Homeಕರ್ನಾಟಕಎಸ್ಟಿ ಮೀಸಲು ಹೋರಾಟದ ಹಿಂದೆ RSS: ಕುರುಬ ಸಂಘದಲ್ಲಿ ಸ್ಫೋಟಗೊಂಡ ಅನುಮಾನ!

ಎಸ್ಟಿ ಮೀಸಲು ಹೋರಾಟದ ಹಿಂದೆ RSS: ಕುರುಬ ಸಂಘದಲ್ಲಿ ಸ್ಫೋಟಗೊಂಡ ಅನುಮಾನ!

ಕುರುಬರ ಸಂಘದಲ್ಲಿ ಸಮುದಾಯದ ಪ್ರತಿಭಾನ್ವಿತ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಮಾಡಲು ಹಣವಿಲ್ಲ. ಆದರೆ ಮೀಸಲು ಹೋರಾಟದ ಸಮಾವೇಶಗಳಿಗೆ ಲಕ್ಷಾಂತರ ರೂ ಎಲ್ಲಿಂದ ಹಣ ಬರುತ್ತಿದೆ ಎಂದು ಕೆ.ರಂಗನಾಥ್ ಪ್ರಶ್ನಿಸಿದ್ದಾರೆ.

- Advertisement -
- Advertisement -

ಕುರುಬ ಸಮುದಾಯವನ್ನು ST ವರ್ಗಕ್ಕೆ ಸೇರಿಸಬೇಕೆಂದು ಒತ್ತಾಯಿಸಿ ಜ.15 ರಿಂದ ಕಾಗಿನೆಲೆಯಿಂದ ಆರಂಭಗೊಳ್ಳಲಿರುವ ಪಾದಯಾತ್ರೆಗೆ ಸಿದ್ದತೆ ನಡೆದಿರುವಾಗಲೇ ಈ ಹೋರಾಟದ ಹಿಂದೆ ಕುರುಬ ಸಮುದಾಯವನ್ನು ಒಡೆಯುವ ರಾಜಕೀಯ ಪಿತೂರಿ ಇದೆ ಎಂಬ ಅನುಮಾನ ಪ್ರದೇಶ ಕುರುಬರ ಸಂಘದ ಕಾರ್ಯಕಾರಿಣಿ ಸಭೆಯಲ್ಲಿ ಸ್ಫೋಟಗೊಂಡಿದೆ.

ಭಾನುವಾರ ತುಮಕೂರಿನಲ್ಲಿ ಕರೆಯಲಾಗಿದ್ದ ಪ್ರದೇಶ ಕುರುಬರ ಸಂಘದ ರಾಜ್ಯಕಾರ‍್ಯಕಾರಿಣಿ ಸಭೆಯಲ್ಲಿ ಎಸ್ಟಿ ಮೀಸಲು ಹೋರಾಟ ವಿದ್ಯಮಾನಗಳು ಮುಖ್ಯವಿಚಾರವಾಗಿ ಚರ್ಚೆಗೆ ಬಂದಿದ್ದು, ಸಚಿವ ಕೆ.ಎಸ್ ಈಶ್ವರಪ್ಪ ಅವರ ನೇತೃತ್ವದಲ್ಲಿ ನಡೆಯುತ್ತಿರುವ ಈ ಹೋರಾಟದ ನೈಜ ಉದ್ದೇಶವೇನು? ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಹೊರಗಿಟ್ಟು ನಡೆಯುತ್ತಿರುವ ಹೋರಾಟ ಕುರುಬ ಸಮುದಾಯದ ಎಲ್ಲಾ ನಾಯಕರನ್ನು ಒಳಗೊಂಡು ಯಾಕೆ ನಡೆಯುತ್ತಿಲ್ಲ ಎಂಬ ಪ್ರಶ್ನೆಗಳಿಗೆ ಕಾರ್ಯಕಾರಿಣಿ ಸಭೆಯಲ್ಲಿ ಸಮರ್ಪಕ ಉತ್ತರ ಸಿಗದೆ ಕೊನೆಗೊಂಡಿದೆ.

ಸಭೆಯಲ್ಲಿ ಸಂಘದ ಶಿವಮೊಗ್ಗ ಜಿಲ್ಲೆಯ ಪ್ರತಿನಿಧಿ ನಿರ್ದೇಶಕ ಕೆ.ರಂಗನಾಥ್ ಸೇರಿದಂತೆ ಉತ್ತರ ಕರ್ನಾಟಕದ ಅದರಲ್ಲೂ ಕುರುಬ ಪ್ರಾಬಲ್ಯ ಜಿಲ್ಲೆಗಳ ನಿರ್ದೇಶಕರುಗಳು ಕುರುಬ ಸಮುದಾಯಕ್ಕೆ ಎಸ್ಟಿ ಮೀಸಲು ಬೇಕೆಂದು ನಡೆಯುತ್ತಿರುವ ಹೋರಾಟ ರಾಜಕೀಯ ಪ್ರೇರಿತವಾಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ. “ಬಲವಾದ ಅನುಮಾನಗಳು ಜನರಲ್ಲಿ ವ್ಯಕ್ತವಾಗುತ್ತಿವೆ. ಅಲ್ಲದೆ ಇದರಲ್ಲಿ ಅನೇಕ ಗೊಂದಲಗಳಿವೆ. ಸಮಾಜದ ಅಗ್ರ ನಾಯಕರೂ ಆಗಿರುವ ಸಿದ್ದರಾಮಯ್ಯ ಅವರು ಈ ಹೋರಾಟದಲ್ಲಿ ಪಾಲ್ಗೊಳ್ಳುತ್ತಿಲ್ಲ ಇದು ಬಹುಮುಖ್ಯವಾಗಿ ಗೊಂದಲಕ್ಕೆ ಕಾರಣವಾಗಿದೆ. ಇದನ್ನು ಮೊದಲು ನಿವಾರಿಸಬೇಕು. ಅಲ್ಲಿಯವರೆಗೂ ಮೀಸಲು ಹೋರಾಟದಲ್ಲಿ ತಾವು ಭಾಗವಹಿಸುವುದಿಲ್ಲ” ಎಂದು ಘೋಷಿಸಿದ್ದಾರೆ.

ಕುರುಬ ಸಮುದಾಯ ಎಸ್ಟಿ ಸೇರ್ಪಡೆ ಹೋರಾಟ ಸಮಿತಿಯ ರಾಜ್ಯ ಕಾರ್ಯದರ್ಶಿಯನ್ನಾಗಿ ನನ್ನನ್ನು ನೇಮಕ ಮಾಡಲಾಗಿದೆ. ಆದರೆ ಹೋರಾಟಕ್ಕೆ ಸಂಬಂಧ ಪಟ್ಟ ಅನೇಕ ವಿಚಾರಗಳು ನನಗೆ ಗೊತ್ತಾಗುತ್ತಿಲ್ಲ. ಈ ಹೋರಾಟದ ಹಿಂದೆ ಆರ್ ಎಸ್ ಎಸ್ ಪ್ರಾಯೋಜಿತ ಎಂಬ ಮಾತುಗಳು ಸಾರ್ವಜನಿಕವಾಗಿ ಕೇಳಿ ಬರುತ್ತಿವೆ. ಕುರುಬರ ಸಂಘದಲ್ಲಿ ಸಮುದಾಯದ ಪ್ರತಿಭಾನ್ವಿತ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಮಾಡಲು ಹಣವಿಲ್ಲ. ಆದರೆ ಮೀಸಲು ಹೋರಾಟದ ಸಮಾವೇಶಗಳಿಗೆ ಲಕ್ಷಾಂತರ ರೂಪಾಯಿಗಳು ಖರ್ಚು ಮಾಡಲಾಗುತ್ತಿದೆ. ಇದಕ್ಕೆಲ್ಲಾ ಎಲ್ಲಿಂದ ಹಣ ಬರುತ್ತಿದೆ ಎಂದು ಕೆ.ರಂಗನಾಥ್ ಪ್ರಶ್ನಿಸಿದ್ದಾರೆ.

ಈ ಹೋರಾಟ ಶಿವಮೊಗ್ಗ ಕೇಂದ್ರಿತವಾಗಿ ನಡೆಯುತ್ತಿದೆ. ಮಾಜಿ ಮುಖ್ಯಮಂತ್ರಿಗಳಾಗಿರುವ ಸಿದ್ದರಾಮಯ್ಯ ಅವರು ಹೋರಾಟದಿಂದ ದೂರ ಉಳಿದಿದ್ದಾರೆ. ಇದೂ ಕೂಡ ಸಾರ್ವಜನಿಕ ಚರ್ಚೆಗೆ ಅವಕಾಶವಾಗಿದೆ. ಈ ಹೋರಾಟ ಕುರಿತು ಸಿದ್ದರಾಮಯ್ಯ ಅವರು ಎತ್ತಿರುವ ಮತ್ತು ಸಾರ್ವಜನಿಕವಾಗಿ ಕೇಳಿಬರುತ್ತಿರುವ ಪ್ರಶ್ನೆಗಳಿಂದ ಸಮುದಾಯವೂ ಗೊಂದಲದಲ್ಲಿದೆ. ಸಂಘವು ಮೊದಲು ಇದನ್ನು ಪರಿಹರಿಸಬೇಕು. ಎಲ್ಲಿಯವರೆಗೂ ಸಿದ್ದರಾಮಯ್ಯ ಅವರು ಈ ಹೋರಾಟದಲ್ಲಿ ಪಾಲ್ಗೊಳ್ಳುವುದಿಲ್ಲವೋ ಅಲ್ಲಿಯವರೆಗೂ ತಾವು ಭಾಗವಹಿಸದೆ ತಟಸ್ಥರಾಗಿರುತ್ತೇವೆ ಎಂದು ರಂಗನಾಥ್ ಸೇರಿದಂತೆ ಅನೇಕ ನಿರ್ದೇಶಕರುಗಳು ಘೋಷಿಸಿದ್ದು, ಇದು ಸಂಘದ ಅಧ್ಯಕ್ಷರಿಗೆ ಮತ್ತು ಹೋರಾಟ ಪರವಹಿಸಿದ್ದ ಹಲವು ನಿರ್ದೇಶಕರಿಗೆ ನುಂಗಲಾರದ ತುತ್ತಾಗಿದೆ. ಒಂದು ಹಂತದಲ್ಲಿ ರಂಗನಾಥ್ ಈ ಗೊಂದಲ ಬಗೆಹರಿಸದಿದ್ದರೆ ನಿರ್ದೇಶಕ ಸ್ಥಾನಕ್ಕೆ ತಾವು ರಾಜೀನಾಮೆ ನೀಡಬೇಕಾಗುತ್ತದೆ ಎಂಬ ಎಚ್ಚರಿಕೆಯನ್ನು ನೀಡಿದ್ದಾರೆ.

ಕೆ.ರಂಗನಾಥ್

ಇದಕ್ಕೆ ಮಣಿದ ರಾಜ್ಯ ಕಾರ‍್ಯಕಾರಿಣಿಯು ಜ.5 ರಂದು ಸಚಿವ ಕೆ.ಎಸ್ ಈಶ್ವರಪ್ಪ ಅವರನ್ನೊಳಗೊಂಡಂತೆ ನಿಯೋಗವೊಂದು ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಅವರಿಗಿರಬಹುದಾದ ಅನುಮಾನಗಳನ್ನು ಬಗೆಹರಿಸಿ ಹೋರಾಟಕ್ಕೆ ಕರೆತರುವ ಭರವಸೆಯನ್ನು ನೀಡಿದೆ. ಆದರೆ ಈ ಹೋರಾಟ ಹಿಂದೆ ಆರ್ ಎಸ್ ಎಸ್ ಇದೆ ಎಂದು ಸಿದ್ದರಾಮಯ್ಯ ಅವರೇ ಬಹಿರಂಗವಾಗಿ ಆರೋಪಿಸಿರುವುದರಿಂದ ಅವರನ್ನು ಮನವೊಲಿಸುವಲ್ಲಿ ರಾಜ್ಯ ಕುರುಬ ಸಂಘದ ಪದಾಧಿಕಾರಿಗಳು ಯಶಸ್ವಿಯಾಗುವರೆ ಎಂಬುದು ಯಕ್ಷ ಪ್ರಶ್ನೆಯಾಗಿದೆ.

ಕುರುಬ ಸಮುದಾಯವನ್ನು ಎಸ್ಟಿಗೆ ಸೇರಿಸಬೇಕೆಂಬ ಹೋರಾಟ ಸಮಿತಿಗೆ ಸಚಿವ ಕೆ.ಎಸ್ ಈಶ್ವರಪ್ಪ ಅವರೇ ಗೌರವಾಧ್ಯಕ್ಷರಾಗಿದ್ದಾರೆ. ಅವರ ಹಿಂಬಾಲಕರೆ ಆಗಿರುವ ವಿರೂಪಾಕ್ಷಪ್ಪ ಅಧ್ಯಕ್ಷರಾಗಿದ್ದಾರೆ. ಅಹಿಂದ ಪರ ಹೋರಾಟದ ಹೆಸರಿನಲ್ಲಿ ಅಸ್ತಿತ್ವಕ್ಕೆ ಬಂದು ಈಗಾಗಲೆ ಬರಖಾಸ್ತು ಗೊಂಡಿರುವ ಸಂಗೊಳ್ಳಿರಾಯಣ್ಣ ಬ್ರಿಗೇಡ್ ನಲ್ಲಿದ್ದ ಬಹುತೇಕರು ಈ ಹೋರಾಟ ಮುಂಚೂಣಿ ನಾಯಕರಾಗಿದ್ದಾರೆ. ಈ ವಿಷಯದಲ್ಲಿ ಕಾಗಿನಲೆ ಶ್ರೀಗಳ ನಡೆ ಕೂಡ ಕುರುಬ ಸಮುದಾಯದಲ್ಲಿ ಅಸಮಾಧಾನಕ್ಕೆ ಕಾರಣವಾಗಿದೆ. ಅದಕ್ಕೂ ಮುಖ್ಯವಾಗಿ ರಾಜ್ಯದಲ್ಲಿ ಬಿಜೆಪಿ ಯೇ ಅಧಿಕಾರದಲ್ಲಿದ್ದು, ಈಶ್ವರಪ್ಪ ಅವರು ಹಿರಿಯ ಪ್ರಭಾವಿ ಸಚಿವರೂ ಆಗಿರುವಾಗ ಬೀದಿ ಹೋರಾಟ ಮಾಡುವ ಔಚಿತ್ಯವಾದರೂ ಏನು? ಸರ್ಕಾರವೇ ಕುರುಬ ಸಮುದಾಯದ ಬೇಡಿಕೆಯನ್ನು ಏಕೆ ಅನುಮೋದಿಸಬಾರದು? ಎಂಬ ಪ್ರಶ್ನೆಗಳು ಎದ್ದಿವೆ.

