Homeಕರ್ನಾಟಕಎಸ್ಟಿ ಮೀಸಲು ಹೋರಾಟದ ಹಿಂದೆ RSS: ಕುರುಬ ಸಂಘದಲ್ಲಿ ಸ್ಫೋಟಗೊಂಡ ಅನುಮಾನ!

ಎಸ್ಟಿ ಮೀಸಲು ಹೋರಾಟದ ಹಿಂದೆ RSS: ಕುರುಬ ಸಂಘದಲ್ಲಿ ಸ್ಫೋಟಗೊಂಡ ಅನುಮಾನ!

ಕುರುಬರ ಸಂಘದಲ್ಲಿ ಸಮುದಾಯದ ಪ್ರತಿಭಾನ್ವಿತ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಮಾಡಲು ಹಣವಿಲ್ಲ. ಆದರೆ ಮೀಸಲು ಹೋರಾಟದ ಸಮಾವೇಶಗಳಿಗೆ ಲಕ್ಷಾಂತರ ರೂ ಎಲ್ಲಿಂದ ಹಣ ಬರುತ್ತಿದೆ ಎಂದು ಕೆ.ರಂಗನಾಥ್ ಪ್ರಶ್ನಿಸಿದ್ದಾರೆ.

- Advertisement -
- Advertisement -

ಕುರುಬ ಸಮುದಾಯವನ್ನು ST ವರ್ಗಕ್ಕೆ ಸೇರಿಸಬೇಕೆಂದು ಒತ್ತಾಯಿಸಿ ಜ.15 ರಿಂದ ಕಾಗಿನೆಲೆಯಿಂದ ಆರಂಭಗೊಳ್ಳಲಿರುವ ಪಾದಯಾತ್ರೆಗೆ ಸಿದ್ದತೆ ನಡೆದಿರುವಾಗಲೇ ಈ ಹೋರಾಟದ ಹಿಂದೆ ಕುರುಬ ಸಮುದಾಯವನ್ನು ಒಡೆಯುವ ರಾಜಕೀಯ ಪಿತೂರಿ ಇದೆ ಎಂಬ ಅನುಮಾನ ಪ್ರದೇಶ ಕುರುಬರ ಸಂಘದ ಕಾರ್ಯಕಾರಿಣಿ ಸಭೆಯಲ್ಲಿ ಸ್ಫೋಟಗೊಂಡಿದೆ.

ಭಾನುವಾರ ತುಮಕೂರಿನಲ್ಲಿ ಕರೆಯಲಾಗಿದ್ದ ಪ್ರದೇಶ ಕುರುಬರ ಸಂಘದ ರಾಜ್ಯಕಾರ‍್ಯಕಾರಿಣಿ ಸಭೆಯಲ್ಲಿ ಎಸ್ಟಿ ಮೀಸಲು ಹೋರಾಟ ವಿದ್ಯಮಾನಗಳು ಮುಖ್ಯವಿಚಾರವಾಗಿ ಚರ್ಚೆಗೆ ಬಂದಿದ್ದು, ಸಚಿವ ಕೆ.ಎಸ್ ಈಶ್ವರಪ್ಪ ಅವರ ನೇತೃತ್ವದಲ್ಲಿ ನಡೆಯುತ್ತಿರುವ ಈ ಹೋರಾಟದ ನೈಜ ಉದ್ದೇಶವೇನು? ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಹೊರಗಿಟ್ಟು ನಡೆಯುತ್ತಿರುವ ಹೋರಾಟ ಕುರುಬ ಸಮುದಾಯದ ಎಲ್ಲಾ ನಾಯಕರನ್ನು ಒಳಗೊಂಡು ಯಾಕೆ ನಡೆಯುತ್ತಿಲ್ಲ ಎಂಬ ಪ್ರಶ್ನೆಗಳಿಗೆ ಕಾರ್ಯಕಾರಿಣಿ ಸಭೆಯಲ್ಲಿ ಸಮರ್ಪಕ ಉತ್ತರ ಸಿಗದೆ ಕೊನೆಗೊಂಡಿದೆ.

