Homeಮುಖಪುಟಪರಿಶಿಷ್ಟಜಾತಿ ಕಲ್ಯಾಣಕ್ಕೆ ನಿಗದಿಪಡಿಸಿದ್ದ ಹಣದಲ್ಲಿ 50 ಸಾವಿರ ಕೋಟಿ ರೂ. ಬಳಸದ ಮೋದಿ ಸರ್ಕಾರ!

ಪರಿಶಿಷ್ಟಜಾತಿ ಕಲ್ಯಾಣಕ್ಕೆ ನಿಗದಿಪಡಿಸಿದ್ದ ಹಣದಲ್ಲಿ 50 ಸಾವಿರ ಕೋಟಿ ರೂ. ಬಳಸದ ಮೋದಿ ಸರ್ಕಾರ!

ನಾಲ್ಕು ವರ್ಷಗಳಲ್ಲಿ ಸುಮಾರು 50 ಸಾವಿರ ಕೋಟಿ ರೂ.ಗಳನ್ನು ಸಚಿವಾಲಯಗಳು / ಇಲಾಖೆಗಳು ಬಳಸದೇ ವಾಪಸ್ ಮಾಡಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

- Advertisement -
- Advertisement -

2017-18 ಮತ್ತು 2020-21ರ (ನಾಲ್ಕು ವರ್ಷಗಳ) ನಡುವೆ ಪರಿಶಿಷ್ಟಜಾತಿ (SC) ಸಮುದಾಯದ ಕಲ್ಯಾಣಕ್ಕಾಗಿ ನಿಗದಿಪಡಿಸಿದ ಹಣದ ಶೇಕಡಾ 20 ರಷ್ಟು ಅಂದರೆ ಒಟ್ಟು 50,000 ಕೋಟಿ ರೂಪಾಯಿಗಳನ್ನು ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಚಿವಾಲಯಗಳು ಮತ್ತು ಇಲಾಖೆಗಳು ಬಳಕೆ ಮಾಡಿಲ್ಲ ಎಂದು ದಿ ಪ್ರಿಂಟ್ ವರದಿ ಮಾಡಿದೆ.

ಹೀಗಾಗಿ , ಹಂಚಿಕೆ ನಿಯಂತ್ರಿಸುವ ಚೌಕಟ್ಟಿನಲ್ಲಿ ಬದಲಾವಣೆಯನ್ನು ಪ್ರಸ್ತಾಪಿಸಲು ಮೋದಿ ಸರ್ಕಾರ ನಿರ್ಧರಿಸಿದೆ ಎಂದು ಮೂಲಗಳು ತಿಳಿಸಿವೆ. ಸಚಿವಾಲಯಗಳು ಮತ್ತು ಇಲಾಖೆಗಳಾದ್ಯಂತ ಏಕರೂಪದ ವಿತರಣೆಯನ್ನು ಹೆಚ್ಚಿನ ಆದ್ಯತೆಯ ಪ್ರದೇಶಗಳಲ್ಲಿ ಹೂಡಿಕೆ ಮಾಡಲಾಗುತ್ತದೆ. ಅದರ ಫಲಾನುಭವಿಗಳಿಗೆ ವಾರ್ಷಿಕ 50,000 ರೂ.ಗಳವರೆಗೆ ನಗದು ವರ್ಗಾವಣೆ ಮಾಡುವ ಉದ್ದೇಶ ಹೊಂದಲಾಗಿದೆ.

ಬಳಕೆಯಾಗದ ನಿಧಿಯ ವಿಷಯ ಮತ್ತು ಹಂಚಿಕೆಗಾಗಿ ಹೊಸ ವ್ಯವಸ್ಥೆಯನ್ನು ರೂಪಿಸುವ ಸರ್ಕಾರದ ಪ್ರಸ್ತಾಪವು ಈ ತಿಂಗಳ ಆರಂಭದಲ್ಲಿ ಪರಿಶಿಷ್ಟ ಜಾತಿಗಳ ಅಭಿವೃದ್ಧಿ ಕ್ರಿಯಾ ಯೋಜನೆಯ (ಡಿಎಪಿಎಸ್‌ಸಿ) ಪರಿಶೀಲನಾ ಸಭೆಯಲ್ಲಿ ಚರ್ಚೆಗೆ ಬಂದಿತು.

