Homeಅಂಕಣಗಳುಸೋಷಿಯಲ್ ಮೀಡಿಯಾದಲ್ಲಿ ಪ್ರಚಾರ ಮಾಡೋ ಭಕುತರಿಗೆ ತಿಂಗಳಿಗೆ 25 ಸಾವಿರ ಭಕ್ಷೀಸು!

ಸೋಷಿಯಲ್ ಮೀಡಿಯಾದಲ್ಲಿ ಪ್ರಚಾರ ಮಾಡೋ ಭಕುತರಿಗೆ ತಿಂಗಳಿಗೆ 25 ಸಾವಿರ ಭಕ್ಷೀಸು!

- Advertisement -
- Advertisement -

ಕೇಳುಗರಿಗೆಲ್ಲ ವೀರ ನಮಸ್ಕಾರಗಳು, ಇದೀಗ ನೀವು ಕೇಳುತ್ತಿದ್ದೀರಿ ಆಘಾತವಾಣಿ, ಓದುತ್ತಿರುವವರು ನಿಮ್ಮ ಪ್ರೀತಿಯ ಅಟ್ಯಾಕ್ ಹನ್ಮಂತು. ಬನ್ನಿ ಈ ವಾರದ ಸುದ್ದಿಗಳೇನೇನಿವೆ ಎಂದು ನೋಡೋಣ.
ಶಿವಮೊಗ್ಗದ ಹೊಸನಗರ ಕಡೆಯ ದನ ಕಾಯೋ ಅಂಕಲ್ ಕೌಬಾಯ್ ಸ್ವಾಮಿಯ ಬಗ್ಗೆ ಒಂದು ಆಘಾತಕಾರಿ ಸುದ್ದಿ ಬಂದಿದೆ. ಊರಲ್ಲಿ ಓಡಾಡೋ ಬೀಡಾಡಿ ದನಹಸುಗಳನ್ನು ಎಳೆದೊಯ್ದು ‘ಕೌ ಸ್ಕೂಲ್’ನೊಳಗೆ ಕೂಡಿ ಹಾಕಿ ದಂಧೆ ನಡೆಸುತ್ತಿದ್ದ ಈ ಕೌಬಾಯ್ ಸ್ವಾಮಿ ಮುಸುಡಿಗೆ ಹೈಕೋರ್ಟ್ ಬಕ್ ಬಕ್ ಎಂದು ಗುದ್ದಿದೆ. ಧಡಿಯೂರಪ್ಪನ ಕಾಲದಲ್ಲಿ ಗೋಕರ್ಣದ ದೇವಸ್ಥಾನವನ್ನು ತನ್ನ ಮಠದ ವಶಕ್ಕೆ ಪಡೆದಿದ್ದ ಕೌಬಾಯ್ ಕಳ್ಳನ ಕೋತಿಮುಷ್ಠಿಯಿಂದ ದೇವಸ್ಥಾನವನ್ನು ಕಿತ್ತು, ಸಾರ್ವಜನಿಕರ ಸಮಿತಿಯ ಮಂಡಳಿಗೆ ಒಪ್ಪಿಸಲಾಗಿದೆ. ಇಲ್ಲೀತನಕ ‘ಕೌ ಸ್ಕೂಲ್’ನ ಹಸುಗಳ ಹಾಲು-ಬೆಣ್ಣೆ ತುಪ್ಪ ಮಜ್ಜಿಗೆ-ಮೊಸರನ್ನು ಕನ್ಸೆಷನ್ ರೇಟಿಗೆ ಮಾರಿಕೊಂಡು, ಏಕಾಂತ ಸೇವೆಯಂಥ ‘ಅಡಲ್ಟ್ ಓನ್ಲಿ’ ಮಿಡ್ ನೈಟ್ ಚಟುವಟಿಕೆಗಳಲ್ಲಿ ಕಾಲೆತ್ತಿಕೊಂಡು ಆನಂದವಾಗಿದ್ದ ರಸಿಕರರಾಜ ಕೌಬಾಯ್ ಸ್ವಾಮಿಗೆ ಇದರಿಂದಾಗಿ ರಕ್ತವಾಂತಿಯಾದಷ್ಟು ನೋವುಂಟಾಗಿದೆ ಎಂದು ಮೂಲಗಳು ತಿಳಿಸಿವೆ. ಗೋಕರ್ಣ ದೇವಳದಿಂದ ಬರುತ್ತಿದ್ದ ಲಕ್ಷ ಲಕ್ಷ ಆದಾಯಕ್ಕೆ ಹೈಕೋರ್ಟ್ ಆದೇಶವು ಮಣ್ಣು ಸುರಿದಿರುವುದರಿಂದ ಇನ್ನು ಮುಂದೆ ‘ಕೌಸ್ಕೂಲ್’ ಬ್ಯುಸಿನೆಸ್ಸಿನಲ್ಲಿ ಸಿಗುತ್ತಿದ್ದ ಪುಡಿಗಾಸೇ ಗಟ್ಟಿ ಎಂದು ಖಾತ್ರಿಯಾಗುತ್ತಿದ್ದಂತೆ ಕೌಬಾಯ್ ಮುಸುಡಿ ಕಿವುಚಿಕೊಂಡು ತಲೆಮೇಲೆ ಕೈಹೊತ್ತು ಕುಳಿತಿದ್ದಾನಂತೆ. ಕೌಬಾಯ್ ಕಳ್ಳನ ಈ ಭೀಭತ್ಸ ಮುಖಾರವಿಂದವನ್ನು ನೋಡಿದ ಪೂಜೆಗೆಂದು ಬಂದ ಭಕ್ತರು, ಸ್ವಾಮಿಗೆ ಯಾವುದೋ ಆಫ್ರಿಕನ್ ದೆವ್ವ ಮೆಟ್ಟಿಕೊಂಡಿರಬೇಕೆಂದು ಭಯಗೊಂಡು ಕೇರಳ ಪಂಡಿತರನ್ನು ಕರೆತರಲು ದೌಡಾಯಿಸಿದ್ದಾರೆಂದು ನಂಬಲನರ್ಹ ಮೂಲಗಳು ತಿಳಿಸಿವೆ.

**********

ಕೇಂದ್ರ ಸರ್ಕಾರದ “ರನ್ನಿಂಗ್ ಇನ್ ದಿ ಫಾರಿನ್, ರನ್ ರನ್ ರನ್’ ಯೋಜನೆಯ ಲಾಭ ಪಡೆದ ಬ್ಯಾಂಕ್ ವಂಚಕರು ಸರ್ಕಾರಿ ಬ್ಯಾಂಕುಗಳಿಗೆ ಸಾವಿರಾರು ಕೋಟಿ ಉಂಡೆ ನಾಮ ತಿಕ್ಕಿ ಕಂಡ ಕಂಡ ದೇಶಗಳಿಗೆ ಓಡಿ ಹೋಗಿರುವುದು ಹಳೆಯ ವಿಷಯ. ಇಂಥಹ ವಂಚಕರನ್ನು, ಜಟಕಾಗಾಡಿ ಹತ್ತಿಕೊಂಡು ದೇಶದೇಶಗಳಿಗೆ ಪರ್ಯಟನೆ ಮಾಡಿ ಹಿಡಿದು