Homeಕರ್ನಾಟಕಎಸ್ಟಿ ಮೀಸಲು ಹೋರಾಟದ ಹಿಂದೆ RSS: ಕುರುಬ ಸಂಘದಲ್ಲಿ ಸ್ಫೋಟಗೊಂಡ ಅನುಮಾನ!

ಎಸ್ಟಿ ಮೀಸಲು ಹೋರಾಟದ ಹಿಂದೆ RSS: ಕುರುಬ ಸಂಘದಲ್ಲಿ ಸ್ಫೋಟಗೊಂಡ ಅನುಮಾನ!

ಕುರುಬರ ಸಂಘದಲ್ಲಿ ಸಮುದಾಯದ ಪ್ರತಿಭಾನ್ವಿತ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಮಾಡಲು ಹಣವಿಲ್ಲ. ಆದರೆ ಮೀಸಲು ಹೋರಾಟದ ಸಮಾವೇಶಗಳಿಗೆ ಲಕ್ಷಾಂತರ ರೂ ಎಲ್ಲಿಂದ ಹಣ ಬರುತ್ತಿದೆ ಎಂದು ಕೆ.ರಂಗನಾಥ್ ಪ್ರಶ್ನಿಸಿದ್ದಾರೆ.

- Advertisement -
- Advertisement -

ಕುರುಬ ಸಮುದಾಯವನ್ನು ST ವರ್ಗಕ್ಕೆ ಸೇರಿಸಬೇಕೆಂದು ಒತ್ತಾಯಿಸಿ ಜ.15 ರಿಂದ ಕಾಗಿನೆಲೆಯಿಂದ ಆರಂಭಗೊಳ್ಳಲಿರುವ ಪಾದಯಾತ್ರೆಗೆ ಸಿದ್ದತೆ ನಡೆದಿರುವಾಗಲೇ ಈ ಹೋರಾಟದ ಹಿಂದೆ ಕುರುಬ ಸಮುದಾಯವನ್ನು ಒಡೆಯುವ ರಾಜಕೀಯ ಪಿತೂರಿ ಇದೆ ಎಂಬ ಅನುಮಾನ ಪ್ರದೇಶ ಕುರುಬರ ಸಂಘದ ಕಾರ್ಯಕಾರಿಣಿ ಸಭೆಯಲ್ಲಿ ಸ್ಫೋಟಗೊಂಡಿದೆ.

ಭಾನುವಾರ ತುಮಕೂರಿನಲ್ಲಿ ಕರೆಯಲಾಗಿದ್ದ ಪ್ರದೇಶ ಕುರುಬರ ಸಂಘದ ರಾಜ್ಯಕಾರ‍್ಯಕಾರಿಣಿ ಸಭೆಯಲ್ಲಿ ಎಸ್ಟಿ ಮೀಸಲು ಹೋರಾಟ ವಿದ್ಯಮಾನಗಳು ಮುಖ್ಯವಿಚಾರವಾಗಿ ಚರ್ಚೆಗೆ ಬಂದಿದ್ದು, ಸಚಿವ ಕೆ.ಎಸ್ ಈಶ್ವರಪ್ಪ ಅವರ ನೇತೃತ್ವದಲ್ಲಿ ನಡೆಯುತ್ತಿರುವ ಈ ಹೋರಾಟದ ನೈಜ ಉದ್ದೇಶವೇನು? ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಹೊರಗಿಟ್ಟು ನಡೆಯುತ್ತಿರುವ ಹೋರಾಟ ಕುರುಬ ಸಮುದಾಯದ ಎಲ್ಲಾ ನಾಯಕರನ್ನು ಒಳಗೊಂಡು ಯಾಕೆ ನಡೆಯುತ್ತಿಲ್ಲ ಎಂಬ ಪ್ರಶ್ನೆಗಳಿಗೆ ಕಾರ್ಯಕಾರಿಣಿ ಸಭೆಯಲ್ಲಿ ಸಮರ್ಪಕ ಉತ್ತರ ಸಿಗದೆ ಕೊನೆಗೊಂಡಿದೆ.

