Homeಮುಖಪುಟಮೋದಿ ಸರ್ಕಾರದ ವಿರುದ್ಧ ಆರ್‌ಎಸ್‌ಎಸ್‌ ಅಂಗಸಂಸ್ಥೆ ಬಿಕೆಎಸ್‌ ಪ್ರತಿಭಟನೆ

ಮೋದಿ ಸರ್ಕಾರದ ವಿರುದ್ಧ ಆರ್‌ಎಸ್‌ಎಸ್‌ ಅಂಗಸಂಸ್ಥೆ ಬಿಕೆಎಸ್‌ ಪ್ರತಿಭಟನೆ

- Advertisement -
- Advertisement -

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಅಂಗಸಂಸ್ಥೆಯಾದ ಭಾರತೀಯ ಕಿಸಾನ್ ಸಂಘ (ಬಿಕೆಎಸ್) ಸೋಮವಾರ ದೆಹಲಿಯ ರಾಮಲೀಲಾ ಮೈದಾನದಲ್ಲಿ ರೈತರ ರ್‍ಯಾಲಿಯನ್ನು ನಡೆಸಿದೆ.

ಭಾರತದ ರೈತರ ಪ್ರಸ್ತುತ ಸ್ಥಿತಿಗತಿಯ ವಿರುದ್ಧ ಬಿಕೆಎಸ್‌ ಬೇಸರ ವ್ಯಕ್ತಪಡಿಸಿದೆ. ಸರ್ಕಾರದ ಮುಂದೆ ಹಲವಾರು ಬೇಡಿಕೆಗಳನ್ನು ಇಟ್ಟಿದೆ. ಬಿಕೆಎಸ್ ಇದನ್ನು ‘ಕಿಸಾನ್ ಗರ್ಜನ ರ್‍ಯಾಲಿ’ ಎಂದು ಕರೆದಿದೆ.

‘‘ಸರ್ಕಾರವು ರೈತರ ಬೇಡಿಕೆಗೆ ಸಕಾಲದಲ್ಲಿ ಕಿವಿಗೊಡದಿದ್ದರೆ ತೊಂದರೆ ಎದುರಿಸಬೇಕಾಗುತ್ತದೆ” ಎಂದು ಬಿಕೆಎಸ್‌ ಹೊರಡಿಸಿದ ಕರಪತ್ರದಲ್ಲಿ ತಿಳಿಸಲಾಗಿದೆ.

ಭಾರತದ ಮೂಲೆಮೂಲೆಗಳಿಂದ ಸುಮಾರು 60,000 ರೈತರು ರಾಮಲೀಲಾ ಮೈದಾನದಲ್ಲಿ ಸೇರಿದ್ದಾಗಿ ಬಿಕೆಎಸ್ ತಿಳಿಸಿದೆ. ತಮ್ಮ ಬೆಳೆಗಳಿಗೆ ವೈಜ್ಞಾನಿಕ ಬೆಲೆಯನ್ನು ನಿಗದಿ ಮಾಡುವಂತೆ  ಒತ್ತಾಯಿಸುವುದಕ್ಕಾಗಿ ರೈತರು ಪ್ರತಿಭಟಿಸುತ್ತಿದ್ದಾರೆ ಎಂದು ಬಿಕೆಎಸ್ ತಿಳಿಸಿದೆ.

ಬಿಕೆಎಸ್‌ ಏಕೆ ಪ್ರತಿಭಟನೆ ನಡೆಸುತ್ತಿದೆ?

ಭಾರತೀಯ ಕಿಸಾನ್ ಸಂಘವು (ಬಿಕೆಸ್‌) ಆರ್‌ಎಸ್‌ಎಸ್‌ನ ಅಂಗಸಂಸ್ಥೆಯಾಗಿದೆ. ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರದ ವಿರುದ್ಧ ಬಿಕೆಎಸ್‌ ಕೆಲವೊಮ್ಮೆ ಪ್ರತಿಭಟಿಸಿದ ಉದಾಹರಣೆಗಳಿವೆ. ಆ ಮೂಲಕ ರೈತರನ್ನು ತನ್ನ ತೆಕ್ಕೆಯಲ್ಲಿ ಹಿಡಿದುಕೊಳ್ಳುವ ತಂತ್ರವನ್ನು ಆರ್‌ಎಸ್‌ಎಸ್‌ ರೂಪಿಸುತ್ತದೆ ಎಂಬ ವಾದವಿದೆ.