ತರುತ್ತೇನೆಂದು ಬೊಗಳಿದ್ದ ಹಾಫ್‍ಮೆಂಟ್ಲು ಪಕೋಡೇಂದ್ರನು ಆನಂತರ ಮುಖ ಮತ್ತು ಇನ್ನೊಂದಕ್ಕೆ ಬ್ಯಾಂಡೇಜ್ ಹಾಕ್ಕೊಂಡು ಮಲಗಿರುವುದು ಸಹ ಹಳೇ ವಿಷಯ. ಹೊಸ ವಿಷಯ ಏನಪ್ಪ ಅಂತಂದ್ರೆ.. ಹೀಗೆ ಸರ್ಕಾರಿ ಬ್ಯಾಂಕುಗಳಿಗೆ ವಂಚಿಸಿ ಓಡಿಹೋದವರಲ್ಲಿ ಅಗ್ರಗಣ್ಯನಾದ ವಿಜಯ್ ಮಲ್ಯ, ತನ್ನ ಲಂಡನ್ ಮನೆಯಲ್ಲಿ ಕಕ್ಕ ಮಾಡಲು ಚಿನ್ನದ ಟಾಯ್ಲೆಟ್ ಕಮೋಡ್ ಕಟ್ಟಿಸಿಕೊಂಡಿರುವುದು ಬಯಲಾಗಿದೆ. ಒಬ್ಬರ ಹಿಂದೊಬ್ಬರು 28 ಮಂದಿ ಬ್ಯಾಂಕ್ ವಂಚಕರು ದೇಶ ಬಿಟ್ಟು ಓಡಿಹೋಗಿ ಹೀಗೆ ರಾಜಾಧಿರಾಜರಂತೆ ಎಂಜಾಯ್ ಮಾಡಿಕೊಂಡು ತಿರುಗುತ್ತಿದ್ದರೂ ಬ್ಲೂಜೆಪಿ ಪಕ್ಷದ ದ್ವೇಷಭಕ್ತ ಶಿಖಾಮಣಿಗಳು ಕಣ್ಣಿಗೆ ಲಕ್ವ ಹೊಡೆದವರಂತೆ ಸುಮ್ಮನಿರುವುದು ಆಶ್ಚರ್ಯವೇ ಸರಿ. ಪಕೋಡೇಂದ್ರನ ಫಾರಿನ್ ತೆವಲು ಹುಚ್ಚುಗೆದರಿ ದೇಶ ದೇಶ ಓತ್ಲಾ ಹೊಡೆಯುವಾಗ ಈ ವಂಚಕರಿರುವ ದೇಶಗಳಿಗೆಲ್ಲ ಹೋಗಿ ಬಂದರೂ ಇವರನ್ನು ಹಿಡಿದು ತರುವ ಬದಲು ತನ್ನ ‘ದೋಸ್ತಾನ ದೋಸ್ತ್’ಗಳಾದ ಅಂಬಾನಿ-ಆದಾನಿಗಳಿಗೆ ಆ ದೇಶಗಳಲ್ಲಿ ಬ್ಯುಸಿನೆಸ್ ಕಾಂಟ್ರಾಕ್ಟ್ ಕೊಡಿಸೋ ಅಡಿಕೆಮಂಡಿಯ ಕಮಿಷನ್ ಏಜೆಂಟ್ ದಲ್ಲಾಳಿಯಂತೆ ವರ್ತಿಸುತ್ತಿದ್ದಾನೆಂದು ಶ್ರಮಜೀವಿ ರೈತರು ಕ್ಯಾಕರಿಸಿ ಉಗಿಯುತ್ತಿದ್ದಾರೆಂದು ನಮ್ಮ ಬಾತ್ಮೀದಾರರು ವರದಿ ಮಾಡಿದ್ದಾರೆ.

**********

ಉತ್ತರಪ್ರದೇಶದ ಬೋಳುಮಂಡೆ ‘ಕುಂಗ್ ಫೂ ಮಾಂಕ್’ ಭೋಗಿ ಅನಿಷ್ಠನಾಥ್ ತನ್ನ ಆಡಳಿತಾವಧಿಯ ಅಭಿವೃದ್ಧಿ ಕೆಲಸಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಪ್ರಚಾರ ಮಾಡುವವರಿಗೆ ತಿಂಗಳಿಗೆ 25 ಸಾವಿರ ರೂಪಾಯಿ ಸಂಬಳ ಕೊಡೋದಾಗಿ ಪ್ರಕಟಿಸಿದ್ದಾರೆ. ಇದೇ ಕೆಲಸಕ್ಕೆಂದು ರಾಜ್ಯ ಸರ್ಕಾರದಡಿಯಿರುವ ವಾರ್ತಾ ಮತ್ತು ಪ್ರಚಾರ ಇಲಾಖೆಯವರು ಮಾಡೋ ಕೆಲಸ ಬಿಟ್ಟು ಯಾವ ದೊಡ್ಡಮೋರಿಗೆ ಕೇಸರಿ ಪೇಂಟ್ ಹೊಡೆಯಲು ಹೋಗಿದ್ದಾರೆಂದು ಜನರು ಪ್ರಶ್ನಿಸುತ್ತಿದ್ದಾರೆ. ಇರಲಿ, ಈ ಬಗ್ಗೆ ಅನಿಷ್ಠನಾಥನ ಅಭಿವೃದ್ಧಿಗಳನ್ನು ಪಟ್ಟಿ ಮಾಡುವುದಾದರೆ ಅವು ಕಾಶ್ಮೀರದಿಂದ ಕನ್ಯಾಕುಮಾರಿಯವರೆಗೆ ಯಾರಿಗೂ ಹೊಳೆಯದ ತಲೆಕೆಟ್ಟ ಐಡಿಯಾಗಳೇ ಎಂಬುದು ಅರಿವಾಗುತ್ತದೆ. ಉತ್ತರಪ್ರದೇಶದ ರೋಡು, ಮೋರಿ, ಟಾಯ್ಲೆಟ್, ಸರ್ಕಾರಿ ಕಚೇರಿ, ಕಾರು ಬಸ್ಸು, ಸೈಕಲ್ ಆಟೋರಿಕ್ಷಾಗಳು… ಹೀಗೆ ಅನಿಷ್ಠನಾಥನ ಬುರುಡೆಯೊಂದನ್ನು ಬಿಟ್ಟು ಮಿಕ್ಕೆಲ್ಲದ್ದಕ್ಕೂ ಕೇಸರಿ ಪೇಂಟ್ ಹೊಡೆಯಲಾಗಿದೆ. ಸೆಗಣಿ ತಿಂದ್ರೆ ಗಂಡು ಮಗುವಾಗುತ್ತೆ, ಸೆಗಣಿ ಶಾಂಪೂನಲ್ಲಿ ತಲೆಸ್ನಾನ ಮಾಡಿದ್ರೆ ತಲೆಗೂದಲು ಸೊಂಪಾಗಿ ಬೆಳೆಯುತ್ತೆ, ದನದ ಉಚ್ಚೆ ಕುಡಿದರೆ ಸರ್ವರೋಗಗಳೂ ನಿವಾರಣೆಯಾಗುತ್ತೆ, ಸೆಗಣಿ ಸೋಪು, ಸೆಗಣಿ ಬಿಸ್ಕತ್ತು, ಸೆಗಣಿ ಸೊಳ್ಳೆಬತ್ತಿ, ಸೆಗಣಿ ನೆಲ ಕ್ಲೀನರ್.. ಇಂಥಹ ಲೂಸ್ ಸಂಶೋಧನೆ ನಡೆಸಿದ ಅಡ್ನಾಡಿ ಸನಾತನ ಪೀಡೆಗಳಿಗೆ ಪ್ರೋತ್ಸಾಹ ಕೊಡಲಾಗಿದೆ. ರಾಜ್ಯದಲ್ಲಿ ಯಾರು