Homeಮುಖಪುಟಪರಿಶಿಷ್ಟಜಾತಿ ಕಲ್ಯಾಣಕ್ಕೆ ನಿಗದಿಪಡಿಸಿದ್ದ ಹಣದಲ್ಲಿ 50 ಸಾವಿರ ಕೋಟಿ ರೂ. ಬಳಸದ ಮೋದಿ ಸರ್ಕಾರ!

ಪರಿಶಿಷ್ಟಜಾತಿ ಕಲ್ಯಾಣಕ್ಕೆ ನಿಗದಿಪಡಿಸಿದ್ದ ಹಣದಲ್ಲಿ 50 ಸಾವಿರ ಕೋಟಿ ರೂ. ಬಳಸದ ಮೋದಿ ಸರ್ಕಾರ!

ನಾಲ್ಕು ವರ್ಷಗಳಲ್ಲಿ ಸುಮಾರು 50 ಸಾವಿರ ಕೋಟಿ ರೂ.ಗಳನ್ನು ಸಚಿವಾಲಯಗಳು / ಇಲಾಖೆಗಳು ಬಳಸದೇ ವಾಪಸ್ ಮಾಡಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

- Advertisement -
- Advertisement -

2017-18 ಮತ್ತು 2020-21ರ (ನಾಲ್ಕು ವರ್ಷಗಳ) ನಡುವೆ ಪರಿಶಿಷ್ಟಜಾತಿ (SC) ಸಮುದಾಯದ ಕಲ್ಯಾಣಕ್ಕಾಗಿ ನಿಗದಿಪಡಿಸಿದ ಹಣದ ಶೇಕಡಾ 20 ರಷ್ಟು ಅಂದರೆ ಒಟ್ಟು 50,000 ಕೋಟಿ ರೂಪಾಯಿಗಳನ್ನು ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಚಿವಾಲಯಗಳು ಮತ್ತು ಇಲಾಖೆಗಳು ಬಳಕೆ ಮಾಡಿಲ್ಲ ಎಂದು ದಿ ಪ್ರಿಂಟ್ ವರದಿ ಮಾಡಿದೆ.

ಹೀಗಾಗಿ , ಹಂಚಿಕೆ ನಿಯಂತ್ರಿಸುವ ಚೌಕಟ್ಟಿನಲ್ಲಿ ಬದಲಾವಣೆಯನ್ನು ಪ್ರಸ್ತಾಪಿಸಲು ಮೋದಿ ಸರ್ಕಾರ ನಿರ್ಧರಿಸಿದೆ ಎಂದು ಮೂಲಗಳು ತಿಳಿಸಿವೆ. ಸಚಿವಾಲಯಗಳು ಮತ್ತು ಇಲಾಖೆಗಳಾದ್ಯಂತ ಏಕರೂಪದ ವಿತರಣೆಯನ್ನು ಹೆಚ್ಚಿನ ಆದ್ಯತೆಯ ಪ್ರದೇಶಗಳಲ್ಲಿ ಹೂಡಿಕೆ ಮಾಡಲಾಗುತ್ತದೆ. ಅದರ ಫಲಾನುಭವಿಗಳಿಗೆ ವಾರ್ಷಿಕ 50,000 ರೂ.ಗಳವರೆಗೆ ನಗದು ವರ್ಗಾವಣೆ ಮಾಡುವ ಉದ್ದೇಶ ಹೊಂದಲಾಗಿದೆ.

ಬಳಕೆಯಾಗದ ನಿಧಿಯ ವಿಷಯ ಮತ್ತು ಹಂಚಿಕೆಗಾಗಿ ಹೊಸ ವ್ಯವಸ್ಥೆಯನ್ನು ರೂಪಿಸುವ ಸರ್ಕಾರದ ಪ್ರಸ್ತಾಪವು ಈ ತಿಂಗಳ ಆರಂಭದಲ್ಲಿ ಪರಿಶಿಷ್ಟ ಜಾತಿಗಳ ಅಭಿವೃದ್ಧಿ ಕ್ರಿಯಾ ಯೋಜನೆಯ (ಡಿಎಪಿಎಸ್‌ಸಿ) ಪರಿಶೀಲನಾ ಸಭೆಯಲ್ಲಿ ಚರ್ಚೆಗೆ ಬಂದಿತು.

