Homeಅಂಕಣಗಳುಸೋಷಿಯಲ್ ಮೀಡಿಯಾದಲ್ಲಿ ಪ್ರಚಾರ ಮಾಡೋ ಭಕುತರಿಗೆ ತಿಂಗಳಿಗೆ 25 ಸಾವಿರ ಭಕ್ಷೀಸು!

ಸೋಷಿಯಲ್ ಮೀಡಿಯಾದಲ್ಲಿ ಪ್ರಚಾರ ಮಾಡೋ ಭಕುತರಿಗೆ ತಿಂಗಳಿಗೆ 25 ಸಾವಿರ ಭಕ್ಷೀಸು!

- Advertisement -
- Advertisement -

ಕೇಳುಗರಿಗೆಲ್ಲ ವೀರ ನಮಸ್ಕಾರಗಳು, ಇದೀಗ ನೀವು ಕೇಳುತ್ತಿದ್ದೀರಿ ಆಘಾತವಾಣಿ, ಓದುತ್ತಿರುವವರು ನಿಮ್ಮ ಪ್ರೀತಿಯ ಅಟ್ಯಾಕ್ ಹನ್ಮಂತು. ಬನ್ನಿ ಈ ವಾರದ ಸುದ್ದಿಗಳೇನೇನಿವೆ ಎಂದು ನೋಡೋಣ.
ಶಿವಮೊಗ್ಗದ ಹೊಸನಗರ ಕಡೆಯ ದನ ಕಾಯೋ ಅಂಕಲ್ ಕೌಬಾಯ್ ಸ್ವಾಮಿಯ ಬಗ್ಗೆ ಒಂದು ಆಘಾತಕಾರಿ ಸುದ್ದಿ ಬಂದಿದೆ. ಊರಲ್ಲಿ ಓಡಾಡೋ ಬೀಡಾಡಿ ದನಹಸುಗಳನ್ನು ಎಳೆದೊಯ್ದು ‘ಕೌ ಸ್ಕೂಲ್’ನೊಳಗೆ ಕೂಡಿ ಹಾಕಿ ದಂಧೆ ನಡೆಸುತ್ತಿದ್ದ ಈ ಕೌಬಾಯ್ ಸ್ವಾಮಿ ಮುಸುಡಿಗೆ ಹೈಕೋರ್ಟ್ ಬಕ್ ಬಕ್ ಎಂದು ಗುದ್ದಿದೆ. ಧಡಿಯೂರಪ್ಪನ ಕಾಲದಲ್ಲಿ ಗೋಕರ್ಣದ ದೇವಸ್ಥಾನವನ್ನು ತನ್ನ ಮಠದ ವಶಕ್ಕೆ ಪಡೆದಿದ್ದ ಕೌಬಾಯ್ ಕಳ್ಳನ ಕೋತಿಮುಷ್ಠಿಯಿಂದ ದೇವಸ್ಥಾನವನ್ನು ಕಿತ್ತು, ಸಾರ್ವಜನಿಕರ ಸಮಿತಿಯ ಮಂಡಳಿಗೆ ಒಪ್ಪಿಸಲಾಗಿದೆ. ಇಲ್ಲೀತನಕ ‘ಕೌ ಸ್ಕೂಲ್’ನ ಹಸುಗಳ ಹಾಲು-ಬೆಣ್ಣೆ ತುಪ್ಪ ಮಜ್ಜಿಗೆ-ಮೊಸರನ್ನು ಕನ್ಸೆಷನ್ ರೇಟಿಗೆ ಮಾರಿಕೊಂಡು, ಏಕಾಂತ ಸೇವೆಯಂಥ ‘ಅಡಲ್ಟ್ ಓನ್ಲಿ’ ಮಿಡ್ ನೈಟ್ ಚಟುವಟಿಕೆಗಳಲ್ಲಿ ಕಾಲೆತ್ತಿಕೊಂಡು ಆನಂದವಾಗಿದ್ದ ರಸಿಕರರಾಜ ಕೌಬಾಯ್ ಸ್ವಾಮಿಗೆ ಇದರಿಂದಾಗಿ ರಕ್ತವಾಂತಿಯಾದಷ್ಟು ನೋವುಂಟಾಗಿದೆ ಎಂದು ಮೂಲಗಳು ತಿಳಿಸಿವೆ. ಗೋಕರ್ಣ ದೇವಳದಿಂದ ಬರುತ್ತಿದ್ದ ಲಕ್ಷ ಲಕ್ಷ ಆದಾಯಕ್ಕೆ ಹೈಕೋರ್ಟ್ ಆದೇಶವು ಮಣ್ಣು ಸುರಿದಿರುವುದರಿಂದ ಇನ್ನು ಮುಂದೆ ‘ಕೌಸ್ಕೂಲ್’ ಬ್ಯುಸಿನೆಸ್ಸಿನಲ್ಲಿ ಸಿಗುತ್ತಿದ್ದ ಪುಡಿಗಾಸೇ ಗಟ್ಟಿ ಎಂದು ಖಾತ್ರಿಯಾಗುತ್ತಿದ್ದಂತೆ ಕೌಬಾಯ್ ಮುಸುಡಿ ಕಿವುಚಿಕೊಂಡು ತಲೆಮೇಲೆ ಕೈಹೊತ್ತು ಕುಳಿತಿದ್ದಾನಂತೆ. ಕೌಬಾಯ್ ಕಳ್ಳನ ಈ ಭೀಭತ್ಸ ಮುಖಾರವಿಂದವನ್ನು ನೋಡಿದ ಪೂಜೆಗೆಂದು ಬಂದ ಭಕ್ತರು, ಸ್ವಾಮಿಗೆ ಯಾವುದೋ ಆಫ್ರಿಕನ್ ದೆವ್ವ ಮೆಟ್ಟಿಕೊಂಡಿರಬೇಕೆಂದು ಭಯಗೊಂಡು ಕೇರಳ ಪಂಡಿತರನ್ನು ಕರೆತರಲು ದೌಡಾಯಿಸಿದ್ದಾರೆಂದು ನಂಬಲನರ್ಹ ಮೂಲಗಳು ತಿಳಿಸಿವೆ.