ಇದನ್ನೂ ಓದಿ: ‘ನನ್ನನ್ನು ಕಿತ್ತು ಹಾಕಿದರೂ ನಾನು ಮಾತನಾಡುತ್ತೇನೆ’-ರೈತರನ್ನು ಮತ್ತೆ ಬೆಂಬಲಿಸಿದ ಮೇಘಾಲಯ ರಾಜ್ಯಪಾಲ

ಡಿಎಪಿಎಸ್‌ಸಿ ಎಂಬುದು ಸರ್ಕಾರದ ಸಂಸ್ಥೆಯಾಗಿದ್ದು, ಪರಿಶಿಷ್ಟ ಜಾತಿಗಳ (ಎಸ್‌ಸಿ) ಉನ್ನತಿಯನ್ನು ಗುರಿಯಾಗಿಟ್ಟುಕೊಂಡು ಹಲವು ಯೋಜನೆಗಳಿಗಾಗಿ ವಿವಿಧ ಸಚಿವಾಲಯಗಳು ಮತ್ತು ಇಲಾಖೆಗಳಿಗೆ ಹಣವನ್ನು ಹಂಚಲಾಗುತ್ತದೆ.

ಕಳೆದ ನಾಲ್ಕು ವರ್ಷಗಳಲ್ಲಿ, 2017- 18 ರಿಂದ 2020-21 ರವರೆಗೆ ಒಟ್ಟು 2,59,977.40 ಕೋಟಿ ರೂಪಾಯಿ ಹಣವನ್ನು ಡಿಎಪಿಎಸ್‌ಸಿ ಅಡಿಯಲ್ಲಿ ಪರಿಶಿಷ್ಟಜಾತಿ ಕಲ್ಯಾಣಕ್ಕೆ ಮಂಜೂರು ಮಾಡಲಾಗಿದೆ.

ಸರ್ಕಾರಿ ಹಿರಿಯ ಅಧಿಕಾರಿಗಳ ಪ್ರಕಾರ, ಈ ಅವಧಿಯಲ್ಲಿ ಎಂಟು ಸಚಿವಾಲಯಗಳು ಅಥವಾ ಇಲಾಖೆಗಳು ಶೇಕಡಾ 80 ರಷ್ಟು ಹಣವನ್ನು ಬಳಸಿಲ್ಲ.  ಇವುಗಳಲ್ಲಿ ಕೃಷಿ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಮತ್ತು ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯ ಸೇರಿವೆ.

ಹಣ ಹಂಚಿಕೆಯ ಚೌಕಟ್ಟಿನ ಬದಲಾವಣೆಯನ್ನು ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯವು ಪ್ರಸ್ತಾಪಿಸಿದೆ. ಇದನ್ನು “ಪಿಎಂ-ಸೋಶಿಯಲ್ ಇನ್‌ಕ್ಲೂಷನ್ ಮಿಷನ್” (SIM) ಎಂದು  ಹೆಸರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ SIM ಅಡಿಯಲ್ಲಿ, ಶೇಕಡಾ 40 ರಷ್ಟು ಹಣವನ್ನು ಹೆಚ್ಚಿನ ಆದ್ಯತೆಯ ಕ್ಷೇತ್ರಗಳಲ್ಲಿ ಮತ್ತು ಶೇಕಡಾ 60 ರಷ್ಟು ಹಣವನ್ನು ಶರತ್ತುಬದ್ಧ ನಗದು ವರ್ಗಾವಣೆಯ ಮೂಲಕ ನೀಡಬೇಕೆಂದು ಸೂಚಿಸಲಾಗಿದೆ. ಆದರೆ ಈ ಪ್ರಸ್ತಾಪಕ್ಕೆ ಇನ್ನೂ ಅನುಮೋದನೆ ದೊರೆತಿಲ್ಲ ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ: ಬಿಜೆಪಿಗೆ ಮತ ನೀಡಿದರೆ ‘ಜೈ ಸಿಯಾ ರಾಂ’ ಎನ್ನಲು ಸಾಧ್ಯವಿಲ್ಲ: ಮಮತಾ ಬ್ಯಾನರ್ಜಿ

ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯದ ಕಾರ್ಯದರ್ಶಿ ಆರ್. ಸುಬ್ರಹ್ಮಣ್ಯಂ ಅವರು, “ವಿವಿಧ ಸಚಿವಾಲಯಗಳಿಗೆ ನಿಗದಿಪಡಿಸಿದ ಪರಿಶಿಷ್ಟಜಾತಿ ಕಲ್ಯಾಣ ಹಣವನ್ನು ಸಂಪೂರ್ಣವಾಗಿ ಬಳಸಿಕೊಳ್ಳಲಾಗಿದೆಯೆ ಎಂದು ಖಚಿತಪಡಿಸಿಕೊಳ್ಳುವಲ್ಲಿ ಸರ್ಕಾರ ಗಂಭೀರವಾಗಿದೆ ಮತ್ತು ಮುಂದೆ ಉತ್ತಮ ಫಲಿತಾಂಶಗಳನ್ನು ಸಾಧಿಸಬಹುದು” ಎಂದು ಹೇಳಿದ್ದಾರೆ.

ಪರಿಶಿಷ್ಟಜಾತಿಗಳ ಕಲ್ಯಾಣಕ್ಕಾಗಿ ಪ್ರತ್ಯೇಕ ಹಂಚಿಕೆಯ ಪರಿಕಲ್ಪನೆಯನ್ನು ಆರನೇ ಪಂಚವಾರ್ಷಿಕ ಯೋಜನೆಯಲ್ಲಿ ಪರಿಚಯಿಸಲಾಯಿತು. ಇದನ್ನು 1980 ರಿಂದ ಜಾರಿಗೆ ತರಲಾಗಿದೆ. “2009 ರಲ್ಲಿ ನಡೆಸಿದ ಪರಿಶೀಲನೆಯಲ್ಲಿ ಕೇವಲ 17 ಕೇಂದ್ರ ಸಚಿವಾಲಯಗಳು ಇದನ್ನು ಕಾರ್ಯಗತಗೊಳಿಸುತ್ತಿವೆ ಎಂದು ಕಂಡು ಬಂದಿದೆ.

2017 ರಲ್ಲಿ ನೀತಿ ಆಯೋಗದ ವರದಿಯು ಎಸ್‌ಸಿ /ಎಸ್‌ಟಿಗಳಿಗೆ ವಿಶೇಷ ಹಂಚಿಕೆಯನ್ನು ಮುಂದುವರೆಸುವ ಅಗತ್ಯವನ್ನು ಸೂಚಿಸಿತ್ತು. ಇದನ್ನು ಯೋಜನೆಯ ಬಜೆಟ್‌ಗೆ ಮೀಸಲಿಡಲಾಗಿದೆ.

ನಾಲ್ಕು ವರ್ಷಗಳ ಹಂಚಿಕೆಯಲ್ಲಿ 49,722.18 (ಸುಮಾರು 50 ಸಾವಿರ ಕೋಟಿ) ರೂ.ಗಳನ್ನು ಸಚಿವಾಲಯಗಳು / ಇಲಾಖೆಗಳು ಬಳಸದೇ ವಾಪಸ್ ಮಾಡಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.


ಇದನ್ನೂ ಓದಿ: ಹರಿದ ಜೀನ್ಸ್ ಧರಿಸುವುದು ಮಾದಕ ವಸ್ತು ಸೇವನೆಗೂ ಕಾರಣವಾಗುತ್ತದೆ- ಉತ್ತರಾಖಂಡ ಸಿಎಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...