ಹೀಗಿದೆ ಆರೆಸೆಸ್

- Advertisement -
- Advertisement -

ಆರ್.ಎಸ್.ಎಸ್. ಬೇಡಿಕೆ: “ಭಾರತೀಯ ಸಂವಿಧಾನದ ಸ್ಥಾನದಲ್ಲಿ ಮನುಸ್ಮøತಿಯ ಅನುಷ್ಠಾನ” – ಹಾಗಾದರೆ ದಲಿತರು ಮತ್ತು ಮಹಿಳೆಯರ ಗತಿಯೇನು? ಭಾರತ ಸಂವಿಧಾನದ ಮೇಲಿರುವ ಆರ್.ಎಸ್.ಎಸ್. ನಿಷ್ಠೆಯನ್ನು ಗೋಲ್ವಾಲ್ಕರ್ ಅವರ “ಚಿಂತನಾಗುಚ್ಛ” ಕೃತಿಯಲ್ಲಿನ ವಿವರ ಹೇಳಿಕೆಗಳಿಂದ ಸ್ಪಷ್ಟವಾಗಿ ತಿಳಿಯಬಹುದಾಗಿದೆ. ಈ ಕೃತಿ ಕೇವಲ ಆಯ್ದ ಲೇಖನಗಳ ಸಂಕಲನವಷ್ಟೇ ಅಲ್ಲ, ಬದಲಿಗೆ ಆರ್.ಎಸ್.ಎಸ್. ಸ್ವಯಂಸೇವಕರ ಪಾಲಿಗೆ ಒಂದು ಪವಿತ್ರ ಗ್ರಂಥ ಕೂಡ.
“ನಮ್ಮ ಸಂವಿಧಾನ ವಿವಿಧ ಪಾಶ್ಚಿಮಾತ್ಯ ರಾಷ್ಟ್ರಗಳ ಸಂವಿಧಾನಗಳಿಂದ ಆಯ್ದುಕೊಂಡ ವಿವಿಧ ಲೇಖನಗಳು ಮತ್ತು ಅನುಚ್ಛೇದದ ತುಣುಕುಗಳ ಸಂಚಯಿತ ರೂಪ. ಇದು ನಮ್ಮದೆಂದು ಹೇಳಿಕೊಳ್ಳಲು ನಿಚ್ಚಳವಾದ ಯಾವ ಹೆಗ್ಗಳಿಕೆಯೂ ಇಲ್ಲ. ನಮ್ಮ ರಾಷ್ಟ್ರ ಬದುಕಿನ ಧ್ಯೇಯವನ್ನಾಗಲಿ ಅಥವಾ ನಮ್ಮ ಬದುಕಿಗಿರುವ ಮಾರ್ಗದರ್ಶಿ ತತ್ತ್ವವನ್ನಾಗಲಿ ತೆರೆದು ತೋರುವ ಯಾವ ಮಾರ್ಗದರ್ಶಕ ಸಿದ್ಧಾಂತಗಳ ಒಂದು ಪದವಾದರೂ ಅದರಲ್ಲಿದೆಯೆ?
ವಾಸ್ತವ ಸಂಗತಿಯೆಂದರೆ, ಭಾರತ ಸಂವಿಧಾನದ ಸ್ಥಾನದಲ್ಲಿ ಮನುಸ್ಮøತಿ ಅಥವಾ ಮನುಸಂಹಿತೆ ಅಥವಾ ಮನುಧರ್ಮಶಾಸ್ತ್ರವಿರಬೇಕೆಂದು ಆರ್.ಎಸ್.ಎಸ್. ಅಪೇಕ್ಷಿಸಿತ್ತು. ಎಲ್ಲರೂ ತಿಳಿದಿರುವಂತೆ ಶೂದ್ರರು, ದಲಿತರು ಮತ್ತು ಮಹಿಳೆಯರ ಕುರಿತಂತೆ, ಅತ್ಯಂತ ಅವಹೇಳನಕಾರಿ ಮತ್ತು ಅಮಾನುಷ ಪ್ರಸ್ತಾಪಗಳ ಉಲ್ಲೇಖವಿರುವ ಮನುಸ್ಮøತಿ ಅವರ ಅಪೇಕ್ಷೆಯ ಸಂವಿಧಾನವಾಗಿತ್ತು. ಸಂಸದೀಯ ಸಭೆ, ಸಂವಿಧಾನ ರಚನೆ ಮತ್ತು ಮಂಡನೆಯ ಕಾರ್ಯವನ್ನು ಅಂತಿಮಗೊಳಿಸಿದಾಗ, ಆರ್.ಎಸ್.ಎಸ್ ತನ್ನ ಅಸಮಾಧಾನ ಮತ್ತು ಬೇಸರವನ್ನು ವ್ಯಕ್ತಪಡಿಸಿತು. ನವೆಂಬರ್ 30, 1949ರ ಆರ್ಗನೈಸರ್ ಪತ್ರಿಕೆಯ ಸಂಪಾದಕೀಯದಲ್ಲಿ ತನ್ನ ಆಕ್ಷೇಪವನ್ನು ಸ್ಪಷ್ಟವಾಗಿ ತಿಳಿಸಿದೆ.
“ಆದರೆ ನಮ್ಮ ಸಂವಿಧಾನದಲ್ಲಿ, ಪ್ರಾಕ್ತನ ಭಾರತದಲ್ಲಿ ಆಗಿರಬಹುದಾದ ಒಂದು ಅನನ್ಯ ಸಂವಿಧಾನಾತ್ಮಕ ಬೆಳವಣಿಗೆಯ ವಿವರಗಳಾಗಲಿ, ಉಲ್ಲೇಖಗಳಾಗಲಿ ಲವಲೇಶವಿಲ್ಲ. ಸ್ಪಾರ್ಟ್ ದ ಲೈಕರ್ಗಸ್ (820 ಬಿ.ಸಿ) ಅಥವಾ ಪರ್ಷಿಯಾದ ಸೊಲೊನ್ (640 ಬಿ.ಸಿ) ಅವರುಗಳಿಗೂ ಪೂರ್ವದಲ್ಲೇ ಮನುಸ್ಮøತಿ ರಚಿತವಾಗಿತ್ತು. ಇಂದಿನವರೆಗೂ ಮನುಸ್ಮøತಿಯಲ್ಲಿ ಪ್ರತಿಪಾದಿತವಾಗಿರುವ ವಿಧಿ ನಿಬಂಧನೆಗಳು ಜಗತ್ತಿನ ಮೆಚ್ಚುಗೆಗೆ ಪಾತ್ರವಾಗಿವೆ ಹಾಗೂ ಸ್ವಯಂಪ್ರೇರಿತ ನಿಷ್ಠೆ ಮತ್ತು ಅನುಸರಣೀಯ ಗುಣವನ್ನು ಪ್ರೇರೇಪಿಸಿದೆ. ಆದರೆ ಈ ಯಾವ ವಿಚಾರವು ನಮ್ಮ ಸಂವಿಧಾನದ ಪಂಡಿತೋತ್ತಮರಿಗೆ ಅರ್ಥವಾಗುವುದಿಲ್ಲ. ಹಾಗೆ ಅವರಿಗೆ ಮುಖ್ಯವೂ ಅಲ್ಲ”
ಸ್ವತಂತ್ರ ಭಾರತದಲ್ಲಿ ಮನುಧರ್ಮಶಾಸ್ತ್ರವನ್ನು ಅಂಗೀಕರಿಸಿ, ಅಧಿಕೃತವಾಗಿ ಘೋಷಿಸಬೇಕೆಂದು ಆರ್.ಎಸ್.ಎಸ್. ಒತ್ತಾಯಿಸುತ್ತಿರುವುದಕ್ಕೆ ನಿಜವಾದ ಕಾರಣವೆಂದರೆ, ತಮ್ಮ ಮಾರ್ಗದರ್ಶಿ, ತತ್ವಜಿಜ್ಞಾಸು ಮತ್ತು ವಿಚಾರ ಉದ್ದೀಪಕರಾಗಿರುವ ವಿ.ಡಿ.ಸಾವರ್ಕರ್ ಅವರನ್ನು ನಿಷ್ಠೆಯಿಂದ ಹಿಂಬಾಲಿಸುತ್ತಿರುವುದು. ಸಾವರ್ಕರರ ಮೇರೆಗೆ ;