ಸಭೆಯಲ್ಲಿ ಸಂಘದ ಶಿವಮೊಗ್ಗ ಜಿಲ್ಲೆಯ ಪ್ರತಿನಿಧಿ ನಿರ್ದೇಶಕ ಕೆ.ರಂಗನಾಥ್ ಸೇರಿದಂತೆ ಉತ್ತರ ಕರ್ನಾಟಕದ ಅದರಲ್ಲೂ ಕುರುಬ ಪ್ರಾಬಲ್ಯ ಜಿಲ್ಲೆಗಳ ನಿರ್ದೇಶಕರುಗಳು ಕುರುಬ ಸಮುದಾಯಕ್ಕೆ ಎಸ್ಟಿ ಮೀಸಲು ಬೇಕೆಂದು ನಡೆಯುತ್ತಿರುವ ಹೋರಾಟ ರಾಜಕೀಯ ಪ್ರೇರಿತವಾಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ. “ಬಲವಾದ ಅನುಮಾನಗಳು ಜನರಲ್ಲಿ ವ್ಯಕ್ತವಾಗುತ್ತಿವೆ. ಅಲ್ಲದೆ ಇದರಲ್ಲಿ ಅನೇಕ ಗೊಂದಲಗಳಿವೆ. ಸಮಾಜದ ಅಗ್ರ ನಾಯಕರೂ ಆಗಿರುವ ಸಿದ್ದರಾಮಯ್ಯ ಅವರು ಈ ಹೋರಾಟದಲ್ಲಿ ಪಾಲ್ಗೊಳ್ಳುತ್ತಿಲ್ಲ ಇದು ಬಹುಮುಖ್ಯವಾಗಿ ಗೊಂದಲಕ್ಕೆ ಕಾರಣವಾಗಿದೆ. ಇದನ್ನು ಮೊದಲು ನಿವಾರಿಸಬೇಕು. ಅಲ್ಲಿಯವರೆಗೂ ಮೀಸಲು ಹೋರಾಟದಲ್ಲಿ ತಾವು ಭಾಗವಹಿಸುವುದಿಲ್ಲ” ಎಂದು ಘೋಷಿಸಿದ್ದಾರೆ.

ಕುರುಬ ಸಮುದಾಯ ಎಸ್ಟಿ ಸೇರ್ಪಡೆ ಹೋರಾಟ ಸಮಿತಿಯ ರಾಜ್ಯ ಕಾರ್ಯದರ್ಶಿಯನ್ನಾಗಿ ನನ್ನನ್ನು ನೇಮಕ ಮಾಡಲಾಗಿದೆ. ಆದರೆ ಹೋರಾಟಕ್ಕೆ ಸಂಬಂಧ ಪಟ್ಟ ಅನೇಕ ವಿಚಾರಗಳು ನನಗೆ ಗೊತ್ತಾಗುತ್ತಿಲ್ಲ. ಈ ಹೋರಾಟದ ಹಿಂದೆ ಆರ್ ಎಸ್ ಎಸ್ ಪ್ರಾಯೋಜಿತ ಎಂಬ ಮಾತುಗಳು ಸಾರ್ವಜನಿಕವಾಗಿ ಕೇಳಿ ಬರುತ್ತಿವೆ. ಕುರುಬರ ಸಂಘದಲ್ಲಿ ಸಮುದಾಯದ ಪ್ರತಿಭಾನ್ವಿತ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಮಾಡಲು ಹಣವಿಲ್ಲ. ಆದರೆ ಮೀಸಲು ಹೋರಾಟದ ಸಮಾವೇಶಗಳಿಗೆ ಲಕ್ಷಾಂತರ ರೂಪಾಯಿಗಳು ಖರ್ಚು ಮಾಡಲಾಗುತ್ತಿದೆ. ಇದಕ್ಕೆಲ್ಲಾ ಎಲ್ಲಿಂದ ಹಣ ಬರುತ್ತಿದೆ ಎಂದು ಕೆ.ರಂಗನಾಥ್ ಪ್ರಶ್ನಿಸಿದ್ದಾರೆ.

ಈ ಹೋರಾಟ ಶಿವಮೊಗ್ಗ ಕೇಂದ್ರಿತವಾಗಿ ನಡೆಯುತ್ತಿದೆ. ಮಾಜಿ ಮುಖ್ಯಮಂತ್ರಿಗಳಾಗಿರುವ ಸಿದ್ದರಾಮಯ್ಯ ಅವರು ಹೋರಾಟದಿಂದ ದೂರ ಉಳಿದಿದ್ದಾರೆ. ಇದೂ ಕೂಡ ಸಾರ್ವಜನಿಕ ಚರ್ಚೆಗೆ ಅವಕಾಶವಾಗಿದೆ. ಈ ಹೋರಾಟ ಕುರಿತು ಸಿದ್ದರಾಮಯ್ಯ ಅವರು ಎತ್ತಿರುವ ಮತ್ತು ಸಾರ್ವಜನಿಕವಾಗಿ ಕೇಳಿಬರುತ್ತಿರುವ ಪ್ರಶ್ನೆಗಳಿಂದ ಸಮುದಾಯವೂ ಗೊಂದಲದಲ್ಲಿದೆ. ಸಂಘವು ಮೊದಲು ಇದನ್ನು ಪರಿಹರಿಸಬೇಕು. ಎಲ್ಲಿಯವರೆಗೂ ಸಿದ್ದರಾಮಯ್ಯ ಅವರು ಈ ಹೋರಾಟದಲ್ಲಿ ಪಾಲ್ಗೊಳ್ಳುವುದಿಲ್ಲವೋ ಅಲ್ಲಿಯವರೆಗೂ ತಾವು ಭಾಗವಹಿಸದೆ ತಟಸ್ಥರಾಗಿರುತ್ತೇವೆ ಎಂದು ರಂಗನಾಥ್ ಸೇರಿದಂತೆ ಅನೇಕ ನಿರ್ದೇಶಕರುಗಳು ಘೋಷಿಸಿದ್ದು, ಇದು ಸಂಘದ ಅಧ್ಯಕ್ಷರಿಗೆ ಮತ್ತು ಹೋರಾಟ ಪರವಹಿಸಿದ್ದ ಹಲವು ನಿರ್ದೇಶಕರಿಗೆ ನುಂಗಲಾರದ ತುತ್ತಾಗಿದೆ. ಒಂದು ಹಂತದಲ್ಲಿ ರಂಗನಾಥ್ ಈ ಗೊಂದಲ ಬಗೆಹರಿಸದಿದ್ದರೆ ನಿರ್ದೇಶಕ ಸ್ಥಾನಕ್ಕೆ ತಾವು ರಾಜೀನಾಮೆ ನೀಡಬೇಕಾಗುತ್ತದೆ ಎಂಬ ಎಚ್ಚರಿಕೆಯನ್ನು ನೀಡಿದ್ದಾರೆ.

ಕೆ.ರಂಗನಾಥ್

ಇದಕ್ಕೆ ಮಣಿದ ರಾಜ್ಯ ಕಾರ‍್ಯಕಾರಿಣಿಯು ಜ.5 ರಂದು ಸಚಿವ ಕೆ.ಎಸ್ ಈಶ್ವರಪ್ಪ ಅವರನ್ನೊಳಗೊಂಡಂತೆ ನಿಯೋಗವೊಂದು ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಅವರಿಗಿರಬಹುದಾದ ಅನುಮಾನಗಳನ್ನು ಬಗೆಹರಿಸಿ ಹೋರಾಟಕ್ಕೆ ಕರೆತರುವ ಭರವಸೆಯನ್ನು ನೀಡಿದೆ. ಆದರೆ ಈ ಹೋರಾಟ ಹಿಂದೆ ಆರ್ ಎಸ್ ಎಸ್ ಇದೆ ಎಂದು ಸಿದ್ದರಾಮಯ್ಯ ಅವರೇ ಬಹಿರಂಗವಾಗಿ ಆರೋಪಿಸಿರುವುದರಿಂದ ಅವರನ್ನು ಮನವೊಲಿಸುವಲ್ಲಿ ರಾಜ್ಯ ಕುರುಬ ಸಂಘದ ಪದಾಧಿಕಾರಿಗಳು ಯಶಸ್ವಿಯಾಗುವರೆ ಎಂಬುದು ಯಕ್ಷ ಪ್ರಶ್ನೆಯಾಗಿದೆ.

ಕುರುಬ ಸಮುದಾಯವನ್ನು ಎಸ್ಟಿಗೆ ಸೇರಿಸಬೇಕೆಂಬ ಹೋರಾಟ ಸಮಿತಿಗೆ ಸಚಿವ ಕೆ.ಎಸ್ ಈಶ್ವರಪ್ಪ ಅವರೇ ಗೌರವಾಧ್ಯಕ್ಷರಾಗಿದ್ದಾರೆ. ಅವರ ಹಿಂಬಾಲಕರೆ ಆಗಿರುವ ವಿರೂಪಾಕ್ಷಪ್ಪ ಅಧ್ಯಕ್ಷರಾಗಿದ್ದಾರೆ. ಅಹಿಂದ ಪರ ಹೋರಾಟದ ಹೆಸರಿನಲ್ಲಿ ಅಸ್ತಿತ್ವಕ್ಕೆ ಬಂದು ಈಗಾಗಲೆ ಬರಖಾಸ್ತು ಗೊಂಡಿರುವ ಸಂಗೊಳ್ಳಿರಾಯಣ್ಣ ಬ್ರಿಗೇಡ್ ನಲ್ಲಿದ್ದ ಬಹುತೇಕರು ಈ ಹೋರಾಟ ಮುಂಚೂಣಿ ನಾಯಕರಾಗಿದ್ದಾರೆ. ಈ ವಿಷಯದಲ್ಲಿ ಕಾಗಿನಲೆ ಶ್ರೀಗಳ ನಡೆ ಕೂಡ ಕುರುಬ ಸಮುದಾಯದಲ್ಲಿ ಅಸಮಾಧಾನಕ್ಕೆ ಕಾರಣವಾಗಿದೆ. ಅದಕ್ಕೂ ಮುಖ್ಯವಾಗಿ ರಾಜ್ಯದಲ್ಲಿ ಬಿಜೆಪಿ ಯೇ ಅಧಿಕಾರದಲ್ಲಿದ್ದು, ಈಶ್ವರಪ್ಪ ಅವರು ಹಿರಿಯ ಪ್ರಭಾವಿ ಸಚಿವರೂ ಆಗಿರುವಾಗ ಬೀದಿ ಹೋರಾಟ ಮಾಡುವ ಔಚಿತ್ಯವಾದರೂ ಏನು? ಸರ್ಕಾರವೇ ಕುರುಬ ಸಮುದಾಯದ ಬೇಡಿಕೆಯನ್ನು ಏಕೆ ಅನುಮೋದಿಸಬಾರದು? ಎಂಬ ಪ್ರಶ್ನೆಗಳು ಎದ್ದಿವೆ.

ಸಿದ್ದರಾಮಯ್ಯ ಅವರು ರಾಜ್ಯದಲ್ಲಿ ಸಮಸ್ತ ಹಿಂದುಳಿದ ವರ್ಗಗಳು ಪ್ರಬಲನಾಯಕರಾಗಿ ಬೆಳೆದಿದ್ದಾರೆ. ಆಡಳಿತ ರೂಢ ಬಿಜೆಪಿಗೆ ರಾಜಕೀಯ ಸಿಂಹಸ್ವಪ್ನವಾಗಿದ್ದಾರೆ. ಇದು ಬಿಜೆಪಿಗೆ ಅರಗಿಸಿಕೊಳ್ಳಲಾಗುತ್ತಿಲ್ಲ. ರಾಜ್ಯದಲ್ಲಿ ಬಲಿಷ್ಠ ಹಿಂದುಳಿದ ವರ್ಗವಾಗಿರುವ ಕುರುಬ ಸಮುದಾಯದ ಒಗ್ಗಟ್ಟನ್ನು ಒಡೆದು ಹೋಳು ಮಾಡುವುದು ಮತ್ತು ಆ ಮೂಲಕ ಸಿದ್ದರಾಮಯ್ಯ ಅವರ ಪ್ರಾಬಲ್ಯವನ್ನು ನೆಲಕಚ್ಚಿಸುವ ರಾಜಕೀಯ ಸಂಚಿಗೆ ಸಮುದಾಯವನ್ನು ದಿಕ್ಕು ತಪ್ಪಿಸಲಾಗುತ್ತಿದೆ ಎಂಬ ಮಾತುಗಳು ಕುರುಬ ಸಮುದಾಯದ್ದಷ್ಟೆ ಅಲ್ಲ, ರಾಜಕೀಯ ವಿಶ್ಲೇಷಕರದ್ದೂ ಆಗಿದೆ.

ಎನ್.ರವಿಕುಮಾರ್ ಟೆಲೆಕ್ಸ್

(ಪತ್ರಕರ್ತರು ಮತ್ತು ಯುವ ಬರಹಗಾರರು)


ಇದನ್ನೂ ಓದಿ: ಕುರುಬರ ST ಹೋರಾಟದ ಹಿಂದೆ ಆರ್‌ಎಸ್ಎಸ್‌ನ ಕೈವಾಡವಿದೆ: ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಎಸ್.ಟಿ. ಸೇರ್ಪಡೆಗೆ ಸಂಬಂಧಿಸಿದಂತೆ ಸಿದ್ದರಾಮಯ್ಯ ರವರಿಗೆ ಖಚಿತವಾದ ಚಿತ್ರಣ ಇದೆ…
    ಆದರೆ ಉಳಿದ ಹೋರಾಟಗಾರಿಗೆ ಇದರ ಬಗ್ಗೆ ಮನವರಿಕೆ ಇಲ್ಲ…. ಪ.ಪಂಗಡ ಕ್ಕೆ ಸೇರಲು ಬುಡಕಟ್ಟು ಲಕ್ಷಣಗಳಾದ ಭಾಷೆ, ಉಡುಪು, ಊಟೋಪಚಾರ,ದೈವಿಕ ಪರಿಕಲ್ಪನೆ ಆಚಾರ ವಿಚಾರ… ಮತ್ತು ಮುಂತಾದ ವಿಚಾರಗಳನ್ನು ಸಿದ್ದರಾಮಯ್ಯರವರಿಗೆ ಕಲ್ಪನೆ ಇದ್ದು ಇದರಿಂದ ದೂರ ಉಳಿದಿದ್ದಾರೆ…

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...