ ಹಣ ದರೋಡೆ ಮಾಡಲಾಗಿದೆ. ಈ ವಿಚಾರ ತಡವಾಗಿ ಬೆಳಕಿಗೆ ಬಂದಿದೆ. ಇದು ಭಾರತ ದೇಶದ ಇತಿಹಾಸದಲ್ಲೇ ಅತಿದೊಡ್ಡ ಕಂಟೇನರ್ ದರೋಡೆ ಎಂದು ಹೇಳಲಾಗ್ತಿದೆ.

ಪ್ರಕರಣದ ಗಂಭೀರತೆಯನ್ನು ಪರಿಗಣಿಸಿದ ಮಹಾರಾಷ್ಟ್ರದ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್, ತನಿಖೆಗೆ ವಿಶೇಷ ತಂಡ (ಎಸ್‌ಐಟಿ) ರಚಿಸಿ ಆದೇಶ ಹೊರಡಿಸಿದ್ದು, ಕರ್ನಾಟಕ–ಮಹಾರಾಷ್ಟ್ರ–ಗೋವಾ ರಾಜ್ಯಗಳ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.

ಭಾನುವಾರ (ಜ.25, 2026) ಸುದ್ದಿಗೋಷ್ಠಿ ನಡೆಸಿದ ಬೆಳಗಾವಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್ ಪ್ರಕರಣದ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ.

“ಸಂದೀಪ್ ದತ್ತ ಪಾಟೀಲ್ ಎಂಬಾತನನ್ನು 2025ರ ಅಕ್ಟೋಬರ್ 22ರಂದು ಐವರು ಅಪಹರಿಸಿದ್ದರು. ಆ ಐದು ಮಂದಿಯನ್ನು ಬಂಧಿಸಲಾಗಿದೆ. ಅಪಹರಣಕ್ಕೊಳಗಾದ ಸಂದೀಪ್ ದತ್ತ ಪಾಟೀಲ್ ಅವರನ್ನು ಪೊಲೀಸರು ವಿಚಾರಣೆ ನಡೆಸಿದಾಗ, “ನನ್ನನ್ನು 2025ರ ಅಕ್ಟೋಬರ್ 22ರಂದು ಫಾರ್ಚೂನರ್ ಕಾರಿನಲ್ಲಿ ಅಪಹರಿಸಿದ್ದರು. ಅಕ್ಟೋಬರ್ 16ನೇ ತಾರೀಖು ಚೋರ್ಲಾ ಘಾಟ್‌ನಲ್ಲಿ 400 ಕೋಟಿ ರೂಪಾಯಿ ದರೋಡೆಯಾಗಿದೆ. ಅದರಲ್ಲಿ ನೀನು ಭಾಗಿಯಾಗಿದ್ದೀಯಾ.. ನೀನು 400 ಕೋಟಿ ರೂ. ಕೊಡಬೇಕು ಎಂದು ಒತ್ತಾಯಿಸಿ ಥಳಿಸಿದ್ದಾರೆ” ಎಂಬುವುದಾಗಿ ತಿಳಿಸಿದ್ದಾರೆ ಎಂದು ಎಸ್ಪಿ ಹೇಳಿದ್ದಾರೆ.

ಈ ಮಾಹಿತಿಯನ್ನು ಮಹಾರಾಷ್ಟ್ರದ ನಾಸಿಕ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜನವರಿ 6ರಂದು ಪತ್ರ ಬರೆದು ನಮಗೆ ತಿಳಿಸಿದ್ದರು. ನಮಗೆ ಪತ್ರ ತಲುಪಿದ ಬಳಿಕ ಬೆಳಗಾವಿಯ ಖಾನಾಪುರ ಪೊಲೀಸ್ ಠಾಣೆಯ ಸಬ್‌ ಇನ್‌ಸ್ಪೆಕ್ಟರ್ ಬಿರಾದರ್ ಅವರ ನೇತೃತ್ವದಲ್ಲಿ ಖಾನಾಪುರ ಮತ್ತು ನಂದಗಡ ಪೊಲೀಸ್ ಠಾಣೆಗಳ ಮೂವರು ಮರಾಠಿ ಗೊತ್ತಿರುವ ಸಿಬ್ಬಂದಿಯನ್ನು ತಂಡ ಮಾಡಿ ನಾಸಿಕ್‌ಗೆ ಕಳಿಸಿದ್ದೆವು ಎಂದು ವಿವರಿಸಿದ್ದಾರೆ.

