Homeಅಂಕಣಗಳುಸೋಷಿಯಲ್ ಮೀಡಿಯಾದಲ್ಲಿ ಪ್ರಚಾರ ಮಾಡೋ ಭಕುತರಿಗೆ ತಿಂಗಳಿಗೆ 25 ಸಾವಿರ ಭಕ್ಷೀಸು!

ಸೋಷಿಯಲ್ ಮೀಡಿಯಾದಲ್ಲಿ ಪ್ರಚಾರ ಮಾಡೋ ಭಕುತರಿಗೆ ತಿಂಗಳಿಗೆ 25 ಸಾವಿರ ಭಕ್ಷೀಸು!

- Advertisement -
- Advertisement -

ಕೇಳುಗರಿಗೆಲ್ಲ ವೀರ ನಮಸ್ಕಾರಗಳು, ಇದೀಗ ನೀವು ಕೇಳುತ್ತಿದ್ದೀರಿ ಆಘಾತವಾಣಿ, ಓದುತ್ತಿರುವವರು ನಿಮ್ಮ ಪ್ರೀತಿಯ ಅಟ್ಯಾಕ್ ಹನ್ಮಂತು. ಬನ್ನಿ ಈ ವಾರದ ಸುದ್ದಿಗಳೇನೇನಿವೆ ಎಂದು ನೋಡೋಣ.
ಶಿವಮೊಗ್ಗದ ಹೊಸನಗರ ಕಡೆಯ ದನ ಕಾಯೋ ಅಂಕಲ್ ಕೌಬಾಯ್ ಸ್ವಾಮಿಯ ಬಗ್ಗೆ ಒಂದು ಆಘಾತಕಾರಿ ಸುದ್ದಿ ಬಂದಿದೆ. ಊರಲ್ಲಿ ಓಡಾಡೋ ಬೀಡಾಡಿ ದನಹಸುಗಳನ್ನು ಎಳೆದೊಯ್ದು ‘ಕೌ ಸ್ಕೂಲ್’ನೊಳಗೆ ಕೂಡಿ ಹಾಕಿ ದಂಧೆ ನಡೆಸುತ್ತಿದ್ದ ಈ ಕೌಬಾಯ್ ಸ್ವಾಮಿ ಮುಸುಡಿಗೆ ಹೈಕೋರ್ಟ್ ಬಕ್ ಬಕ್ ಎಂದು ಗುದ್ದಿದೆ. ಧಡಿಯೂರಪ್ಪನ ಕಾಲದಲ್ಲಿ ಗೋಕರ್ಣದ ದೇವಸ್ಥಾನವನ್ನು ತನ್ನ ಮಠದ ವಶಕ್ಕೆ ಪಡೆದಿದ್ದ ಕೌಬಾಯ್ ಕಳ್ಳನ ಕೋತಿಮುಷ್ಠಿಯಿಂದ ದೇವಸ್ಥಾನವನ್ನು ಕಿತ್ತು, ಸಾರ್ವಜನಿಕರ ಸಮಿತಿಯ ಮಂಡಳಿಗೆ ಒಪ್ಪಿಸಲಾಗಿದೆ. ಇಲ್ಲೀತನಕ ‘ಕೌ ಸ್ಕೂಲ್’ನ ಹಸುಗಳ ಹಾಲು-ಬೆಣ್ಣೆ ತುಪ್ಪ ಮಜ್ಜಿಗೆ-ಮೊಸರನ್ನು ಕನ್ಸೆಷನ್ ರೇಟಿಗೆ ಮಾರಿಕೊಂಡು, ಏಕಾಂತ ಸೇವೆಯಂಥ ‘ಅಡಲ್ಟ್ ಓನ್ಲಿ’ ಮಿಡ್ ನೈಟ್ ಚಟುವಟಿಕೆಗಳಲ್ಲಿ ಕಾಲೆತ್ತಿಕೊಂಡು ಆನಂದವಾಗಿದ್ದ ರಸಿಕರರಾಜ ಕೌಬಾಯ್ ಸ್ವಾಮಿಗೆ ಇದರಿಂದಾಗಿ ರಕ್ತವಾಂತಿಯಾದಷ್ಟು ನೋವುಂಟಾಗಿದೆ ಎಂದು ಮೂಲಗಳು ತಿಳಿಸಿವೆ. ಗೋಕರ್ಣ ದೇವಳದಿಂದ ಬರುತ್ತಿದ್ದ ಲಕ್ಷ ಲಕ್ಷ ಆದಾಯಕ್ಕೆ ಹೈಕೋರ್ಟ್ ಆದೇಶವು ಮಣ್ಣು ಸುರಿದಿರುವುದರಿಂದ ಇನ್ನು ಮುಂದೆ ‘ಕೌಸ್ಕೂಲ್’ ಬ್ಯುಸಿನೆಸ್ಸಿನಲ್ಲಿ ಸಿಗುತ್ತಿದ್ದ ಪುಡಿಗಾಸೇ ಗಟ್ಟಿ ಎಂದು ಖಾತ್ರಿಯಾಗುತ್ತಿದ್ದಂತೆ ಕೌಬಾಯ್ ಮುಸುಡಿ ಕಿವುಚಿಕೊಂಡು ತಲೆಮೇಲೆ ಕೈಹೊತ್ತು ಕುಳಿತಿದ್ದಾನಂತೆ. ಕೌಬಾಯ್ ಕಳ್ಳನ ಈ ಭೀಭತ್ಸ ಮುಖಾರವಿಂದವನ್ನು ನೋಡಿದ ಪೂಜೆಗೆಂದು ಬಂದ ಭಕ್ತರು, ಸ್ವಾಮಿಗೆ ಯಾವುದೋ ಆಫ್ರಿಕನ್ ದೆವ್ವ ಮೆಟ್ಟಿಕೊಂಡಿರಬೇಕೆಂದು ಭಯಗೊಂಡು ಕೇರಳ ಪಂಡಿತರನ್ನು ಕರೆತರಲು ದೌಡಾಯಿಸಿದ್ದಾರೆಂದು ನಂಬಲನರ್ಹ ಮೂಲಗಳು ತಿಳಿಸಿವೆ.

**********

ಕೇಂದ್ರ ಸರ್ಕಾರದ “ರನ್ನಿಂಗ್ ಇನ್ ದಿ ಫಾರಿನ್, ರನ್ ರನ್ ರನ್’ ಯೋಜನೆಯ ಲಾಭ ಪಡೆದ ಬ್ಯಾಂಕ್ ವಂಚಕರು ಸರ್ಕಾರಿ ಬ್ಯಾಂಕುಗಳಿಗೆ ಸಾವಿರಾರು ಕೋಟಿ ಉಂಡೆ ನಾಮ ತಿಕ್ಕಿ ಕಂಡ ಕಂಡ ದೇಶಗಳಿಗೆ ಓಡಿ ಹೋಗಿರುವುದು ಹಳೆಯ ವಿಷಯ. ಇಂಥಹ ವಂಚಕರನ್ನು, ಜಟಕಾಗಾಡಿ ಹತ್ತಿಕೊಂಡು ದೇಶದೇಶಗಳಿಗೆ ಪರ್ಯಟನೆ ಮಾಡಿ ಹಿಡಿದು