ಸೋಮವಾರ ನಡೆದ ರ್‍ಯಾಲಿಯಲ್ಲಿ ‘ಕೃಷಿ ಉಪಕರಣಗಳ ಮೇಲಿನ ಜಿಎಸ್‌ಟಿ ತೆರವು, ರೈತರಿಗೆ ಆರ್ಥಿಕ ನೆರವು ಹೆಚ್ಚಳ, ಕುಲಾಂತರಿ ಸಾಸುವೆ ನಿರಾಕರಣೆ, ಕೃಷಿ ಉತ್ಪನ್ನಗಳಿಗೆ ಲಾಭದಾಯಕ ಬೆಲೆ, ಸೂಕ್ತವಾದ ರಫ್ತು ನೀತಿ ಜಾರಿ’ಗಾಗಿ ಬಿಕೆಎಸ್‌ ಒತ್ತಾಯಿಸಿದೆ.

“ಕೃಷಿ ಉಪಕರಣಗಳು ಮತ್ತು ರಸಗೊಬ್ಬರಗಳ ಮೇಲಿನ ಶೇ.18ರಷ್ಟು ಜಿಎಸ್‌ಟಿಯಿಂದಾಗಿ ಕೃಷಿ ವೆಚ್ಚ ಗಣನೀಯವಾಗಿ ಏರಿಕೆಯಾಗಿದೆ. ಹೀಗಿದ್ದರೂ ರೈತರಿಗೆ ಅರ್ಹವಾದ ಬೆಳೆಗಳಿಗೆ ಬೆಲೆ ಸಿಗುತ್ತಿಲ್ಲ. ಹೀಗಾಗಿ ಈ ಜಿಎಸ್‌ಟಿ ತೆರವು ಮಾಡುವುದು ಅನಿವಾರ್ಯವಾಗಿದೆ” ಎಂದು ಬಿಕೆಎಸ್ ಪ್ರಧಾನ ಕಾರ್ಯದರ್ಶಿ ಮೋಹಿನಿ ಮೋಹನ್ ಮಿಶ್ರಾ ಅವರು ಇತ್ತೀಚೆಗೆ ಸಂದರ್ಶನವೊಂದರಲ್ಲಿ ಹೇಳಿದ್ದರು.

ಕಳೆದ ವಾರ ಬಿಕೆಎಸ್‌ನ ಕಾರ್ಯಕಾರಿ ಸಮಿತಿ ಸದಸ್ಯ ನಾನಾ ಆಖ್ರೆ ಅವರು ಮಾತನಾಡಿ, “ತಮ್ಮ ಕೃಷಿ ಉತ್ಪನ್ನಗಳ ಆದಾಯದ ಕೊರತೆಯಿಂದಾಗಿ ರೈತರು ಇಂದು ಅತ್ಯಂತ ನಿರಾಶೆಗೊಂಡಿದ್ದಾರೆ. ಇದರಿಂದ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ” ಎಂದಿದ್ದರು.

“ರೈತರ ಸಂಕಷ್ಟಗಳನ್ನು ಪರಿಹರಿಸುವ ಸಲುವಾಗಿ, ಎಲ್ಲಾ ಕೃಷಿ ಉತ್ಪನ್ನಗಳಿಗೆ ಲಾಭದಾಯಕ ಬೆಲೆಯನ್ನು ನೀಡಬೇಕೆಂದು ಬಿಕೆಎಸ್ ಒತ್ತಾಯಿಸುತ್ತದೆ. ಅಲ್ಲದೆ, ಕೃಷಿ ಉತ್ಪನ್ನಗಳ ಮೇಲೆ ಸರಕು ಮತ್ತು ಸೇವಾ ತೆರಿಗೆ (ಜಿಎಸ್ಟಿ) ವಿಧಿಸಬಾರದು. ಕಿಸಾನ್ ಸಮ್ಮಾನ್ ನಿಧಿ ಅಡಿಯಲ್ಲಿ ಒದಗಿಸಲಾದ ಆರ್ಥಿಕ ಪರಿಹಾರವನ್ನು ಹೆಚ್ಚಿಸಬೇಕು” ಎಂದು ಒತ್ತಾಯಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...