ಹೀಗಿದೆ ಆರೆಸೆಸ್

- Advertisement -
- Advertisement -

ಆರ್.ಎಸ್.ಎಸ್. ಬೇಡಿಕೆ: “ಭಾರತೀಯ ಸಂವಿಧಾನದ ಸ್ಥಾನದಲ್ಲಿ ಮನುಸ್ಮøತಿಯ ಅನುಷ್ಠಾನ” – ಹಾಗಾದರೆ ದಲಿತರು ಮತ್ತು ಮಹಿಳೆಯರ ಗತಿಯೇನು? ಭಾರತ ಸಂವಿಧಾನದ ಮೇಲಿರುವ ಆರ್.ಎಸ್.ಎಸ್. ನಿಷ್ಠೆಯನ್ನು ಗೋಲ್ವಾಲ್ಕರ್ ಅವರ “ಚಿಂತನಾಗುಚ್ಛ” ಕೃತಿಯಲ್ಲಿನ ವಿವರ ಹೇಳಿಕೆಗಳಿಂದ ಸ್ಪಷ್ಟವಾಗಿ ತಿಳಿಯಬಹುದಾಗಿದೆ. ಈ ಕೃತಿ ಕೇವಲ ಆಯ್ದ ಲೇಖನಗಳ ಸಂಕಲನವಷ್ಟೇ ಅಲ್ಲ, ಬದಲಿಗೆ ಆರ್.ಎಸ್.ಎಸ್. ಸ್ವಯಂಸೇವಕರ ಪಾಲಿಗೆ ಒಂದು ಪವಿತ್ರ ಗ್ರಂಥ ಕೂಡ.
“ನಮ್ಮ ಸಂವಿಧಾನ ವಿವಿಧ ಪಾಶ್ಚಿಮಾತ್ಯ ರಾಷ್ಟ್ರಗಳ ಸಂವಿಧಾನಗಳಿಂದ ಆಯ್ದುಕೊಂಡ ವಿವಿಧ ಲೇಖನಗಳು ಮತ್ತು ಅನುಚ್ಛೇದದ ತುಣುಕುಗಳ ಸಂಚಯಿತ ರೂಪ. ಇದು ನಮ್ಮದೆಂದು ಹೇಳಿಕೊಳ್ಳಲು ನಿಚ್ಚಳವಾದ ಯಾವ ಹೆಗ್ಗಳಿಕೆಯೂ ಇಲ್ಲ. ನಮ್ಮ ರಾಷ್ಟ್ರ ಬದುಕಿನ ಧ್ಯೇಯವನ್ನಾಗಲಿ ಅಥವಾ ನಮ್ಮ ಬದುಕಿಗಿರುವ ಮಾರ್ಗದರ್ಶಿ ತತ್ತ್ವವನ್ನಾಗಲಿ ತೆರೆದು ತೋರುವ ಯಾವ ಮಾರ್ಗದರ್ಶಕ ಸಿದ್ಧಾಂತಗಳ ಒಂದು ಪದವಾದರೂ ಅದರಲ್ಲಿದೆಯೆ?
ವಾಸ್ತವ ಸಂಗತಿಯೆಂದರೆ, ಭಾರತ ಸಂವಿಧಾನದ ಸ್ಥಾನದಲ್ಲಿ ಮನುಸ್ಮøತಿ ಅಥವಾ ಮನುಸಂಹಿತೆ ಅಥವಾ ಮನುಧರ್ಮಶಾಸ್ತ್ರವಿರಬೇಕೆಂದು ಆರ್.ಎಸ್.ಎಸ್. ಅಪೇಕ್ಷಿಸಿತ್ತು. ಎಲ್ಲರೂ ತಿಳಿದಿರುವಂತೆ ಶೂದ್ರರು, ದಲಿತರು ಮತ್ತು ಮಹಿಳೆಯರ ಕುರಿತಂತೆ, ಅತ್ಯಂತ ಅವಹೇಳನಕಾರಿ ಮತ್ತು ಅಮಾನುಷ ಪ್ರಸ್ತಾಪಗಳ ಉಲ್ಲೇಖವಿರುವ ಮನುಸ್ಮøತಿ ಅವರ ಅಪೇಕ್ಷೆಯ ಸಂವಿಧಾನವಾಗಿತ್ತು. ಸಂಸದೀಯ ಸಭೆ, ಸಂವಿಧಾನ ರಚನೆ ಮತ್ತು ಮಂಡನೆಯ ಕಾರ್ಯವನ್ನು ಅಂತಿಮಗೊಳಿಸಿದಾಗ, ಆರ್.ಎಸ್.ಎಸ್ ತನ್ನ ಅಸಮಾಧಾನ ಮತ್ತು ಬೇಸರವನ್ನು ವ್ಯಕ್ತಪಡಿಸಿತು. ನವೆಂಬರ್ 30, 1949ರ ಆರ್ಗನೈಸರ್ ಪತ್ರಿಕೆಯ ಸಂಪಾದಕೀಯದಲ್ಲಿ ತನ್ನ ಆಕ್ಷೇಪವನ್ನು ಸ್ಪಷ್ಟವಾಗಿ ತಿಳಿಸಿದೆ.
