Homeಅಂಕಣಗಳುಸೋಷಿಯಲ್ ಮೀಡಿಯಾದಲ್ಲಿ ಪ್ರಚಾರ ಮಾಡೋ ಭಕುತರಿಗೆ ತಿಂಗಳಿಗೆ 25 ಸಾವಿರ ಭಕ್ಷೀಸು!

ಸೋಷಿಯಲ್ ಮೀಡಿಯಾದಲ್ಲಿ ಪ್ರಚಾರ ಮಾಡೋ ಭಕುತರಿಗೆ ತಿಂಗಳಿಗೆ 25 ಸಾವಿರ ಭಕ್ಷೀಸು!

- Advertisement -
- Advertisement -

ಕೇಳುಗರಿಗೆಲ್ಲ ವೀರ ನಮಸ್ಕಾರಗಳು, ಇದೀಗ ನೀವು ಕೇಳುತ್ತಿದ್ದೀರಿ ಆಘಾತವಾಣಿ, ಓದುತ್ತಿರುವವರು ನಿಮ್ಮ ಪ್ರೀತಿಯ ಅಟ್ಯಾಕ್ ಹನ್ಮಂತು. ಬನ್ನಿ ಈ ವಾರದ ಸುದ್ದಿಗಳೇನೇನಿವೆ ಎಂದು ನೋಡೋಣ.
ಶಿವಮೊಗ್ಗದ ಹೊಸನಗರ ಕಡೆಯ ದನ ಕಾಯೋ ಅಂಕಲ್ ಕೌಬಾಯ್ ಸ್ವಾಮಿಯ ಬಗ್ಗೆ ಒಂದು ಆಘಾತಕಾರಿ ಸುದ್ದಿ ಬಂದಿದೆ. ಊರಲ್ಲಿ ಓಡಾಡೋ ಬೀಡಾಡಿ ದನಹಸುಗಳನ್ನು ಎಳೆದೊಯ್ದು ‘ಕೌ ಸ್ಕೂಲ್’ನೊಳಗೆ ಕೂಡಿ ಹಾಕಿ ದಂಧೆ ನಡೆಸುತ್ತಿದ್ದ ಈ ಕೌಬಾಯ್ ಸ್ವಾಮಿ ಮುಸುಡಿಗೆ ಹೈಕೋರ್ಟ್ ಬಕ್ ಬಕ್ ಎಂದು ಗುದ್ದಿದೆ. ಧಡಿಯೂರಪ್ಪನ ಕಾಲದಲ್ಲಿ ಗೋಕರ್ಣದ ದೇವಸ್ಥಾನವನ್ನು ತನ್ನ ಮಠದ ವಶಕ್ಕೆ ಪಡೆದಿದ್ದ ಕೌಬಾಯ್ ಕಳ್ಳನ ಕೋತಿಮುಷ್ಠಿಯಿಂದ ದೇವಸ್ಥಾನವನ್ನು ಕಿತ್ತು, ಸಾರ್ವಜನಿಕರ ಸಮಿತಿಯ ಮಂಡಳಿಗೆ ಒಪ್ಪಿಸಲಾಗಿದೆ. ಇಲ್ಲೀತನಕ ‘ಕೌ ಸ್ಕೂಲ್’ನ ಹಸುಗಳ ಹಾಲು-ಬೆಣ್ಣೆ ತುಪ್ಪ ಮಜ್ಜಿಗೆ-ಮೊಸರನ್ನು ಕನ್ಸೆಷನ್ ರೇಟಿಗೆ ಮಾರಿಕೊಂಡು, ಏಕಾಂತ ಸೇವೆಯಂಥ ‘ಅಡಲ್ಟ್ ಓನ್ಲಿ’ ಮಿಡ್ ನೈಟ್ ಚಟುವಟಿಕೆಗಳಲ್ಲಿ ಕಾಲೆತ್ತಿಕೊಂಡು ಆನಂದವಾಗಿದ್ದ ರಸಿಕರರಾಜ ಕೌಬಾಯ್ ಸ್ವಾಮಿಗೆ ಇದರಿಂದಾಗಿ ರಕ್ತವಾಂತಿಯಾದಷ್ಟು ನೋವುಂಟಾಗಿದೆ ಎಂದು ಮೂಲಗಳು ತಿಳಿಸಿವೆ. ಗೋಕರ್ಣ ದೇವಳದಿಂದ ಬರುತ್ತಿದ್ದ ಲಕ್ಷ ಲಕ್ಷ ಆದಾಯಕ್ಕೆ ಹೈಕೋರ್ಟ್ ಆದೇಶವು ಮಣ್ಣು ಸುರಿದಿರುವುದರಿಂದ ಇನ್ನು ಮುಂದೆ ‘ಕೌಸ್ಕೂಲ್’ ಬ್ಯುಸಿನೆಸ್ಸಿನಲ್ಲಿ ಸಿಗುತ್ತಿದ್ದ ಪುಡಿಗಾಸೇ ಗಟ್ಟಿ ಎಂದು ಖಾತ್ರಿಯಾಗುತ್ತಿದ್ದಂತೆ ಕೌಬಾಯ್ ಮುಸುಡಿ ಕಿವುಚಿಕೊಂಡು ತಲೆಮೇಲೆ ಕೈಹೊತ್ತು ಕುಳಿತಿದ್ದಾನಂತೆ. ಕೌಬಾಯ್ ಕಳ್ಳನ ಈ ಭೀಭತ್ಸ ಮುಖಾರವಿಂದವನ್ನು ನೋಡಿದ ಪೂಜೆಗೆಂದು ಬಂದ ಭಕ್ತರು, ಸ್ವಾಮಿಗೆ ಯಾವುದೋ ಆಫ್ರಿಕನ್ ದೆವ್ವ ಮೆಟ್ಟಿಕೊಂಡಿರಬೇಕೆಂದು ಭಯಗೊಂಡು ಕೇರಳ ಪಂಡಿತರನ್ನು ಕರೆತರಲು ದೌಡಾಯಿಸಿದ್ದಾರೆಂದು ನಂಬಲನರ್ಹ ಮೂಲಗಳು ತಿಳಿಸಿವೆ.

**********

ಕೇಂದ್ರ ಸರ್ಕಾರದ “ರನ್ನಿಂಗ್ ಇನ್ ದಿ ಫಾರಿನ್, ರನ್ ರನ್ ರನ್’ ಯೋಜನೆಯ ಲಾಭ ಪಡೆದ ಬ್ಯಾಂಕ್ ವಂಚಕರು ಸರ್ಕಾರಿ ಬ್ಯಾಂಕುಗಳಿಗೆ ಸಾವಿರಾರು ಕೋಟಿ ಉಂಡೆ ನಾಮ ತಿಕ್ಕಿ ಕಂಡ ಕಂಡ ದೇಶಗಳಿಗೆ ಓಡಿ ಹೋಗಿರುವುದು ಹಳೆಯ ವಿಷಯ. ಇಂಥಹ ವಂಚಕರನ್ನು, ಜಟಕಾಗಾಡಿ ಹತ್ತಿಕೊಂಡು ದೇಶದೇಶಗಳಿಗೆ ಪರ್ಯಟನೆ ಮಾಡಿ ಹಿಡಿದು