ಹೀಗಿದೆ ಆರೆಸೆಸ್

- Advertisement -
- Advertisement -

ಆರ್.ಎಸ್.ಎಸ್. ಬೇಡಿಕೆ: “ಭಾರತೀಯ ಸಂವಿಧಾನದ ಸ್ಥಾನದಲ್ಲಿ ಮನುಸ್ಮøತಿಯ ಅನುಷ್ಠಾನ” – ಹಾಗಾದರೆ ದಲಿತರು ಮತ್ತು ಮಹಿಳೆಯರ ಗತಿಯೇನು? ಭಾರತ ಸಂವಿಧಾನದ ಮೇಲಿರುವ ಆರ್.ಎಸ್.ಎಸ್. ನಿಷ್ಠೆಯನ್ನು ಗೋಲ್ವಾಲ್ಕರ್ ಅವರ “ಚಿಂತನಾಗುಚ್ಛ” ಕೃತಿಯಲ್ಲಿನ ವಿವರ ಹೇಳಿಕೆಗಳಿಂದ ಸ್ಪಷ್ಟವಾಗಿ ತಿಳಿಯಬಹುದಾಗಿದೆ. ಈ ಕೃತಿ ಕೇವಲ ಆಯ್ದ ಲೇಖನಗಳ ಸಂಕಲನವಷ್ಟೇ ಅಲ್ಲ, ಬದಲಿಗೆ ಆರ್.ಎಸ್.ಎಸ್. ಸ್ವಯಂಸೇವಕರ ಪಾಲಿಗೆ ಒಂದು ಪವಿತ್ರ ಗ್ರಂಥ ಕೂಡ.
“ನಮ್ಮ ಸಂವಿಧಾನ ವಿವಿಧ ಪಾಶ್ಚಿಮಾತ್ಯ ರಾಷ್ಟ್ರಗಳ ಸಂವಿಧಾನಗಳಿಂದ ಆಯ್ದುಕೊಂಡ ವಿವಿಧ ಲೇಖನಗಳು ಮತ್ತು ಅನುಚ್ಛೇದದ ತುಣುಕುಗಳ ಸಂಚಯಿತ ರೂಪ. ಇದು ನಮ್ಮದೆಂದು ಹೇಳಿಕೊಳ್ಳಲು ನಿಚ್ಚಳವಾದ ಯಾವ ಹೆಗ್ಗಳಿಕೆಯೂ ಇಲ್ಲ. ನಮ್ಮ ರಾಷ್ಟ್ರ ಬದುಕಿನ ಧ್ಯೇಯವನ್ನಾಗಲಿ ಅಥವಾ ನಮ್ಮ ಬದುಕಿಗಿರುವ ಮಾರ್ಗದರ್ಶಿ ತತ್ತ್ವವನ್ನಾಗಲಿ ತೆರೆದು ತೋರುವ ಯಾವ ಮಾರ್ಗದರ್ಶಕ ಸಿದ್ಧಾಂತಗಳ ಒಂದು ಪದವಾದರೂ ಅದರಲ್ಲಿದೆಯೆ?
ವಾಸ್ತವ ಸಂಗತಿಯೆಂದರೆ, ಭಾರತ ಸಂವಿಧಾನದ ಸ್ಥಾನದಲ್ಲಿ ಮನುಸ್ಮøತಿ ಅಥವಾ ಮನುಸಂಹಿತೆ ಅಥವಾ ಮನುಧರ್ಮಶಾಸ್ತ್ರವಿರಬೇಕೆಂದು ಆರ್.ಎಸ್.ಎಸ್. ಅಪೇಕ್ಷಿಸಿತ್ತು. ಎಲ್ಲರೂ ತಿಳಿದಿರುವಂತೆ ಶೂದ್ರರು, ದಲಿತರು ಮತ್ತು ಮಹಿಳೆಯರ ಕುರಿತಂತೆ, ಅತ್ಯಂತ ಅವಹೇಳನಕಾರಿ ಮತ್ತು ಅಮಾನುಷ ಪ್ರಸ್ತಾಪಗಳ ಉಲ್ಲೇಖವಿರುವ ಮನುಸ್ಮøತಿ ಅವರ ಅಪೇಕ್ಷೆಯ ಸಂವಿಧಾನವಾಗಿತ್ತು. ಸಂಸದೀಯ ಸಭೆ, ಸಂವಿಧಾನ ರಚನೆ ಮತ್ತು ಮಂಡನೆಯ ಕಾರ್ಯವನ್ನು ಅಂತಿಮಗೊಳಿಸಿದಾಗ, ಆರ್.ಎಸ್.ಎಸ್ ತನ್ನ ಅಸಮಾಧಾನ ಮತ್ತು ಬೇಸರವನ್ನು ವ್ಯಕ್ತಪಡಿಸಿತು. ನವೆಂಬರ್ 30, 1949ರ ಆರ್ಗನೈಸರ್ ಪತ್ರಿಕೆಯ ಸಂಪಾದಕೀಯದಲ್ಲಿ ತನ್ನ ಆಕ್ಷೇಪವನ್ನು ಸ್ಪಷ್ಟವಾಗಿ ತಿಳಿಸಿದೆ.