“ಆದರೆ ನಮ್ಮ ಸಂವಿಧಾನದಲ್ಲಿ, ಪ್ರಾಕ್ತನ ಭಾರತದಲ್ಲಿ ಆಗಿರಬಹುದಾದ ಒಂದು ಅನನ್ಯ ಸಂವಿಧಾನಾತ್ಮಕ ಬೆಳವಣಿಗೆಯ ವಿವರಗಳಾಗಲಿ, ಉಲ್ಲೇಖಗಳಾಗಲಿ ಲವಲೇಶವಿಲ್ಲ. ಸ್ಪಾರ್ಟ್ ದ ಲೈಕರ್ಗಸ್ (820 ಬಿ.ಸಿ) ಅಥವಾ ಪರ್ಷಿಯಾದ ಸೊಲೊನ್ (640 ಬಿ.ಸಿ) ಅವರುಗಳಿಗೂ ಪೂರ್ವದಲ್ಲೇ ಮನುಸ್ಮøತಿ ರಚಿತವಾಗಿತ್ತು. ಇಂದಿನವರೆಗೂ ಮನುಸ್ಮøತಿಯಲ್ಲಿ ಪ್ರತಿಪಾದಿತವಾಗಿರುವ ವಿಧಿ ನಿಬಂಧನೆಗಳು ಜಗತ್ತಿನ ಮೆಚ್ಚುಗೆಗೆ ಪಾತ್ರವಾಗಿವೆ ಹಾಗೂ ಸ್ವಯಂಪ್ರೇರಿತ ನಿಷ್ಠೆ ಮತ್ತು ಅನುಸರಣೀಯ ಗುಣವನ್ನು ಪ್ರೇರೇಪಿಸಿದೆ. ಆದರೆ ಈ ಯಾವ ವಿಚಾರವು ನಮ್ಮ ಸಂವಿಧಾನದ ಪಂಡಿತೋತ್ತಮರಿಗೆ ಅರ್ಥವಾಗುವುದಿಲ್ಲ. ಹಾಗೆ ಅವರಿಗೆ ಮುಖ್ಯವೂ ಅಲ್ಲ”
ಸ್ವತಂತ್ರ ಭಾರತದಲ್ಲಿ ಮನುಧರ್ಮಶಾಸ್ತ್ರವನ್ನು ಅಂಗೀಕರಿಸಿ, ಅಧಿಕೃತವಾಗಿ ಘೋಷಿಸಬೇಕೆಂದು ಆರ್.ಎಸ್.ಎಸ್. ಒತ್ತಾಯಿಸುತ್ತಿರುವುದಕ್ಕೆ ನಿಜವಾದ ಕಾರಣವೆಂದರೆ, ತಮ್ಮ ಮಾರ್ಗದರ್ಶಿ, ತತ್ವಜಿಜ್ಞಾಸು ಮತ್ತು ವಿಚಾರ ಉದ್ದೀಪಕರಾಗಿರುವ ವಿ.ಡಿ.ಸಾವರ್ಕರ್ ಅವರನ್ನು ನಿಷ್ಠೆಯಿಂದ ಹಿಂಬಾಲಿಸುತ್ತಿರುವುದು. ಸಾವರ್ಕರರ ಮೇರೆಗೆ ;
“ನಮ್ಮ ಹಿಂದು ರಾಷ್ಟ್ರದ ಪವಿತ್ರ ಕೃತಿಗಳಾದ ವೇದಗಳ ಅನಂತರ ಅತ್ಯಂತ ಪೂಜ್ಯನೀಯ ಮತಧರ್ಮಶಾಸ್ತ್ರವೆಂದರೆ ‘ಮನುಸ್ಮøತಿ’ ಮಾತ್ರ. ಅಲ್ಲದೆ ಪ್ರಾಚೀನ ಕಾಲದಿಂದಲೂ ನಮ್ಮ ಸಂಸ್ಕøತಿ, ಸಂಪ್ರದಾಯ, ಚಿಂತನೆ ಮತ್ತು ಆಚರಣೆಯ ಮೂಲ ತಳಹದಿ ‘ಮನುಸ್ಮøತಿ’ಯಾಗಿದೆ. ಅಧ್ಯಾತ್ಮ ಮತ್ತು ದೈವಿಕತೆ ಕೇಂದ್ರಿತ ನಮ್ಮ ದೇಶ ಸಾಧಿಸಿರುವ ಮುನ್ನಡೆಯನ್ನು ಈ ಕೃತಿ ಸಂಕೇತರೂಪದಲ್ಲಿ ತನ್ನೊಡಲಲ್ಲಿ ಇರಿಸಿಕೊಂಡಿದೆ. ಇಂದಿಗೂ ಕೋಟ್ಯಾಂತರ ಮಂದಿ ಹಿಂದುಗಳು ತಮ್ಮ ಬದುಕಿನಲ್ಲಿ ಮತ್ತು ಆಚರಣೆಗಳಲ್ಲಿ ಪಾಲಿಸುತ್ತಿರುವ ವಿಧಿನಿಯಮಗಳು ‘ಮನುಸ್ಮøತಿ’ ಯನ್ನು ಆಧರಿಸಿವೆ. ಇಂದು ಹಿಂದು ಮತೀಯರ ಕಾನೂನು ಎಂದರೆ ಅದು ‘ಮನುಸ್ಮøತಿ’ ಮಾತ್ರ
ಆರ್.ಎಸ್.ಎಸ್. ದೃಷ್ಟಿಯಲ್ಲಿ ಹಿಂದು ರಾಷ್ಟ್ರದ ಸಮಾನಾರ್ಥಕ ಪದವೆಂದರೆ ‘ಜಾತೀಯತೆ’:
ಆರ್.ಎಸ್.ಎಸ್. ಪ್ರಧಾನರ ಶ್ರದ್ಧೆ, ನಂಬಿಕೆಯಿರುವುದು ಮನುಸ್ಮøತಿಯಲ್ಲಿ. ಆದ್ದರಿಂದ ಸಹಜವಾಗಿಯೆ ಜಾತೀಯತೆಯನ್ನು ನಂಬುವ ಕಡೆಗೆ ಅವರನ್ನು ಕರೆದೊಯ್ಯಿತು. ಆರ್.ಎಸ್.ಎಸ್.ಗೆ ಜಾತೀಯತೆಯೇ ಹಿಂದು ಧರ್ಮದ ಮತ್ತು ಹಿಂದು ರಾಷ್ಟ್ರೀಯತೆಯ ಅಂತಃಸ್ಸಾರ. ಮನು ಮೇರೆಗೆ ಹಿಂದು ಧರ್ಮೀಯರು ಮತ್ತಾರೂ ಅಲ್ಲ, ಆದರೆ ;
“ಹಿಂದು ಧರ್ಮೀಯರು ವಿರಾಟ್ ಪುರುಷ ಸಂಭೂತರು, ಆ ದೈವೀಶಕ್ತಿಯ ಮಾನುಷಾವತಾರಿಗಳು, ‘ಹಿಂದು’ ಶಬ್ದದ ಬಳಕೆ ಮಾಡದಿದ್ದರೂ, ‘ಪುರುಷ ಸೂಕ್ತ’ ದಲ್ಲಿ ವರ್ಣಿತವಾಗಿರುವ ದೈವೀಶಕ್ತಿಯ ವಿವರಗಳಲ್ಲಿ ಸ್ಪಷ್ಟವಾಗಿ ವ್ಯಕ್ತವಾಗಿದೆ; ಸೂರ್ಯಚಂದ್ರರು