Homeಚಳವಳಿಕೃಷಿ ಕಾಯ್ದೆ, ಎಂಎಸ್‌ಪಿ ಬೇಡಿಕೆ ಈಡೇರದಿದ್ದರೆ ಸೆ.8 ರಿಂದ ಪ್ರತಿಭಟನೆ: ಕೇಂದ್ರಕ್ಕೆ RSS ಅಂಗಸಂಸ್ಥೆ ಬಿಕೆಎಸ್...

ಕೃಷಿ ಕಾಯ್ದೆ, ಎಂಎಸ್‌ಪಿ ಬೇಡಿಕೆ ಈಡೇರದಿದ್ದರೆ ಸೆ.8 ರಿಂದ ಪ್ರತಿಭಟನೆ: ಕೇಂದ್ರಕ್ಕೆ RSS ಅಂಗಸಂಸ್ಥೆ ಬಿಕೆಎಸ್ ಎಚ್ಚರಿಕೆ

- Advertisement -
- Advertisement -

ಈ ತಿಂಗಳ ಅಂತ್ಯದೊಳಗೆ ವಿವಾದಿತ ಕೃಷಿ ಕಾನೂನುಗಳು ಮತ್ತು ಎಂಎಸ್‌ಪಿಯ ಮೇಲಿನ ತನ್ನ ಬೇಡಿಕೆಗಳನ್ನು ಈಡೇರಿಸಲು ಒಕ್ಕೂಟ ಸರ್ಕಾರ ವಿಫಲವಾದರೇ ಸೆಪ್ಟೆಂಬರ್ 8 ರಿಂದ ದೇಶವ್ಯಾಪಿ ಪ್ರತಿಭಟನೆ ನಡೆಸುವುದಾಗಿ  ಆರ್‌ಎಸ್‌ಎಸ್-ಅಂಗಸಂಸ್ಥೆ ಭಾರತೀಯ ಕಿಸಾನ್ ಸಂಘ (ಬಿಕೆಎಸ್) ಎಚ್ಚರಿಕೆ ನೀಡಿದೆ.

ಕನಿಷ್ಠ ಬೆಂಬಲ ಬೆಲೆಯನ್ನು (ಎಂಎಸ್‌ಪಿ) ವೆಚ್ಚದ ಆಧಾರದ ಮೇಲೆ ನಿರ್ಧರಿಸಬೇಕು. ವಿವಾದಿತ ಕೃಷಿ ಕಾನೂನುಗಳಿಂದ ಉಂಟಾಗಿರುವ ವಿವಾದವನ್ನು ಪರಿಹರಿಸಲು, ರೈತರು ತೋರಿರುವ ಆತಂಕವನ್ನು ಗಮನದಲ್ಲಿಟ್ಟುಕೊಂಡು ಹೊಸ ಕಾನೂನನ್ನು ರೂಪಿಸಬೇಕು ಎಂದು ಬಿಕೆಎಸ್ ಹೇಳಿದೆ.

“ಈ ಬೇಡಿಕೆಗಳಿಗಾಗಿ, ರಾಷ್ಟ್ರವ್ಯಾಪಿ ಸಾಂಕೇತಿಕ ಧರಣೆಯನ್ನು ಸೆಪ್ಟೆಂಬರ್ 8 ರಂದು ಆಯೋಜಿಸಲಾಗುವುದು. ಬೇಡಿಕೆಗಳನ್ನು ಈಡೇರಿಸಲು ಮೋದಿ ಸರ್ಕಾರಕ್ಕೆ ಆಗಸ್ಟ್ 31 ರವರೆಗೆ ಕಾಲಾವಕಾಶ ನೀಡಲಾಗಿದೆ. ನಮ್ಮ ಬೇಡಿಕೆಗಳ ಬಗ್ಗೆ ಸಕಾರಾತ್ಮಕ ನಿಲುವು ತೆಗೆದುಕೊಳ್ಳದಿದ್ದರೆ, ಸೆಪ್ಟೆಂಬರ್‌ 8ರ ಧರಣಿಯ ನಂತರ , ಮುಂದಿನ ಕ್ರಮಗಳ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗುವುದು” ಎಂದು ಬಿಕೆಎಸ್ ಖಜಾಂಚಿ ಯುಗಲ್ ಕಿಶೋರ್ ಮಿಶ್ರಾ ಹೇಳಿದ್ದಾರೆ.