ಮುಂದುವರಿದು, ಸಬ್‌ ಇನ್ಪೆಕ್ಟರ್ ಬಿರಾದರ್ ಅವರ ತಂಡ ನಾಸಿಕ್‌ಗೆ ಹೋಗಿ ಅಪಹರಣಕ್ಕೊಳಗಾದ ಸಂದೀಪ್ ದತ್ತ ಪಾಟೀಲ್ ಅವರನ್ನು ವಿಚಾರಣೆಗೆ ಒಳಪಡಿಸಿದೆ. ಈ ವೇಳೆ ಅವರು ತಾನು ಯಾವುದೇ ದರೋಡೆ ಘಟನೆ ನೋಡಿಲ್ಲ. ಆದರೆ, ನನ್ನನ್ನು ಅಪಹರಿಸಿ ಥಳಿಸಿದವರು, ಚೋರ್ಲಾ ಘಾಟ್‌ನಲ್ಲಿ 400 ಕೋಟಿ ರೂಪಾಯಿ ದರೋಡೆ ನಡೆದಿದೆ ಎಂದು ಹೇಳುತ್ತಿದ್ದರು ಎಂಬುವುದಾಗಿ ತಿಳಿಸಿದ್ದಾರೆ ಎಂದು ಎಸ್ಪಿ ಮಾಹಿತಿ ನೀಡಿದ್ದಾರೆ.

ಬಿಎನ್‌ಎಸ್‌ ಕಾಯ್ದೆಯ ಸೆಕ್ಷನ್ 198 ಪ್ರಕಾರ ಒಂದು ಅಪರಾಧ ಘಟನೆ ಒಂದು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಾರಂಭಗೊಂಡು ಇನ್ನೊಂದು ಠಾಣೆಯ ವ್ಯಾಪ್ತಿಯಲ್ಲಿ ಕೊನೆಯಾದರೆ, ಆ ಎರಡು ಠಾಣೆಗಳ ನಡುವೆ ಬರುವ ಯಾವುದೇ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲು ಅವಕಾಶ ಇದೆ ಎಂದಿದ್ದಾರೆ.

ಈ ದರೋಡೆ ಮತ್ತು ಅಪಹರಣ ಘಟನೆಗೆ ಸಂಬಂಧಿಸಿದಂತೆ ಮಹಾರಾಷ್ಟ್ರದಲ್ಲಿ ಎಸ್‌ಐಟಿ ರಚನೆಯಾಗಿದೆ. ಈ ಅಪರಾಧ ಮಹಾರಾಷ್ಟ್ರದಲ್ಲಿ ಪ್ರಾರಂಭಗೊಂಡು ಅಲ್ಲಿಯೇ ಕೊನೆಯಾಗಿದ್ದರೆ ಅಲ್ಲಿನ ಎಸ್‌ಐಟಿ ಸಂಪೂರ್ಣ ತನಿಖೆ ಮಾಡಲಿದೆ. ಒಂದು ವೇಳೆ ಅಪರಾಧ ಬೆಳಗಾವಿಯ ವ್ಯಾಪ್ತಿಯಲ್ಲಿ ನಡೆದಿದ್ದರೆ, ಮಹಾರಾಷ್ಟ್ರ ಪೊಲೀಸರು ಆ ಬಗ್ಗೆ ಮಾಹಿತಿ ಕೊಟ್ಟರೆ ನಾವು ಇಲ್ಲಿ ಎಫ್‌ಐಆರ್ ದಾಖಲಿಸಿ ತನಿಖೆ ಮಾಡುತ್ತೇವೆ. ಅದಕ್ಕಾಗಿ ನಮ್ಮ ಪೊಲೀಸ್ ತಂಡ ಮಹಾರಾಷ್ಟ್ರದಲ್ಲಿ ಕಾಯುತ್ತಿದೆ. ಅಪರಾಧ ಬೆಳಗಾವಿ ವ್ಯಾಪ್ತಿಯಲ್ಲಿ ನಡೆದಿರುವ ಮಾಹಿತಿ ಸಿಕ್ಕರೆ ನಾವು ತಕ್ಷಣ ಎಫ್‌ಐಆರ್ ದಾಖಲಿಸಿ ತನಿಖೆ ಕೈಗೊಳ್ಳುತ್ತೇವೆ ಎಂದು ಎಸ್ಪಿ ರಾಮರಾಜನ್ ತಿಳಿಸಿದ್ದಾರೆ.