**********

ಕೇಂದ್ರ ಸರ್ಕಾರದ “ರನ್ನಿಂಗ್ ಇನ್ ದಿ ಫಾರಿನ್, ರನ್ ರನ್ ರನ್’ ಯೋಜನೆಯ ಲಾಭ ಪಡೆದ ಬ್ಯಾಂಕ್ ವಂಚಕರು ಸರ್ಕಾರಿ ಬ್ಯಾಂಕುಗಳಿಗೆ ಸಾವಿರಾರು ಕೋಟಿ ಉಂಡೆ ನಾಮ ತಿಕ್ಕಿ ಕಂಡ ಕಂಡ ದೇಶಗಳಿಗೆ ಓಡಿ ಹೋಗಿರುವುದು ಹಳೆಯ ವಿಷಯ. ಇಂಥಹ ವಂಚಕರನ್ನು, ಜಟಕಾಗಾಡಿ ಹತ್ತಿಕೊಂಡು ದೇಶದೇಶಗಳಿಗೆ ಪರ್ಯಟನೆ ಮಾಡಿ ಹಿಡಿದು ತರುತ್ತೇನೆಂದು ಬೊಗಳಿದ್ದ ಹಾಫ್‍ಮೆಂಟ್ಲು ಪಕೋಡೇಂದ್ರನು ಆನಂತರ ಮುಖ ಮತ್ತು ಇನ್ನೊಂದಕ್ಕೆ ಬ್ಯಾಂಡೇಜ್ ಹಾಕ್ಕೊಂಡು ಮಲಗಿರುವುದು ಸಹ ಹಳೇ ವಿಷಯ. ಹೊಸ ವಿಷಯ ಏನಪ್ಪ ಅಂತಂದ್ರೆ.. ಹೀಗೆ ಸರ್ಕಾರಿ ಬ್ಯಾಂಕುಗಳಿಗೆ ವಂಚಿಸಿ ಓಡಿಹೋದವರಲ್ಲಿ ಅಗ್ರಗಣ್ಯನಾದ ವಿಜಯ್ ಮಲ್ಯ, ತನ್ನ ಲಂಡನ್ ಮನೆಯಲ್ಲಿ ಕಕ್ಕ ಮಾಡಲು ಚಿನ್ನದ ಟಾಯ್ಲೆಟ್ ಕಮೋಡ್ ಕಟ್ಟಿಸಿಕೊಂಡಿರುವುದು ಬಯಲಾಗಿದೆ. ಒಬ್ಬರ ಹಿಂದೊಬ್ಬರು 28 ಮಂದಿ ಬ್ಯಾಂಕ್ ವಂಚಕರು ದೇಶ ಬಿಟ್ಟು ಓಡಿಹೋಗಿ ಹೀಗೆ ರಾಜಾಧಿರಾಜರಂತೆ ಎಂಜಾಯ್ ಮಾಡಿಕೊಂಡು ತಿರುಗುತ್ತಿದ್ದರೂ ಬ್ಲೂಜೆಪಿ ಪಕ್ಷದ ದ್ವೇಷಭಕ್ತ ಶಿಖಾಮಣಿಗಳು ಕಣ್ಣಿಗೆ ಲಕ್ವ ಹೊಡೆದವರಂತೆ ಸುಮ್ಮನಿರುವುದು ಆಶ್ಚರ್ಯವೇ ಸರಿ. ಪಕೋಡೇಂದ್ರನ ಫಾರಿನ್ ತೆವಲು ಹುಚ್ಚುಗೆದರಿ ದೇಶ ದೇಶ ಓತ್ಲಾ ಹೊಡೆಯುವಾಗ ಈ ವಂಚಕರಿರುವ ದೇಶಗಳಿಗೆಲ್ಲ ಹೋಗಿ ಬಂದರೂ ಇವರನ್ನು ಹಿಡಿದು ತರುವ ಬದಲು ತನ್ನ ‘ದೋಸ್ತಾನ ದೋಸ್ತ್’ಗಳಾದ ಅಂಬಾನಿ-ಆದಾನಿಗಳಿಗೆ ಆ ದೇಶಗಳಲ್ಲಿ ಬ್ಯುಸಿನೆಸ್ ಕಾಂಟ್ರಾಕ್ಟ್ ಕೊಡಿಸೋ ಅಡಿಕೆಮಂಡಿಯ ಕಮಿಷನ್ ಏಜೆಂಟ್ ದಲ್ಲಾಳಿಯಂತೆ ವರ್ತಿಸುತ್ತಿದ್ದಾನೆಂದು ಶ್ರಮಜೀವಿ ರೈತರು ಕ್ಯಾಕರಿಸಿ ಉಗಿಯುತ್ತಿದ್ದಾರೆಂದು ನಮ್ಮ ಬಾತ್ಮೀದಾರರು ವರದಿ ಮಾಡಿದ್ದಾರೆ.

**********

ಉತ್ತರಪ್ರದೇಶದ ಬೋಳುಮಂಡೆ ‘ಕುಂಗ್ ಫೂ ಮಾಂಕ್’ ಭೋಗಿ ಅನಿಷ್ಠನಾಥ್ ತನ್ನ ಆಡಳಿತಾವಧಿಯ ಅಭಿವೃದ್ಧಿ ಕೆಲಸಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಪ್ರಚಾರ ಮಾಡುವವರಿಗೆ ತಿಂಗಳಿಗೆ 25 ಸಾವಿರ ರೂಪಾಯಿ ಸಂಬಳ ಕೊಡೋದಾಗಿ ಪ್ರಕಟಿಸಿದ್ದಾರೆ. ಇದೇ ಕೆಲಸಕ್ಕೆಂದು ರಾಜ್ಯ ಸರ್ಕಾರದಡಿಯಿರುವ ವಾರ್ತಾ ಮತ್ತು ಪ್ರಚಾರ ಇಲಾಖೆಯವರು ಮಾಡೋ ಕೆಲಸ ಬಿಟ್ಟು ಯಾವ ದೊಡ್ಡಮೋರಿಗೆ ಕೇಸರಿ ಪೇಂಟ್ ಹೊಡೆಯಲು ಹೋಗಿದ್ದಾರೆಂದು ಜನರು ಪ್ರಶ್ನಿಸುತ್ತಿದ್ದಾರೆ. ಇರಲಿ, ಈ ಬಗ್ಗೆ ಅನಿಷ್ಠನಾಥನ ಅಭಿವೃದ್ಧಿಗಳನ್ನು ಪಟ್ಟಿ ಮಾಡುವುದಾದರೆ ಅವು ಕಾಶ್ಮೀರದಿಂದ ಕನ್ಯಾಕುಮಾರಿಯವರೆಗೆ ಯಾರಿಗೂ ಹೊಳೆಯದ ತಲೆಕೆಟ್ಟ ಐಡಿಯಾಗಳೇ ಎಂಬುದು ಅರಿವಾಗುತ್ತದೆ. ಉತ್ತರಪ್ರದೇಶದ ರೋಡು, ಮೋರಿ, ಟಾಯ್ಲೆಟ್, ಸರ್ಕಾರಿ ಕಚೇರಿ, ಕಾರು ಬಸ್ಸು, ಸೈಕಲ್ ಆಟೋರಿಕ್ಷಾಗಳು… ಹೀಗೆ ಅನಿಷ್ಠನಾಥನ ಬುರುಡೆಯೊಂದನ್ನು ಬಿಟ್ಟು ಮಿಕ್ಕೆಲ್ಲದ್ದಕ್ಕೂ ಕೇಸರಿ ಪೇಂಟ್ ಹೊಡೆಯಲಾಗಿದೆ. ಸೆಗಣಿ ತಿಂದ್ರೆ ಗಂಡು ಮಗುವಾಗುತ್ತೆ, ಸೆಗಣಿ ಶಾಂಪೂನಲ್ಲಿ ತಲೆಸ್ನಾನ ಮಾಡಿದ್ರೆ ತಲೆಗೂದಲು ಸೊಂಪಾಗಿ ಬೆಳೆಯುತ್ತೆ, ದನದ ಉಚ್ಚೆ ಕುಡಿದರೆ ಸರ್ವರೋಗಗಳೂ ನಿವಾರಣೆಯಾಗುತ್ತೆ, ಸೆಗಣಿ ಸೋಪು, ಸೆಗಣಿ ಬಿಸ್ಕತ್ತು, ಸೆಗಣಿ ಸೊಳ್ಳೆಬತ್ತಿ, ಸೆಗಣಿ ನೆಲ ಕ್ಲೀನರ್.. ಇಂಥಹ ಲೂಸ್ ಸಂಶೋಧನೆ ನಡೆಸಿದ ಅಡ್ನಾಡಿ ಸನಾತನ ಪೀಡೆಗಳಿಗೆ ಪ್ರೋತ್ಸಾಹ ಕೊಡಲಾಗಿದೆ. ರಾಜ್ಯದಲ್ಲಿ ಯಾರು ಯಾರನ್ನು ಬೇಕಾದರೂ ಗುಂಪು ಕಟ್ಟಿಕೊಂಡು ಹೊಡೆದು ಕೊಲ್ಲಲು ಸರ್ಕಾರದಿಂದಲೇ ಅನಧಿಕೃತ ಅನುಮತಿ ನೀಡಲಾಗಿದೆ. ಸಾಯುತ್ತಿರೋ ಮನುಷ್ಯರಿಗೆ ಆಸ್ಪತ್ರೆ ಕಟ್ಟಿಸಲು, ಆಕ್ಸಿಜನ್ ಇಲ್ಲದೆ ಸತ್ತ ಸಾವಿರಾರು ಎಳೆಕಂದಮ್ಮಗಳಿಗೆ ಆಕ್ಸಿಜನ್ ವ್ಯವಸ್ಥೆ ಮಾಡಲು ಯೋಗ್ಯತೆಯಿಲ್ಲದಿದ್ದರೂ ಬೀಡಾಡಿ ದನಗಳಿಗೆ ಆಂಬ್ಯುಲೆನ್ಸ್ ವ್ಯವಸ್ಥೆ ಕಲ್ಪಿಸಲಾಗಿದೆ. ಉಳಿದಂತೆ ಉತ್ತರಪ್ರದೇಶದ ಗ್ರಾಮೀಣಭಾಗವನ್ನು ಕ್ರಿಸ್ತಪೂರ್ವದಲ್ಲೇ ಬಾಕಿ ಉಳಿಸಲಾಗಿದೆ.. ಹೀಗೆ ಹೇಳುತ್ತ ಹೋದರೆ ಪಕೋಡಪ್ಪನ ಸುಳ್ಳುಗಳಂತೆ ಬೆಳೆಯುತ್ತ ಹೋಗುವ ಈ ತರುಕಲಾಂಡಿ ಕೆಲಸಗಳೇ ಭೋಗಿ ಅನಿಷ್ಠನಾಥನ ಅಭಿವೃದ್ಧಿಗಳೆಂದು ಸರ್ಕಾರದ ವರದಿಗಳೇ ಹೇಳುತ್ತಿವೆ. ವಸ್ತುಸ್ಥಿತಿ ಹೀಗಿರುವಾಗ ತಿಂಗಳಿಗೆ 25 ಸಾವಿರ ಸಂಬಳ ಕೊಟ್ಟು ತನ್ನ ಪಕ್ಷದ ‘ಬೇ ರೋಜ್ಗಾರ್ ಅಬ್ಬೇಪಾರಿಗಳಿಗೆ’ ಪುಗ್ಸಟ್ಟೆ ಸಂಬಳದ ವ್ಯವಸ್ಥೆ ಮಾಡ್ತಿರೋ ಅನಿಷ್ಠನಾಥ.. ಅದಕ್ಕೆ ಬೇಕಾದ ದುಡ್ಡನ್ನು ಸರ್ಕಾರಿ ಬೊಕ್ಕಸದಿಂದ ಕೊಡುತ್ತಾನೋ ಅಥವ ಅವನಪ್ಪನ ಮನೆಯೊಳಗೆ ಪ್ರಿಂಟು ಮಾಡಿ ತಂದು ಹಂಚುತ್ತಾನಾ ಎಂಬ ಬಗ್ಗೆ ಜನರಲ್ಲಿ ತೀವ್ರ ಜಿಜ್ಞಾಸೆ ಹುಟ್ಟಿಕೊಂಡಿದೆ.
ಇಲ್ಲಿಗೆ ವಾರ್ತಾಪ್ರಸಾರ ಮುಕ್ತಾಯವಾಯಿತು. ಮತ್ತೊಂದಷ್ಟು ಆಘಾತಕಾರಿ ನ್ಯೂಸುಗಳ ಸಮೇತ ಮತ್ತೆ ಭೇಟಿಯಾಗೋಣ. ಅಲ್ಲೀತನಕ ನಮಗೂ ನಿಮಗೂ ಅಟ್ಟೆ ಮಟ್ಟೆ ಕೋಳಿ ಮಟ್ಟೆ ವಾರದ್ ತನಕ ಮಾತಾಡ್ಸಲ್ಲ ಠೂ ಬಳೆ. ಧನ್ಯವಾದಗಳು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮತದಾರರ ತೀರ್ಪಿನೊಂದಿಗೆ ಬಿಜೆಪಿಯನ್ನು ಅಧಿಕಾರಕ್ಕೆ ಬರಲು ಬಿಡುತ್ತೇವೆ; ಕಾಂಗ್ರೆಸ್‌ ಜೊತೆಗೆ ಮೈತ್ರಿ ಇಲ್ಲ: ಕೇರಳ ಸಿಪಿಐ(ಎಂ) ಮುಖ್ಯಸ್ಥ

ಕೇರಳದಲ್ಲಿ ಇತ್ತೀಚೆಗೆ ನಡೆದ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಒಂದು ಕಾರ್ಪೊರೇಷನ್ ಮತ್ತು ಪುರಸಭೆಯಲ್ಲಿ ಬಿಜೆಪಿ ಏಕೈಕ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದರಿಂದ, ಎರಡು ಪ್ರತಿಸ್ಪರ್ಧಿ ರಂಗಗಳಾದ ಯುಡಿಎಫ್ ಮತ್ತು ಎಲ್‌ಡಿಎಫ್ ಬಿಜೆಪಿಯನ್ನು ಅಧಿಕಾರದಿಂದ ದೂರವಿಡಲು...

ಕೊಂದವರು ಯಾರು: ಧರ್ಮಸ್ಥಳದಲ್ಲಿ ನಡೆದಿರುವ ಎಲ್ಲಾ ಹತ್ಯೆಗಳ ಬಗ್ಗೆ ಸಮಗ್ರ ತನಿಖೆ ನಡೆಸಬೇಕು: ಮಲ್ಲಿಗೆ ಸಿರಿಮನೆ

“ನಾವು ಕೊಂದವರು ಯಾರು’ ಆಂದೋಲನದಿಂದ ‘ಮಹಿಳಾ ನ್ಯಾಯ ಸಮಾವೇಶ’ವನ್ನು ಬೆಳ್ತಂಗಡಿಯಲ್ಲಿ ಹಮ್ಮಿಕೊಳ್ಳಬೇಕು ಎಂದುಕೊಂಡಾಗ ನೂರಾರು ಪ್ರಶ್ನೆಗಳು, ನೂರಾರು ಆಪಾದನೆಗಳು, ಆರೋಪಗಳು ಬಂದವು. ಯಾಕೆ ಇಲ್ಲಿಗೆ ಬರುತ್ತಿದ್ದಾರೆ, ಇಲ್ಲಿಗೇ ಬಂದು ಏನು ಮಾಡುತ್ತಾರೆ ಅನ್ನುವ...

ಸರ್ಕಾರಿ ಕಾರ್ಯಕ್ರಮದಲ್ಲಿ ಮಹಿಳಾ ವೈದ್ಯೆಯ ಹಿಜಾಬ್ ತೆಗೆಸಿದ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್

ಬಿಹಾರ ರಾಜಧಾನಿ ಪಾಟ್ನಾದಲ್ಲಿ ಸೋಮವಾರ (ಡಿ.15) ನಡೆದ ಸರ್ಕಾರಿ ಕಾರ್ಯಕ್ರಮದಲ್ಲಿ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ನೇಮಕಾತಿ ಪತ್ರಗಳನ್ನು ಹಸ್ತಾಂತರಿದ್ದು, ಇದೇ ಸಂದರ್ಭದಲ್ಲಿ ಮಹಿಳಾ ವೈದ್ಯೆಯೊಬ್ಬರ ಹಿಜಾಬ್ ಅನ್ನು ತೆಗೆದಿರುವ ವಿಡಿಯೋವೊಂದು ವೈರಲ್...

ಎಸ್‌ಐಆರ್ ಬಳಿಕ ಪಶ್ಚಿಮ ಬಂಗಾಳದ ಕರಡು ಮತದಾರರ ಪಟ್ಟಿ ಪ್ರಕಟ : 58 ಲಕ್ಷ ಹೆಸರು ಡಿಲೀಟ್!

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಬಳಿಕ ಮಂಗಳವಾರ (ಡಿಸೆಂಬರ್ 16) ಚುನಾವಣಾ ಆಯೋಗ ಪಶ್ಚಿಮ ಬಂಗಾಳದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದೆ. ಸಾವು, ವಲಸೆ ಮತ್ತು ಎಣಿಕೆ ನಮೂನೆಗಳನ್ನು ಸಲ್ಲಿಸದಿರುವುದು...

ನ್ಯಾಷನಲ್ ಹೆರಾಲ್ಡ್ ಪ್ರಕರಣ: ಸೋನಿಯಾ-ರಾಹುಲ್ ಗಾಂಧಿ ವಿರುದ್ಧದ ಇಡಿ ದೂರು ಪರಿಗಣಿಸಲು ದೆಹಲಿ ಕೋರ್ಟ್ ನಕಾರ

ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ ಮತ್ತು ಸೋನಿಯಾ ಗಾಂಧಿ ಭಾಗಿಯಾಗಿದ್ದಾರೆ ಎನ್ನಲಾದ ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಇಡಿ)ದ ಹಣ ಅಕ್ರಮ ವರ್ಗಾವಣೆ ದೂರನ್ನು ಪರಿಗಣಿಸಲು ದೆಹಲಿ ನ್ಯಾಯಾಲಯ ಮಂಗಳವಾರ (ಡಿಸೆಂಬರ್...

ಕಾನೂನುಗಳಿಗೆ ಹಿಂದಿ ಬಳಸುವುದರಿಂದ ದಕ್ಷಿಣದ ರಾಜ್ಯಗಳಿಗೆ ಅನ್ಯಾಯ: ಪಿ.ಚಿದಂಬರಂ

ಸಂಸತ್ತಿನಲ್ಲಿ ಮಂಡಿಸಲಾದ ಮಸೂದೆಗಳ ಶೀರ್ಷಿಕೆಗಳಲ್ಲಿ ಇಂಗ್ಲಿಷ್ ಲಿಪಿಯಲ್ಲಿ ಬರೆಯಲಾದ ಹಿಂದಿ ಪದಗಳನ್ನು ಬಳಸುವ ಅಭ್ಯಾಸ ಹೆಚ್ಚುತ್ತಿದೆ. ಈ ಪ್ರವೃತ್ತಿಯಿಂದ ಹಿಂದಿ ಮಾತನಾಡದ ನಾಗರಿಕರು ಮತ್ತು ರಾಜ್ಯಗಳಿಗೆ ಅನ್ಯಾಯವಾಗಿದೆ ಕಾಂಗ್ರೆಸ್ ನಾಯಕ ಪಿ.ಚಿದಂಬರಂ ಹೇಳಿದರು. ಈ...

ಸಿಡ್ನಿ ಶೂಟೌಟ್‌: ಭಾರತೀಯ ಪಾಸ್‌ಪೋರ್ಟ್‌ ಬಳಸಿ ಫಿಲಿಪೈನ್ಸ್‌ಗೆ ಪ್ರಯಾಣಿಸಿದ್ದ ತಂದೆ-ಮಗ?

ಸಿಡ್ನಿಯಲ್ಲಿ ಹದಿನೈದು ಜನರನ್ನು ಗುಂಡಿಕ್ಕಿ ಕೊಂದ ತಂದೆ ಮತ್ತು ಮಗನನ್ನು ಪಾಕಿಸ್ತಾನಿ ಪ್ರಜೆಗಳು ಎಂದು ಈಗಾಗಲೇ ಗುರುತಿಸಲಾಗಿದೆ ಎಂಬ ಹಿಂದಿನ ವರದಿಗಳಿಗೆ ವಿರುದ್ಧವಾಗಿ, ಇಬ್ಬರೂ ಕಳೆದ ತಿಂಗಳು ನವೆಂಬರ್‌ನಲ್ಲಿ ಭಾರತೀಯ ಪಾಸ್‌ಪೋರ್ಟ್‌ಗಳನ್ನು ಬಳಸಿ...

ವರದಕ್ಷಿಣೆ ನಿರ್ಮೂಲನೆ ತುರ್ತು ಸಾಂವಿಧಾನಿಕ, ಸಾಮಾಜಿಕ ಅಗತ್ಯ: ಸುಪ್ರೀಂ ಕೋರ್ಟ್

ನವದೆಹಲಿ: ವರದಕ್ಷಿಣೆ ನಿರ್ಮೂಲನೆ ತುರ್ತು ಸಾಂವಿಧಾನಿಕ ಮತ್ತು ಸಾಮಾಜಿಕ ಅಗತ್ಯವಾಗಿದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಅಸ್ತಿತ್ವದಲ್ಲಿರುವ ಕಾನೂನುಗಳು "ನಿಷ್ಪರಿಣಾಮಕಾರಿತ್ವ" ಮತ್ತು "ದುರುಪಯೋಗ" ಎರಡರಿಂದಲೂ ಬಳಲುತ್ತಿವೆ ಮತ್ತು ದುಷ್ಟ ಪದ್ಧತಿ ಇನ್ನೂ ವ್ಯಾಪಕವಾಗಿ...

ಕೇರಳ ಚಲನಚಿತ್ರೋತ್ಸವ : ಪ್ಯಾಲೆಸ್ತೀನ್ ಕುರಿತ 4 ಸಿನಿಮಾಗಳು ಸೇರಿ 19 ಚಲನಚಿತ್ರಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿದ ಕೇಂದ್ರ

ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವಾಲಯ 2025ರ ಕೇರಳ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ 19 ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿದೆ ಎಂದು ರಾಜ್ಯದ ಆಡಳಿತಾರೂಢ ಭಾರತೀಯ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ) ಪ್ರಧಾನ ಕಾರ್ಯದರ್ಶಿ ಮರಿಯನ್...

ಮಣಿಪುರ ಹಿಂಸಾಚಾರ: ಸೋರಿಕೆಯಾದ ಸಂಪೂರ್ಣ ಆಡಿಯೋ ವಿಧಿವಿಜ್ಞಾನ ಪರೀಕ್ಷೆಗೆ ಏಕೆ ಕಳುಹಿಸಿಲ್ಲ ಎಂದು ಪ್ರಶ್ನಿಸಿದ ಸುಪ್ರೀಂ ಕೋರ್ಟ್

ನವದೆಹಲಿ: 2023ರ ಜನಾಂಗೀಯ ಹಿಂಸಾಚಾರದಲ್ಲಿ ಮಣಿಪುರದ ಮಾಜಿ ಮುಖ್ಯಮಂತ್ರಿ ಎನ್. ಬಿರೇನ್ ಸಿಂಗ್ ಅವರ ಪಾತ್ರವನ್ನು ಸೂಚಿಸಿರುವ ಅರ್ಜಿಯಲ್ಲಿ ಲಭ್ಯವಿರುವ ಸಂಪೂರ್ಣ ಸೋರಿಕೆಯಾದ ಆಡಿಯೋ ತುಣುಕುಗಳನ್ನು ವಿಧಿವಿಜ್ಞಾನ ಪರೀಕ್ಷೆಗೆ ಏಕೆ ಕಳುಹಿಸಲಿಲ್ಲ ಎಂದು...