Homeಮುಖಪುಟಚೋರ್ಲಾ ಘಾಟ್‌ನಲ್ಲಿ 400 ಕೋಟಿ ರೂ. ದರೋಡೆ: ಏನಿದು ಪ್ರಕರಣ..ಬೆಳಗಾವಿ ಎಸ್ಪಿ ಹೇಳಿದ್ದೇನು?

ಚೋರ್ಲಾ ಘಾಟ್‌ನಲ್ಲಿ 400 ಕೋಟಿ ರೂ. ದರೋಡೆ: ಏನಿದು ಪ್ರಕರಣ..ಬೆಳಗಾವಿ ಎಸ್ಪಿ ಹೇಳಿದ್ದೇನು?

- Advertisement -
- Advertisement -

ಕರ್ನಾಟಕ, ಗೋವಾ ಮತ್ತು ಮಹಾರಾಷ್ಟ್ರ ರಾಜ್ಯಗಳ ಗಡಿಯಲ್ಲಿರುವ ಪಶ್ಚಿಮ ಘಟ್ಟಗಳ ವ್ಯಾಪ್ತಿಯ ಚೋರ್ಲಾ ಘಾಟ್‌ನಲ್ಲಿ ಬರೋಬ್ಬರಿ 400 ಕೋಟಿ ರೂಪಾಯಿ ಹಣ ಸಾಗಿಸುತ್ತಿದ್ದ ಕಂಟೇನರ್‌ಗಳನ್ನು ದರೋಡೆ ಮಾಡಲಾಗಿದೆ ಎಂಬ ವಿಚಾರ ದೊಡ್ಡ ಮಟ್ಟದಲ್ಲಿ ಚರ್ಚೆಯಾಗುತ್ತಿದೆ.

2025ರ ಅಕ್ಟೋಬರ್ 16ರಂದು ಗೋವಾದಿಂದ ಕರ್ನಾಟಕ ಮಾರ್ಗವಾಗಿ ಹಣ ಸಾಗಿಸುತ್ತಿದ್ದ ಎರಡು ಕಂಟೇನರ್‌ಗಳನ್ನು ಅಪಹರಿಸಿ ಹಣ ದರೋಡೆ ಮಾಡಲಾಗಿದೆ. ಈ ವಿಚಾರ ತಡವಾಗಿ ಬೆಳಕಿಗೆ ಬಂದಿದೆ. ಇದು ಭಾರತ ದೇಶದ ಇತಿಹಾಸದಲ್ಲೇ ಅತಿದೊಡ್ಡ ಕಂಟೇನರ್ ದರೋಡೆ ಎಂದು ಹೇಳಲಾಗ್ತಿದೆ.

ಪ್ರಕರಣದ ಗಂಭೀರತೆಯನ್ನು ಪರಿಗಣಿಸಿದ ಮಹಾರಾಷ್ಟ್ರದ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್, ತನಿಖೆಗೆ ವಿಶೇಷ ತಂಡ (ಎಸ್‌ಐಟಿ) ರಚಿಸಿ ಆದೇಶ ಹೊರಡಿಸಿದ್ದು, ಕರ್ನಾಟಕ–ಮಹಾರಾಷ್ಟ್ರ–ಗೋವಾ ರಾಜ್ಯಗಳ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.

ಭಾನುವಾರ (ಜ.25, 2026) ಸುದ್ದಿಗೋಷ್ಠಿ ನಡೆಸಿದ ಬೆಳಗಾವಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್ ಪ್ರಕರಣದ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ.

“ಸಂದೀಪ್ ದತ್ತ ಪಾಟೀಲ್ ಎಂಬಾತನನ್ನು 2025ರ ಅಕ್ಟೋಬರ್ 22ರಂದು ಐವರು ಅಪಹರಿಸಿದ್ದರು. ಆ ಐದು ಮಂದಿಯನ್ನು ಬಂಧಿಸಲಾಗಿದೆ. ಅಪಹರಣಕ್ಕೊಳಗಾದ ಸಂದೀಪ್ ದತ್ತ ಪಾಟೀಲ್ ಅವರನ್ನು ಪೊಲೀಸರು ವಿಚಾರಣೆ ನಡೆಸಿದಾಗ, “ನನ್ನನ್ನು 2025ರ ಅಕ್ಟೋಬರ್ 22ರಂದು ಫಾರ್ಚೂನರ್ ಕಾರಿನಲ್ಲಿ ಅಪಹರಿಸಿದ್ದರು. ಅಕ್ಟೋಬರ್ 16ನೇ ತಾರೀಖು ಚೋರ್ಲಾ ಘಾಟ್‌ನಲ್ಲಿ 400 ಕೋಟಿ ರೂಪಾಯಿ ದರೋಡೆಯಾಗಿದೆ. ಅದರಲ್ಲಿ ನೀನು ಭಾಗಿಯಾಗಿದ್ದೀಯಾ.. ನೀನು 400 ಕೋಟಿ ರೂ. ಕೊಡಬೇಕು ಎಂದು ಒತ್ತಾಯಿಸಿ ಥಳಿಸಿದ್ದಾರೆ” ಎಂಬುವುದಾಗಿ ತಿಳಿಸಿದ್ದಾರೆ ಎಂದು ಎಸ್ಪಿ ಹೇಳಿದ್ದಾರೆ.

ಈ ಮಾಹಿತಿಯನ್ನು ಮಹಾರಾಷ್ಟ್ರದ ನಾಸಿಕ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜನವರಿ 6ರಂದು ಪತ್ರ ಬರೆದು ನಮಗೆ ತಿಳಿಸಿದ್ದರು. ನಮಗೆ ಪತ್ರ ತಲುಪಿದ ಬಳಿಕ ಬೆಳಗಾವಿಯ ಖಾನಾಪುರ ಪೊಲೀಸ್ ಠಾಣೆಯ ಸಬ್‌ ಇನ್‌ಸ್ಪೆಕ್ಟರ್ ಬಿರಾದರ್ ಅವರ ನೇತೃತ್ವದಲ್ಲಿ ಖಾನಾಪುರ ಮತ್ತು ನಂದಗಡ ಪೊಲೀಸ್ ಠಾಣೆಗಳ ಮೂವರು ಮರಾಠಿ ಗೊತ್ತಿರುವ ಸಿಬ್ಬಂದಿಯನ್ನು ತಂಡ ಮಾಡಿ ನಾಸಿಕ್‌ಗೆ ಕಳಿಸಿದ್ದೆವು ಎಂದು ವಿವರಿಸಿದ್ದಾರೆ.

ಮುಂದುವರಿದು, ಸಬ್‌ ಇನ್ಪೆಕ್ಟರ್ ಬಿರಾದರ್ ಅವರ ತಂಡ ನಾಸಿಕ್‌ಗೆ ಹೋಗಿ ಅಪಹರಣಕ್ಕೊಳಗಾದ ಸಂದೀಪ್ ದತ್ತ ಪಾಟೀಲ್ ಅವರನ್ನು ವಿಚಾರಣೆಗೆ ಒಳಪಡಿಸಿದೆ. ಈ ವೇಳೆ ಅವರು ತಾನು ಯಾವುದೇ ದರೋಡೆ ಘಟನೆ ನೋಡಿಲ್ಲ. ಆದರೆ, ನನ್ನನ್ನು ಅಪಹರಿಸಿ ಥಳಿಸಿದವರು, ಚೋರ್ಲಾ ಘಾಟ್‌ನಲ್ಲಿ 400 ಕೋಟಿ ರೂಪಾಯಿ ದರೋಡೆ ನಡೆದಿದೆ ಎಂದು ಹೇಳುತ್ತಿದ್ದರು ಎಂಬುವುದಾಗಿ ತಿಳಿಸಿದ್ದಾರೆ ಎಂದು ಎಸ್ಪಿ ಮಾಹಿತಿ ನೀಡಿದ್ದಾರೆ.

ಬಿಎನ್‌ಎಸ್‌ ಕಾಯ್ದೆಯ ಸೆಕ್ಷನ್ 198 ಪ್ರಕಾರ ಒಂದು ಅಪರಾಧ ಘಟನೆ ಒಂದು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಾರಂಭಗೊಂಡು ಇನ್ನೊಂದು ಠಾಣೆಯ ವ್ಯಾಪ್ತಿಯಲ್ಲಿ ಕೊನೆಯಾದರೆ, ಆ ಎರಡು ಠಾಣೆಗಳ ನಡುವೆ ಬರುವ ಯಾವುದೇ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲು ಅವಕಾಶ ಇದೆ ಎಂದಿದ್ದಾರೆ.

ಈ ದರೋಡೆ ಮತ್ತು ಅಪಹರಣ ಘಟನೆಗೆ ಸಂಬಂಧಿಸಿದಂತೆ ಮಹಾರಾಷ್ಟ್ರದಲ್ಲಿ ಎಸ್‌ಐಟಿ ರಚನೆಯಾಗಿದೆ. ಈ ಅಪರಾಧ ಮಹಾರಾಷ್ಟ್ರದಲ್ಲಿ ಪ್ರಾರಂಭಗೊಂಡು ಅಲ್ಲಿಯೇ ಕೊನೆಯಾಗಿದ್ದರೆ ಅಲ್ಲಿನ ಎಸ್‌ಐಟಿ ಸಂಪೂರ್ಣ ತನಿಖೆ ಮಾಡಲಿದೆ. ಒಂದು ವೇಳೆ ಅಪರಾಧ ಬೆಳಗಾವಿಯ ವ್ಯಾಪ್ತಿಯಲ್ಲಿ ನಡೆದಿದ್ದರೆ, ಮಹಾರಾಷ್ಟ್ರ ಪೊಲೀಸರು ಆ ಬಗ್ಗೆ ಮಾಹಿತಿ ಕೊಟ್ಟರೆ ನಾವು ಇಲ್ಲಿ ಎಫ್‌ಐಆರ್ ದಾಖಲಿಸಿ ತನಿಖೆ ಮಾಡುತ್ತೇವೆ. ಅದಕ್ಕಾಗಿ ನಮ್ಮ ಪೊಲೀಸ್ ತಂಡ ಮಹಾರಾಷ್ಟ್ರದಲ್ಲಿ ಕಾಯುತ್ತಿದೆ. ಅಪರಾಧ ಬೆಳಗಾವಿ ವ್ಯಾಪ್ತಿಯಲ್ಲಿ ನಡೆದಿರುವ ಮಾಹಿತಿ ಸಿಕ್ಕರೆ ನಾವು ತಕ್ಷಣ ಎಫ್‌ಐಆರ್ ದಾಖಲಿಸಿ ತನಿಖೆ ಕೈಗೊಳ್ಳುತ್ತೇವೆ ಎಂದು ಎಸ್ಪಿ ರಾಮರಾಜನ್ ತಿಳಿಸಿದ್ದಾರೆ.

ನಾಸಿಕ್ ಎಸ್ಪಿಯ ಪತ್ರ ಬರೆದಿರುವುದು ಬಿಟ್ಟರೆ ಅವರು ಈ ಪ್ರಕರಣ ಸಂಬಂಧ ನಮ್ಮ ಬಳಿ ಯಾವುದೇ ಚರ್ಚೆ ನಡೆಸಿಲ್ಲ, ಮಾಹಿತಿ ಹಂಚಿಕೊಂಡಿಲ್ಲ. ಈಗಾಗಾಲೇ ಸಬ್‌ ಇಸ್ಪೆಕ್ಟರ್ ನೇತೃತ್ವದ ನಮ್ಮ ಪೊಲೀಸ್ ತಂಡ ನಾಸಿಕ್‌ನಲ್ಲಿದೆ. ಇನ್ನೂ ಹಿರಿಯ ಅಧಿಕಾರಿಯನ್ನು ಕಳಿಸಿಕೊಡಬೇಕು ಎಂದರೆ ನಾವು ಕಳಿಸಿಕೊಡುತ್ತೇವೆ ಎಂದು ಹೇಳಿದ್ದಾರೆ.

400 ಕೋಟಿ ದರೋಡೆ ನಡೆದಿರುವುದು ನಿಜವೇ ಎಂಬುವುದರ ಬಗ್ಗೆ ನಮಗೆ ಮಾಹಿತಿಯಿಲ್ಲ. ಅದನ್ನು ನೋಡಿದವರೂ ಇಲ್ಲ. ಅಪಹರಣಕ್ಕೊಳಗಾಗಿದ್ದಾರೆ ಎನ್ನಲಾದ ಸಂದೀಪ್ ದತ್ತ ಪಾಟೀಲ್ ಕೊಟ್ಟಿರುವ ಹೇಳಿಕೆ ಆಧರಿಸಿ ಈ ದರೋಡೆಯ ಕುರಿತು ಚರ್ಚೆಯಾಗುತ್ತಿದೆ. ಘಟನೆ ನಡೆದ ಸ್ಥಳದ ಬಗ್ಗೆಯೂ ಖಚಿತ ಮಾಹಿತಿ ಇಲ್ಲ. ಮಹಾರಾಷ್ಟ್ರ ಪೊಲೀಸರು ಮಾಹಿತಿ ಕೊಟ್ಟರೆ ನಾವು ಮುಂದಿನ ತನಿಖೆ ಮಾಡುತ್ತೇವೆ ಎಂದು ಬೆಳಗಾವಿ ಎಸ್ಪಿ ರಾಮರಾಜನ್ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರಾಖಂಡ| ದಲಿತ ಪತ್ರಕರ್ತನಿಗೆ ಕಸ್ಟಡಿ ಚಿತ್ರಹಿಂಸೆ; ಅಕ್ರಮವಾಗಿ ಕಟ್ಟಡ ಧ್ವಂಸ ಆರೋಪ

ಸ್ಥಳೀಯ ಪೊಲೀಸರು ಕಸ್ಟಡಿಯಲ್ಲಿ ನನಗೆ ಚಿತ್ರಹಿಂಸೆ ನೀಡಿ ಜಾತಿ ಆಧಾರಿತ ದೌರ್ಜನ್ಯ ನಡೆಸಿದ್ದಾರೆ. ನನ್ನ ಕಟ್ಟಡವನ್ನು ಅಕ್ರಮವಾಗಿ ಕೆಡವಿದ್ದಾರೆ ಎಂದು ಉತ್ತರಾಖಂಡ ರಾಜ್ಯದ ಉಧಮ್ ಸಿಂಗ್ ನಗರ ಜಿಲ್ಲೆಯ ಬಾಜ್‌ಪುರದ ದಲಿತ ಪತ್ರಕರ್ತರೊಬ್ಬರು...

ಲೈಂಗಿಕ ಅಪರಾಧಿ ‘ಎಪ್ಸ್ಟೀನ್’ನದ್ದು ಆತ್ಮಹತ್ಯೆಯಲ್ಲ, ಕತ್ತು ಹಿಸುಕಿದ ಪರಿಣಾಮ ಸಾವನ್ನಪ್ಪಿದ್ದಾನೆ: ವೈದ್ಯ ಮೈಕೆಲ್ ಬಾಡೆನ್ ಹೇಳಿಕೆ

ಅಮೆರಿಕದ ಲೈಂಗಿಕ ಅಪರಾಧಿ ಜೆಫ್ರಿ ಎಪ್ಸ್ಟೀನ್ ಜೈಲಿನಲ್ಲಿದ್ದಾಗ 2019ರಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದನೆಂದು ಘೋಷಿಸಲಾಗಿತ್ತು. ಆದರೆ, ಆತನ ಸಾವಿನ ಕುರಿತಾದ ಚರ್ಚೆ ಇದೀಗ ಮತ್ತೆ ಮುನ್ನೆಲೆಗೆ ಬಂದಿದೆ. ಆತನ ಜೈಲಿನ ಕೋಣೆಯಲ್ಲಿ ನೇಣು ಬಿಗಿದುಕೊಂಡು...

ದೆಹಲಿ ಗಾಳಿಯನ್ನು ‘ಗ್ಯಾಸ್ ಚೇಂಬರ್’ಗೆ ಹೋಲಿಸಿದ ಯುಪಿ ಸಿಎಂ ಯೋಗಿ ಆದಿತ್ಯನಾಥ್

ದೆಹಲಿಯ ವಾಯು ಮಾಲಿನ್ಯವನ್ನು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಶನಿವಾರ "ಗ್ಯಾಸ್ ಚೇಂಬರ್" ಗೆ ಹೋಲಿಸಿದ್ದಾರೆ. ರಾಜ್ಯಾದ್ಯಂತ ಅಭಿವೃದ್ಧಿ ಕಾರ್ಯಗಳು ಮುಂದುವರಿದಿದ್ದು ಉತ್ತರ ಪ್ರದೇಶದ ಜನರು ಸ್ವಚ್ಛ ವಾತಾವರಣದಲ್ಲಿ ವಾಸಿಸುವ ಅದೃಷ್ಟಶಾಲಿಗಳಾಗಿದ್ದಾರೆ...

‘ಫುಡ್ ಜಿಹಾದ್’ ಆರೋಪಿಸಿ ತೆಲುಗು ಯೂಟ್ಯೂಬ್ ಚಾನೆಲ್‌ನಿಂದ ಮುಸ್ಲಿಂ ವ್ಯಾಪಾರಿಗಳಿಗೆ ಕಿರುಕುಳ

ಬಡ ಬನ್ ವ್ಯಾಪಾರಿಯೊಬ್ಬರಿಗೆ ಯೂಟ್ಯೂಬ್ ಚಾನೆಲ್ ತಂಡದ ಹೆಸರಿನಲ್ಲಿ ಗುಂಪೊಂದು ಕಿರುಕುಳ ನೀಡಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ತೆಲಂಗಾಣದ ಮುಲುಗು ಜಿಲ್ಲೆಯ ಪ್ರಮುಖ ಬುಡಕಟ್ಟು ಹಬ್ಬವಾದ ಸಮಕ್ಕ ಸಾರಲಮ್ಮ ಜಾತ್ರೆಯಲ್ಲಿ ಕೋವಾ...

‘ಫಾರ್ಮ್ 7’ ಮೂಲಕ ಮುಸ್ಲಿಂ ಮತಗಳನ್ನು ಸಾಮೂಹಿಕವಾಗಿ ತೆಗೆದುಹಾಕಲು ಬಿಜೆಪಿ-ಅಧಿಕಾರಿಗಳು ಸಂಚು ರೂಪಿಸಿದ್ದಾರೆ: ಮುಸ್ಲಿಂ ಲೀಗ್ ಆರೋಪ

ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯಲ್ಲಿ ಏಳು ವ್ಯಕ್ತಿಗಳನ್ನು ಮತದಾರರ ಪಟ್ಟಿಯಿಂದ ತೆಗೆದುಹಾಕಲು ಫಾರ್ಮ್ 7 ಅರ್ಜಿಗಳನ್ನು ನೀಡಿದ್ದು, "ಕಾಸರಗೋಡು ಜಿಲ್ಲೆಯಲ್ಲಿ ಭಾರತೀಯ ಜನತಾ ಪಕ್ಷದ ಜೊತೆ ಸಹಕರಿಸಿದ ಅಧಿಕಾರಿಗಳು,...

ಖಲಿಸ್ತಾನಿ ಪ್ರತ್ಯೇಕತಾವಾದಿ ಪನ್ನುನ್ ಹತ್ಯೆ ಸಂಚು ಪ್ರಕರಣ : ಅಮೆರಿಕ ನ್ಯಾಯಾಲಯದಲ್ಲಿ ನಿಖಿಲ್ ಗುಪ್ತಾ ತಪ್ಪೊಪ್ಪಿಗೆ

ಖಲಿಸ್ತಾನಿ ಪ್ರತ್ಯೇಕತಾವಾದಿ ಗುರುಪತ್ವಂತ್ ಸಿಂಗ್ ಪನ್ನುನ್ ಹತ್ಯೆ ಸಂಚಿನ ಪ್ರಕರಣದಲ್ಲಿ ಪ್ರಮುಖ ಆರೋಪಿ ನಿಖಿಲ್ ಗುಪ್ತಾ ಅಮೆರಿಕದ ನ್ಯಾಯಾಲಯದಲ್ಲಿ ತಪ್ಪೊಪ್ಪಿಕೊಂಡಿದ್ದಾನೆ ಎಂದು ವರದಿಯಾಗಿದೆ. ಭಾರತೀಯ ಪ್ರಜೆಯಾದ ನಿಖಿಲ್ ಗುಪ್ತಾ, ನ್ಯೂಯಾರ್ಕ್‌ನಲ್ಲಿ ಪನ್ನುನ್ ಹತ್ಯೆಗೆ ಸಂಚು...

ಚುನಾವಣಾ ಟ್ರಸ್ಟ್‌ಗಳಿಂದ ರೂ. 3,157.6 ಕೋಟಿ ಪಡೆದ ಬಿಜೆಪಿ: ಎಡಿಆರ್‌

2024–25ರ ಹಣಕಾಸು ವರ್ಷದಲ್ಲಿ ಚುನಾವಣಾ ಟ್ರಸ್ಟ್‌ಗಳು ವಿತರಿಸಿದ ರೂ. 3,826.3 ಕೋಟಿಗಳಲ್ಲಿ ಭಾರತೀಯ ಜನತಾ ಪಕ್ಷವು ಶೇ. 82 ಕ್ಕಿಂತ ಹೆಚ್ಚು ಹಣವನ್ನು ಪಡೆದುಕೊಂಡಿದೆ ಎಂದು ಅಸೋಸಿಯೇಷನ್ ​​ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ (ಎಡಿಆರ್‌)...

ಭಾರತ-ಅಮೆರಿಕ ವ್ಯಾಪಾರ ಒಪ್ಪಂದ : ಪಿಯೂಷ್ ಗೋಯಲ್-ರಾಹುಲ್ ಗಾಂಧಿ ನಡುವೆ ವಾಕ್ಸಮರ

ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕೆ ಖಾತೆ ಸಚಿವ ಪಿಯೂಷ್ ಗೋಯಲ್ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ನಡುವೆ ಭಾರತ-ಅಮೆರಿಕ ಮಧ್ಯಂತರ ವ್ಯಾಪಾರ ಒಪ್ಪಂದದ ಕುರಿತು ತೀವ್ರ ವಾಕ್ಸಮರ ನಡೆದಿದೆ. ಶುಕ್ರವಾರ...

ಮೀರತ್‌| ‘ಲವ್ ಜಿಹಾದ್’ ಆರೋಪದ ಮೇಲೆ ಮುಸ್ಲಿಂ ಜಿಮ್ ಟ್ರೈನರ್‌ನನ್ನು ಥಳಿಸಿದ ಬಜರಂಗದಳ ಕಾರ್ಯಕರ್ತರು; ಪ್ರಕರಣ ದಾಖಲು

ಪ್ರೇಮಿಗಳ ದಿನದಂದು ರೆಸ್ಟೋರೆಂಟ್‌ನಲ್ಲಿ ಹಿಂದೂ ಮಹಿಳೆಯನ್ನು ಭೇಟಿಯಾಗುವಾಗ ತನ್ನ ಧಾರ್ಮಿಕ ಗುರುತನ್ನು ಮರೆಮಾಡಿದ್ದಾರೆ ಎಂದು ಆರೋಪಿಸಿದ ಬಜರಂಗದಳ ಸದಸ್ಯರು, ಮುಸ್ಲಿಂ ಜಿಮ್ ಟ್ರೈನರ್‌ನನ್ನು ಥಳಿಸಿರುವ ಘಟನೆ ಮೀರತ್‌ನಲ್ಲಿ ನಡೆದಿದೆ. ದಾಳಿಕೋರರ ವಿರುದ್ಧ ಪ್ರಕರಣ...

ತೆಲಂಗಾಣ ಸ್ಥಳೀಯ ಸಂಸ್ಥೆ ಚುನಾವಣೆ : ಪ್ರಾಬಲ್ಯ ಮೆರೆದ ಕಾಂಗ್ರೆಸ್, ಬಲ ಕಳೆದುಕೊಂಡ ಬಿಆರ್‌ಎಸ್‌

ತೆಲಂಗಾಣದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶ ಶುಕ್ರವಾರ (ಫೆ.13) ಪ್ರಕಟಗೊಂಡಿದ್ದು, ಆಡಳಿತಾರೂಢ ಕಾಂಗ್ರೆಸ್ ರಾಜ್ಯದಾದ್ಯಂತ ಪ್ರಾಬಲ್ಯ ಮೆರೆದಿದೆ. ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಒಟ್ಟು 2,996 ವಾರ್ಡ್‌ಗಳ ಪೈಕಿ ಕಾಂಗ್ರೆಸ್ 1,537 ವಾರ್ಡ್‌ಗಳನ್ನು ಗೆದ್ದುಕೊಂಡಿದೆ. ಈ...