ಸಿದ್ದರಾಮಯ್ಯ ಅವರು ರಾಜ್ಯದಲ್ಲಿ ಸಮಸ್ತ ಹಿಂದುಳಿದ ವರ್ಗಗಳು ಪ್ರಬಲನಾಯಕರಾಗಿ ಬೆಳೆದಿದ್ದಾರೆ. ಆಡಳಿತ ರೂಢ ಬಿಜೆಪಿಗೆ ರಾಜಕೀಯ ಸಿಂಹಸ್ವಪ್ನವಾಗಿದ್ದಾರೆ. ಇದು ಬಿಜೆಪಿಗೆ ಅರಗಿಸಿಕೊಳ್ಳಲಾಗುತ್ತಿಲ್ಲ. ರಾಜ್ಯದಲ್ಲಿ ಬಲಿಷ್ಠ ಹಿಂದುಳಿದ ವರ್ಗವಾಗಿರುವ ಕುರುಬ ಸಮುದಾಯದ ಒಗ್ಗಟ್ಟನ್ನು ಒಡೆದು ಹೋಳು ಮಾಡುವುದು ಮತ್ತು ಆ ಮೂಲಕ ಸಿದ್ದರಾಮಯ್ಯ ಅವರ ಪ್ರಾಬಲ್ಯವನ್ನು ನೆಲಕಚ್ಚಿಸುವ ರಾಜಕೀಯ ಸಂಚಿಗೆ ಸಮುದಾಯವನ್ನು ದಿಕ್ಕು ತಪ್ಪಿಸಲಾಗುತ್ತಿದೆ ಎಂಬ ಮಾತುಗಳು ಕುರುಬ ಸಮುದಾಯದ್ದಷ್ಟೆ ಅಲ್ಲ, ರಾಜಕೀಯ ವಿಶ್ಲೇಷಕರದ್ದೂ ಆಗಿದೆ.

ಎನ್.ರವಿಕುಮಾರ್ ಟೆಲೆಕ್ಸ್

(ಪತ್ರಕರ್ತರು ಮತ್ತು ಯುವ ಬರಹಗಾರರು)


ಇದನ್ನೂ ಓದಿ: ಕುರುಬರ ST ಹೋರಾಟದ ಹಿಂದೆ ಆರ್‌ಎಸ್ಎಸ್‌ನ ಕೈವಾಡವಿದೆ: ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಎಸ್.ಟಿ. ಸೇರ್ಪಡೆಗೆ ಸಂಬಂಧಿಸಿದಂತೆ ಸಿದ್ದರಾಮಯ್ಯ ರವರಿಗೆ ಖಚಿತವಾದ ಚಿತ್ರಣ ಇದೆ…
    ಆದರೆ ಉಳಿದ ಹೋರಾಟಗಾರಿಗೆ ಇದರ ಬಗ್ಗೆ ಮನವರಿಕೆ ಇಲ್ಲ…. ಪ.ಪಂಗಡ ಕ್ಕೆ ಸೇರಲು ಬುಡಕಟ್ಟು ಲಕ್ಷಣಗಳಾದ ಭಾಷೆ, ಉಡುಪು, ಊಟೋಪಚಾರ,ದೈವಿಕ ಪರಿಕಲ್ಪನೆ ಆಚಾರ ವಿಚಾರ… ಮತ್ತು ಮುಂತಾದ ವಿಚಾರಗಳನ್ನು ಸಿದ್ದರಾಮಯ್ಯರವರಿಗೆ ಕಲ್ಪನೆ ಇದ್ದು ಇದರಿಂದ ದೂರ ಉಳಿದಿದ್ದಾರೆ…

LEAVE A REPLY

Please enter your comment!
Please enter your name here

- Advertisment -

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...