ಇದನ್ನೂ ಓದಿ: ‘ನನ್ನನ್ನು ಕಿತ್ತು ಹಾಕಿದರೂ ನಾನು ಮಾತನಾಡುತ್ತೇನೆ’-ರೈತರನ್ನು ಮತ್ತೆ ಬೆಂಬಲಿಸಿದ ಮೇಘಾಲಯ ರಾಜ್ಯಪಾಲ

ಡಿಎಪಿಎಸ್‌ಸಿ ಎಂಬುದು ಸರ್ಕಾರದ ಸಂಸ್ಥೆಯಾಗಿದ್ದು, ಪರಿಶಿಷ್ಟ ಜಾತಿಗಳ (ಎಸ್‌ಸಿ) ಉನ್ನತಿಯನ್ನು ಗುರಿಯಾಗಿಟ್ಟುಕೊಂಡು ಹಲವು ಯೋಜನೆಗಳಿಗಾಗಿ ವಿವಿಧ ಸಚಿವಾಲಯಗಳು ಮತ್ತು ಇಲಾಖೆಗಳಿಗೆ ಹಣವನ್ನು ಹಂಚಲಾಗುತ್ತದೆ.

ಕಳೆದ ನಾಲ್ಕು ವರ್ಷಗಳಲ್ಲಿ, 2017- 18 ರಿಂದ 2020-21 ರವರೆಗೆ ಒಟ್ಟು 2,59,977.40 ಕೋಟಿ ರೂಪಾಯಿ ಹಣವನ್ನು ಡಿಎಪಿಎಸ್‌ಸಿ ಅಡಿಯಲ್ಲಿ ಪರಿಶಿಷ್ಟಜಾತಿ ಕಲ್ಯಾಣಕ್ಕೆ ಮಂಜೂರು ಮಾಡಲಾಗಿದೆ.

ಸರ್ಕಾರಿ ಹಿರಿಯ ಅಧಿಕಾರಿಗಳ ಪ್ರಕಾರ, ಈ ಅವಧಿಯಲ್ಲಿ ಎಂಟು ಸಚಿವಾಲಯಗಳು ಅಥವಾ ಇಲಾಖೆಗಳು ಶೇಕಡಾ 80 ರಷ್ಟು ಹಣವನ್ನು ಬಳಸಿಲ್ಲ.  ಇವುಗಳಲ್ಲಿ ಕೃಷಿ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಮತ್ತು ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯ ಸೇರಿವೆ.

ಹಣ ಹಂಚಿಕೆಯ ಚೌಕಟ್ಟಿನ ಬದಲಾವಣೆಯನ್ನು ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯವು ಪ್ರಸ್ತಾಪಿಸಿದೆ. ಇದನ್ನು “ಪಿಎಂ-ಸೋಶಿಯಲ್ ಇನ್‌ಕ್ಲೂಷನ್ ಮಿಷನ್” (SIM) ಎಂದು  ಹೆಸರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ SIM ಅಡಿಯಲ್ಲಿ, ಶೇಕಡಾ 40 ರಷ್ಟು ಹಣವನ್ನು ಹೆಚ್ಚಿನ ಆದ್ಯತೆಯ ಕ್ಷೇತ್ರಗಳಲ್ಲಿ ಮತ್ತು ಶೇಕಡಾ 60 ರಷ್ಟು ಹಣವನ್ನು ಶರತ್ತುಬದ್ಧ ನಗದು ವರ್ಗಾವಣೆಯ ಮೂಲಕ ನೀಡಬೇಕೆಂದು ಸೂಚಿಸಲಾಗಿದೆ. ಆದರೆ ಈ ಪ್ರಸ್ತಾಪಕ್ಕೆ ಇನ್ನೂ ಅನುಮೋದನೆ ದೊರೆತಿಲ್ಲ ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ: ಬಿಜೆಪಿಗೆ ಮತ ನೀಡಿದರೆ ‘ಜೈ ಸಿಯಾ ರಾಂ’ ಎನ್ನಲು ಸಾಧ್ಯವಿಲ್ಲ: ಮಮತಾ ಬ್ಯಾನರ್ಜಿ

ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯದ ಕಾರ್ಯದರ್ಶಿ ಆರ್. ಸುಬ್ರಹ್ಮಣ್ಯಂ ಅವರು, “ವಿವಿಧ ಸಚಿವಾಲಯಗಳಿಗೆ ನಿಗದಿಪಡಿಸಿದ ಪರಿಶಿಷ್ಟಜಾತಿ ಕಲ್ಯಾಣ ಹಣವನ್ನು ಸಂಪೂರ್ಣವಾಗಿ ಬಳಸಿಕೊಳ್ಳಲಾಗಿದೆಯೆ ಎಂದು ಖಚಿತಪಡಿಸಿಕೊಳ್ಳುವಲ್ಲಿ ಸರ್ಕಾರ ಗಂಭೀರವಾಗಿದೆ ಮತ್ತು ಮುಂದೆ ಉತ್ತಮ ಫಲಿತಾಂಶಗಳನ್ನು ಸಾಧಿಸಬಹುದು” ಎಂದು ಹೇಳಿದ್ದಾರೆ.

ಪರಿಶಿಷ್ಟಜಾತಿಗಳ ಕಲ್ಯಾಣಕ್ಕಾಗಿ ಪ್ರತ್ಯೇಕ ಹಂಚಿಕೆಯ ಪರಿಕಲ್ಪನೆಯನ್ನು ಆರನೇ ಪಂಚವಾರ್ಷಿಕ ಯೋಜನೆಯಲ್ಲಿ ಪರಿಚಯಿಸಲಾಯಿತು. ಇದನ್ನು 1980 ರಿಂದ ಜಾರಿಗೆ ತರಲಾಗಿದೆ. “2009 ರಲ್ಲಿ ನಡೆಸಿದ ಪರಿಶೀಲನೆಯಲ್ಲಿ ಕೇವಲ 17 ಕೇಂದ್ರ ಸಚಿವಾಲಯಗಳು ಇದನ್ನು ಕಾರ್ಯಗತಗೊಳಿಸುತ್ತಿವೆ ಎಂದು ಕಂಡು ಬಂದಿದೆ.

2017 ರಲ್ಲಿ ನೀತಿ ಆಯೋಗದ ವರದಿಯು ಎಸ್‌ಸಿ /ಎಸ್‌ಟಿಗಳಿಗೆ ವಿಶೇಷ ಹಂಚಿಕೆಯನ್ನು ಮುಂದುವರೆಸುವ ಅಗತ್ಯವನ್ನು ಸೂಚಿಸಿತ್ತು. ಇದನ್ನು ಯೋಜನೆಯ ಬಜೆಟ್‌ಗೆ ಮೀಸಲಿಡಲಾಗಿದೆ.

ನಾಲ್ಕು ವರ್ಷಗಳ ಹಂಚಿಕೆಯಲ್ಲಿ 49,722.18 (ಸುಮಾರು 50 ಸಾವಿರ ಕೋಟಿ) ರೂ.ಗಳನ್ನು ಸಚಿವಾಲಯಗಳು / ಇಲಾಖೆಗಳು ಬಳಸದೇ ವಾಪಸ್ ಮಾಡಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.


ಇದನ್ನೂ ಓದಿ: ಹರಿದ ಜೀನ್ಸ್ ಧರಿಸುವುದು ಮಾದಕ ವಸ್ತು ಸೇವನೆಗೂ ಕಾರಣವಾಗುತ್ತದೆ- ಉತ್ತರಾಖಂಡ ಸಿಎಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಲೋಕಸಭೆಯಲ್ಲಿ ಲಡಾಖ್ ಬಿಕ್ಕಟ್ಟಿನ ಬಗ್ಗೆ ಮಾಜಿ ಸೇನಾ ಮುಖ್ಯಸ್ಥರ ಅಪ್ರಕಟಿತ ಆತ್ಮಚರಿತ್ರೆ ಉಲ್ಲೇಖಿಸಿದ ರಾಹುಲ್ ಗಾಂಧಿ: ಸಭೆಯಲ್ಲಿ ತೀವ್ರ ಗದ್ದಲ

ಸೋಮವಾರ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮಾಜಿ ಸೇನಾ ಮುಖ್ಯಸ್ಥ ಎಂಎಂ ನರವಾಣೆ ಅವರ ಆತ್ಮಚರಿತ್ರೆಯಿಂದ ಉಲ್ಲೇಖಿಸಲು ಪ್ರಯತ್ನಿಸಿದ ನಂತರ ಗದ್ದಲ ಭುಗಿಲೆದ್ದಿತು. ರಾಹುಲ್ ಮಾತನಾಡಲು ಪ್ರಾರಂಭಿಸುತ್ತಿದ್ದಂತೆ, ರಕ್ಷಣಾ ಸಚಿವ...

