Homeಮುಖಪುಟಬಿಜೆಪಿ ಗೆಲುವಿಗೆ ಆರೆಸ್ಸೆಸ್‌‌ ಭಾರತದಾದ್ಯಂತ ಬಾಂಬ್ ಸ್ಫೋಟ ನಡೆಸಿದೆ: ಕಾರ್ಯಕರ್ತನ ಸ್ಪೋಟಕ ಹೇಳಿಕೆ

ಬಿಜೆಪಿ ಗೆಲುವಿಗೆ ಆರೆಸ್ಸೆಸ್‌‌ ಭಾರತದಾದ್ಯಂತ ಬಾಂಬ್ ಸ್ಫೋಟ ನಡೆಸಿದೆ: ಕಾರ್ಯಕರ್ತನ ಸ್ಪೋಟಕ ಹೇಳಿಕೆ

- Advertisement -
- Advertisement -

ಬಿಜೆಪಿ ಚುನಾವಣೆಯಲ್ಲಿ ಗೆಲ್ಲಲು ಸಹಾಯ ಮಾಡುವ ಉದ್ದೇಶದಿಂದ ಆರೆಸ್ಸೆಸ್‌ ದೇಶಾದ್ಯಂತ ಸರಣಿ ಬಾಂಬ್ ಸ್ಪೋಟ ನಡೆಸಿದೆ ಎಂದು ಆರ್‌ಎಸ್‌ಎಸ್ ಪದಾಧಿಕಾರಿಯೊಬ್ಬರು ನಾಂದೇಡ್ ನ್ಯಾಯಾಲಯಕ್ಕೆ ಸಲ್ಲಿಸಿದ ಅಫಿಡವಿಟ್‌ನಲ್ಲಿ ಬಹಿರಂಗಪಡಿಸಿದ್ದಾರೆ. ತಾನು RSS ಕಾರ್ಯಕರ್ತ ಎಂದು ಹೇಳಿಕೊಂಡಿರುವ ಯಶವಂತ್‌ ಶಿಂಧೆ, “ಆರ್‌ಎಸ್‌ಎಸ್‌ ಮತ್ತು ಅದಕ್ಕೆ ಸಂಬಂಧಿಸಿದ ಸಂಘಟನೆಗಳೇ ದೇಶಾದ್ಯಂತ ಸರಣಿ ಬಾಂಬ್‌ ಸ್ಫೋಟ ನಡೆಸಿದ್ದು, ಬಾಂಬ್‌ ಸ್ಫೋಟಕ್ಕೆ ತರಬೇತಿ ನೀಡುತ್ತಿರುವ ಶಿಬಿರಗಳಲ್ಲಿ ತಾನೂ ಹಾಜರಿದ್ದೆ” ಎಂದು ಅಫಿಡವಿಟ್‌ನಲ್ಲಿ ಉಲ್ಲೇಖಿಸಿದ್ದಾರೆ.

ಕೋರ್ಟ್‌ಗೆ ಸಲ್ಲಿಸಿರುವ ಅಫಿಡವಿಟ್‌ನಲ್ಲಿ, ಶಿಂಧೆ ಹಲವಾರು ಆರ್‌ಎಸ್‌ಎಸ್ ಮತ್ತು ವಿಎಚ್‌ಪಿ ಪದಾಧಿಕಾರಿಗಳನ್ನು ಹೆಸರಿಸಿದ್ದಾರೆ. ಸಂಘಟನೆಯಿಂದ ಹೋರಾಟಗಾರರನ್ನು ಆಯ್ಕೆ ಮಾಡುವವರೆಗೆ ಹಾಗೂ ಯೋಜನೆಯನ್ನು ಕಾರ್ಯಗತಗೊಳಿಸುವವರೆ ಈ ಪದಾಧಿಕಾರಿಗಳು ಬಾಂಬ್ ಸ್ಫೋಟ ಯೋಜನೆಯ ಹಲವು ಹಂತಗಳಲ್ಲಿ ಭಾಗವಹಿಸಿದ್ದಾರೆ ಎಂದು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ತಾನು ಹಿಂದುತ್ವದಲ್ಲಿ ಕಟ್ಟಾ ನಂಬಿಕೆಯುಳ್ಳವನೆಂದು ಹೇಳಿಕೊಳ್ಳುವ ಮತ್ತು ಭಯೋತ್ಪಾದಕ ಪ್ರವೃತ್ತಿಯಿಲ್ಲದ ಹಿಂದೂ ಧರ್ಮವನ್ನು ಶ್ರೇಷ್ಠವೆಂದು ಪರಿಗಣಿಸುವ ಶಿಂಧೆ, ಆರ್‌ಎಸ್‌ಎಸ್ ಮತ್ತು ವಿಎಚ್‌ಪಿ ನಡೆಸಿರುವ ಸ್ಫೋಟಗಳ ಮಾಸ್ಟರ್ ಮೈಂಡ್ ಆಗಿರುವ ಮೂವರನ್ನು ಹೆಸರಿಸಿದ್ದಾರೆ.