ತರುತ್ತೇನೆಂದು ಬೊಗಳಿದ್ದ ಹಾಫ್‍ಮೆಂಟ್ಲು ಪಕೋಡೇಂದ್ರನು ಆನಂತರ ಮುಖ ಮತ್ತು ಇನ್ನೊಂದಕ್ಕೆ ಬ್ಯಾಂಡೇಜ್ ಹಾಕ್ಕೊಂಡು ಮಲಗಿರುವುದು ಸಹ ಹಳೇ ವಿಷಯ. ಹೊಸ ವಿಷಯ ಏನಪ್ಪ ಅಂತಂದ್ರೆ.. ಹೀಗೆ ಸರ್ಕಾರಿ ಬ್ಯಾಂಕುಗಳಿಗೆ ವಂಚಿಸಿ ಓಡಿಹೋದವರಲ್ಲಿ ಅಗ್ರಗಣ್ಯನಾದ ವಿಜಯ್ ಮಲ್ಯ, ತನ್ನ ಲಂಡನ್ ಮನೆಯಲ್ಲಿ ಕಕ್ಕ ಮಾಡಲು ಚಿನ್ನದ ಟಾಯ್ಲೆಟ್ ಕಮೋಡ್ ಕಟ್ಟಿಸಿಕೊಂಡಿರುವುದು ಬಯಲಾಗಿದೆ. ಒಬ್ಬರ ಹಿಂದೊಬ್ಬರು 28 ಮಂದಿ ಬ್ಯಾಂಕ್ ವಂಚಕರು ದೇಶ ಬಿಟ್ಟು ಓಡಿಹೋಗಿ ಹೀಗೆ ರಾಜಾಧಿರಾಜರಂತೆ ಎಂಜಾಯ್ ಮಾಡಿಕೊಂಡು ತಿರುಗುತ್ತಿದ್ದರೂ ಬ್ಲೂಜೆಪಿ ಪಕ್ಷದ ದ್ವೇಷಭಕ್ತ ಶಿಖಾಮಣಿಗಳು ಕಣ್ಣಿಗೆ ಲಕ್ವ ಹೊಡೆದವರಂತೆ ಸುಮ್ಮನಿರುವುದು ಆಶ್ಚರ್ಯವೇ ಸರಿ. ಪಕೋಡೇಂದ್ರನ ಫಾರಿನ್ ತೆವಲು ಹುಚ್ಚುಗೆದರಿ ದೇಶ ದೇಶ ಓತ್ಲಾ ಹೊಡೆಯುವಾಗ ಈ ವಂಚಕರಿರುವ ದೇಶಗಳಿಗೆಲ್ಲ ಹೋಗಿ ಬಂದರೂ ಇವರನ್ನು ಹಿಡಿದು ತರುವ ಬದಲು ತನ್ನ ‘ದೋಸ್ತಾನ ದೋಸ್ತ್’ಗಳಾದ ಅಂಬಾನಿ-ಆದಾನಿಗಳಿಗೆ ಆ ದೇಶಗಳಲ್ಲಿ ಬ್ಯುಸಿನೆಸ್ ಕಾಂಟ್ರಾಕ್ಟ್ ಕೊಡಿಸೋ ಅಡಿಕೆಮಂಡಿಯ ಕಮಿಷನ್ ಏಜೆಂಟ್ ದಲ್ಲಾಳಿಯಂತೆ ವರ್ತಿಸುತ್ತಿದ್ದಾನೆಂದು ಶ್ರಮಜೀವಿ ರೈತರು ಕ್ಯಾಕರಿಸಿ ಉಗಿಯುತ್ತಿದ್ದಾರೆಂದು ನಮ್ಮ ಬಾತ್ಮೀದಾರರು ವರದಿ ಮಾಡಿದ್ದಾರೆ.

**********

ಉತ್ತರಪ್ರದೇಶದ ಬೋಳುಮಂಡೆ ‘ಕುಂಗ್ ಫೂ ಮಾಂಕ್’ ಭೋಗಿ ಅನಿಷ್ಠನಾಥ್ ತನ್ನ ಆಡಳಿತಾವಧಿಯ ಅಭಿವೃದ್ಧಿ ಕೆಲಸಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಪ್ರಚಾರ ಮಾಡುವವರಿಗೆ ತಿಂಗಳಿಗೆ 25 ಸಾವಿರ ರೂಪಾಯಿ ಸಂಬಳ ಕೊಡೋದಾಗಿ ಪ್ರಕಟಿಸಿದ್ದಾರೆ. ಇದೇ ಕೆಲಸಕ್ಕೆಂದು ರಾಜ್ಯ ಸರ್ಕಾರದಡಿಯಿರುವ ವಾರ್ತಾ ಮತ್ತು ಪ್ರಚಾರ ಇಲಾಖೆಯವರು ಮಾಡೋ ಕೆಲಸ ಬಿಟ್ಟು ಯಾವ ದೊಡ್ಡಮೋರಿಗೆ ಕೇಸರಿ ಪೇಂಟ್ ಹೊಡೆಯಲು ಹೋಗಿದ್ದಾರೆಂದು ಜನರು ಪ್ರಶ್ನಿಸುತ್ತಿದ್ದಾರೆ. ಇರಲಿ, ಈ ಬಗ್ಗೆ ಅನಿಷ್ಠನಾಥನ ಅಭಿವೃದ್ಧಿಗಳನ್ನು ಪಟ್ಟಿ ಮಾಡುವುದಾದರೆ ಅವು ಕಾಶ್ಮೀರದಿಂದ ಕನ್ಯಾಕುಮಾರಿಯವರೆಗೆ ಯಾರಿಗೂ ಹೊಳೆಯದ ತಲೆಕೆಟ್ಟ ಐಡಿಯಾಗಳೇ ಎಂಬುದು ಅರಿವಾಗುತ್ತದೆ. ಉತ್ತರಪ್ರದೇಶದ ರೋಡು, ಮೋರಿ, ಟಾಯ್ಲೆಟ್, ಸರ್ಕಾರಿ ಕಚೇರಿ, ಕಾರು ಬಸ್ಸು, ಸೈಕಲ್ ಆಟೋರಿಕ್ಷಾಗಳು… ಹೀಗೆ ಅನಿಷ್ಠನಾಥನ ಬುರುಡೆಯೊಂದನ್ನು ಬಿಟ್ಟು ಮಿಕ್ಕೆಲ್ಲದ್ದಕ್ಕೂ ಕೇಸರಿ ಪೇಂಟ್ ಹೊಡೆಯಲಾಗಿದೆ. ಸೆಗಣಿ ತಿಂದ್ರೆ ಗಂಡು ಮಗುವಾಗುತ್ತೆ, ಸೆಗಣಿ ಶಾಂಪೂನಲ್ಲಿ ತಲೆಸ್ನಾನ ಮಾಡಿದ್ರೆ ತಲೆಗೂದಲು ಸೊಂಪಾಗಿ ಬೆಳೆಯುತ್ತೆ, ದನದ ಉಚ್ಚೆ ಕುಡಿದರೆ ಸರ್ವರೋಗಗಳೂ ನಿವಾರಣೆಯಾಗುತ್ತೆ, ಸೆಗಣಿ ಸೋಪು, ಸೆಗಣಿ ಬಿಸ್ಕತ್ತು, ಸೆಗಣಿ ಸೊಳ್ಳೆಬತ್ತಿ, ಸೆಗಣಿ ನೆಲ ಕ್ಲೀನರ್.. ಇಂಥಹ ಲೂಸ್ ಸಂಶೋಧನೆ ನಡೆಸಿದ ಅಡ್ನಾಡಿ ಸನಾತನ ಪೀಡೆಗಳಿಗೆ ಪ್ರೋತ್ಸಾಹ ಕೊಡಲಾಗಿದೆ. ರಾಜ್ಯದಲ್ಲಿ ಯಾರು ಯಾರನ್ನು ಬೇಕಾದರೂ ಗುಂಪು ಕಟ್ಟಿಕೊಂಡು ಹೊಡೆದು ಕೊಲ್ಲಲು ಸರ್ಕಾರದಿಂದಲೇ ಅನಧಿಕೃತ ಅನುಮತಿ ನೀಡಲಾಗಿದೆ. ಸಾಯುತ್ತಿರೋ ಮನುಷ್ಯರಿಗೆ ಆಸ್ಪತ್ರೆ ಕಟ್ಟಿಸಲು, ಆಕ್ಸಿಜನ್ ಇಲ್ಲದೆ ಸತ್ತ ಸಾವಿರಾರು ಎಳೆಕಂದಮ್ಮಗಳಿಗೆ ಆಕ್ಸಿಜನ್ ವ್ಯವಸ್ಥೆ ಮಾಡಲು ಯೋಗ್ಯತೆಯಿಲ್ಲದಿದ್ದರೂ ಬೀಡಾಡಿ ದನಗಳಿಗೆ ಆಂಬ್ಯುಲೆನ್ಸ್ ವ್ಯವಸ್ಥೆ ಕಲ್ಪಿಸಲಾಗಿದೆ. ಉಳಿದಂತೆ ಉತ್ತರಪ್ರದೇಶದ ಗ್ರಾಮೀಣಭಾಗವನ್ನು ಕ್ರಿಸ್ತಪೂರ್ವದಲ್ಲೇ ಬಾಕಿ ಉಳಿಸಲಾಗಿದೆ.. ಹೀಗೆ ಹೇಳುತ್ತ ಹೋದರೆ ಪಕೋಡಪ್ಪನ ಸುಳ್ಳುಗಳಂತೆ ಬೆಳೆಯುತ್ತ ಹೋಗುವ ಈ ತರುಕಲಾಂಡಿ ಕೆಲಸಗಳೇ ಭೋಗಿ ಅನಿಷ್ಠನಾಥನ ಅಭಿವೃದ್ಧಿಗಳೆಂದು ಸರ್ಕಾರದ ವರದಿಗಳೇ ಹೇಳುತ್ತಿವೆ. ವಸ್ತುಸ್ಥಿತಿ ಹೀಗಿರುವಾಗ ತಿಂಗಳಿಗೆ 25 ಸಾವಿರ ಸಂಬಳ ಕೊಟ್ಟು ತನ್ನ ಪಕ್ಷದ ‘ಬೇ ರೋಜ್ಗಾರ್ ಅಬ್ಬೇಪಾರಿಗಳಿಗೆ’ ಪುಗ್ಸಟ್ಟೆ ಸಂಬಳದ ವ್ಯವಸ್ಥೆ ಮಾಡ್ತಿರೋ ಅನಿಷ್ಠನಾಥ.. ಅದಕ್ಕೆ ಬೇಕಾದ ದುಡ್ಡನ್ನು ಸರ್ಕಾರಿ ಬೊಕ್ಕಸದಿಂದ ಕೊಡುತ್ತಾನೋ ಅಥವ ಅವನಪ್ಪನ ಮನೆಯೊಳಗೆ ಪ್ರಿಂಟು ಮಾಡಿ ತಂದು ಹಂಚುತ್ತಾನಾ ಎಂಬ ಬಗ್ಗೆ ಜನರಲ್ಲಿ ತೀವ್ರ ಜಿಜ್ಞಾಸೆ ಹುಟ್ಟಿಕೊಂಡಿದೆ.
ಇಲ್ಲಿಗೆ ವಾರ್ತಾಪ್ರಸಾರ ಮುಕ್ತಾಯವಾಯಿತು. ಮತ್ತೊಂದಷ್ಟು ಆಘಾತಕಾರಿ ನ್ಯೂಸುಗಳ ಸಮೇತ ಮತ್ತೆ ಭೇಟಿಯಾಗೋಣ. ಅಲ್ಲೀತನಕ ನಮಗೂ ನಿಮಗೂ ಅಟ್ಟೆ ಮಟ್ಟೆ ಕೋಳಿ ಮಟ್ಟೆ ವಾರದ್ ತನಕ ಮಾತಾಡ್ಸಲ್ಲ ಠೂ ಬಳೆ. ಧನ್ಯವಾದಗಳು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...