ನಾಸಿಕ್ ಎಸ್ಪಿಯ ಪತ್ರ ಬರೆದಿರುವುದು ಬಿಟ್ಟರೆ ಅವರು ಈ ಪ್ರಕರಣ ಸಂಬಂಧ ನಮ್ಮ ಬಳಿ ಯಾವುದೇ ಚರ್ಚೆ ನಡೆಸಿಲ್ಲ, ಮಾಹಿತಿ ಹಂಚಿಕೊಂಡಿಲ್ಲ. ಈಗಾಗಾಲೇ ಸಬ್‌ ಇಸ್ಪೆಕ್ಟರ್ ನೇತೃತ್ವದ ನಮ್ಮ ಪೊಲೀಸ್ ತಂಡ ನಾಸಿಕ್‌ನಲ್ಲಿದೆ. ಇನ್ನೂ ಹಿರಿಯ ಅಧಿಕಾರಿಯನ್ನು ಕಳಿಸಿಕೊಡಬೇಕು ಎಂದರೆ ನಾವು ಕಳಿಸಿಕೊಡುತ್ತೇವೆ ಎಂದು ಹೇಳಿದ್ದಾರೆ.

400 ಕೋಟಿ ದರೋಡೆ ನಡೆದಿರುವುದು ನಿಜವೇ ಎಂಬುವುದರ ಬಗ್ಗೆ ನಮಗೆ ಮಾಹಿತಿಯಿಲ್ಲ. ಅದನ್ನು ನೋಡಿದವರೂ ಇಲ್ಲ. ಅಪಹರಣಕ್ಕೊಳಗಾಗಿದ್ದಾರೆ ಎನ್ನಲಾದ ಸಂದೀಪ್ ದತ್ತ ಪಾಟೀಲ್ ಕೊಟ್ಟಿರುವ ಹೇಳಿಕೆ ಆಧರಿಸಿ ಈ ದರೋಡೆಯ ಕುರಿತು ಚರ್ಚೆಯಾಗುತ್ತಿದೆ. ಘಟನೆ ನಡೆದ ಸ್ಥಳದ ಬಗ್ಗೆಯೂ ಖಚಿತ ಮಾಹಿತಿ ಇಲ್ಲ. ಮಹಾರಾಷ್ಟ್ರ ಪೊಲೀಸರು ಮಾಹಿತಿ ಕೊಟ್ಟರೆ ನಾವು ಮುಂದಿನ ತನಿಖೆ ಮಾಡುತ್ತೇವೆ ಎಂದು ಬೆಳಗಾವಿ ಎಸ್ಪಿ ರಾಮರಾಜನ್ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಆಕ್ರಮಣ ಮಾಡುವ ಉದ್ದೇಶವಿಲ್ಲ..’; ಗಲ್ಫ್ ರಾಷ್ಟ್ರಗಳ ಮೇಲಿನ ದಾಳಿಗೆ ಕ್ಷಮೆಯಾಚಿಸಿದ ಇರಾನ್ ಅಧ್ಯಕ್ಷರು

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ನೆರೆಯ ರಾಷ್ಟ್ರಗಳಿಗೆ ಶನಿವಾರ ಕ್ಷಮೆಯಾಚಿಸಿದ್ದಾರೆ. ಉಲ್ಬಣಗೊಳ್ಳುತ್ತಿರುವ ಪ್ರಾದೇಶಿಕ ಸಂಘರ್ಷಕ್ಕೆ ಸಂಬಂಧಿಸಿದ ಇತ್ತೀಚಿನ ದಾಳಿಗಳಿಗೆ ಟೆಹ್ರಾನ್ ಇತರ ರಾಷ್ಟ್ರಗಳನ್ನು ಆಕ್ರಮಿಸುವ ಉದ್ದೇಶವನ್ನು ಹೊಂದಿಲ್ಲ ಎಂದು ಹೇಳಿದ್ದಾರೆ. ಇರಾನ್ ಸಾರ್ವಜನಿಕರನ್ನು...