ಪಂಜಾಬ್ ನಿರೀಕ್ಷೆಗಳನ್ನು ಪೂರೈಸುವಲ್ಲಿ ಕೇಂದ್ರ ಬಜೆಟ್ ಮತ್ತೊಮ್ಮೆ ವಿಫಲವಾಗಿದೆ: ಸಿಎಂ ಭಗವಂತ್ ಮಾನ್

ಕೇಂದ್ರ ಬಜೆಟ್ ಮತ್ತೊಮ್ಮೆ ಪಂಜಾಬ್‌ನ ನಿರೀಕ್ಷೆಗಳನ್ನು ಪೂರೈಸುವಲ್ಲಿ ವಿಫಲವಾಗಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ಆಡಳಿತಾರೂಢ ಆಮ್ ಆದ್ಮಿ ಪಕ್ಷದ (ಎಎಪಿ) ಸರ್ಕಾರದ ಸಚಿವರು ಭಾನುವಾರ ಅಭಿಪ್ರಾಯಪಟ್ಟಿದ್ದಾರೆ. ಬಜೆಟ್ ರೈತರಿಗೆ ಯಾವುದೇ...

ರಾಜ್ಯಪಾಲರು ಪೂರ್ಣ ಭಾಷಣ ಓದಿಲ್ಲ, ‘ಜೈ ಸಂವಿಧಾನ’ ಎನ್ನುವುದನ್ನು ಉಲ್ಲೇಖಿಸದೆ ಹೋದರು : ಸಿಎಂ ಸಿದ್ದರಾಮಯ್ಯ

ರಾಜ್ಯಪಾಲರು ಪೂರ್ತಿ ಭಾಷಣ ಓದದೆ ತರಾತುರಿಯಲ್ಲಿ ಹೋದರು. ಭಾಷಣದಲ್ಲಿದ್ದ "ಜೈ ಸಂವಿಧಾನ" ಎನ್ನುವುದನ್ನೂ ಉಲ್ಲೇಖಿಸದೆ ತೆರಳಿದರು. ರಾಷ್ಟ್ರಗೀತೆ ಮುಗಿಯುವವರೆಗೂ ಕಾಯದೆ ಹೋಗಿಬಿಟ್ಟರು. ಇದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಿಜೆಪಿ ಶಾಸಕ...

ಉತ್ತರಾಖಂಡ| ಹಿಂದುತ್ವ ಗುಂಪಿನ ಕಿರುಕುಳದಿಂದ ಮುಸ್ಲಿಂ ಅಂಗಡಿ ಮಾಲೀಕನನ್ನು ರಕ್ಷಿಸಿದ ದೀಪಕ್ ಕುಮಾರ್

ಸ್ಥಳೀಯ ಮುಸ್ಲಿಂ ಅಂಗಡಿ ಮಾಲೀಕನ ವಿರುದ್ಧ ಬಜರಂಗದಳ ಸದಸ್ಯರು ನೀಡುತ್ತಿದ್ದ ಕಿರುಕುಳವನ್ನು ಜಿಮ್ ಮಾಲೀಕ ದೀಪಕ್ ಕುಮಾರ್ ಸ್ಥಳದಲ್ಲೇ ಎದುರಿಸಿದ್ದಾರೆ. ಆಕ್ರೋಶಿತರಾದ ಹಿಂದುತ್ವ ಗುಂಪಿನ ಸದಸ್ಯರು ದೀಪಕ್ ವಿರುದ್ಧವೇ ಪ್ರತಿಭಟನೆ ನಡೆಸಿದ್ದು, ಹಲವಾರ...

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ನಡೆಸುವ ಭಾರತೀಯ ಚುನಾವಣಾ ಆಯೋಗದ (ಇಸಿಐ) ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ...