“ಆದರೆ ನಮ್ಮ ಸಂವಿಧಾನದಲ್ಲಿ, ಪ್ರಾಕ್ತನ ಭಾರತದಲ್ಲಿ ಆಗಿರಬಹುದಾದ ಒಂದು ಅನನ್ಯ ಸಂವಿಧಾನಾತ್ಮಕ ಬೆಳವಣಿಗೆಯ ವಿವರಗಳಾಗಲಿ, ಉಲ್ಲೇಖಗಳಾಗಲಿ ಲವಲೇಶವಿಲ್ಲ. ಸ್ಪಾರ್ಟ್ ದ ಲೈಕರ್ಗಸ್ (820 ಬಿ.ಸಿ) ಅಥವಾ ಪರ್ಷಿಯಾದ ಸೊಲೊನ್ (640 ಬಿ.ಸಿ) ಅವರುಗಳಿಗೂ ಪೂರ್ವದಲ್ಲೇ ಮನುಸ್ಮøತಿ ರಚಿತವಾಗಿತ್ತು. ಇಂದಿನವರೆಗೂ ಮನುಸ್ಮøತಿಯಲ್ಲಿ ಪ್ರತಿಪಾದಿತವಾಗಿರುವ ವಿಧಿ ನಿಬಂಧನೆಗಳು ಜಗತ್ತಿನ ಮೆಚ್ಚುಗೆಗೆ ಪಾತ್ರವಾಗಿವೆ ಹಾಗೂ ಸ್ವಯಂಪ್ರೇರಿತ ನಿಷ್ಠೆ ಮತ್ತು ಅನುಸರಣೀಯ ಗುಣವನ್ನು ಪ್ರೇರೇಪಿಸಿದೆ. ಆದರೆ ಈ ಯಾವ ವಿಚಾರವು ನಮ್ಮ ಸಂವಿಧಾನದ ಪಂಡಿತೋತ್ತಮರಿಗೆ ಅರ್ಥವಾಗುವುದಿಲ್ಲ. ಹಾಗೆ ಅವರಿಗೆ ಮುಖ್ಯವೂ ಅಲ್ಲ”
ಸ್ವತಂತ್ರ ಭಾರತದಲ್ಲಿ ಮನುಧರ್ಮಶಾಸ್ತ್ರವನ್ನು ಅಂಗೀಕರಿಸಿ, ಅಧಿಕೃತವಾಗಿ ಘೋಷಿಸಬೇಕೆಂದು ಆರ್.ಎಸ್.ಎಸ್. ಒತ್ತಾಯಿಸುತ್ತಿರುವುದಕ್ಕೆ ನಿಜವಾದ ಕಾರಣವೆಂದರೆ, ತಮ್ಮ ಮಾರ್ಗದರ್ಶಿ, ತತ್ವಜಿಜ್ಞಾಸು ಮತ್ತು ವಿಚಾರ ಉದ್ದೀಪಕರಾಗಿರುವ ವಿ.ಡಿ.ಸಾವರ್ಕರ್ ಅವರನ್ನು ನಿಷ್ಠೆಯಿಂದ ಹಿಂಬಾಲಿಸುತ್ತಿರುವುದು. ಸಾವರ್ಕರರ ಮೇರೆಗೆ ;
“ನಮ್ಮ ಹಿಂದು ರಾಷ್ಟ್ರದ ಪವಿತ್ರ ಕೃತಿಗಳಾದ ವೇದಗಳ ಅನಂತರ ಅತ್ಯಂತ ಪೂಜ್ಯನೀಯ ಮತಧರ್ಮಶಾಸ್ತ್ರವೆಂದರೆ ‘ಮನುಸ್ಮøತಿ’ ಮಾತ್ರ. ಅಲ್ಲದೆ ಪ್ರಾಚೀನ ಕಾಲದಿಂದಲೂ ನಮ್ಮ ಸಂಸ್ಕøತಿ, ಸಂಪ್ರದಾಯ, ಚಿಂತನೆ ಮತ್ತು ಆಚರಣೆಯ ಮೂಲ ತಳಹದಿ ‘ಮನುಸ್ಮøತಿ’ಯಾಗಿದೆ. ಅಧ್ಯಾತ್ಮ ಮತ್ತು ದೈವಿಕತೆ ಕೇಂದ್ರಿತ ನಮ್ಮ ದೇಶ ಸಾಧಿಸಿರುವ ಮುನ್ನಡೆಯನ್ನು ಈ ಕೃತಿ ಸಂಕೇತರೂಪದಲ್ಲಿ ತನ್ನೊಡಲಲ್ಲಿ ಇರಿಸಿಕೊಂಡಿದೆ. ಇಂದಿಗೂ ಕೋಟ್ಯಾಂತರ ಮಂದಿ ಹಿಂದುಗಳು ತಮ್ಮ ಬದುಕಿನಲ್ಲಿ ಮತ್ತು ಆಚರಣೆಗಳಲ್ಲಿ ಪಾಲಿಸುತ್ತಿರುವ ವಿಧಿನಿಯಮಗಳು ‘ಮನುಸ್ಮøತಿ’ ಯನ್ನು ಆಧರಿಸಿವೆ. ಇಂದು ಹಿಂದು ಮತೀಯರ ಕಾನೂನು ಎಂದರೆ ಅದು ‘ಮನುಸ್ಮøತಿ’ ಮಾತ್ರ
ಆರ್.ಎಸ್.ಎಸ್. ದೃಷ್ಟಿಯಲ್ಲಿ ಹಿಂದು ರಾಷ್ಟ್ರದ ಸಮಾನಾರ್ಥಕ ಪದವೆಂದರೆ ‘ಜಾತೀಯತೆ’:
ಆರ್.ಎಸ್.ಎಸ್. ಪ್ರಧಾನರ ಶ್ರದ್ಧೆ, ನಂಬಿಕೆಯಿರುವುದು ಮನುಸ್ಮøತಿಯಲ್ಲಿ. ಆದ್ದರಿಂದ ಸಹಜವಾಗಿಯೆ ಜಾತೀಯತೆಯನ್ನು ನಂಬುವ ಕಡೆಗೆ ಅವರನ್ನು ಕರೆದೊಯ್ಯಿತು. ಆರ್.ಎಸ್.ಎಸ್.ಗೆ ಜಾತೀಯತೆಯೇ ಹಿಂದು ಧರ್ಮದ ಮತ್ತು ಹಿಂದು ರಾಷ್ಟ್ರೀಯತೆಯ ಅಂತಃಸ್ಸಾರ. ಮನು ಮೇರೆಗೆ ಹಿಂದು ಧರ್ಮೀಯರು ಮತ್ತಾರೂ ಅಲ್ಲ, ಆದರೆ ;
“ಹಿಂದು ಧರ್ಮೀಯರು ವಿರಾಟ್ ಪುರುಷ ಸಂಭೂತರು, ಆ ದೈವೀಶಕ್ತಿಯ ಮಾನುಷಾವತಾರಿಗಳು, ‘ಹಿಂದು’ ಶಬ್ದದ ಬಳಕೆ ಮಾಡದಿದ್ದರೂ, ‘ಪುರುಷ ಸೂಕ್ತ’ ದಲ್ಲಿ ವರ್ಣಿತವಾಗಿರುವ ದೈವೀಶಕ್ತಿಯ ವಿವರಗಳಲ್ಲಿ ಸ್ಪಷ್ಟವಾಗಿ ವ್ಯಕ್ತವಾಗಿದೆ; ಸೂರ್ಯಚಂದ್ರರು