ಸಭೆಯಲ್ಲಿ ಸಂಘದ ಶಿವಮೊಗ್ಗ ಜಿಲ್ಲೆಯ ಪ್ರತಿನಿಧಿ ನಿರ್ದೇಶಕ ಕೆ.ರಂಗನಾಥ್ ಸೇರಿದಂತೆ ಉತ್ತರ ಕರ್ನಾಟಕದ ಅದರಲ್ಲೂ ಕುರುಬ ಪ್ರಾಬಲ್ಯ ಜಿಲ್ಲೆಗಳ ನಿರ್ದೇಶಕರುಗಳು ಕುರುಬ ಸಮುದಾಯಕ್ಕೆ ಎಸ್ಟಿ ಮೀಸಲು ಬೇಕೆಂದು ನಡೆಯುತ್ತಿರುವ ಹೋರಾಟ ರಾಜಕೀಯ ಪ್ರೇರಿತವಾಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ. “ಬಲವಾದ ಅನುಮಾನಗಳು ಜನರಲ್ಲಿ ವ್ಯಕ್ತವಾಗುತ್ತಿವೆ. ಅಲ್ಲದೆ ಇದರಲ್ಲಿ ಅನೇಕ ಗೊಂದಲಗಳಿವೆ. ಸಮಾಜದ ಅಗ್ರ ನಾಯಕರೂ ಆಗಿರುವ ಸಿದ್ದರಾಮಯ್ಯ ಅವರು ಈ ಹೋರಾಟದಲ್ಲಿ ಪಾಲ್ಗೊಳ್ಳುತ್ತಿಲ್ಲ ಇದು ಬಹುಮುಖ್ಯವಾಗಿ ಗೊಂದಲಕ್ಕೆ ಕಾರಣವಾಗಿದೆ. ಇದನ್ನು ಮೊದಲು ನಿವಾರಿಸಬೇಕು. ಅಲ್ಲಿಯವರೆಗೂ ಮೀಸಲು ಹೋರಾಟದಲ್ಲಿ ತಾವು ಭಾಗವಹಿಸುವುದಿಲ್ಲ” ಎಂದು ಘೋಷಿಸಿದ್ದಾರೆ.

ಕುರುಬ ಸಮುದಾಯ ಎಸ್ಟಿ ಸೇರ್ಪಡೆ ಹೋರಾಟ ಸಮಿತಿಯ ರಾಜ್ಯ ಕಾರ್ಯದರ್ಶಿಯನ್ನಾಗಿ ನನ್ನನ್ನು ನೇಮಕ ಮಾಡಲಾಗಿದೆ. ಆದರೆ ಹೋರಾಟಕ್ಕೆ ಸಂಬಂಧ ಪಟ್ಟ ಅನೇಕ ವಿಚಾರಗಳು ನನಗೆ ಗೊತ್ತಾಗುತ್ತಿಲ್ಲ. ಈ ಹೋರಾಟದ ಹಿಂದೆ ಆರ್ ಎಸ್ ಎಸ್ ಪ್ರಾಯೋಜಿತ ಎಂಬ ಮಾತುಗಳು ಸಾರ್ವಜನಿಕವಾಗಿ ಕೇಳಿ ಬರುತ್ತಿವೆ. ಕುರುಬರ ಸಂಘದಲ್ಲಿ ಸಮುದಾಯದ ಪ್ರತಿಭಾನ್ವಿತ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಮಾಡಲು ಹಣವಿಲ್ಲ. ಆದರೆ ಮೀಸಲು ಹೋರಾಟದ ಸಮಾವೇಶಗಳಿಗೆ ಲಕ್ಷಾಂತರ ರೂಪಾಯಿಗಳು ಖರ್ಚು ಮಾಡಲಾಗುತ್ತಿದೆ. ಇದಕ್ಕೆಲ್ಲಾ ಎಲ್ಲಿಂದ ಹಣ ಬರುತ್ತಿದೆ ಎಂದು ಕೆ.ರಂಗನಾಥ್ ಪ್ರಶ್ನಿಸಿದ್ದಾರೆ.