ದಕ್ಷಿಣ ಪಿನಾಕಿನಿ ಜಲವಿವಾದ : ನ್ಯಾಯಮಂಡಳಿ ಸ್ಥಾಪಿಸಲು ಸುಪ್ರೀಂ ಕೋರ್ಟ್ ಆದೇಶ

ದಕ್ಷಿಣ ಪಿನಾಕಿನಿ (ಪೆನ್ನೈಯಾರ್) ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ನಡುವೆ ಬಾಕಿ ಇರುವ ವಿವಾದಗಳನ್ನು ಪರಿಹರಿಸಲು ನ್ಯಾಯಮಂಡಳಿ ಸ್ಥಾಪಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.2) ನಿರ್ದೇಶನ ನೀಡಿದೆ. ಕೇಂದ್ರ...

ಸಿಜೆ ರಾಯ್ ಸಾವು| ಯಾವುದೇ ಡೆತ್ ನೋಟ್ ಅಥವಾ ಡೈರಿ ಪತ್ತೆಯಾಗಿಲ್ಲ; ಸಾಕ್ಷ್ಯಗಳು ಆತ್ಮಹತ್ಯೆಯನ್ನು ಸೂಚಿಸುತ್ತವೆ: ಎಸ್‌ಐಟಿ

ಬೆಂಗಳೂರು: ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಸಾವಿನ ಕುರಿತು ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ)ಕ್ಕೆ ಅಪರಾಧ ಸ್ಥಳದಲ್ಲಿ ಯಾವುದೇ ಡೆತ್ ನೋಟ್ ಅಥವಾ ಡೈರಿ ಪತ್ತೆಯಾಗಿಲ್ಲ, ಮತ್ತು ಪ್ರಾಥಮಿಕ...

ಕೇಂದ್ರ ಬಜೆಟ್ ಅನ್ನು ‘ಹಂಪ್ಟಿ ಡಂಪ್ಟಿ’ ಎಂದ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ

ಕೇಂದ್ರ ಬಜೆಟ್ ಅನ್ನು 'ಹಂಪ್ಟಿ ಡಂಪ್ಟಿ ಬಜೆಟ್' ಎಂದು ಮುಖ್ಯಮಂತ್ರಿ ಎಂದಿರುವ ಮಮತಾ ಬ್ಯಾನರ್ಜಿ, ಕೇಂದ್ರ ಸರ್ಕಾರ 'ದಿಕ್ಕು ತೋಚದ' ಬಜೆಟ್ ಮಂಡಿಸಿದೆ ಎಂದು ಭಾನುವಾರ ಟೀಕಿಸಿದರು. ರಾಷ್ಟ್ರ ರಾಜಧಾನಿಗೆ ಹೊರಡುವ ಮುನ್ನ, ಮುಂಬರುವ...

‘ತೆರೆಮರೆಯಲ್ಲಿ ಏನೋ ಅನುಮಾನಾಸ್ಪದ ಘಟನೆ ನಡೆದಿದೆ..’; ಅಜಿತ್ ವಿಮಾನ ಅಪಘಾತದ ಕುರಿತು ಅನುಮಾನ ವ್ಯಕ್ತಪಡಿಸಿದ ರಾವತ್

ಜನವರಿ 28, 2026 ರಂದು ಮಹಾರಾಷ್ಟ್ರದ ಬಾರಾಮತಿ ಬಳಿ ನಡೆದ ವಿಮಾನ ಅಪಘಾತದಲ್ಲಿ ಉಪಮುಖ್ಯಮಂತ್ರಿ ಮತ್ತು ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಹಠಾತ್ ಸಾವು ಸಾಕಷ್ಟು ಅನುಮಾನಗಳನ್ನು ಹುಟ್ಟುಹಾಕಿದೆ. ರಾಜಕೀಯ ವಲಯದಿಂದ...

ಸಿಜೆ ರಾಯ್ ಸಾವಿನ ನ್ಯಾಯಾಂಗ ತನಿಖೆ ಆಗ್ರಹಿಸಿದ ಕೇರಳ ಸಿಎಂ ಪಿಣರಾಯಿ ವಿಜಯನ್ : ಲೋಕಸಭೆಯಲ್ಲಿ ಚರ್ಚೆಗೆ ಕಾಂಗ್ರೆಸ್ ಆಗ್ರಹ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿ.ಜೆ ರಾಯ್ ಅವರ ಸಾವಿನ ಬಗ್ಗೆ ನ್ಯಾಯಾಂಗ ತನಿಖೆಗೆ ಆದೇಶಿಸುವಂತೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಭಾನುವಾರ...