HomeಮುಖಪುಟRSS-BJP ರ್‍ಯಾಲಿ: ಕೇರಳ ಸಿಎಂ ಪಿಣರಾಯಿ ವಿರುದ್ಧ ಕೊಲೆ ಬೆದರಿಕೆ ಘೋಷಣೆ

RSS-BJP ರ್‍ಯಾಲಿ: ಕೇರಳ ಸಿಎಂ ಪಿಣರಾಯಿ ವಿರುದ್ಧ ಕೊಲೆ ಬೆದರಿಕೆ ಘೋಷಣೆ

- Advertisement -
- Advertisement -

ಜನವರಿ 4ರ ಮಂಗಳವಾರದಂದು ಕೇರಳದ ಕೊಡಂಗಲ್ಲೂರಿನಲ್ಲಿ ಬಿಜೆಪಿ-ಆರ್‌ಎಸ್‌ಎಸ್‌‌ ಆಯೋಜಿಸಿದ್ದ ರ್‍ಯಾಲಿಯಲ್ಲಿ ರಾಜ್ಯದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ವಿರುದ್ಧ ಹಿಂಸಾಚಾರಕ್ಕೆ ಕರೆ ನೀಡುವ ಪ್ರಚೋದನಕಾರಿ ಘೋಷಣೆಗಳು ಕೂಗಲಾಗಿದೆ. ರ್‍ಯಾಲಿಯ ಸಮಯದಲ್ಲಿ ಮಾಡಲಾಗಿದ್ದ ಲೈವ್ ವೀಡಿಯೊವನ್ನು ಕೇರಳ ಬಿಜೆಪಿ ರಾಜ್ಯ ವಕ್ತಾರ ಸಂದೀಪ್ ವಾಚಸ್ಪತಿ ತನ್ನ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡ ನಂತರ ಈ ಘಟನೆ ಬೆಳಕಿಗೆ ಬಂದಿದೆ.

ರ್‍ಯಾಲಿಯಲ್ಲಿ ಭಾಗವಹಿಸಿದ್ದ ಜನರು, ಬಿಜೆಪಿ ಧ್ವಜಗಳನ್ನು ಹಿಡಿದು, ಮುಖ್ಯಮಂತ್ರಿ ವಿರುದ್ಧ ಮಲಯಾಳಂ ಭಾಷೆಯಲ್ಲಿ ಘೋಷಣೆಗಳನ್ನು ಕೂಗಿದ್ದಾರೆ.

ಇದನ್ನೂ ಓದಿ:ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳ ವಿಚಾರಣೆಗೆ ವಿಶೇಷ ನ್ಯಾಯಾಲಯ – ಪಿಣರಾಯಿ ವಿಜಯನ್

ರ್‍ಯಾಲಿಯಲ್ಲಿ “ಪಿಣರಾಯಿ ವಿಜಯನ್ ಅವರನ್ನು ಕಡಿದು, ಕಣ್ಣೂರಿನ ನಾಯಿಗಳಿಗೆ ತಿನ್ನಿಸುತ್ತೇವೆ” ಎಂಬ ಘೋಷಣೆಗಳನ್ನು ಕೂಗಲಾಗಿದೆ. 2006 ರಲ್ಲಿ ಕೊಲೆಗೀಡಾದ ಬಿಜೆಪಿಯ ಅಂದಿನ ಪುರಸಭೆಯ ಕಾರ್ಯದರ್ಶಿ ಸತ್ಯೇಶ್ (33) ಅವರ ಪುಣ್ಯತಿಥಿಯನ್ನು ಆಚರಿಸುವ ರ್‍ಯಾಲಿಯಲ್ಲಿ ಬಿಜೆಪಿ-ಆರ್‌ಎಸ್‌ಎಸ್ ಕಾರ್ಯಕರ್ತರು ಈ ಘೋಷಣೆಯನ್ನು ಕೂಗಿದ್ದಾರೆ.

“ಮಂಗಳವಾರ ನಡೆದ ರ್‍ಯಾಲಿಯಲ್ಲಿ ಸುಮಾರು 1,000 ಜನರು ಭಾಗವಹಿಸಿದ್ದರು. ಮೆರವಣಿಗೆಯೂ 250-300 ಮೀಟರ್ ಉದ್ದವಾಗಿತ್ತು. ರ್‍ಯಾಲಿಯ ಮಧ್ಯ ಭಾಗದಿಂದ ಘೋಷಣೆಗಳನ್ನು ಕೂಗಲಾಗಿದ್ದು, ಅದು ಪೊಲೀಸರ ಗಮನಕ್ಕೆ ಬಂದಿರಲಿಲ್ಲ” ಎಂದು ಕೊಡಂಗಲ್ಲೂರು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ:ಕೇರಳದಲ್ಲಿ ಸಿಎಎ ಜಾರಿಯಾಗುವುದಿಲ್ಲ: ಸಿಎಂ ಪಿಣರಾಯಿ ವಿಜಯನ್ ಪುನರುಚ್ಚಾರ

ರ್‍ಯಾಲಿ ನಡೆಸಿರುವುದರ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 283 (ಸಾರ್ವಜನಿಕ ಮಾರ್ಗ ಅಥವಾ ಸಂಚಾರ ಮಾರ್ಗದಲ್ಲಿ ಅಪಾಯ ಅಥವಾ ಅಡಚಣೆ) ಮತ್ತು ಕೇರಳ ಸಾಂಕ್ರಾಮಿಕ ರೋಗಗಳ ಸುಗ್ರೀವಾಜ್ಞೆಯ ಸೆಕ್ಷನ್‌ಗಳ ಅಡಿಯಲ್ಲಿ ಕಾರ್ಯಕರ್ತರ ವಿರುದ್ಧ ಪ್ರಕರಣವನ್ನು ದಾಖಲಿಸಲಾಗಿದೆ. ಘೋಷಣೆ ಕೂಗಿದ ಘಟನೆ ಗುರುವಾರ ಪೊಲೀಸರ ಗಮನಕ್ಕೆ ಬಂದ ನಂತರ, ಪ್ರಸ್ತುತ ಪ್ರಕರಣಕ್ಕೆ ಸಂಬಂಧಿತ ವಿಭಾಗಗಳನ್ನು ಸೇರಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ಕಳೆದ ವರ್ಷದ ಡಿಸೆಂಬರ್‌ನಲ್ಲಿ ಕೂಡಾ ತಲಶ್ಶೇರಿಯ ಬಿಜೆಪಿ ರ್‍ಯಾಲಿಯಲ್ಲಿ ದ್ವೇಷಪೂರಿತ ಘೋಷಣೆಗಳನ್ನು ಕೂಗಲಾಗಿತ್ತು. ಈ ರ್‍ಯಾಲಿಯಲ್ಲಿ ‘ಆಜಾನ್’ ಕೂಗಬಾರದು ಎಂದು ಮುಸ್ಲಿಮರನ್ನು ಬೆದರಿಸಲಾಗಿತ್ತು.

ಇದನ್ನೂ ಓದಿ:ಚಾಲ್ತಿಯಲ್ಲಿರುವ ವಿವಾಹ ವ್ಯವಸ್ಥೆ ಸುಧಾರಿಸಬೇಕು: ವರದಕ್ಷಿಣೆ ಹತ್ಯೆಗಳ ಬಗ್ಗೆ ಪಿಣರಾಯಿ ವಿಜಯನ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...