ವಿರಾಟ್ ಪುರುಷನ ಎರಡು ಕಣ್ಣುಗಳು, ಅವನ ಹೊಕ್ಕಳು ಮೂಲದಿಂದಲೇ ತಾರೆಗಳು ಮತ್ತು ಗಗನ ಸೃಷ್ಟಿತವಾಗಿದೆ. ಹಾಗು ಅವನ ಶಿರವೇ ಬಾ ್ರಹ್ಮಣರು, ತೋಳುಗಳೇ ಕ್ಷತ್ರಿಯರು, ವೈಶ್ಯರು ಅವನೆರಡು ಊರುಗಳು ಮತ್ತು ಪಾದಗಳೇ ಶೂದ್ರರು. ಇಂಥ ಪುರಾಣ ರೂಪಿಕೆಯ ಅರ್ಥವೆಂದರೆ; ಚಾತುರ್ವಣ್ರ್ಯ ವ್ಯವಸ್ಥೆಯಿರುವ ಸಮುದಾಯವೇ ಹಿಂದು ಮತೀಯರು – ನಮ್ಮ ದೇವತೆಗಳು ಹಾಗು ವಿರಾಟ್ ಪುರುಷನ ಶ್ರೇಷ್ಠಾಂಗವಾದ ಶಿರದ ಉತ್ಕøಷ್ಟ ದರ್ಶನವೇ ನಮ್ಮ ‘ರಾಷ್ಟ್ರ’ ಪರಿಕಲ್ಪನೆಯ ಆಂತರ್ಯದ ತಿರುಳು. ಈ ಅಂತಃಸತ್ತ್ವ ನಮ್ಮ ಚಿಂತನಾಕ್ರಮವನ್ನು ವಿಸ್ತರಿಸಿದೆ ಹಾಗು ನಮ್ಮ ಸಾಂಸ್ಕøತಿಕ ಪರಂಪರೆಯ ವಿವಿಧ ಅನನ್ಯ ಪರಿಕಲ್ಪನೆಗಳ ಆವಿರ್ಭಾವಕ್ಕೆ ಕಾರಣವಾಗಿದೆ”.
ಆರ್.ಎಸ್.ಎಸ್. ಮತ್ತು ಹಿಂದುತ್ವದ ಸಂಘಟನೆಗಳು ಮನುಸಂಹಿತೆಯನ್ನು ಜಾರಿಗೊಳಿಸುವ ಮೂಲಕ ಯಾವ ಬಗೆಯ ನಾಗರಿಕತೆಯನ್ನು ಕಟ್ಟಲು ಹೊರಟಿದ್ದಾರೆ ಎಂಬುದನ್ನು ಕೂಲಂಕಷವಾಗಿ ತಿಳಿಯಬೇಕಾದರೆ, ಮನುತತ್ತ್ವ ಶೂದ್ರರು ಮತ್ತು ಮಹಿಳೆಯರನ್ನು ಕುರಿತಂತೆ ರೂಪಿಸಿರುವ ನ್ಯಾಯವಿಧಿಗಳತ್ತ ಒಮ್ಮೆ ಅವಲೋಕಿಸಬೇಕಾಗುತ್ತದೆ. ಅಮಾನವೀಯವೂ ಮತ್ತು ಭ್ರಷ್ಟವೂ ಆಗಿರುವ ಕೆಲವು ನಿಯಮಗಳನ್ನು ಇಲ್ಲಿ ಉಲ್ಲೇಖಿಸಲಾಗಿದೆ. ಇವುಗಳೇ ತಮ್ಮ ಅರ್ಥವನ್ನು ಸ್ವಯಂ ನಿರ್ವಚಿಸಿಕೊಳ್ಳುತ್ತವೆ.