ಈ ಹೋರಾಟ ಶಿವಮೊಗ್ಗ ಕೇಂದ್ರಿತವಾಗಿ ನಡೆಯುತ್ತಿದೆ. ಮಾಜಿ ಮುಖ್ಯಮಂತ್ರಿಗಳಾಗಿರುವ ಸಿದ್ದರಾಮಯ್ಯ ಅವರು ಹೋರಾಟದಿಂದ ದೂರ ಉಳಿದಿದ್ದಾರೆ. ಇದೂ ಕೂಡ ಸಾರ್ವಜನಿಕ ಚರ್ಚೆಗೆ ಅವಕಾಶವಾಗಿದೆ. ಈ ಹೋರಾಟ ಕುರಿತು ಸಿದ್ದರಾಮಯ್ಯ ಅವರು ಎತ್ತಿರುವ ಮತ್ತು ಸಾರ್ವಜನಿಕವಾಗಿ ಕೇಳಿಬರುತ್ತಿರುವ ಪ್ರಶ್ನೆಗಳಿಂದ ಸಮುದಾಯವೂ ಗೊಂದಲದಲ್ಲಿದೆ. ಸಂಘವು ಮೊದಲು ಇದನ್ನು ಪರಿಹರಿಸಬೇಕು. ಎಲ್ಲಿಯವರೆಗೂ ಸಿದ್ದರಾಮಯ್ಯ ಅವರು ಈ ಹೋರಾಟದಲ್ಲಿ ಪಾಲ್ಗೊಳ್ಳುವುದಿಲ್ಲವೋ ಅಲ್ಲಿಯವರೆಗೂ ತಾವು ಭಾಗವಹಿಸದೆ ತಟಸ್ಥರಾಗಿರುತ್ತೇವೆ ಎಂದು ರಂಗನಾಥ್ ಸೇರಿದಂತೆ ಅನೇಕ ನಿರ್ದೇಶಕರುಗಳು ಘೋಷಿಸಿದ್ದು, ಇದು ಸಂಘದ ಅಧ್ಯಕ್ಷರಿಗೆ ಮತ್ತು ಹೋರಾಟ ಪರವಹಿಸಿದ್ದ ಹಲವು ನಿರ್ದೇಶಕರಿಗೆ ನುಂಗಲಾರದ ತುತ್ತಾಗಿದೆ. ಒಂದು ಹಂತದಲ್ಲಿ ರಂಗನಾಥ್ ಈ ಗೊಂದಲ ಬಗೆಹರಿಸದಿದ್ದರೆ ನಿರ್ದೇಶಕ ಸ್ಥಾನಕ್ಕೆ ತಾವು ರಾಜೀನಾಮೆ ನೀಡಬೇಕಾಗುತ್ತದೆ ಎಂಬ ಎಚ್ಚರಿಕೆಯನ್ನು ನೀಡಿದ್ದಾರೆ.

ಕೆ.ರಂಗನಾಥ್

ಇದಕ್ಕೆ ಮಣಿದ ರಾಜ್ಯ ಕಾರ‍್ಯಕಾರಿಣಿಯು ಜ.5 ರಂದು ಸಚಿವ ಕೆ.ಎಸ್ ಈಶ್ವರಪ್ಪ ಅವರನ್ನೊಳಗೊಂಡಂತೆ ನಿಯೋಗವೊಂದು ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಅವರಿಗಿರಬಹುದಾದ ಅನುಮಾನಗಳನ್ನು ಬಗೆಹರಿಸಿ ಹೋರಾಟಕ್ಕೆ ಕರೆತರುವ ಭರವಸೆಯನ್ನು ನೀಡಿದೆ. ಆದರೆ ಈ ಹೋರಾಟ ಹಿಂದೆ ಆರ್ ಎಸ್ ಎಸ್ ಇದೆ ಎಂದು ಸಿದ್ದರಾಮಯ್ಯ ಅವರೇ ಬಹಿರಂಗವಾಗಿ ಆರೋಪಿಸಿರುವುದರಿಂದ ಅವರನ್ನು ಮನವೊಲಿಸುವಲ್ಲಿ ರಾಜ್ಯ ಕುರುಬ ಸಂಘದ ಪದಾಧಿಕಾರಿಗಳು ಯಶಸ್ವಿಯಾಗುವರೆ ಎಂಬುದು ಯಕ್ಷ ಪ್ರಶ್ನೆಯಾಗಿದೆ.

ಕುರುಬ ಸಮುದಾಯವನ್ನು ಎಸ್ಟಿಗೆ ಸೇರಿಸಬೇಕೆಂಬ ಹೋರಾಟ ಸಮಿತಿಗೆ ಸಚಿವ ಕೆ.ಎಸ್ ಈಶ್ವರಪ್ಪ ಅವರೇ ಗೌರವಾಧ್ಯಕ್ಷರಾಗಿದ್ದಾರೆ. ಅವರ ಹಿಂಬಾಲಕರೆ ಆಗಿರುವ ವಿರೂಪಾಕ್ಷಪ್ಪ ಅಧ್ಯಕ್ಷರಾಗಿದ್ದಾರೆ. ಅಹಿಂದ ಪರ ಹೋರಾಟದ ಹೆಸರಿನಲ್ಲಿ ಅಸ್ತಿತ್ವಕ್ಕೆ ಬಂದು ಈಗಾಗಲೆ ಬರಖಾಸ್ತು ಗೊಂಡಿರುವ ಸಂಗೊಳ್ಳಿರಾಯಣ್ಣ ಬ್ರಿಗೇಡ್ ನಲ್ಲಿದ್ದ ಬಹುತೇಕರು ಈ ಹೋರಾಟ ಮುಂಚೂಣಿ ನಾಯಕರಾಗಿದ್ದಾರೆ. ಈ ವಿಷಯದಲ್ಲಿ ಕಾಗಿನಲೆ ಶ್ರೀಗಳ ನಡೆ ಕೂಡ ಕುರುಬ ಸಮುದಾಯದಲ್ಲಿ ಅಸಮಾಧಾನಕ್ಕೆ ಕಾರಣವಾಗಿದೆ. ಅದಕ್ಕೂ ಮುಖ್ಯವಾಗಿ ರಾಜ್ಯದಲ್ಲಿ ಬಿಜೆಪಿ ಯೇ ಅಧಿಕಾರದಲ್ಲಿದ್ದು, ಈಶ್ವರಪ್ಪ ಅವರು ಹಿರಿಯ ಪ್ರಭಾವಿ ಸಚಿವರೂ ಆಗಿರುವಾಗ ಬೀದಿ ಹೋರಾಟ ಮಾಡುವ ಔಚಿತ್ಯವಾದರೂ ಏನು? ಸರ್ಕಾರವೇ ಕುರುಬ ಸಮುದಾಯದ ಬೇಡಿಕೆಯನ್ನು ಏಕೆ ಅನುಮೋದಿಸಬಾರದು? ಎಂಬ ಪ್ರಶ್ನೆಗಳು ಎದ್ದಿವೆ.

