Homeಮುಖಪುಟಚೋರ್ಲಾ ಘಾಟ್‌ನಲ್ಲಿ 400 ಕೋಟಿ ರೂ. ದರೋಡೆ: ಏನಿದು ಪ್ರಕರಣ..ಬೆಳಗಾವಿ ಎಸ್ಪಿ ಹೇಳಿದ್ದೇನು?

ಚೋರ್ಲಾ ಘಾಟ್‌ನಲ್ಲಿ 400 ಕೋಟಿ ರೂ. ದರೋಡೆ: ಏನಿದು ಪ್ರಕರಣ..ಬೆಳಗಾವಿ ಎಸ್ಪಿ ಹೇಳಿದ್ದೇನು?

- Advertisement -
- Advertisement -

ಕರ್ನಾಟಕ, ಗೋವಾ ಮತ್ತು ಮಹಾರಾಷ್ಟ್ರ ರಾಜ್ಯಗಳ ಗಡಿಯಲ್ಲಿರುವ ಪಶ್ಚಿಮ ಘಟ್ಟಗಳ ವ್ಯಾಪ್ತಿಯ ಚೋರ್ಲಾ ಘಾಟ್‌ನಲ್ಲಿ ಬರೋಬ್ಬರಿ 400 ಕೋಟಿ ರೂಪಾಯಿ ಹಣ ಸಾಗಿಸುತ್ತಿದ್ದ ಕಂಟೇನರ್‌ಗಳನ್ನು ದರೋಡೆ ಮಾಡಲಾಗಿದೆ ಎಂಬ ವಿಚಾರ ದೊಡ್ಡ ಮಟ್ಟದಲ್ಲಿ ಚರ್ಚೆಯಾಗುತ್ತಿದೆ.

2025ರ ಅಕ್ಟೋಬರ್ 16ರಂದು ಗೋವಾದಿಂದ ಕರ್ನಾಟಕ ಮಾರ್ಗವಾಗಿ ಹಣ ಸಾಗಿಸುತ್ತಿದ್ದ ಎರಡು ಕಂಟೇನರ್‌ಗಳನ್ನು ಅಪಹರಿಸಿ ಹಣ ದರೋಡೆ ಮಾಡಲಾಗಿದೆ. ಈ ವಿಚಾರ ತಡವಾಗಿ ಬೆಳಕಿಗೆ ಬಂದಿದೆ. ಇದು ಭಾರತ ದೇಶದ ಇತಿಹಾಸದಲ್ಲೇ ಅತಿದೊಡ್ಡ ಕಂಟೇನರ್ ದರೋಡೆ ಎಂದು ಹೇಳಲಾಗ್ತಿದೆ.

ಪ್ರಕರಣದ ಗಂಭೀರತೆಯನ್ನು ಪರಿಗಣಿಸಿದ ಮಹಾರಾಷ್ಟ್ರದ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್, ತನಿಖೆಗೆ ವಿಶೇಷ ತಂಡ (ಎಸ್‌ಐಟಿ) ರಚಿಸಿ ಆದೇಶ ಹೊರಡಿಸಿದ್ದು, ಕರ್ನಾಟಕ–ಮಹಾರಾಷ್ಟ್ರ–ಗೋವಾ ರಾಜ್ಯಗಳ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.

ಭಾನುವಾರ (ಜ.25, 2026) ಸುದ್ದಿಗೋಷ್ಠಿ ನಡೆಸಿದ ಬೆಳಗಾವಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್ ಪ್ರಕರಣದ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ.

“ಸಂದೀಪ್ ದತ್ತ ಪಾಟೀಲ್ ಎಂಬಾತನನ್ನು 2025ರ ಅಕ್ಟೋಬರ್ 22ರಂದು ಐವರು ಅಪಹರಿಸಿದ್ದರು. ಆ ಐದು ಮಂದಿಯನ್ನು ಬಂಧಿಸಲಾಗಿದೆ. ಅಪಹರಣಕ್ಕೊಳಗಾದ ಸಂದೀಪ್ ದತ್ತ ಪಾಟೀಲ್ ಅವರನ್ನು ಪೊಲೀಸರು ವಿಚಾರಣೆ ನಡೆಸಿದಾಗ, “ನನ್ನನ್ನು 2025ರ ಅಕ್ಟೋಬರ್ 22ರಂದು ಫಾರ್ಚೂನರ್ ಕಾರಿನಲ್ಲಿ ಅಪಹರಿಸಿದ್ದರು. ಅಕ್ಟೋಬರ್ 16ನೇ ತಾರೀಖು ಚೋರ್ಲಾ ಘಾಟ್‌ನಲ್ಲಿ 400 ಕೋಟಿ ರೂಪಾಯಿ ದರೋಡೆಯಾಗಿದೆ. ಅದರಲ್ಲಿ ನೀನು ಭಾಗಿಯಾಗಿದ್ದೀಯಾ.. ನೀನು 400 ಕೋಟಿ ರೂ. ಕೊಡಬೇಕು ಎಂದು ಒತ್ತಾಯಿಸಿ ಥಳಿಸಿದ್ದಾರೆ” ಎಂಬುವುದಾಗಿ ತಿಳಿಸಿದ್ದಾರೆ ಎಂದು ಎಸ್ಪಿ ಹೇಳಿದ್ದಾರೆ.

ಈ ಮಾಹಿತಿಯನ್ನು ಮಹಾರಾಷ್ಟ್ರದ ನಾಸಿಕ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜನವರಿ 6ರಂದು ಪತ್ರ ಬರೆದು ನಮಗೆ ತಿಳಿಸಿದ್ದರು. ನಮಗೆ ಪತ್ರ ತಲುಪಿದ ಬಳಿಕ ಬೆಳಗಾವಿಯ ಖಾನಾಪುರ ಪೊಲೀಸ್ ಠಾಣೆಯ ಸಬ್‌ ಇನ್‌ಸ್ಪೆಕ್ಟರ್ ಬಿರಾದರ್ ಅವರ ನೇತೃತ್ವದಲ್ಲಿ ಖಾನಾಪುರ ಮತ್ತು ನಂದಗಡ ಪೊಲೀಸ್ ಠಾಣೆಗಳ ಮೂವರು ಮರಾಠಿ ಗೊತ್ತಿರುವ ಸಿಬ್ಬಂದಿಯನ್ನು ತಂಡ ಮಾಡಿ ನಾಸಿಕ್‌ಗೆ ಕಳಿಸಿದ್ದೆವು ಎಂದು ವಿವರಿಸಿದ್ದಾರೆ.

ಮುಂದುವರಿದು, ಸಬ್‌ ಇನ್ಪೆಕ್ಟರ್ ಬಿರಾದರ್ ಅವರ ತಂಡ ನಾಸಿಕ್‌ಗೆ ಹೋಗಿ ಅಪಹರಣಕ್ಕೊಳಗಾದ ಸಂದೀಪ್ ದತ್ತ ಪಾಟೀಲ್ ಅವರನ್ನು ವಿಚಾರಣೆಗೆ ಒಳಪಡಿಸಿದೆ. ಈ ವೇಳೆ ಅವರು ತಾನು ಯಾವುದೇ ದರೋಡೆ ಘಟನೆ ನೋಡಿಲ್ಲ. ಆದರೆ, ನನ್ನನ್ನು ಅಪಹರಿಸಿ ಥಳಿಸಿದವರು, ಚೋರ್ಲಾ ಘಾಟ್‌ನಲ್ಲಿ 400 ಕೋಟಿ ರೂಪಾಯಿ ದರೋಡೆ ನಡೆದಿದೆ ಎಂದು ಹೇಳುತ್ತಿದ್ದರು ಎಂಬುವುದಾಗಿ ತಿಳಿಸಿದ್ದಾರೆ ಎಂದು ಎಸ್ಪಿ ಮಾಹಿತಿ ನೀಡಿದ್ದಾರೆ.

ಬಿಎನ್‌ಎಸ್‌ ಕಾಯ್ದೆಯ ಸೆಕ್ಷನ್ 198 ಪ್ರಕಾರ ಒಂದು ಅಪರಾಧ ಘಟನೆ ಒಂದು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಾರಂಭಗೊಂಡು ಇನ್ನೊಂದು ಠಾಣೆಯ ವ್ಯಾಪ್ತಿಯಲ್ಲಿ ಕೊನೆಯಾದರೆ, ಆ ಎರಡು ಠಾಣೆಗಳ ನಡುವೆ ಬರುವ ಯಾವುದೇ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲು ಅವಕಾಶ ಇದೆ ಎಂದಿದ್ದಾರೆ.

ಈ ದರೋಡೆ ಮತ್ತು ಅಪಹರಣ ಘಟನೆಗೆ ಸಂಬಂಧಿಸಿದಂತೆ ಮಹಾರಾಷ್ಟ್ರದಲ್ಲಿ ಎಸ್‌ಐಟಿ ರಚನೆಯಾಗಿದೆ. ಈ ಅಪರಾಧ ಮಹಾರಾಷ್ಟ್ರದಲ್ಲಿ ಪ್ರಾರಂಭಗೊಂಡು ಅಲ್ಲಿಯೇ ಕೊನೆಯಾಗಿದ್ದರೆ ಅಲ್ಲಿನ ಎಸ್‌ಐಟಿ ಸಂಪೂರ್ಣ ತನಿಖೆ ಮಾಡಲಿದೆ. ಒಂದು ವೇಳೆ ಅಪರಾಧ ಬೆಳಗಾವಿಯ ವ್ಯಾಪ್ತಿಯಲ್ಲಿ ನಡೆದಿದ್ದರೆ, ಮಹಾರಾಷ್ಟ್ರ ಪೊಲೀಸರು ಆ ಬಗ್ಗೆ ಮಾಹಿತಿ ಕೊಟ್ಟರೆ ನಾವು ಇಲ್ಲಿ ಎಫ್‌ಐಆರ್ ದಾಖಲಿಸಿ ತನಿಖೆ ಮಾಡುತ್ತೇವೆ. ಅದಕ್ಕಾಗಿ ನಮ್ಮ ಪೊಲೀಸ್ ತಂಡ ಮಹಾರಾಷ್ಟ್ರದಲ್ಲಿ ಕಾಯುತ್ತಿದೆ. ಅಪರಾಧ ಬೆಳಗಾವಿ ವ್ಯಾಪ್ತಿಯಲ್ಲಿ ನಡೆದಿರುವ ಮಾಹಿತಿ ಸಿಕ್ಕರೆ ನಾವು ತಕ್ಷಣ ಎಫ್‌ಐಆರ್ ದಾಖಲಿಸಿ ತನಿಖೆ ಕೈಗೊಳ್ಳುತ್ತೇವೆ ಎಂದು ಎಸ್ಪಿ ರಾಮರಾಜನ್ ತಿಳಿಸಿದ್ದಾರೆ.

ನಾಸಿಕ್ ಎಸ್ಪಿಯ ಪತ್ರ ಬರೆದಿರುವುದು ಬಿಟ್ಟರೆ ಅವರು ಈ ಪ್ರಕರಣ ಸಂಬಂಧ ನಮ್ಮ ಬಳಿ ಯಾವುದೇ ಚರ್ಚೆ ನಡೆಸಿಲ್ಲ, ಮಾಹಿತಿ ಹಂಚಿಕೊಂಡಿಲ್ಲ. ಈಗಾಗಾಲೇ ಸಬ್‌ ಇಸ್ಪೆಕ್ಟರ್ ನೇತೃತ್ವದ ನಮ್ಮ ಪೊಲೀಸ್ ತಂಡ ನಾಸಿಕ್‌ನಲ್ಲಿದೆ. ಇನ್ನೂ ಹಿರಿಯ ಅಧಿಕಾರಿಯನ್ನು ಕಳಿಸಿಕೊಡಬೇಕು ಎಂದರೆ ನಾವು ಕಳಿಸಿಕೊಡುತ್ತೇವೆ ಎಂದು ಹೇಳಿದ್ದಾರೆ.

400 ಕೋಟಿ ದರೋಡೆ ನಡೆದಿರುವುದು ನಿಜವೇ ಎಂಬುವುದರ ಬಗ್ಗೆ ನಮಗೆ ಮಾಹಿತಿಯಿಲ್ಲ. ಅದನ್ನು ನೋಡಿದವರೂ ಇಲ್ಲ. ಅಪಹರಣಕ್ಕೊಳಗಾಗಿದ್ದಾರೆ ಎನ್ನಲಾದ ಸಂದೀಪ್ ದತ್ತ ಪಾಟೀಲ್ ಕೊಟ್ಟಿರುವ ಹೇಳಿಕೆ ಆಧರಿಸಿ ಈ ದರೋಡೆಯ ಕುರಿತು ಚರ್ಚೆಯಾಗುತ್ತಿದೆ. ಘಟನೆ ನಡೆದ ಸ್ಥಳದ ಬಗ್ಗೆಯೂ ಖಚಿತ ಮಾಹಿತಿ ಇಲ್ಲ. ಮಹಾರಾಷ್ಟ್ರ ಪೊಲೀಸರು ಮಾಹಿತಿ ಕೊಟ್ಟರೆ ನಾವು ಮುಂದಿನ ತನಿಖೆ ಮಾಡುತ್ತೇವೆ ಎಂದು ಬೆಳಗಾವಿ ಎಸ್ಪಿ ರಾಮರಾಜನ್ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...