ಪ್ರಜಾಪ್ರಭುತ್ವದ ವಿರುದ್ಧ :
ಪ್ರಜಾಪ್ರಭುತ್ವದ ತಾತ್ತ್ವಿಕತೆಗೆ ತದ್ವಿರುದ್ಧವಾದ ನಿರಂಕುಶ ಆಳ್ವಿಕೆಯ ಅಡಿಯಲ್ಲಿ ಭಾರತ ತನ್ನ ಆಡಳಿತ ನಡೆಸಬೇಕೆಂದು ಆರ್.ಎಸ್.ಎಸ್. ನಿರಂತರವಾಗಿ ಆಗ್ರಹಿಸುತ್ತಲೇ ಬಂದಿದೆ. 1940 ರಂದು ಆರ್.ಎಸ್.ಎಸ್. ಕೇಂದ್ರಸ್ಥಾನವಾಗಿರುವ ನಾಗಪುರದ ರೇಷಮ್ ಭಾಗ್‍ನಲ್ಲಿ ಜರುಗಿದ ರಾಷ್ಟ್ರಮಟ್ಟದ ಆರ್‍ಎಸ್‍ಎಸ್‍ನ ಸುಮಾರು 1350 ಮಂದಿ ಉನ್ನತ ಸ್ತರದ ಸಂಘಟನೆಯ ಸ್ವಯಂಸೇವಕ ಪದವೃಂದವನ್ನುದ್ದೇಶಿಸಿ ಮಾತಾಡುತ್ತಾ ಗೋಲ್ವಾಲ್ಕರ್ ಮಹತ್ತರ ಹೇಳಿಕೆಯೊಂದನ್ನು ಘೋಷಿಸಿದರು ;
“ಒಂದು ಧ್ವಜ, ಒಬ್ಬ ನಾಯಕ ಮತ್ತು ಒಂದು ಸಿದ್ಧಾಂತ ಎಂಬ ನಿಲುವಿನಿಂದ ಆರ್.ಎಸ್.ಎಸ್. ಸ್ಫೂರ್ತಿ ಪಡೆದಿದೆ. ಈ ಸ್ಫೂರ್ತಿ ಜ್ಯೋತಿಯೇ ನಮ್ಮ ಮಹಾನ್ ನೆಲದ ಮೂಲೆಮೂಲೆಯಲ್ಲೂ ಹಿಂದುತ್ವದ ದೀಪ ಹಚ್ಚಿ ದೇದಿಪ್ಯಮಾನಗೊಳಿಸುತ್ತಿದೆ”.
ಒಂದು ಧ್ವಜ, ಒಬ್ಬ ನಾಯಕ ಮತ್ತು ಒಂದು ಸಿದ್ಧಾಂತವೆಂಬ ಈ ಘೋಷಣೆ, ಯುರೋಪಿನ ನಾಜಿ ಮತ್ತು ಉಗ್ರ ಬಲಪಂಥೀಯರಿಂದ ನೇರವಾಗಿ ಎರವಲು ಪಡೆದ, ಸ್ವಪಜ್ಞತೆಯಿರದ ಅನುಕರಣಾರ್ಥಕ ಘೋಷಣೆ. ಒಂದು ಆಸಕ್ತಿದಾಯಕ ಸಂಗತಿಯೆಂದರೆ, ಹಿಂದು ಮಹಾಸಭಾದ ಮುಖಂಡರಾಗಿದ್ದ ಶ್ಯಾಮಪ್ರಸಾದ ಮುಖರ್ಜಿಯವರೂ ಈ ಸಭೆಯಲ್ಲಿ ಉಪಸ್ಥಿತರಿದ್ದದ್ದು. ಇದೇ ಮುಖರ್ಜಿಯವರು, ವಿಭಜನೆ ಪೂರ್ವದಲ್ಲಿದ್ದ ಮುಸ್ಲಿಂ ಲೀಗ್ ಮತ್ತು ಹಿಂದು ಮಹಾಸಭಾ ಜೊತೆಗೂಡಿ 1942ರಲ್ಲಿ ರಚಿಸಿದ್ದ ಸಂಮಿಶ್ರ ಸರ್ಕಾರದಲಿ ್ಲ ಉಪಮುಖ್ಯಮಂತ್ರಿಯಾಗಿದ್ದವರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...