Homeಮುಖಪುಟಪರಿಶಿಷ್ಟಜಾತಿ ಕಲ್ಯಾಣಕ್ಕೆ ನಿಗದಿಪಡಿಸಿದ್ದ ಹಣದಲ್ಲಿ 50 ಸಾವಿರ ಕೋಟಿ ರೂ. ಬಳಸದ ಮೋದಿ ಸರ್ಕಾರ!

ಪರಿಶಿಷ್ಟಜಾತಿ ಕಲ್ಯಾಣಕ್ಕೆ ನಿಗದಿಪಡಿಸಿದ್ದ ಹಣದಲ್ಲಿ 50 ಸಾವಿರ ಕೋಟಿ ರೂ. ಬಳಸದ ಮೋದಿ ಸರ್ಕಾರ!

ನಾಲ್ಕು ವರ್ಷಗಳಲ್ಲಿ ಸುಮಾರು 50 ಸಾವಿರ ಕೋಟಿ ರೂ.ಗಳನ್ನು ಸಚಿವಾಲಯಗಳು / ಇಲಾಖೆಗಳು ಬಳಸದೇ ವಾಪಸ್ ಮಾಡಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

- Advertisement -
- Advertisement -

2017-18 ಮತ್ತು 2020-21ರ (ನಾಲ್ಕು ವರ್ಷಗಳ) ನಡುವೆ ಪರಿಶಿಷ್ಟಜಾತಿ (SC) ಸಮುದಾಯದ ಕಲ್ಯಾಣಕ್ಕಾಗಿ ನಿಗದಿಪಡಿಸಿದ ಹಣದ ಶೇಕಡಾ 20 ರಷ್ಟು ಅಂದರೆ ಒಟ್ಟು 50,000 ಕೋಟಿ ರೂಪಾಯಿಗಳನ್ನು ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಚಿವಾಲಯಗಳು ಮತ್ತು ಇಲಾಖೆಗಳು ಬಳಕೆ ಮಾಡಿಲ್ಲ ಎಂದು ದಿ ಪ್ರಿಂಟ್ ವರದಿ ಮಾಡಿದೆ.

ಹೀಗಾಗಿ , ಹಂಚಿಕೆ ನಿಯಂತ್ರಿಸುವ ಚೌಕಟ್ಟಿನಲ್ಲಿ ಬದಲಾವಣೆಯನ್ನು ಪ್ರಸ್ತಾಪಿಸಲು ಮೋದಿ ಸರ್ಕಾರ ನಿರ್ಧರಿಸಿದೆ ಎಂದು ಮೂಲಗಳು ತಿಳಿಸಿವೆ. ಸಚಿವಾಲಯಗಳು ಮತ್ತು ಇಲಾಖೆಗಳಾದ್ಯಂತ ಏಕರೂಪದ ವಿತರಣೆಯನ್ನು ಹೆಚ್ಚಿನ ಆದ್ಯತೆಯ ಪ್ರದೇಶಗಳಲ್ಲಿ ಹೂಡಿಕೆ ಮಾಡಲಾಗುತ್ತದೆ. ಅದರ ಫಲಾನುಭವಿಗಳಿಗೆ ವಾರ್ಷಿಕ 50,000 ರೂ.ಗಳವರೆಗೆ ನಗದು ವರ್ಗಾವಣೆ ಮಾಡುವ ಉದ್ದೇಶ ಹೊಂದಲಾಗಿದೆ.

ಬಳಕೆಯಾಗದ ನಿಧಿಯ ವಿಷಯ ಮತ್ತು ಹಂಚಿಕೆಗಾಗಿ ಹೊಸ ವ್ಯವಸ್ಥೆಯನ್ನು ರೂಪಿಸುವ ಸರ್ಕಾರದ ಪ್ರಸ್ತಾಪವು ಈ ತಿಂಗಳ ಆರಂಭದಲ್ಲಿ ಪರಿಶಿಷ್ಟ ಜಾತಿಗಳ ಅಭಿವೃದ್ಧಿ ಕ್ರಿಯಾ ಯೋಜನೆಯ (ಡಿಎಪಿಎಸ್‌ಸಿ) ಪರಿಶೀಲನಾ ಸಭೆಯಲ್ಲಿ ಚರ್ಚೆಗೆ ಬಂದಿತು.

ಇದನ್ನೂ ಓದಿ: ‘ನನ್ನನ್ನು ಕಿತ್ತು ಹಾಕಿದರೂ ನಾನು ಮಾತನಾಡುತ್ತೇನೆ’-ರೈತರನ್ನು ಮತ್ತೆ ಬೆಂಬಲಿಸಿದ ಮೇಘಾಲಯ ರಾಜ್ಯಪಾಲ

ಡಿಎಪಿಎಸ್‌ಸಿ ಎಂಬುದು ಸರ್ಕಾರದ ಸಂಸ್ಥೆಯಾಗಿದ್ದು, ಪರಿಶಿಷ್ಟ ಜಾತಿಗಳ (ಎಸ್‌ಸಿ) ಉನ್ನತಿಯನ್ನು ಗುರಿಯಾಗಿಟ್ಟುಕೊಂಡು ಹಲವು ಯೋಜನೆಗಳಿಗಾಗಿ ವಿವಿಧ ಸಚಿವಾಲಯಗಳು ಮತ್ತು ಇಲಾಖೆಗಳಿಗೆ ಹಣವನ್ನು ಹಂಚಲಾಗುತ್ತದೆ.

ಕಳೆದ ನಾಲ್ಕು ವರ್ಷಗಳಲ್ಲಿ, 2017- 18 ರಿಂದ 2020-21 ರವರೆಗೆ ಒಟ್ಟು 2,59,977.40 ಕೋಟಿ ರೂಪಾಯಿ ಹಣವನ್ನು ಡಿಎಪಿಎಸ್‌ಸಿ ಅಡಿಯಲ್ಲಿ ಪರಿಶಿಷ್ಟಜಾತಿ ಕಲ್ಯಾಣಕ್ಕೆ ಮಂಜೂರು ಮಾಡಲಾಗಿದೆ.

ಸರ್ಕಾರಿ ಹಿರಿಯ ಅಧಿಕಾರಿಗಳ ಪ್ರಕಾರ, ಈ ಅವಧಿಯಲ್ಲಿ ಎಂಟು ಸಚಿವಾಲಯಗಳು ಅಥವಾ ಇಲಾಖೆಗಳು ಶೇಕಡಾ 80 ರಷ್ಟು ಹಣವನ್ನು ಬಳಸಿಲ್ಲ.  ಇವುಗಳಲ್ಲಿ ಕೃಷಿ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಮತ್ತು ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯ ಸೇರಿವೆ.

ಹಣ ಹಂಚಿಕೆಯ ಚೌಕಟ್ಟಿನ ಬದಲಾವಣೆಯನ್ನು ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯವು ಪ್ರಸ್ತಾಪಿಸಿದೆ. ಇದನ್ನು “ಪಿಎಂ-ಸೋಶಿಯಲ್ ಇನ್‌ಕ್ಲೂಷನ್ ಮಿಷನ್” (SIM) ಎಂದು  ಹೆಸರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ SIM ಅಡಿಯಲ್ಲಿ, ಶೇಕಡಾ 40 ರಷ್ಟು ಹಣವನ್ನು ಹೆಚ್ಚಿನ ಆದ್ಯತೆಯ ಕ್ಷೇತ್ರಗಳಲ್ಲಿ ಮತ್ತು ಶೇಕಡಾ 60 ರಷ್ಟು ಹಣವನ್ನು ಶರತ್ತುಬದ್ಧ ನಗದು ವರ್ಗಾವಣೆಯ ಮೂಲಕ ನೀಡಬೇಕೆಂದು ಸೂಚಿಸಲಾಗಿದೆ. ಆದರೆ ಈ ಪ್ರಸ್ತಾಪಕ್ಕೆ ಇನ್ನೂ ಅನುಮೋದನೆ ದೊರೆತಿಲ್ಲ ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ: ಬಿಜೆಪಿಗೆ ಮತ ನೀಡಿದರೆ ‘ಜೈ ಸಿಯಾ ರಾಂ’ ಎನ್ನಲು ಸಾಧ್ಯವಿಲ್ಲ: ಮಮತಾ ಬ್ಯಾನರ್ಜಿ

ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯದ ಕಾರ್ಯದರ್ಶಿ ಆರ್. ಸುಬ್ರಹ್ಮಣ್ಯಂ ಅವರು, “ವಿವಿಧ ಸಚಿವಾಲಯಗಳಿಗೆ ನಿಗದಿಪಡಿಸಿದ ಪರಿಶಿಷ್ಟಜಾತಿ ಕಲ್ಯಾಣ ಹಣವನ್ನು ಸಂಪೂರ್ಣವಾಗಿ ಬಳಸಿಕೊಳ್ಳಲಾಗಿದೆಯೆ ಎಂದು ಖಚಿತಪಡಿಸಿಕೊಳ್ಳುವಲ್ಲಿ ಸರ್ಕಾರ ಗಂಭೀರವಾಗಿದೆ ಮತ್ತು ಮುಂದೆ ಉತ್ತಮ ಫಲಿತಾಂಶಗಳನ್ನು ಸಾಧಿಸಬಹುದು” ಎಂದು ಹೇಳಿದ್ದಾರೆ.

ಪರಿಶಿಷ್ಟಜಾತಿಗಳ ಕಲ್ಯಾಣಕ್ಕಾಗಿ ಪ್ರತ್ಯೇಕ ಹಂಚಿಕೆಯ ಪರಿಕಲ್ಪನೆಯನ್ನು ಆರನೇ ಪಂಚವಾರ್ಷಿಕ ಯೋಜನೆಯಲ್ಲಿ ಪರಿಚಯಿಸಲಾಯಿತು. ಇದನ್ನು 1980 ರಿಂದ ಜಾರಿಗೆ ತರಲಾಗಿದೆ. “2009 ರಲ್ಲಿ ನಡೆಸಿದ ಪರಿಶೀಲನೆಯಲ್ಲಿ ಕೇವಲ 17 ಕೇಂದ್ರ ಸಚಿವಾಲಯಗಳು ಇದನ್ನು ಕಾರ್ಯಗತಗೊಳಿಸುತ್ತಿವೆ ಎಂದು ಕಂಡು ಬಂದಿದೆ.

2017 ರಲ್ಲಿ ನೀತಿ ಆಯೋಗದ ವರದಿಯು ಎಸ್‌ಸಿ /ಎಸ್‌ಟಿಗಳಿಗೆ ವಿಶೇಷ ಹಂಚಿಕೆಯನ್ನು ಮುಂದುವರೆಸುವ ಅಗತ್ಯವನ್ನು ಸೂಚಿಸಿತ್ತು. ಇದನ್ನು ಯೋಜನೆಯ ಬಜೆಟ್‌ಗೆ ಮೀಸಲಿಡಲಾಗಿದೆ.

ನಾಲ್ಕು ವರ್ಷಗಳ ಹಂಚಿಕೆಯಲ್ಲಿ 49,722.18 (ಸುಮಾರು 50 ಸಾವಿರ ಕೋಟಿ) ರೂ.ಗಳನ್ನು ಸಚಿವಾಲಯಗಳು / ಇಲಾಖೆಗಳು ಬಳಸದೇ ವಾಪಸ್ ಮಾಡಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.


ಇದನ್ನೂ ಓದಿ: ಹರಿದ ಜೀನ್ಸ್ ಧರಿಸುವುದು ಮಾದಕ ವಸ್ತು ಸೇವನೆಗೂ ಕಾರಣವಾಗುತ್ತದೆ- ಉತ್ತರಾಖಂಡ ಸಿಎಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...