ಇದನ್ನೂ ಓದಿ: ಕಬ್ಬಿನ ಯೋಗ್ಯ ಬೆಲೆಗೆ ಪಂಜಾಬ್ ರೈತರ ಪಟ್ಟು: 55ಕ್ಕೂ ಹೆಚ್ಚು ರೈಲುಗಳ ಸಂಚಾರ ರದ್ದು

“ರೈತರು ತಮ್ಮ ಉತ್ಪನ್ನಗಳಿಗೆ ಸರಿಯಾ ಬೆಲೆಯನ್ನು ಪಡೆಯುತ್ತಿಲ್ಲ. ಎಂಎಸ್‌ಪಿ ಲಾಭದಾಯಕವಾಗಿಲ್ಲ. ಈ ಕಾರಣದಿಂದಾಗಿ ತಮ್ಮ ಸಂಸ್ಥೆಯು ಪ್ರತಿಭಟನೆಗೆ ಮುಂದಾಗುತ್ತಿದೆ” ಎಂದು ಹೇಳಿದ್ದಾರೆ.

“ಆರ್‌ಎಸ್‌ಎಸ್ ಸಂಘಟನೆ ನರೇಂದ್ರ ಮೋದಿ ಸರ್ಕಾರವನ್ನು ನಡೆಸುವುದಿಲ್ಲ, ಇಲ್ಲದಿದ್ದರೆ ನಮ್ಮ ಸಂಘಟನೆ ಪ್ರತಿಭಟನೆಗೆ ಮುಂದಾಗುತ್ತಿರಲಿಲ್ಲ. ರೈತರ ಹಿತಾಸಕ್ತಿಗೆ ಸಂಬಂಧಿಸಿದ ಯಾವುದೇ ಸಮಸ್ಯೆಗಳ ಬಗ್ಗೆಯೂ ಯಾವುದೇ ಸರ್ಕಾರ ಗಂಭೀರವಾಗಿಲ್ಲ” ಎಂದು ಬಿಕೆಎಸ್ ನಾಯಕ ಹೇಳಿದ್ದಾರೆ.

ರೈತರ ಆದಾಯವನ್ನು ದ್ವಿಗುಣಗೊಳಿಸುವ ಮೋದಿ ಸರ್ಕಾರದ ಭರವಸೆಯ ಬಗ್ಗೆ ಕೇಳಿದಾಗ, ಅವರು ಎಷ್ಟು ಖರ್ಚು ಮಾಡುತ್ತಿದ್ದಾರೆ ಎಂಬುದನ್ನು ಮೊದಲು ನಿರ್ಧರಿಸಬೇಕು ಎಂದು ಹೇಳಿದ್ದಾರೆ.

“ಅಟಲ್ ಬಿಹಾರಿ ವಾಜಪೇಯಿ ಮತ್ತು ನರೇಂದ್ರ ಮೋದಿ ಸರ್ಕಾರಗಳು ವೆಚ್ಚದ ಆಧಾರದ ಮೇಲೆ ಕನಿಷ್ಠ ಬೆಂಬಲ ಬೆಲೆಯನ್ನು ಪರಿಗಣಿಸಿಲ್ಲ” ಎಂದು ಹೇಳಿದ್ದಾರೆ.


ಇದನ್ನೂ ಓದಿ: ರೈತ ಹೋರಾಟ: ಮುಂದಿನ 6 ತಿಂಗಳಿಗಾಗಿ ಪಡಿತರ ಸಂಗ್ರಹಿಸುತ್ತಿರುವ ರೈತ ಮಹಿಳೆಯರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....