Homeಮುಖಪುಟಸಂವಿಧಾನ ಪೀಠಿಕೆಯ 'ಜಾತ್ಯತೀತ', 'ಸಮಾಜವಾದಿ' ಪದಗಳು ಇನ್ನೂ ಇರಬೇಕೆ ಎಂದ ಆರೆಸ್ಸೆಸ್‌!

ಸಂವಿಧಾನ ಪೀಠಿಕೆಯ ‘ಜಾತ್ಯತೀತ’, ‘ಸಮಾಜವಾದಿ’ ಪದಗಳು ಇನ್ನೂ ಇರಬೇಕೆ ಎಂದ ಆರೆಸ್ಸೆಸ್‌!

- Advertisement -
- Advertisement -

ಸಂವಿಧಾನದ ಪೀಠಿಕೆಯಲ್ಲಿ ಸೇರ್ಪಡೆ ಮಾಡಲಾದ “ಜಾತ್ಯತೀತ” ಮತ್ತು “ಸಮಾಜವಾದಿ” ಪದಗಳನ್ನು ಪರಿಶೀಲಿಸಬೇಕು ಎಂದು ಆರೆಸ್ಸೆಸ್‌ ಗುರುವಾರ ಹೇಳಿದೆ ಎಂದು ಪಿಟಿಐ ವರದಿ ಮಾಡಿದೆ. “ತುರ್ತು ಪರಿಸ್ಥಿತಿಯಲ್ಲಿ ಮೂಲಭೂತ ಹಕ್ಕುಗಳನ್ನು ಅಮಾನತುಗೊಳಿಸಿದಾಗ, ಸಂಸತ್ತು ಕಾರ್ಯನಿರ್ವಹಿಸದಿದ್ದಾಗ ಮತ್ತು ನ್ಯಾಯಾಂಗವು ಕುಂಟುತ್ತಾ ಹೋದಾಗ ಈ ಪದಗಳನ್ನು ಸೇರಿಸಲಾಯಿತು” ಎಂದು ಆರ್‌ಎಸ್‌ಎಸ್ ಪ್ರಧಾನ ಕಾರ್ಯದರ್ಶಿ ದತ್ತಾತ್ರೇಯ ಹೊಸಬಾಳೆ ಹೇಳಿದ್ದಾರೆ. ಸಂವಿಧಾನ ಪೀಠಿಕೆಯ

“ಹಾಗಾದರೆ, ಅವು ಪೀಠಿಕೆಯಲ್ಲಿ ಉಳಿಯಬೇಕೆ ಎಂಬುವುದನ್ನು ಪರಿಗಣಿಸಬೇಕಿದೆ. ಪೀಠಿಕೆ ಶಾಶ್ವತವಾಗಿದೆ. ಆದರೆ ಭಾರತಕ್ಕೆ ಸಿದ್ಧಾಂತವಾಗಿ ಸಮಾಜವಾದದ ಚಿಂತನೆಗಳು ಶಾಶ್ವತವೇ?” ಎಂದು ಅವರು ಕೇಳಿದ್ದಾರೆ. ಆರ್‌ಎಸ್‌ಎಸ್ ಸಂಘಟನೆಯು ಬಿಜೆಪಿಯ ಮಾತೃ ಸಂಘಟನೆಯಾಗಿದೆ.

1975 ರಲ್ಲಿ ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರ ಸರ್ಕಾರ ತುರ್ತು ಪರಿಸ್ಥಿತಿಯನ್ನು ಘೋಷಿಸಿ 50 ವರ್ಷಗಳನ್ನು ಪೂರೈಸಿದ ಸಂದರ್ಭದಲ್ಲಿ ನಡೆದ ಕಾರ್ಯಕ್ರಮದಲ್ಲಿ ಹೊಸಬಾಳೆ ಈ ಹೇಳಿಕೆಗಳನ್ನು ನೀಡಿದ್ದಾರೆ.

ತುರ್ತು ಪರಿಸ್ಥಿತಿಯ ಸಮಯದಲ್ಲಿ ಉಂಟಾದ “ಹಲವಾರು ಅನ್ಯಾಯಗಳ” ಬಗ್ಗೆ ಮಾತನಾಡಿದ ಆರ್‌ಎಸ್‌ಎಸ್ ಪ್ರಧಾನ ಕಾರ್ಯದರ್ಶಿ, “ಕ್ರೂರ” ಕ್ರಮಗಳಿಗಾಗಿ ಕಾಂಗ್ರೆಸ್ ಕ್ಷಮೆಯಾಚಿಸಬೇಕೆಂದು ಹೇಳಿದ್ದಾರೆ ಎಂದು ದಿ ಹಿಂದೂ ವರದಿ ಮಾಡಿದೆ.

ಈ ಅವಧಿಯಲ್ಲಿ 250 ಪತ್ರಕರ್ತರು ಸೇರಿದಂತೆ ಒಂದು ಲಕ್ಷಕ್ಕೂ ಹೆಚ್ಚು ಜನರನ್ನು ಜೈಲಿಗೆ ಹಾಕಲಾಯಿತು ಎಂದು ಹೊಸಬಾಳೆ ಹೇಳಿದ್ದಾರೆ. ಆಗಿನ ಸರ್ಕಾರವು 60 ಲಕ್ಷಕ್ಕೂ ಹೆಚ್ಚು ಜನರನ್ನು ಬಲವಂತವಾಗಿ ಸಂತಾನಹರಣ ಶಸ್ತ್ರಚಿಕಿತ್ಸೆಗೆ ಒಳಪಡಿಸುವ ಮೂಲಕ ಮೂಲಭೂತ ಹಕ್ಕುಗಳನ್ನು ಉಲ್ಲಂಘಿಸಿದೆ ಎಂದು ಅವರು ಹೇಳಿದ್ದಾರೆ.