“ನಮ್ಮ ಹಿಂದು ರಾಷ್ಟ್ರದ ಪವಿತ್ರ ಕೃತಿಗಳಾದ ವೇದಗಳ ಅನಂತರ ಅತ್ಯಂತ ಪೂಜ್ಯನೀಯ ಮತಧರ್ಮಶಾಸ್ತ್ರವೆಂದರೆ ‘ಮನುಸ್ಮøತಿ’ ಮಾತ್ರ. ಅಲ್ಲದೆ ಪ್ರಾಚೀನ ಕಾಲದಿಂದಲೂ ನಮ್ಮ ಸಂಸ್ಕøತಿ, ಸಂಪ್ರದಾಯ, ಚಿಂತನೆ ಮತ್ತು ಆಚರಣೆಯ ಮೂಲ ತಳಹದಿ ‘ಮನುಸ್ಮøತಿ’ಯಾಗಿದೆ. ಅಧ್ಯಾತ್ಮ ಮತ್ತು ದೈವಿಕತೆ ಕೇಂದ್ರಿತ ನಮ್ಮ ದೇಶ ಸಾಧಿಸಿರುವ ಮುನ್ನಡೆಯನ್ನು ಈ ಕೃತಿ ಸಂಕೇತರೂಪದಲ್ಲಿ ತನ್ನೊಡಲಲ್ಲಿ ಇರಿಸಿಕೊಂಡಿದೆ. ಇಂದಿಗೂ ಕೋಟ್ಯಾಂತರ ಮಂದಿ ಹಿಂದುಗಳು ತಮ್ಮ ಬದುಕಿನಲ್ಲಿ ಮತ್ತು ಆಚರಣೆಗಳಲ್ಲಿ ಪಾಲಿಸುತ್ತಿರುವ ವಿಧಿನಿಯಮಗಳು ‘ಮನುಸ್ಮøತಿ’ ಯನ್ನು ಆಧರಿಸಿವೆ. ಇಂದು ಹಿಂದು ಮತೀಯರ ಕಾನೂನು ಎಂದರೆ ಅದು ‘ಮನುಸ್ಮøತಿ’ ಮಾತ್ರ
ಆರ್.ಎಸ್.ಎಸ್. ದೃಷ್ಟಿಯಲ್ಲಿ ಹಿಂದು ರಾಷ್ಟ್ರದ ಸಮಾನಾರ್ಥಕ ಪದವೆಂದರೆ ‘ಜಾತೀಯತೆ’:
ಆರ್.ಎಸ್.ಎಸ್. ಪ್ರಧಾನರ ಶ್ರದ್ಧೆ, ನಂಬಿಕೆಯಿರುವುದು ಮನುಸ್ಮøತಿಯಲ್ಲಿ. ಆದ್ದರಿಂದ ಸಹಜವಾಗಿಯೆ ಜಾತೀಯತೆಯನ್ನು ನಂಬುವ ಕಡೆಗೆ ಅವರನ್ನು ಕರೆದೊಯ್ಯಿತು. ಆರ್.ಎಸ್.ಎಸ್.ಗೆ ಜಾತೀಯತೆಯೇ ಹಿಂದು ಧರ್ಮದ ಮತ್ತು ಹಿಂದು ರಾಷ್ಟ್ರೀಯತೆಯ ಅಂತಃಸ್ಸಾರ. ಮನು ಮೇರೆಗೆ ಹಿಂದು ಧರ್ಮೀಯರು ಮತ್ತಾರೂ ಅಲ್ಲ, ಆದರೆ ;
“ಹಿಂದು ಧರ್ಮೀಯರು ವಿರಾಟ್ ಪುರುಷ ಸಂಭೂತರು, ಆ ದೈವೀಶಕ್ತಿಯ ಮಾನುಷಾವತಾರಿಗಳು, ‘ಹಿಂದು’ ಶಬ್ದದ ಬಳಕೆ ಮಾಡದಿದ್ದರೂ, ‘ಪುರುಷ ಸೂಕ್ತ’ ದಲ್ಲಿ ವರ್ಣಿತವಾಗಿರುವ ದೈವೀಶಕ್ತಿಯ ವಿವರಗಳಲ್ಲಿ ಸ್ಪಷ್ಟವಾಗಿ ವ್ಯಕ್ತವಾಗಿದೆ; ಸೂರ್ಯಚಂದ್ರರು