ತೈಲ ಆಮದು ವಿಚಾರದಲ್ಲಿ ಅಮೆರಿಕದ ಒಪ್ಪಿಗೆ ಪಡೆಯುವುದು ‘ಅತಿರೇಕದ’ ಸಂಗತಿ: ಪಿಣರಾಯಿ ವಿಜಯನ್

ತೈಲ ಆಮದುಗಳಂತಹ ನಿರ್ಧಾರಗಳಿಗೆ ಭಾರತವು ಅಮೆರಿಕದ ಅನುಮೋದನೆಯನ್ನು ಪಡೆಯುವಂತೆ ಬಿಂಬಿತವಾಗುತ್ತಿರುವುದು 'ಅತಿರೇಕದ' ಸಂಗತಿ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಶುಕ್ರವಾರ ಹೇಳಿದ್ದಾರೆ. ಭಾರತದ ಸಾರ್ವಭೌಮತ್ವವು ವಿದೇಶಿ ಅನುಮತಿಗೆ ಒಳಪಡುವುದಿಲ್ಲ ಎಂದು ವಿಜಯನ್ ಸಾಮಾಜಿಕ...

ಪತ್ರಕರ್ತನ ಹತ್ಯೆ ಪ್ರಕರಣ : ಡೇರಾ ಮುಖ್ಯಸ್ಥ ರಾಮ್ ರಹೀಂ ಸಿಂಗ್ ಖುಲಾಸೆ

ಪತ್ರಕರ್ತ ಛತ್ರಪತಿ ಹತ್ಯೆ ಪ್ರಕರಣದಲ್ಲಿ ಸಿರ್ಸಾದ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಂ ಸಿಂಗ್ ಅನ್ನು ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ಶನಿವಾರ (ಮಾ.7) ಖುಲಾಸೆಗೊಳಿಸಿರುವುದಾಗಿ livelaw.in ಎಂದು ವರದಿ...

ಗೃಹ ಬಳಕೆಯ ಎಲ್‌ಪಿಜಿ ದರ 60 ರೂ. ಹೆಚ್ಚಳ : 11 ತಿಂಗಳಲ್ಲಿ ಎರಡನೇ ಬಾರಿ ಬೆಲೆ ಏರಿಕೆ

ತೈಲ ಮಾರುಕಟ್ಟೆ ಕಂಪನಿಗಳು ಶನಿವಾರ (ಮಾ.7) ದೇಶದಲ್ಲಿ ಗೃಹ ಬಳಕೆಯ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು ಕ್ರಮವಾಗಿ ರೂ. 60 ಮತ್ತು ರೂ. 115 ಹೆಚ್ಚಿಸಿವೆ. ಈ ಹೆಚ್ಚಳದ ನಂತರ ರಾಷ್ಟ್ರ ರಾಜಧಾನಿ...

ಟಿವಿ ನ್ಯೂಸ್ ಚಾನೆಲ್‌ಗಳಲ್ಲಿ ಅನಗತ್ಯ ಯುದ್ಧೋನ್ಮಾದ, ಸುಳ್ಳು ವರದಿ : ನಾಲ್ಕು ವಾರ TRP ಸ್ಥಗಿತಕ್ಕೆ ಕೇಂದ್ರ ಆದೇಶ

ಅಮೆರಿಕ, ಇಸ್ರೇಲ್, ಇರಾನ್ ಮತ್ತು ಗಲ್ಫ್ ರಾಷ್ಟ್ರಗಳ ಸಂಘರ್ಷದ ಕುರಿತು ಟಿವಿ ನ್ಯೂಸ್‌ ಚಾನೆಲ್‌ಗಳು ಅನಗತ್ಯ ಯುದ್ಧೋನ್ಮಾದ ಸೃಷ್ಟಿಸುತ್ತಿರುವ ಹಾಗೂ ಸುಳ್ಳು ವರದಿಗಳನ್ನು ಪ್ರಸಾರ ಮಾಡುತ್ತಿರುವ ಹಿನ್ನೆಲೆ, ಮುಂದಿನ ನಾಲ್ಕು ವಾರಗಳ ಕಾಲ...

‘ಮಿಯಾ ಮುಸ್ಲಿಮರು ನಮ್ಮ ಶತ್ರುಗಳಲ್ಲ..’; ಚುನಾವಣೆ ಸನಿಹದಲ್ಲಿ ಮಾತು ಬದಲಿಸಿದ ಅಸ್ಸಾಂ ಸಿಎಂ

ಭಾರತೀಯ ಜನತಾ ಪಕ್ಷವು (ಬಿಜೆಪಿ) ಅಸ್ಸಾಂನಲ್ಲಿರುವ ಬಂಗಾಳಿ ಮೂಲದ ಮುಸ್ಲಿಂ ಸಮುದಾಯವಾದ ಮಿಯಾ ಮುಸ್ಲಿಮರನ್ನು ತನ್ನ ಶತ್ರುಗಳೆಂದು ಪರಿಗಣಿಸುವುದಿಲ್ಲ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಗುರುವಾರ ಹೇಳಿದ್ದಾರೆ. ಇದೇ ವರ್ಷದ...