ತರುತ್ತೇನೆಂದು ಬೊಗಳಿದ್ದ ಹಾಫ್‍ಮೆಂಟ್ಲು ಪಕೋಡೇಂದ್ರನು ಆನಂತರ ಮುಖ ಮತ್ತು ಇನ್ನೊಂದಕ್ಕೆ ಬ್ಯಾಂಡೇಜ್ ಹಾಕ್ಕೊಂಡು ಮಲಗಿರುವುದು ಸಹ ಹಳೇ ವಿಷಯ. ಹೊಸ ವಿಷಯ ಏನಪ್ಪ ಅಂತಂದ್ರೆ.. ಹೀಗೆ ಸರ್ಕಾರಿ ಬ್ಯಾಂಕುಗಳಿಗೆ ವಂಚಿಸಿ ಓಡಿಹೋದವರಲ್ಲಿ ಅಗ್ರಗಣ್ಯನಾದ ವಿಜಯ್ ಮಲ್ಯ, ತನ್ನ ಲಂಡನ್ ಮನೆಯಲ್ಲಿ ಕಕ್ಕ ಮಾಡಲು ಚಿನ್ನದ ಟಾಯ್ಲೆಟ್ ಕಮೋಡ್ ಕಟ್ಟಿಸಿಕೊಂಡಿರುವುದು ಬಯಲಾಗಿದೆ. ಒಬ್ಬರ ಹಿಂದೊಬ್ಬರು 28 ಮಂದಿ ಬ್ಯಾಂಕ್ ವಂಚಕರು ದೇಶ ಬಿಟ್ಟು ಓಡಿಹೋಗಿ ಹೀಗೆ ರಾಜಾಧಿರಾಜರಂತೆ ಎಂಜಾಯ್ ಮಾಡಿಕೊಂಡು ತಿರುಗುತ್ತಿದ್ದರೂ ಬ್ಲೂಜೆಪಿ ಪಕ್ಷದ ದ್ವೇಷಭಕ್ತ ಶಿಖಾಮಣಿಗಳು ಕಣ್ಣಿಗೆ ಲಕ್ವ ಹೊಡೆದವರಂತೆ ಸುಮ್ಮನಿರುವುದು ಆಶ್ಚರ್ಯವೇ ಸರಿ. ಪಕೋಡೇಂದ್ರನ ಫಾರಿನ್ ತೆವಲು ಹುಚ್ಚುಗೆದರಿ ದೇಶ ದೇಶ ಓತ್ಲಾ ಹೊಡೆಯುವಾಗ ಈ ವಂಚಕರಿರುವ ದೇಶಗಳಿಗೆಲ್ಲ ಹೋಗಿ ಬಂದರೂ ಇವರನ್ನು ಹಿಡಿದು ತರುವ ಬದಲು ತನ್ನ ‘ದೋಸ್ತಾನ ದೋಸ್ತ್’ಗಳಾದ ಅಂಬಾನಿ-ಆದಾನಿಗಳಿಗೆ ಆ ದೇಶಗಳಲ್ಲಿ ಬ್ಯುಸಿನೆಸ್ ಕಾಂಟ್ರಾಕ್ಟ್ ಕೊಡಿಸೋ ಅಡಿಕೆಮಂಡಿಯ ಕಮಿಷನ್ ಏಜೆಂಟ್ ದಲ್ಲಾಳಿಯಂತೆ ವರ್ತಿಸುತ್ತಿದ್ದಾನೆಂದು ಶ್ರಮಜೀವಿ ರೈತರು ಕ್ಯಾಕರಿಸಿ ಉಗಿಯುತ್ತಿದ್ದಾರೆಂದು ನಮ್ಮ ಬಾತ್ಮೀದಾರರು ವರದಿ ಮಾಡಿದ್ದಾರೆ.

**********

ಉತ್ತರಪ್ರದೇಶದ ಬೋಳುಮಂಡೆ ‘ಕುಂಗ್ ಫೂ ಮಾಂಕ್’ ಭೋಗಿ ಅನಿಷ್ಠನಾಥ್ ತನ್ನ ಆಡಳಿತಾವಧಿಯ ಅಭಿವೃದ್ಧಿ ಕೆಲಸಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಪ್ರಚಾರ ಮಾಡುವವರಿಗೆ ತಿಂಗಳಿಗೆ 25 ಸಾವಿರ ರೂಪಾಯಿ ಸಂಬಳ ಕೊಡೋದಾಗಿ ಪ್ರಕಟಿಸಿದ್ದಾರೆ. ಇದೇ ಕೆಲಸಕ್ಕೆಂದು ರಾಜ್ಯ ಸರ್ಕಾರದಡಿಯಿರುವ ವಾರ್ತಾ ಮತ್ತು ಪ್ರಚಾರ ಇಲಾಖೆಯವರು ಮಾಡೋ ಕೆಲಸ ಬಿಟ್ಟು ಯಾವ ದೊಡ್ಡಮೋರಿಗೆ ಕೇಸರಿ ಪೇಂಟ್ ಹೊಡೆಯಲು ಹೋಗಿದ್ದಾರೆಂದು ಜನರು ಪ್ರಶ್ನಿಸುತ್ತಿದ್ದಾರೆ. ಇರಲಿ, ಈ ಬಗ್ಗೆ ಅನಿಷ್ಠನಾಥನ ಅಭಿವೃದ್ಧಿಗಳನ್ನು ಪಟ್ಟಿ ಮಾಡುವುದಾದರೆ ಅವು ಕಾಶ್ಮೀರದಿಂದ ಕನ್ಯಾಕುಮಾರಿಯವರೆಗೆ ಯಾರಿಗೂ ಹೊಳೆಯದ ತಲೆಕೆಟ್ಟ ಐಡಿಯಾಗಳೇ ಎಂಬುದು ಅರಿವಾಗುತ್ತದೆ. ಉತ್ತರಪ್ರದೇಶದ ರೋಡು, ಮೋರಿ, ಟಾಯ್ಲೆಟ್, ಸರ್ಕಾರಿ ಕಚೇರಿ, ಕಾರು ಬಸ್ಸು, ಸೈಕಲ್ ಆಟೋರಿಕ್ಷಾಗಳು… ಹೀಗೆ ಅನಿಷ್ಠನಾಥನ ಬುರುಡೆಯೊಂದನ್ನು ಬಿಟ್ಟು ಮಿಕ್ಕೆಲ್ಲದ್ದಕ್ಕೂ ಕೇಸರಿ ಪೇಂಟ್ ಹೊಡೆಯಲಾಗಿದೆ. ಸೆಗಣಿ ತಿಂದ್ರೆ ಗಂಡು ಮಗುವಾಗುತ್ತೆ, ಸೆಗಣಿ ಶಾಂಪೂನಲ್ಲಿ ತಲೆಸ್ನಾನ ಮಾಡಿದ್ರೆ ತಲೆಗೂದಲು ಸೊಂಪಾಗಿ ಬೆಳೆಯುತ್ತೆ, ದನದ ಉಚ್ಚೆ ಕುಡಿದರೆ ಸರ್ವರೋಗಗಳೂ ನಿವಾರಣೆಯಾಗುತ್ತೆ, ಸೆಗಣಿ ಸೋಪು, ಸೆಗಣಿ ಬಿಸ್ಕತ್ತು, ಸೆಗಣಿ ಸೊಳ್ಳೆಬತ್ತಿ, ಸೆಗಣಿ ನೆಲ ಕ್ಲೀನರ್.. ಇಂಥಹ ಲೂಸ್ ಸಂಶೋಧನೆ ನಡೆಸಿದ ಅಡ್ನಾಡಿ ಸನಾತನ ಪೀಡೆಗಳಿಗೆ ಪ್ರೋತ್ಸಾಹ ಕೊಡಲಾಗಿದೆ. ರಾಜ್ಯದಲ್ಲಿ ಯಾರು