ಬಿಜೆಪಿ ಚುನಾವಣೆಯಲ್ಲಿ ಗೆಲ್ಲಲು ಸಹಾಯ ಮಾಡುವ ಉದ್ದೇಶದಿಂದ ಆರೆಸ್ಸೆಸ್ ದೇಶಾದ್ಯಂತ ಸರಣಿ ಬಾಂಬ್ ಸ್ಪೋಟ ನಡೆಸಿದೆ ಎಂದು ಆರ್ಎಸ್ಎಸ್ ಪದಾಧಿಕಾರಿಯೊಬ್ಬರು ನಾಂದೇಡ್ ನ್ಯಾಯಾಲಯಕ್ಕೆ ಸಲ್ಲಿಸಿದ ಅಫಿಡವಿಟ್ನಲ್ಲಿ ಬಹಿರಂಗಪಡಿಸಿದ್ದಾರೆ. ತಾನು RSS ಕಾರ್ಯಕರ್ತ ಎಂದು ಹೇಳಿಕೊಂಡಿರುವ ಯಶವಂತ್ ಶಿಂಧೆ, “ಆರ್ಎಸ್ಎಸ್ ಮತ್ತು ಅದಕ್ಕೆ ಸಂಬಂಧಿಸಿದ ಸಂಘಟನೆಗಳೇ ದೇಶಾದ್ಯಂತ ಸರಣಿ ಬಾಂಬ್ ಸ್ಫೋಟ ನಡೆಸಿದ್ದು, ಬಾಂಬ್ ಸ್ಫೋಟಕ್ಕೆ ತರಬೇತಿ ನೀಡುತ್ತಿರುವ ಶಿಬಿರಗಳಲ್ಲಿ ತಾನೂ ಹಾಜರಿದ್ದೆ” ಎಂದು ಅಫಿಡವಿಟ್ನಲ್ಲಿ ಉಲ್ಲೇಖಿಸಿದ್ದಾರೆ.
ಕೋರ್ಟ್ಗೆ ಸಲ್ಲಿಸಿರುವ ಅಫಿಡವಿಟ್ನಲ್ಲಿ, ಶಿಂಧೆ ಹಲವಾರು ಆರ್ಎಸ್ಎಸ್ ಮತ್ತು ವಿಎಚ್ಪಿ ಪದಾಧಿಕಾರಿಗಳನ್ನು ಹೆಸರಿಸಿದ್ದಾರೆ. ಸಂಘಟನೆಯಿಂದ ಹೋರಾಟಗಾರರನ್ನು ಆಯ್ಕೆ ಮಾಡುವವರೆಗೆ ಹಾಗೂ ಯೋಜನೆಯನ್ನು ಕಾರ್ಯಗತಗೊಳಿಸುವವರೆ ಈ ಪದಾಧಿಕಾರಿಗಳು ಬಾಂಬ್ ಸ್ಫೋಟ ಯೋಜನೆಯ ಹಲವು ಹಂತಗಳಲ್ಲಿ ಭಾಗವಹಿಸಿದ್ದಾರೆ ಎಂದು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others
ತಾನು ಹಿಂದುತ್ವದಲ್ಲಿ ಕಟ್ಟಾ ನಂಬಿಕೆಯುಳ್ಳವನೆಂದು ಹೇಳಿಕೊಳ್ಳುವ ಮತ್ತು ಭಯೋತ್ಪಾದಕ ಪ್ರವೃತ್ತಿಯಿಲ್ಲದ ಹಿಂದೂ ಧರ್ಮವನ್ನು ಶ್ರೇಷ್ಠವೆಂದು ಪರಿಗಣಿಸುವ ಶಿಂಧೆ, ಆರ್ಎಸ್ಎಸ್ ಮತ್ತು ವಿಎಚ್ಪಿ ನಡೆಸಿರುವ ಸ್ಫೋಟಗಳ ಮಾಸ್ಟರ್ ಮೈಂಡ್ ಆಗಿರುವ ಮೂವರನ್ನು ಹೆಸರಿಸಿದ್ದಾರೆ.
ಇದನ್ನೂ ಓದಿ: ಗುಜರಾತ್: NEP ಮೂಲಕ 1ನೇ ತರಗತಿಯಿಂದಲೇ ಸಂಸ್ಕೃತ ಕಡ್ಡಾಯಕ್ಕೆ ಪ್ರಯತ್ನಿಸುತ್ತಿರುವ ಆರೆಸ್ಸೆಸ್
ಇಂದ್ರೇಶ್ ಕುಮಾರ್, ಹಿಮಾಂಶು ಪಾನ್ಸೆ, ಮಿಲಿಂದ್ ಪರಾಂಡೆ, ರಾಕೇಶ್ ಧಾವಡೆ ಮತ್ತು ರವಿ ದೇವ್ (ಮಿಥುನ್ ಚಕ್ರವರ್ತಿ) ಈ ಪ್ರಕರಣದ ಪ್ರಮುಖ ಸಂಚುಕೋರರು ಎಂದು ಅಫಿಡವಿಟ್ನಲ್ಲಿ ಹೆಸರಿಸಲಾಗಿದೆ. ಮಿಲಿಂದ್ ಪರಾಂಡೆ ಮತ್ತು ರಾಕೇಶ್ ಧಾವಡ್ ತರಬೇತಿ ಶಿಬಿರಗಳನ್ನು ಆಯೋಜಿಸಿದರೆ, ರವಿ ದೇವ್ ಬಾಂಬ್ ತಯಾರಿಕೆಯಲ್ಲಿ ತರಬೇತಿ ನೀಡಿದ್ದಾನೆ ಎಂದು ಹೇಳಿದ್ದಾರೆ.
राष्ट्रीय स्वयंसेवक संघ के प्रचारक रहे यशवंत शिंदे ने हलफ़नामा दर्ज कर के संघ के राष्ट्र विरोधी कारनामों की ख़ौफ़नाक जानकारी उजागर की। कैसे पूरे देश में बम विस्फोट करने का षड्यंत्र रचा गया, कौन कौन उसमें शामिल थे, इस से बड़ी ब्रेकिंग न्यूज़ और क्या हो सकती है? pic.twitter.com/aJYPeDiwGs
— Pawan Khera 🇮🇳 (@Pawankhera) September 1, 2022
ಶಿಂಧೆ ತಾನು ತಮ್ಮ ನಾಯಕರ ಪರವಾಗಿಲ್ಲ ಎಂದು ಹೇಳಿದ್ದು, ಅವರ ಮಾಡುವ ಘೋರ ಅಪರಾಧಗಳ ಭಾಗವಾಗಲು ಬಯಸುವುದಿಲ್ಲ ಎಂದು ಹೇಳಿದ್ದಾರೆ. ಸಂಘಟನೆಯಲ್ಲಿ ತನಗೆ ಉತ್ತಮ ಸಂಪರ್ಕ ಹೊಂದಿರುವವರನ್ನು ಬಾಂಬ್ ಸ್ಫೋಟಗಳನ್ನು ನಡೆಸದಂತೆ ಮನಪರಿವರ್ತನೆ ಮಾಡಿದ್ದೇನೆ, ಇದರಿಂದಾಗಿ ಅನೇಕ ಅಮಾಯಕ ಹಿಂದೂಗಳು, ಮುಸ್ಲಿಮರು ಮತ್ತು ಕ್ರಿಶ್ಚಿಯನ್ನರ ಪ್ರಾಣ ಉಳಿಸಲಾಗಿದೆ ಎಂದು ಅವರು ಅಫಿಡವಿಟ್ನಲ್ಲಿ ಹೇಳಿದ್ದಾರೆ.
“ದೇಶದಾದ್ಯಂತ ಸ್ಫೋಟಗಳನ್ನು ಮಾಡುವ ಆರ್ಎಸ್ಎಸ್ ಮತ್ತು ವಿಎಚ್ಪಿಯ ಯೋಜನೆ ನಿರೀಕ್ಷಿತ ಮಟ್ಟದಲ್ಲಿ ಯಶಸ್ವಿಯಾಗದ ಕಾರಣ ಬಿಜೆಪಿಗೆ ರಾಜಕೀಯವಾಗಿ ಲಾಭವಾಗಲಿಲ್ಲ. ಪರಿಣಾಮವಾಗಿ, 2004 ರ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಬಹುಮತ ಸಿಕ್ಕಿತು” ಎಂದು ಅವರು ಹೇಳಿದ್ದಾರೆ.
“ಇದರ ನಂತರ ಮಿಲಿಂದ್ ಪರಾಂಡೆ ಅವರಂತಹ ಪ್ರಮುಖ ಸಂಚುಕೋರರು, ಭಯಭೀತರಾಗಿ ಭೂಗತರಾದರು. ಆದರೆ ಅವರು ರಹಸ್ಯವಾಗಿ ಷಡ್ಯಂತ್ರಗಳನ್ನು ಹೆಣೆಯುವುದನ್ನು ಮುಂದುವರೆಸಿದರು. ಅವರು ಭೂಗತರಾಗಿ ದೇಶಾದ್ಯಂತ ಅನೇಕ ಬಾಂಬ್ ಸ್ಫೋಟಗಳನ್ನು ನಡೆಸಿದರು. ಪಕ್ಷಪಾತಿ ಪೋಲಿಸರು ಮತ್ತು ಏಕಪಕ್ಷೀಯ ಮಾಧ್ಯಮಗಳ ಸಹಾಯದಿಂದ ಇವುಗಳನ್ನು ಮುಸ್ಲಿಮರ ಮೇಲೆ ಆರೋಪಿಸಲಾಯಿತು. ಅದು ಅವರಿಗೆ 2014 ರ ಲೋಕಸಭೆ ಚುನಾವಣೆಯಲ್ಲಿ ಸಹಾಯ ಮಾಡಿತು” ಎಂದು ಅಫಿಡವಿಟ್ ಹೇಳಿದೆ.
ಇದನ್ನೂ ಓದಿ: ಮಾತು ಮರೆತ ಭಾರತ; ಊನಾ ಫೈಲ್: ಆರೆಸ್ಸೆಸ್-ಬಿಜೆಪಿಯ ದನದ ರಾಜಕಾರಣ ಮತ್ತು ದಲಿತರು
“2014 ರಲ್ಲಿ ಬಿಜೆಪಿ ಕೇಂದ್ರದಲ್ಲಿ ಅಧಿಕಾರವನ್ನು ವಶಪಡಿಸಿಕೊಂಡು ನರೇಂದ್ರ ಮೋದಿ ಪ್ರಧಾನಿಯಾದರು. ಇದು ವಿಶ್ವ ಹಿಂದೂ ಪರಿಷತ್ ಮತ್ತು ಆರ್ಎಸ್ಎಸ್ಗೆ ಸೇರಿದ ಎಲ್ಲಾ ಭೂಗತ ವಿಧ್ವಂಸಕ ಶಕ್ತಿಗಳ ಹಠಾತ್ ಸಕ್ರಿಯಗೊಳಿಸುವಿಕೆಗೆ ಕಾರಣವಾಯಿತು. 2006ರ ನಾಂದೇಡ್ ಸ್ಫೋಟ ಪ್ರಕರಣದಲ್ಲಿ ಉಲ್ಲೇಖಿಸಿರುವ ಮೂವರು ಪ್ರಮುಖ ಸಂಚುಕೋರರನ್ನು ಕಾನೂನಿನ ಮುಂದೆ ತರಬೇಕು” ಎಂದು ಅವರು ಮನವಿ ಮಾಡಿದ್ದಾರೆ.