ವಿರಾಟ್ ಪುರುಷನ ಎರಡು ಕಣ್ಣುಗಳು, ಅವನ ಹೊಕ್ಕಳು ಮೂಲದಿಂದಲೇ ತಾರೆಗಳು ಮತ್ತು ಗಗನ ಸೃಷ್ಟಿತವಾಗಿದೆ. ಹಾಗು ಅವನ ಶಿರವೇ ಬಾ ್ರಹ್ಮಣರು, ತೋಳುಗಳೇ ಕ್ಷತ್ರಿಯರು, ವೈಶ್ಯರು ಅವನೆರಡು ಊರುಗಳು ಮತ್ತು ಪಾದಗಳೇ ಶೂದ್ರರು. ಇಂಥ ಪುರಾಣ ರೂಪಿಕೆಯ ಅರ್ಥವೆಂದರೆ; ಚಾತುರ್ವಣ್ರ್ಯ ವ್ಯವಸ್ಥೆಯಿರುವ ಸಮುದಾಯವೇ ಹಿಂದು ಮತೀಯರು – ನಮ್ಮ ದೇವತೆಗಳು ಹಾಗು ವಿರಾಟ್ ಪುರುಷನ ಶ್ರೇಷ್ಠಾಂಗವಾದ ಶಿರದ ಉತ್ಕøಷ್ಟ ದರ್ಶನವೇ ನಮ್ಮ ‘ರಾಷ್ಟ್ರ’ ಪರಿಕಲ್ಪನೆಯ ಆಂತರ್ಯದ ತಿರುಳು. ಈ ಅಂತಃಸತ್ತ್ವ ನಮ್ಮ ಚಿಂತನಾಕ್ರಮವನ್ನು ವಿಸ್ತರಿಸಿದೆ ಹಾಗು ನಮ್ಮ ಸಾಂಸ್ಕøತಿಕ ಪರಂಪರೆಯ ವಿವಿಧ ಅನನ್ಯ ಪರಿಕಲ್ಪನೆಗಳ ಆವಿರ್ಭಾವಕ್ಕೆ ಕಾರಣವಾಗಿದೆ”.
ಆರ್.ಎಸ್.ಎಸ್. ಮತ್ತು ಹಿಂದುತ್ವದ ಸಂಘಟನೆಗಳು ಮನುಸಂಹಿತೆಯನ್ನು ಜಾರಿಗೊಳಿಸುವ ಮೂಲಕ ಯಾವ ಬಗೆಯ ನಾಗರಿಕತೆಯನ್ನು ಕಟ್ಟಲು ಹೊರಟಿದ್ದಾರೆ ಎಂಬುದನ್ನು ಕೂಲಂಕಷವಾಗಿ ತಿಳಿಯಬೇಕಾದರೆ, ಮನುತತ್ತ್ವ ಶೂದ್ರರು ಮತ್ತು ಮಹಿಳೆಯರನ್ನು ಕುರಿತಂತೆ ರೂಪಿಸಿರುವ ನ್ಯಾಯವಿಧಿಗಳತ್ತ ಒಮ್ಮೆ ಅವಲೋಕಿಸಬೇಕಾಗುತ್ತದೆ. ಅಮಾನವೀಯವೂ ಮತ್ತು ಭ್ರಷ್ಟವೂ ಆಗಿರುವ ಕೆಲವು ನಿಯಮಗಳನ್ನು ಇಲ್ಲಿ ಉಲ್ಲೇಖಿಸಲಾಗಿದೆ. ಇವುಗಳೇ ತಮ್ಮ ಅರ್ಥವನ್ನು ಸ್ವಯಂ ನಿರ್ವಚಿಸಿಕೊಳ್ಳುತ್ತವೆ.
ಪ್ರಜಾಪ್ರಭುತ್ವದ ವಿರುದ್ಧ :
ಪ್ರಜಾಪ್ರಭುತ್ವದ ತಾತ್ತ್ವಿಕತೆಗೆ ತದ್ವಿರುದ್ಧವಾದ ನಿರಂಕುಶ ಆಳ್ವಿಕೆಯ ಅಡಿಯಲ್ಲಿ ಭಾರತ ತನ್ನ ಆಡಳಿತ ನಡೆಸಬೇಕೆಂದು ಆರ್.ಎಸ್.ಎಸ್. ನಿರಂತರವಾಗಿ ಆಗ್ರಹಿಸುತ್ತಲೇ ಬಂದಿದೆ. 1940 ರಂದು ಆರ್.ಎಸ್.ಎಸ್. ಕೇಂದ್ರಸ್ಥಾನವಾಗಿರುವ ನಾಗಪುರದ ರೇಷಮ್ ಭಾಗ್‍ನಲ್ಲಿ ಜರುಗಿದ ರಾಷ್ಟ್ರಮಟ್ಟದ ಆರ್‍ಎಸ್‍ಎಸ್‍ನ ಸುಮಾರು 1350 ಮಂದಿ ಉನ್ನತ ಸ್ತರದ ಸಂಘಟನೆಯ ಸ್ವಯಂಸೇವಕ ಪದವೃಂದವನ್ನುದ್ದೇಶಿಸಿ ಮಾತಾಡುತ್ತಾ ಗೋಲ್ವಾಲ್ಕರ್ ಮಹತ್ತರ ಹೇಳಿಕೆಯೊಂದನ್ನು ಘೋಷಿಸಿದರು ;
“ಒಂದು ಧ್ವಜ, ಒಬ್ಬ ನಾಯಕ ಮತ್ತು ಒಂದು ಸಿದ್ಧಾಂತ ಎಂಬ ನಿಲುವಿನಿಂದ ಆರ್.ಎಸ್.ಎಸ್. ಸ್ಫೂರ್ತಿ ಪಡೆದಿದೆ. ಈ ಸ್ಫೂರ್ತಿ ಜ್ಯೋತಿಯೇ ನಮ್ಮ ಮಹಾನ್ ನೆಲದ ಮೂಲೆಮೂಲೆಯಲ್ಲೂ ಹಿಂದುತ್ವದ ದೀಪ ಹಚ್ಚಿ ದೇದಿಪ್ಯಮಾನಗೊಳಿಸುತ್ತಿದೆ”.
ಒಂದು ಧ್ವಜ, ಒಬ್ಬ ನಾಯಕ ಮತ್ತು ಒಂದು ಸಿದ್ಧಾಂತವೆಂಬ ಈ ಘೋಷಣೆ, ಯುರೋಪಿನ ನಾಜಿ ಮತ್ತು ಉಗ್ರ ಬಲಪಂಥೀಯರಿಂದ ನೇರವಾಗಿ ಎರವಲು ಪಡೆದ, ಸ್ವಪಜ್ಞತೆಯಿರದ ಅನುಕರಣಾರ್ಥಕ ಘೋಷಣೆ. ಒಂದು ಆಸಕ್ತಿದಾಯಕ ಸಂಗತಿಯೆಂದರೆ, ಹಿಂದು ಮಹಾಸಭಾದ ಮುಖಂಡರಾಗಿದ್ದ ಶ್ಯಾಮಪ್ರಸಾದ ಮುಖರ್ಜಿಯವರೂ ಈ ಸಭೆಯಲ್ಲಿ ಉಪಸ್ಥಿತರಿದ್ದದ್ದು. ಇದೇ ಮುಖರ್ಜಿಯವರು, ವಿಭಜನೆ ಪೂರ್ವದಲ್ಲಿದ್ದ ಮುಸ್ಲಿಂ ಲೀಗ್ ಮತ್ತು ಹಿಂದು ಮಹಾಸಭಾ ಜೊತೆಗೂಡಿ 1942ರಲ್ಲಿ ರಚಿಸಿದ್ದ ಸಂಮಿಶ್ರ ಸರ್ಕಾರದಲಿ ್ಲ ಉಪಮುಖ್ಯಮಂತ್ರಿಯಾಗಿದ್ದವರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....