ಜೈಲಿನಲ್ಲಿರುವ ಪಿಎಫ್‌ಐ ನಾಯಕ ಇ ಅಬೂಬಕರ್ ಆರೋಗ್ಯ ಸ್ಥಿತಿ ಗಂಭೀರ

ಸುಮಾರು ನಾಲ್ಕು ವರ್ಷಗಳ ಕಾಲ ಜೈಲಿನಲ್ಲಿ ಶಿಕ್ಷೆ ಅನುಭವಿಸುತ್ತಿರುವ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಸ್ಥಾಪಕ ಅಧ್ಯಕ್ಷ ಎರಪ್ಪುಂಗಲ್ ಅಬೂಬಕರ್ ಅವರ ಆರೋಗ್ಯ ಹದಗೆಟ್ಟ ನಂತರ ಬುಧವಾರದಿಂದ ಆಸ್ಪತ್ರೆಯಲ್ಲಿ ತೀವ್ರ ನಿಗಾ...

‘ಭಾರತ ನಮ್ಮನ್ನು ಹಿಂದುಕ್ಕುವುದಕ್ಕೆ ಬಿಡಲ್ಲ; ಅಮೆರಿಕದ ಹಿತಾಸಕ್ತಿಗಳಿಗೆ ಮೊದಲ ಆದ್ಯತೆ..’; ಕ್ರಿಸ್ಟೋಫರ್ ಲ್ಯಾಂಡೌ

ನಮ್ಮ ಪ್ರಮುಖ ಪ್ರತಿಸ್ಪರ್ಧಿಯಾಗಿ ಹೊರಹೊಮ್ಮಲು ಚೀನಾಗೆ ಮಾಡಿಕೊಟ್ಟ ಆರ್ಥಿಕ ಅನುಕೂಲಗಳನ್ನು ನಾವು ಭಾರತಕ್ಕೆ ನೀಡುವುದಿಲ್ಲ ಎಂದು ಯುನೈಟೆಡ್ ಸ್ಟೇಟ್ಸ್‌ (ಯುಎಸ್‌) ಉಪ ಕಾರ್ಯದರ್ಶಿ ಕ್ರಿಸ್ಟೋಫರ್ ಲ್ಯಾಂಡೌ ಗುರುವಾರ ಹೇಳಿದ್ದಾರೆ. ಅಮೆರಿಕ ಮತ್ತು ಭಾರತ...

ರೋಹಿತ್ ಆ್ಯಕ್ಟ್| ಸರ್ಕಾರದ ನಿರ್ಧಾರ ಸ್ವಾಗತಿಸಿದ ಹೋರಾಟಗಾರರು; ಕಾಯ್ದೆ ಪರಿಣಾಮಕಾರಿ ಜಾರಿಗೆ ಆಗ್ರಹ

“ರಾಜ್ಯದ ಎಲ್ಲಾ ಸರ್ಕಾರಿ, ಖಾಸಗಿ ಮತ್ತು ಡೀಮ್ಡ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರದ ಮೇಲೆ ವಿದ್ಯಾರ್ಥಿಗಳ ಮೇಲೆ ನಡೆಯುವ ʻಶೈಕ್ಷಣಿಕ ಮತ್ತು ಸಾಮಾಜಿಕ ದೌರ್ಜನ್ಯʼವನ್ನು ನಿಲ್ಲಿಸಲು ʻರೋಹಿತ್ ವೇಮುಲ ಕಾಯ್ದೆʼಯನ್ನು ಜಾರಿಗೆ ತರಲಾಗುವುದು” ಎಂದು...

Karnataka Budget 2026| ಸಮಾಜ ಕಲ್ಯಾಣ ಇಲಾಖೆಯಡಿ ‘ಬೌದ್ಧ ಅಭಿವೃದ್ಧಿ ನಿಗಮ’ ಸ್ಥಾಪನೆ

ಸಮಾಜ ಕಲ್ಯಾಣ ಇಲಾಖೆಯಡಿ 'ಬೌದ್ಧ ಅಭಿವೃದ್ಧಿ ನಿಗಮ' ಸ್ಥಾಪನೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದಿನ 2026-27ನೇ ಸಾಲಿನ ಆಯವ್ಯಯದಲ್ಲಿ ಘೋಷಿಸಿದರು. "ನಮ್ಮ ಸರ್ಕಾರವು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗಗಳ...