Homeಮುಖಪುಟಚೋರ್ಲಾ ಘಾಟ್‌ನಲ್ಲಿ 400 ಕೋಟಿ ರೂ. ದರೋಡೆ: ಏನಿದು ಪ್ರಕರಣ..ಬೆಳಗಾವಿ ಎಸ್ಪಿ ಹೇಳಿದ್ದೇನು?

ಚೋರ್ಲಾ ಘಾಟ್‌ನಲ್ಲಿ 400 ಕೋಟಿ ರೂ. ದರೋಡೆ: ಏನಿದು ಪ್ರಕರಣ..ಬೆಳಗಾವಿ ಎಸ್ಪಿ ಹೇಳಿದ್ದೇನು?

- Advertisement -
- Advertisement -

ಕರ್ನಾಟಕ, ಗೋವಾ ಮತ್ತು ಮಹಾರಾಷ್ಟ್ರ ರಾಜ್ಯಗಳ ಗಡಿಯಲ್ಲಿರುವ ಪಶ್ಚಿಮ ಘಟ್ಟಗಳ ವ್ಯಾಪ್ತಿಯ ಚೋರ್ಲಾ ಘಾಟ್‌ನಲ್ಲಿ ಬರೋಬ್ಬರಿ 400 ಕೋಟಿ ರೂಪಾಯಿ ಹಣ ಸಾಗಿಸುತ್ತಿದ್ದ ಕಂಟೇನರ್‌ಗಳನ್ನು ದರೋಡೆ ಮಾಡಲಾಗಿದೆ ಎಂಬ ವಿಚಾರ ದೊಡ್ಡ ಮಟ್ಟದಲ್ಲಿ ಚರ್ಚೆಯಾಗುತ್ತಿದೆ.

2025ರ ಅಕ್ಟೋಬರ್ 16ರಂದು ಗೋವಾದಿಂದ ಕರ್ನಾಟಕ ಮಾರ್ಗವಾಗಿ ಹಣ ಸಾಗಿಸುತ್ತಿದ್ದ ಎರಡು ಕಂಟೇನರ್‌ಗಳನ್ನು ಅಪಹರಿಸಿ ಹಣ ದರೋಡೆ ಮಾಡಲಾಗಿದೆ. ಈ ವಿಚಾರ ತಡವಾಗಿ ಬೆಳಕಿಗೆ ಬಂದಿದೆ. ಇದು ಭಾರತ ದೇಶದ ಇತಿಹಾಸದಲ್ಲೇ ಅತಿದೊಡ್ಡ ಕಂಟೇನರ್ ದರೋಡೆ ಎಂದು ಹೇಳಲಾಗ್ತಿದೆ.

ಪ್ರಕರಣದ ಗಂಭೀರತೆಯನ್ನು ಪರಿಗಣಿಸಿದ ಮಹಾರಾಷ್ಟ್ರದ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್, ತನಿಖೆಗೆ ವಿಶೇಷ ತಂಡ (ಎಸ್‌ಐಟಿ) ರಚಿಸಿ ಆದೇಶ ಹೊರಡಿಸಿದ್ದು, ಕರ್ನಾಟಕ–ಮಹಾರಾಷ್ಟ್ರ–ಗೋವಾ ರಾಜ್ಯಗಳ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.

ಭಾನುವಾರ (ಜ.25, 2026) ಸುದ್ದಿಗೋಷ್ಠಿ ನಡೆಸಿದ ಬೆಳಗಾವಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್ ಪ್ರಕರಣದ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ.

“ಸಂದೀಪ್ ದತ್ತ ಪಾಟೀಲ್ ಎಂಬಾತನನ್ನು 2025ರ ಅಕ್ಟೋಬರ್ 22ರಂದು ಐವರು ಅಪಹರಿಸಿದ್ದರು. ಆ ಐದು ಮಂದಿಯನ್ನು ಬಂಧಿಸಲಾಗಿದೆ. ಅಪಹರಣಕ್ಕೊಳಗಾದ ಸಂದೀಪ್ ದತ್ತ ಪಾಟೀಲ್ ಅವರನ್ನು ಪೊಲೀಸರು ವಿಚಾರಣೆ ನಡೆಸಿದಾಗ, “ನನ್ನನ್ನು 2025ರ ಅಕ್ಟೋಬರ್ 22ರಂದು ಫಾರ್ಚೂನರ್ ಕಾರಿನಲ್ಲಿ ಅಪಹರಿಸಿದ್ದರು. ಅಕ್ಟೋಬರ್ 16ನೇ ತಾರೀಖು ಚೋರ್ಲಾ ಘಾಟ್‌ನಲ್ಲಿ 400 ಕೋಟಿ ರೂಪಾಯಿ ದರೋಡೆಯಾಗಿದೆ. ಅದರಲ್ಲಿ ನೀನು ಭಾಗಿಯಾಗಿದ್ದೀಯಾ.. ನೀನು 400 ಕೋಟಿ ರೂ. ಕೊಡಬೇಕು ಎಂದು ಒತ್ತಾಯಿಸಿ ಥಳಿಸಿದ್ದಾರೆ” ಎಂಬುವುದಾಗಿ ತಿಳಿಸಿದ್ದಾರೆ ಎಂದು ಎಸ್ಪಿ ಹೇಳಿದ್ದಾರೆ.

ಈ ಮಾಹಿತಿಯನ್ನು ಮಹಾರಾಷ್ಟ್ರದ ನಾಸಿಕ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜನವರಿ 6ರಂದು ಪತ್ರ ಬರೆದು ನಮಗೆ ತಿಳಿಸಿದ್ದರು. ನಮಗೆ ಪತ್ರ ತಲುಪಿದ ಬಳಿಕ ಬೆಳಗಾವಿಯ ಖಾನಾಪುರ ಪೊಲೀಸ್ ಠಾಣೆಯ ಸಬ್‌ ಇನ್‌ಸ್ಪೆಕ್ಟರ್ ಬಿರಾದರ್ ಅವರ ನೇತೃತ್ವದಲ್ಲಿ ಖಾನಾಪುರ ಮತ್ತು ನಂದಗಡ ಪೊಲೀಸ್ ಠಾಣೆಗಳ ಮೂವರು ಮರಾಠಿ ಗೊತ್ತಿರುವ ಸಿಬ್ಬಂದಿಯನ್ನು ತಂಡ ಮಾಡಿ ನಾಸಿಕ್‌ಗೆ ಕಳಿಸಿದ್ದೆವು ಎಂದು ವಿವರಿಸಿದ್ದಾರೆ.

ಮುಂದುವರಿದು, ಸಬ್‌ ಇನ್ಪೆಕ್ಟರ್ ಬಿರಾದರ್ ಅವರ ತಂಡ ನಾಸಿಕ್‌ಗೆ ಹೋಗಿ ಅಪಹರಣಕ್ಕೊಳಗಾದ ಸಂದೀಪ್ ದತ್ತ ಪಾಟೀಲ್ ಅವರನ್ನು ವಿಚಾರಣೆಗೆ ಒಳಪಡಿಸಿದೆ. ಈ ವೇಳೆ ಅವರು ತಾನು ಯಾವುದೇ ದರೋಡೆ ಘಟನೆ ನೋಡಿಲ್ಲ. ಆದರೆ, ನನ್ನನ್ನು ಅಪಹರಿಸಿ ಥಳಿಸಿದವರು, ಚೋರ್ಲಾ ಘಾಟ್‌ನಲ್ಲಿ 400 ಕೋಟಿ ರೂಪಾಯಿ ದರೋಡೆ ನಡೆದಿದೆ ಎಂದು ಹೇಳುತ್ತಿದ್ದರು ಎಂಬುವುದಾಗಿ ತಿಳಿಸಿದ್ದಾರೆ ಎಂದು ಎಸ್ಪಿ ಮಾಹಿತಿ ನೀಡಿದ್ದಾರೆ.

ಬಿಎನ್‌ಎಸ್‌ ಕಾಯ್ದೆಯ ಸೆಕ್ಷನ್ 198 ಪ್ರಕಾರ ಒಂದು ಅಪರಾಧ ಘಟನೆ ಒಂದು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಾರಂಭಗೊಂಡು ಇನ್ನೊಂದು ಠಾಣೆಯ ವ್ಯಾಪ್ತಿಯಲ್ಲಿ ಕೊನೆಯಾದರೆ, ಆ ಎರಡು ಠಾಣೆಗಳ ನಡುವೆ ಬರುವ ಯಾವುದೇ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲು ಅವಕಾಶ ಇದೆ ಎಂದಿದ್ದಾರೆ.

ಈ ದರೋಡೆ ಮತ್ತು ಅಪಹರಣ ಘಟನೆಗೆ ಸಂಬಂಧಿಸಿದಂತೆ ಮಹಾರಾಷ್ಟ್ರದಲ್ಲಿ ಎಸ್‌ಐಟಿ ರಚನೆಯಾಗಿದೆ. ಈ ಅಪರಾಧ ಮಹಾರಾಷ್ಟ್ರದಲ್ಲಿ ಪ್ರಾರಂಭಗೊಂಡು ಅಲ್ಲಿಯೇ ಕೊನೆಯಾಗಿದ್ದರೆ ಅಲ್ಲಿನ ಎಸ್‌ಐಟಿ ಸಂಪೂರ್ಣ ತನಿಖೆ ಮಾಡಲಿದೆ. ಒಂದು ವೇಳೆ ಅಪರಾಧ ಬೆಳಗಾವಿಯ ವ್ಯಾಪ್ತಿಯಲ್ಲಿ ನಡೆದಿದ್ದರೆ, ಮಹಾರಾಷ್ಟ್ರ ಪೊಲೀಸರು ಆ ಬಗ್ಗೆ ಮಾಹಿತಿ ಕೊಟ್ಟರೆ ನಾವು ಇಲ್ಲಿ ಎಫ್‌ಐಆರ್ ದಾಖಲಿಸಿ ತನಿಖೆ ಮಾಡುತ್ತೇವೆ. ಅದಕ್ಕಾಗಿ ನಮ್ಮ ಪೊಲೀಸ್ ತಂಡ ಮಹಾರಾಷ್ಟ್ರದಲ್ಲಿ ಕಾಯುತ್ತಿದೆ. ಅಪರಾಧ ಬೆಳಗಾವಿ ವ್ಯಾಪ್ತಿಯಲ್ಲಿ ನಡೆದಿರುವ ಮಾಹಿತಿ ಸಿಕ್ಕರೆ ನಾವು ತಕ್ಷಣ ಎಫ್‌ಐಆರ್ ದಾಖಲಿಸಿ ತನಿಖೆ ಕೈಗೊಳ್ಳುತ್ತೇವೆ ಎಂದು ಎಸ್ಪಿ ರಾಮರಾಜನ್ ತಿಳಿಸಿದ್ದಾರೆ.

ನಾಸಿಕ್ ಎಸ್ಪಿಯ ಪತ್ರ ಬರೆದಿರುವುದು ಬಿಟ್ಟರೆ ಅವರು ಈ ಪ್ರಕರಣ ಸಂಬಂಧ ನಮ್ಮ ಬಳಿ ಯಾವುದೇ ಚರ್ಚೆ ನಡೆಸಿಲ್ಲ, ಮಾಹಿತಿ ಹಂಚಿಕೊಂಡಿಲ್ಲ. ಈಗಾಗಾಲೇ ಸಬ್‌ ಇಸ್ಪೆಕ್ಟರ್ ನೇತೃತ್ವದ ನಮ್ಮ ಪೊಲೀಸ್ ತಂಡ ನಾಸಿಕ್‌ನಲ್ಲಿದೆ. ಇನ್ನೂ ಹಿರಿಯ ಅಧಿಕಾರಿಯನ್ನು ಕಳಿಸಿಕೊಡಬೇಕು ಎಂದರೆ ನಾವು ಕಳಿಸಿಕೊಡುತ್ತೇವೆ ಎಂದು ಹೇಳಿದ್ದಾರೆ.

400 ಕೋಟಿ ದರೋಡೆ ನಡೆದಿರುವುದು ನಿಜವೇ ಎಂಬುವುದರ ಬಗ್ಗೆ ನಮಗೆ ಮಾಹಿತಿಯಿಲ್ಲ. ಅದನ್ನು ನೋಡಿದವರೂ ಇಲ್ಲ. ಅಪಹರಣಕ್ಕೊಳಗಾಗಿದ್ದಾರೆ ಎನ್ನಲಾದ ಸಂದೀಪ್ ದತ್ತ ಪಾಟೀಲ್ ಕೊಟ್ಟಿರುವ ಹೇಳಿಕೆ ಆಧರಿಸಿ ಈ ದರೋಡೆಯ ಕುರಿತು ಚರ್ಚೆಯಾಗುತ್ತಿದೆ. ಘಟನೆ ನಡೆದ ಸ್ಥಳದ ಬಗ್ಗೆಯೂ ಖಚಿತ ಮಾಹಿತಿ ಇಲ್ಲ. ಮಹಾರಾಷ್ಟ್ರ ಪೊಲೀಸರು ಮಾಹಿತಿ ಕೊಟ್ಟರೆ ನಾವು ಮುಂದಿನ ತನಿಖೆ ಮಾಡುತ್ತೇವೆ ಎಂದು ಬೆಳಗಾವಿ ಎಸ್ಪಿ ರಾಮರಾಜನ್ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: 43ಲಕ್ಷದಲ್ಲಿ ನೋಟಿಸ್ ತಲುಪಿರುವುದು 25ಲಕ್ಷ ಜನರಿಗೆ ಮಾತ್ರ, ಬಾಕಿ 18ಲಕ್ಷ ಜನರಿಗೆ ಇನ್ನು ನೋಟಿಸ್ಸೇ ತಲುಪಿಲ್ಲ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಆಡಳಿತಾತ್ಮಕ ಗೊಂದಲ ಹಾಗೂ ಯಾಂತ್ರಿಕ ಲೋಪಗಳ ಜಾಲದಲ್ಲಿ ಸಿಲುಕಿಬಿದ್ದಿದೆ. ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಬಿಡುಗಡೆ ಮಾಡಿರುವ ಇತ್ತೀಚಿನ ದತ್ತಾಂಶವೇ ಆಯೋಗದ...

ಕಾಳಿಘಾಟ್‌ನಲ್ಲಿ ‘ಮೀನಿನ ಪ್ರಸಾದ’ ಸ್ವೀಕರಿಸಿದ ಸುವೇಂದು ಅಧಿಕಾರಿ; ಬಾಗೇಶ್ವರ್ ಬಾಬಾ ‘ಮಾಂಸಾಹಾರ’ ವಿವಾದಕ್ಕೆ ಹೊಸ ತಿರುವು!

ದುರ್ಗಾ ಪೂಜೆ ಸಂದರ್ಭದಲ್ಲಿ ಮೀನು–ಮಾಂಸ ಸೇವನೆ ಕುರಿತು ಬಾಗೇಶ್ವರ್ ಧಾಮದ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿರುವ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ವಿವಾದಕ್ಕೆ ಕಾರಣವಾಗಿರುವ ನಡುವೆಯೇ, ಮುಖ್ಯಮಂತ್ರಿ ಸುವೇಂದು ಅಧಿಕಾರಿ ಕಾಳಿಘಾಟ್ʼನ ಕಾಳಿ ದೇವಸ್ಥಾನದಲ್ಲಿ...

ಎಸ್‌ಐಆರ್‌: ಹೈದರಾಬಾದ್, ಸಿಕಂದರಾಬಾದ್‌ನಲ್ಲಿ ಲಕ್ಷಾಂತರ ಮತದಾರರ ಹೆಸರು ಅಳಿಸುವಿಕೆ; 2029ರ ಚುನಾವಣೆಗೂ ಮುನ್ನ ಗಂಭೀರ ಆತಂಕ

ಹೈದರಾಬಾದ್: ತೆಲಂಗಾಣದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಭಾರೀ ಪ್ರಮಾಣದಲ್ಲಿ ಹೆಸರುಗಳನ್ನು ತೆಗೆದುಹಾಕಲಾಗಿರುವುದು ಮುಂದಿನ ಚುನಾವಣೆಯ ರಾಜಕೀಯ ಲೆಕ್ಕಾಚಾರಗಳ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯನ್ನು ಹುಟ್ಟುಹಾಕಿದೆ....

9/11 ದಾಳಿಗೆ 25 ವರ್ಷ: ‘ಭಯೋತ್ಪಾದನೆ ವಿರುದ್ಧದ ಯುದ್ಧ’ ಮತ್ತು ಕುಸಿದ ಪ್ರಜಾಪ್ರಭುತ್ವದ ಮೌಲ್ಯಗಳು

ನ್ಯೂಯಾರ್ಕ್‌ನ ಪ್ರತಿಷ್ಠಿತ ವರ್ಲ್ಡ್ ಟ್ರೇಡ್ ಸೆಂಟರ್ ಅವಳಿ ಗೋಪುರಗಳ ಮೇಲೆ ನಡೆದ ಭೀಕರ ಭಯೋತ್ಪಾದನಾ ದಾಳಿಗೆ ಇಂದಿಗೆ ಭರ್ತಿ 25 ವರ್ಷಗಳು ತುಂಬಿವೆ. ಈ ಕಾಲು ಶತಮಾನದ ಅವಧಿಯಲ್ಲಿ 'ಭಯೋತ್ಪಾದನೆ ವಿರುದ್ಧದ ಜಾಗತಿಕ...

‘ಈ ಪ್ರಕ್ರಿಯೆಯೇ ಶಿಕ್ಷೆಯಾಗಿದೆ’: ಉಮರ್ ಖಾಲಿದ್ ದೀರ್ಘ ಜೈಲುವಾಸದ ಬಗ್ಗೆ ಮಾಜಿ ನ್ಯಾಯಮೂರ್ತಿ ದೀಪಕ್ ಗುಪ್ತಾ ತೀವ್ರ ಟೀಕೆ

ನವದೆಹಲಿ: ಮಾನವ ಹಕ್ಕುಗಳ ಕಾರ್ಯಕರ್ತ, ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಅವರ ದೀರ್ಘಕಾಲದ ವಿಚಾರಣಾಪೂರ್ವ ಬಂಧನ, ಎಲ್ಗರ್ ಪರಿಷತ್ ಪ್ರಕರಣದ ಆರೋಪಿಗಳ ವರ್ಷಗಳ ಜೈಲುವಾಸ ಹಾಗೂ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ನ್ಯಾಯಾಂಗದ...

‘ದೇಶವಿರೋಧಿ ಮನಸ್ಥಿತಿಯಲ್ಲ’: ಜಿ.ಎನ್. ಸಾಯಿಬಾಬಾ ಸ್ಮರಣೆ ಪ್ರಕರಣದಲ್ಲಿ ‘ಟಿಸ್’ ಮಾಜಿ ವಿದ್ಯಾರ್ಥಿಗೆ ಜಾಮೀನು!

ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ದಿವಂಗತ ಜಿ.ಎನ್. ಸಾಯಿಬಾಬಾ ಅವರ ಸ್ಮರಣಾರ್ಥ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (TISS) ಕ್ಯಾಂಪಸ್‌ನಲ್ಲಿ ನಡೆದ ಅನುಮತಿರಹಿತ ಕಾರ್ಯಕ್ರಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ವಿದ್ಯಾರ್ಥಿ...

ಜನಾಕ್ರೋಶದ ನಡುವೆಯೇ ಎಸ್ಐಆರ್ ಸಮರ್ಥಿಸಿಕೊಂಡ ಮುಖ್ಯ ಚುನಾವಣಾ ಆಯುಕ್ತ: ‘ರಾಜಕೀಯ ದಾಳಿಗಳಿಂದ ಆಯೋಗ ವಿಚಲಿತವಾಗದು’ ಎಂದ ಜ್ಞಾನೇಶ್ ಕುಮಾರ್

ಅಹಮದಾಬಾದ್: ದೇಶದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ರಾಜಕೀಯ ಪಕ್ಷಗಳು, ನಾಗರಿಕ ಸಂಘಟನೆಗಳು ಹಾಗೂ ವಿವಿಧ ವಲಯಗಳಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...

SIR : ತಾಯಿಯೊಂದಿಗೆ ಮ್ಯಾಪಿಂಗ್ ಮಾಡಿದರೂ ಅಜ್ಜನ ವಯಸ್ಸಿನ ವ್ಯತ್ಯಾಸದ ನೆಪ ಹೇಳಿ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ದಿನಕ್ಕೊಂದು ವಿಲಕ್ಷಣ ಹಾಗೂ ಯಾಂತ್ರಿಕ ದೋಷಗಳನ್ನು ಹೊರಹಾಕುತ್ತಿದ್ದು, ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಲು ಬಯಸುವ ನೈಜ ಮತದಾರರನ್ನು ಆತಂಕಕ್ಕೆ ತಳ್ಳುತ್ತಿದೆ. ಬ್ಯಾಟರಾಯನಪುರ...

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...