ಯಾರನ್ನು ಬೇಕಾದರೂ ಗುಂಪು ಕಟ್ಟಿಕೊಂಡು ಹೊಡೆದು ಕೊಲ್ಲಲು ಸರ್ಕಾರದಿಂದಲೇ ಅನಧಿಕೃತ ಅನುಮತಿ ನೀಡಲಾಗಿದೆ. ಸಾಯುತ್ತಿರೋ ಮನುಷ್ಯರಿಗೆ ಆಸ್ಪತ್ರೆ ಕಟ್ಟಿಸಲು, ಆಕ್ಸಿಜನ್ ಇಲ್ಲದೆ ಸತ್ತ ಸಾವಿರಾರು ಎಳೆಕಂದಮ್ಮಗಳಿಗೆ ಆಕ್ಸಿಜನ್ ವ್ಯವಸ್ಥೆ ಮಾಡಲು ಯೋಗ್ಯತೆಯಿಲ್ಲದಿದ್ದರೂ ಬೀಡಾಡಿ ದನಗಳಿಗೆ ಆಂಬ್ಯುಲೆನ್ಸ್ ವ್ಯವಸ್ಥೆ ಕಲ್ಪಿಸಲಾಗಿದೆ. ಉಳಿದಂತೆ ಉತ್ತರಪ್ರದೇಶದ ಗ್ರಾಮೀಣಭಾಗವನ್ನು ಕ್ರಿಸ್ತಪೂರ್ವದಲ್ಲೇ ಬಾಕಿ ಉಳಿಸಲಾಗಿದೆ.. ಹೀಗೆ ಹೇಳುತ್ತ ಹೋದರೆ ಪಕೋಡಪ್ಪನ ಸುಳ್ಳುಗಳಂತೆ ಬೆಳೆಯುತ್ತ ಹೋಗುವ ಈ ತರುಕಲಾಂಡಿ ಕೆಲಸಗಳೇ ಭೋಗಿ ಅನಿಷ್ಠನಾಥನ ಅಭಿವೃದ್ಧಿಗಳೆಂದು ಸರ್ಕಾರದ ವರದಿಗಳೇ ಹೇಳುತ್ತಿವೆ. ವಸ್ತುಸ್ಥಿತಿ ಹೀಗಿರುವಾಗ ತಿಂಗಳಿಗೆ 25 ಸಾವಿರ ಸಂಬಳ ಕೊಟ್ಟು ತನ್ನ ಪಕ್ಷದ ‘ಬೇ ರೋಜ್ಗಾರ್ ಅಬ್ಬೇಪಾರಿಗಳಿಗೆ’ ಪುಗ್ಸಟ್ಟೆ ಸಂಬಳದ ವ್ಯವಸ್ಥೆ ಮಾಡ್ತಿರೋ ಅನಿಷ್ಠನಾಥ.. ಅದಕ್ಕೆ ಬೇಕಾದ ದುಡ್ಡನ್ನು ಸರ್ಕಾರಿ ಬೊಕ್ಕಸದಿಂದ ಕೊಡುತ್ತಾನೋ ಅಥವ ಅವನಪ್ಪನ ಮನೆಯೊಳಗೆ ಪ್ರಿಂಟು ಮಾಡಿ ತಂದು ಹಂಚುತ್ತಾನಾ ಎಂಬ ಬಗ್ಗೆ ಜನರಲ್ಲಿ ತೀವ್ರ ಜಿಜ್ಞಾಸೆ ಹುಟ್ಟಿಕೊಂಡಿದೆ.
ಇಲ್ಲಿಗೆ ವಾರ್ತಾಪ್ರಸಾರ ಮುಕ್ತಾಯವಾಯಿತು. ಮತ್ತೊಂದಷ್ಟು ಆಘಾತಕಾರಿ ನ್ಯೂಸುಗಳ ಸಮೇತ ಮತ್ತೆ ಭೇಟಿಯಾಗೋಣ. ಅಲ್ಲೀತನಕ ನಮಗೂ ನಿಮಗೂ ಅಟ್ಟೆ ಮಟ್ಟೆ ಕೋಳಿ ಮಟ್ಟೆ ವಾರದ್ ತನಕ ಮಾತಾಡ್ಸಲ್ಲ ಠೂ ಬಳೆ. ಧನ್ಯವಾದಗಳು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...