ವಿರಾಟ್ ಪುರುಷನ ಎರಡು ಕಣ್ಣುಗಳು, ಅವನ ಹೊಕ್ಕಳು ಮೂಲದಿಂದಲೇ ತಾರೆಗಳು ಮತ್ತು ಗಗನ ಸೃಷ್ಟಿತವಾಗಿದೆ. ಹಾಗು ಅವನ ಶಿರವೇ ಬಾ ್ರಹ್ಮಣರು, ತೋಳುಗಳೇ ಕ್ಷತ್ರಿಯರು, ವೈಶ್ಯರು ಅವನೆರಡು ಊರುಗಳು ಮತ್ತು ಪಾದಗಳೇ ಶೂದ್ರರು. ಇಂಥ ಪುರಾಣ ರೂಪಿಕೆಯ ಅರ್ಥವೆಂದರೆ; ಚಾತುರ್ವಣ್ರ್ಯ ವ್ಯವಸ್ಥೆಯಿರುವ ಸಮುದಾಯವೇ ಹಿಂದು ಮತೀಯರು – ನಮ್ಮ ದೇವತೆಗಳು ಹಾಗು ವಿರಾಟ್ ಪುರುಷನ ಶ್ರೇಷ್ಠಾಂಗವಾದ ಶಿರದ ಉತ್ಕøಷ್ಟ ದರ್ಶನವೇ ನಮ್ಮ ‘ರಾಷ್ಟ್ರ’ ಪರಿಕಲ್ಪನೆಯ ಆಂತರ್ಯದ ತಿರುಳು. ಈ ಅಂತಃಸತ್ತ್ವ ನಮ್ಮ ಚಿಂತನಾಕ್ರಮವನ್ನು ವಿಸ್ತರಿಸಿದೆ ಹಾಗು ನಮ್ಮ ಸಾಂಸ್ಕøತಿಕ ಪರಂಪರೆಯ ವಿವಿಧ ಅನನ್ಯ ಪರಿಕಲ್ಪನೆಗಳ ಆವಿರ್ಭಾವಕ್ಕೆ ಕಾರಣವಾಗಿದೆ”.
ಆರ್.ಎಸ್.ಎಸ್. ಮತ್ತು ಹಿಂದುತ್ವದ ಸಂಘಟನೆಗಳು ಮನುಸಂಹಿತೆಯನ್ನು ಜಾರಿಗೊಳಿಸುವ ಮೂಲಕ ಯಾವ ಬಗೆಯ ನಾಗರಿಕತೆಯನ್ನು ಕಟ್ಟಲು ಹೊರಟಿದ್ದಾರೆ ಎಂಬುದನ್ನು ಕೂಲಂಕಷವಾಗಿ ತಿಳಿಯಬೇಕಾದರೆ, ಮನುತತ್ತ್ವ ಶೂದ್ರರು ಮತ್ತು ಮಹಿಳೆಯರನ್ನು ಕುರಿತಂತೆ ರೂಪಿಸಿರುವ ನ್ಯಾಯವಿಧಿಗಳತ್ತ ಒಮ್ಮೆ ಅವಲೋಕಿಸಬೇಕಾಗುತ್ತದೆ. ಅಮಾನವೀಯವೂ ಮತ್ತು ಭ್ರಷ್ಟವೂ ಆಗಿರುವ ಕೆಲವು ನಿಯಮಗಳನ್ನು ಇಲ್ಲಿ ಉಲ್ಲೇಖಿಸಲಾಗಿದೆ. ಇವುಗಳೇ ತಮ್ಮ ಅರ್ಥವನ್ನು ಸ್ವಯಂ ನಿರ್ವಚಿಸಿಕೊಳ್ಳುತ್ತವೆ.
ಪ್ರಜಾಪ್ರಭುತ್ವದ ವಿರುದ್ಧ :
ಪ್ರಜಾಪ್ರಭುತ್ವದ ತಾತ್ತ್ವಿಕತೆಗೆ ತದ್ವಿರುದ್ಧವಾದ ನಿರಂಕುಶ ಆಳ್ವಿಕೆಯ ಅಡಿಯಲ್ಲಿ ಭಾರತ ತನ್ನ ಆಡಳಿತ ನಡೆಸಬೇಕೆಂದು ಆರ್.ಎಸ್.ಎಸ್. ನಿರಂತರವಾಗಿ ಆಗ್ರಹಿಸುತ್ತಲೇ ಬಂದಿದೆ. 1940 ರಂದು ಆರ್.ಎಸ್.ಎಸ್. ಕೇಂದ್ರಸ್ಥಾನವಾಗಿರುವ ನಾಗಪುರದ ರೇಷಮ್ ಭಾಗ್‍ನಲ್ಲಿ ಜರುಗಿದ ರಾಷ್ಟ್ರಮಟ್ಟದ ಆರ್‍ಎಸ್‍ಎಸ್‍ನ ಸುಮಾರು 1350 ಮಂದಿ ಉನ್ನತ ಸ್ತರದ ಸಂಘಟನೆಯ ಸ್ವಯಂಸೇವಕ ಪದವೃಂದವನ್ನುದ್ದೇಶಿಸಿ ಮಾತಾಡುತ್ತಾ ಗೋಲ್ವಾಲ್ಕರ್ ಮಹತ್ತರ ಹೇಳಿಕೆಯೊಂದನ್ನು ಘೋಷಿಸಿದರು ;
“ಒಂದು ಧ್ವಜ, ಒಬ್ಬ ನಾಯಕ ಮತ್ತು ಒಂದು ಸಿದ್ಧಾಂತ ಎಂಬ ನಿಲುವಿನಿಂದ ಆರ್.ಎಸ್.ಎಸ್. ಸ್ಫೂರ್ತಿ ಪಡೆದಿದೆ. ಈ ಸ್ಫೂರ್ತಿ ಜ್ಯೋತಿಯೇ ನಮ್ಮ ಮಹಾನ್ ನೆಲದ ಮೂಲೆಮೂಲೆಯಲ್ಲೂ ಹಿಂದುತ್ವದ ದೀಪ ಹಚ್ಚಿ ದೇದಿಪ್ಯಮಾನಗೊಳಿಸುತ್ತಿದೆ”.
ಒಂದು ಧ್ವಜ, ಒಬ್ಬ ನಾಯಕ ಮತ್ತು ಒಂದು ಸಿದ್ಧಾಂತವೆಂಬ ಈ ಘೋಷಣೆ, ಯುರೋಪಿನ ನಾಜಿ ಮತ್ತು ಉಗ್ರ ಬಲಪಂಥೀಯರಿಂದ ನೇರವಾಗಿ ಎರವಲು ಪಡೆದ, ಸ್ವಪಜ್ಞತೆಯಿರದ ಅನುಕರಣಾರ್ಥಕ ಘೋಷಣೆ. ಒಂದು ಆಸಕ್ತಿದಾಯಕ ಸಂಗತಿಯೆಂದರೆ, ಹಿಂದು ಮಹಾಸಭಾದ ಮುಖಂಡರಾಗಿದ್ದ ಶ್ಯಾಮಪ್ರಸಾದ ಮುಖರ್ಜಿಯವರೂ ಈ ಸಭೆಯಲ್ಲಿ ಉಪಸ್ಥಿತರಿದ್ದದ್ದು. ಇದೇ ಮುಖರ್ಜಿಯವರು, ವಿಭಜನೆ ಪೂರ್ವದಲ್ಲಿದ್ದ ಮುಸ್ಲಿಂ ಲೀಗ್ ಮತ್ತು ಹಿಂದು ಮಹಾಸಭಾ ಜೊತೆಗೂಡಿ 1942ರಲ್ಲಿ ರಚಿಸಿದ್ದ ಸಂಮಿಶ್ರ ಸರ್ಕಾರದಲಿ ್ಲ ಉಪಮುಖ್ಯಮಂತ್ರಿಯಾಗಿದ್ದವರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...

ಕ್ಯಾಂಪಸ್ ಜಾತಿ ತಾರತಮ್ಯ ವಿರುದ್ಧದ ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ರಾಜ್ಯ ಸಚಿವ ಸಂಪುಟ ಗುರುವಾರ (ಏ.16) ರಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ'ಗೆ ಅನುಮೋದನೆ ನೀಡಿತು. ಜೊತೆಗೆ, ಪ್ರಮುಖ ಮೂಲಸೌಕರ್ಯ ಮತ್ತು...