ಹೊಸಬಾಳೆ ಅವರ ಹೇಳಿಕೆಗಳನ್ನು ಕಾಂಗ್ರೆಸ್ ಟೀಕಿಸಿದ್ದು, “ಆರ್‌ಎಸ್‌ಎಸ್-ಬಿಜೆಪಿಯ ಸಿದ್ಧಾಂತವೇ ಭಾರತೀಯ ಸಂವಿಧಾನಕ್ಕೆ ನೇರ ವಿರುದ್ಧವಾಗಿದೆ. ಈ ಹೇಳಿಕೆಗಳು ಕೇವಲ ಸಲಹೆಯಲ್ಲ, ಬದಲಾಗಿ ನಮ್ಮ ಸಂವಿಧಾನದ ಆತ್ಮದ ಮೇಲೆ ಉದ್ದೇಶಪೂರ್ವಕ ದಾಳಿ” ಎಂದು ಆರೋಪಿಸಿದೆ.

“ಇದು ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರ ನ್ಯಾಯಯುತ, ಎಲ್ಲರನ್ನೂ ಒಳಗೊಂಡ ಮತ್ತು ಪ್ರಜಾಪ್ರಭುತ್ವ ಭಾರತಕ್ಕಾಗಿನ ದೃಷ್ಟಿಕೋನವನ್ನು ಕೆಡವಲು ದೀರ್ಘಕಾಲದಿಂದ ನಡೆಸಲಾಗುತ್ತಿರುವ ಪಿತೂರಿಯ ಭಾಗವಾಗಿದೆ. ಈ ಸಂಚನ್ನು ಆರ್‌ಎಸ್‌ಎಸ್-ಬಿಜೆಪಿ ಯಾವಾಗಿನಿಂದಲೂ ರೂಪಿಸುತ್ತಿದೆ” ಎಂದು ಪಕ್ಷ ಹೇಳಿದೆ.

“ಸಮಾಜವಾದಿ” ಮತ್ತು “ಜಾತ್ಯತೀತ” ಪದಗಳು 1950 ರಲ್ಲಿ ಅಂಗೀಕರಿಸಲ್ಪಟ್ಟ ಸಂವಿಧಾನದ ಭಾಗವಾಗಿರಲಿಲ್ಲ ಮತ್ತು 1976 ರಲ್ಲಿ 42 ನೇ ಸಾಂವಿಧಾನಿಕ ತಿದ್ದುಪಡಿಯ ಮೂಲಕ ಸೇರಿಸಲ್ಪಟ್ಟವು.

ನವೆಂಬರ್‌ನಲ್ಲಿ, ಸಂವಿಧಾನದ ಪೀಠಿಕೆಯಿಂದ ಎರಡು ಪದಗಳನ್ನು ಅಳಿಸಲು ಕೋರಿ ಸಲ್ಲಿಸಲಾದ ಅರ್ಜಿಗಳ ಗುಂಪನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿತು. ಸುಮಾರು 44 ವರ್ಷಗಳ ನಂತರ ಸಾಂವಿಧಾನಿಕ ತಿದ್ದುಪಡಿಯನ್ನು ಪ್ರಶ್ನಿಸಲು ಯಾವುದೇ ಕಾನೂನುಬದ್ಧ ಸಮರ್ಥನೆ ಇಲ್ಲ ಎಂದು ನ್ಯಾಯಾಲಯ ಹೇಳಿದೆ.

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ 2015 ರ ಗಣರಾಜ್ಯೋತ್ಸವದಂದು ನೀಡಿದ್ದ ಪತ್ರಿಕೆ ಜಾಹೀರಾತುಗಳಲ್ಲಿ ಎರಡು ಪದಗಳನ್ನು ಬಿಟ್ಟು ಸಂವಿಧಾನದ ಪೀಠಿಕೆ ಕಾಣಿಸಿಕೊಂಡಿತ್ತು. ಇದರ ನಂತರ ವಿವಾದ ಭುಗಿಲೆದ್ದಿತು. ಸೆಪ್ಟೆಂಬರ್ 2023 ರಲ್ಲಿ, ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಅವರು ಹೊಸ ಸಂಸತ್ತಿನ ಕಟ್ಟಡದಲ್ಲಿ ಸಂಸದರಿಗೆ ವಿತರಿಸಲಾದ ಸಂವಿಧಾನದ ಪ್ರತಿಗಳಲ್ಲಿ ಪೀಠಿಕೆಯಿಂದ ಎರಡು ಪದಗಳು ಕಾಣೆಯಾಗಿವೆ ಎಂದು ಹೇಳಿಕೊಂಡಿದ್ದರು. ಸಂವಿಧಾನ ಪೀಠಿಕೆಯ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಗಾಜಾ: ಹೆಚ್ಚಿನ ಕುಟುಂಬಗಳಿಗೆ ದಿನಕ್ಕೆ ಒಂದು ಹೊತ್ತು ಮಾತ್ರ ಊಟ – ವಿಶ್ವ ಆಹಾರ ಕಾರ್ಯಕ್ರಮದ ಆತಂಕಕಾರಿ ವರದಿ

ಗಾಜಾ: ಹೆಚ್ಚಿನ ಕುಟುಂಬಗಳಿಗೆ ದಿನಕ್ಕೆ ಒಂದು ಹೊತ್ತು ಮಾತ್ರ ಊಟ – ವಿಶ್ವ ಆಹಾರ ಕಾರ್ಯಕ್ರಮದ ಆತಂಕಕಾರಿ ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...