ಸಿದ್ದರಾಮಯ್ಯ ಅವರು ರಾಜ್ಯದಲ್ಲಿ ಸಮಸ್ತ ಹಿಂದುಳಿದ ವರ್ಗಗಳು ಪ್ರಬಲನಾಯಕರಾಗಿ ಬೆಳೆದಿದ್ದಾರೆ. ಆಡಳಿತ ರೂಢ ಬಿಜೆಪಿಗೆ ರಾಜಕೀಯ ಸಿಂಹಸ್ವಪ್ನವಾಗಿದ್ದಾರೆ. ಇದು ಬಿಜೆಪಿಗೆ ಅರಗಿಸಿಕೊಳ್ಳಲಾಗುತ್ತಿಲ್ಲ. ರಾಜ್ಯದಲ್ಲಿ ಬಲಿಷ್ಠ ಹಿಂದುಳಿದ ವರ್ಗವಾಗಿರುವ ಕುರುಬ ಸಮುದಾಯದ ಒಗ್ಗಟ್ಟನ್ನು ಒಡೆದು ಹೋಳು ಮಾಡುವುದು ಮತ್ತು ಆ ಮೂಲಕ ಸಿದ್ದರಾಮಯ್ಯ ಅವರ ಪ್ರಾಬಲ್ಯವನ್ನು ನೆಲಕಚ್ಚಿಸುವ ರಾಜಕೀಯ ಸಂಚಿಗೆ ಸಮುದಾಯವನ್ನು ದಿಕ್ಕು ತಪ್ಪಿಸಲಾಗುತ್ತಿದೆ ಎಂಬ ಮಾತುಗಳು ಕುರುಬ ಸಮುದಾಯದ್ದಷ್ಟೆ ಅಲ್ಲ, ರಾಜಕೀಯ ವಿಶ್ಲೇಷಕರದ್ದೂ ಆಗಿದೆ.

ಎನ್.ರವಿಕುಮಾರ್ ಟೆಲೆಕ್ಸ್

(ಪತ್ರಕರ್ತರು ಮತ್ತು ಯುವ ಬರಹಗಾರರು)


ಇದನ್ನೂ ಓದಿ: ಕುರುಬರ ST ಹೋರಾಟದ ಹಿಂದೆ ಆರ್‌ಎಸ್ಎಸ್‌ನ ಕೈವಾಡವಿದೆ: ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಎಸ್.ಟಿ. ಸೇರ್ಪಡೆಗೆ ಸಂಬಂಧಿಸಿದಂತೆ ಸಿದ್ದರಾಮಯ್ಯ ರವರಿಗೆ ಖಚಿತವಾದ ಚಿತ್ರಣ ಇದೆ…
    ಆದರೆ ಉಳಿದ ಹೋರಾಟಗಾರಿಗೆ ಇದರ ಬಗ್ಗೆ ಮನವರಿಕೆ ಇಲ್ಲ…. ಪ.ಪಂಗಡ ಕ್ಕೆ ಸೇರಲು ಬುಡಕಟ್ಟು ಲಕ್ಷಣಗಳಾದ ಭಾಷೆ, ಉಡುಪು, ಊಟೋಪಚಾರ,ದೈವಿಕ ಪರಿಕಲ್ಪನೆ ಆಚಾರ ವಿಚಾರ… ಮತ್ತು ಮುಂತಾದ ವಿಚಾರಗಳನ್ನು ಸಿದ್ದರಾಮಯ್ಯರವರಿಗೆ ಕಲ್ಪನೆ ಇದ್ದು ಇದರಿಂದ ದೂರ ಉಳಿದಿದ್ದಾರೆ…

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...