ಯಾರನ್ನು ಬೇಕಾದರೂ ಗುಂಪು ಕಟ್ಟಿಕೊಂಡು ಹೊಡೆದು ಕೊಲ್ಲಲು ಸರ್ಕಾರದಿಂದಲೇ ಅನಧಿಕೃತ ಅನುಮತಿ ನೀಡಲಾಗಿದೆ. ಸಾಯುತ್ತಿರೋ ಮನುಷ್ಯರಿಗೆ ಆಸ್ಪತ್ರೆ ಕಟ್ಟಿಸಲು, ಆಕ್ಸಿಜನ್ ಇಲ್ಲದೆ ಸತ್ತ ಸಾವಿರಾರು ಎಳೆಕಂದಮ್ಮಗಳಿಗೆ ಆಕ್ಸಿಜನ್ ವ್ಯವಸ್ಥೆ ಮಾಡಲು ಯೋಗ್ಯತೆಯಿಲ್ಲದಿದ್ದರೂ ಬೀಡಾಡಿ ದನಗಳಿಗೆ ಆಂಬ್ಯುಲೆನ್ಸ್ ವ್ಯವಸ್ಥೆ ಕಲ್ಪಿಸಲಾಗಿದೆ. ಉಳಿದಂತೆ ಉತ್ತರಪ್ರದೇಶದ ಗ್ರಾಮೀಣಭಾಗವನ್ನು ಕ್ರಿಸ್ತಪೂರ್ವದಲ್ಲೇ ಬಾಕಿ ಉಳಿಸಲಾಗಿದೆ.. ಹೀಗೆ ಹೇಳುತ್ತ ಹೋದರೆ ಪಕೋಡಪ್ಪನ ಸುಳ್ಳುಗಳಂತೆ ಬೆಳೆಯುತ್ತ ಹೋಗುವ ಈ ತರುಕಲಾಂಡಿ ಕೆಲಸಗಳೇ ಭೋಗಿ ಅನಿಷ್ಠನಾಥನ ಅಭಿವೃದ್ಧಿಗಳೆಂದು ಸರ್ಕಾರದ ವರದಿಗಳೇ ಹೇಳುತ್ತಿವೆ. ವಸ್ತುಸ್ಥಿತಿ ಹೀಗಿರುವಾಗ ತಿಂಗಳಿಗೆ 25 ಸಾವಿರ ಸಂಬಳ ಕೊಟ್ಟು ತನ್ನ ಪಕ್ಷದ ‘ಬೇ ರೋಜ್ಗಾರ್ ಅಬ್ಬೇಪಾರಿಗಳಿಗೆ’ ಪುಗ್ಸಟ್ಟೆ ಸಂಬಳದ ವ್ಯವಸ್ಥೆ ಮಾಡ್ತಿರೋ ಅನಿಷ್ಠನಾಥ.. ಅದಕ್ಕೆ ಬೇಕಾದ ದುಡ್ಡನ್ನು ಸರ್ಕಾರಿ ಬೊಕ್ಕಸದಿಂದ ಕೊಡುತ್ತಾನೋ ಅಥವ ಅವನಪ್ಪನ ಮನೆಯೊಳಗೆ ಪ್ರಿಂಟು ಮಾಡಿ ತಂದು ಹಂಚುತ್ತಾನಾ ಎಂಬ ಬಗ್ಗೆ ಜನರಲ್ಲಿ ತೀವ್ರ ಜಿಜ್ಞಾಸೆ ಹುಟ್ಟಿಕೊಂಡಿದೆ.
ಇಲ್ಲಿಗೆ ವಾರ್ತಾಪ್ರಸಾರ ಮುಕ್ತಾಯವಾಯಿತು. ಮತ್ತೊಂದಷ್ಟು ಆಘಾತಕಾರಿ ನ್ಯೂಸುಗಳ ಸಮೇತ ಮತ್ತೆ ಭೇಟಿಯಾಗೋಣ. ಅಲ್ಲೀತನಕ ನಮಗೂ ನಿಮಗೂ ಅಟ್ಟೆ ಮಟ್ಟೆ ಕೋಳಿ ಮಟ್ಟೆ ವಾರದ್ ತನಕ ಮಾತಾಡ್ಸಲ್ಲ ಠೂ ಬಳೆ. ಧನ್ಯವಾದಗಳು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...