ಇದನ್ನೂ ಓದಿ: ಗುಜರಾತ್‌: NEP ಮೂಲಕ 1ನೇ ತರಗತಿಯಿಂದಲೇ ಸಂಸ್ಕೃತ ಕಡ್ಡಾಯಕ್ಕೆ ಪ್ರಯತ್ನಿಸುತ್ತಿರುವ ಆರೆಸ್ಸೆಸ್‌‌

ಇಂದ್ರೇಶ್ ಕುಮಾರ್, ಹಿಮಾಂಶು ಪಾನ್ಸೆ, ಮಿಲಿಂದ್ ಪರಾಂಡೆ, ರಾಕೇಶ್ ಧಾವಡೆ ಮತ್ತು ರವಿ ದೇವ್ (ಮಿಥುನ್ ಚಕ್ರವರ್ತಿ) ಈ ಪ್ರಕರಣದ ಪ್ರಮುಖ ಸಂಚುಕೋರರು ಎಂದು ಅಫಿಡವಿಟ್‌ನಲ್ಲಿ ಹೆಸರಿಸಲಾಗಿದೆ. ಮಿಲಿಂದ್ ಪರಾಂಡೆ ಮತ್ತು ರಾಕೇಶ್ ಧಾವಡ್ ತರಬೇತಿ ಶಿಬಿರಗಳನ್ನು ಆಯೋಜಿಸಿದರೆ, ರವಿ ದೇವ್ ಬಾಂಬ್ ತಯಾರಿಕೆಯಲ್ಲಿ ತರಬೇತಿ ನೀಡಿದ್ದಾನೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಆರೆಸ್ಸೆಸ್‌‌ನಂತೆ ಪಿಎಫ್‌‌ಐ ಕೂಡಾ ದೈಹಿಕ ಶಿಕ್ಷಣದ ನೆಪದಲ್ಲಿ ಯುವಕರ ಬ್ರೈನ್ ವಾಶ್‌ ಮಾಡುತ್ತಿದೆ: ಬಿಹಾರದ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ

ಶಿಂಧೆ ತಾನು ತಮ್ಮ ನಾಯಕರ ಪರವಾಗಿಲ್ಲ ಎಂದು ಹೇಳಿದ್ದು, ಅವರ ಮಾಡುವ ಘೋರ ಅಪರಾಧಗಳ ಭಾಗವಾಗಲು ಬಯಸುವುದಿಲ್ಲ ಎಂದು ಹೇಳಿದ್ದಾರೆ. ಸಂಘಟನೆಯಲ್ಲಿ ತನಗೆ ಉತ್ತಮ ಸಂಪರ್ಕ ಹೊಂದಿರುವವರನ್ನು ಬಾಂಬ್ ಸ್ಫೋಟಗಳನ್ನು ನಡೆಸದಂತೆ ಮನಪರಿವರ್ತನೆ ಮಾಡಿದ್ದೇನೆ, ಇದರಿಂದಾಗಿ ಅನೇಕ ಅಮಾಯಕ ಹಿಂದೂಗಳು, ಮುಸ್ಲಿಮರು ಮತ್ತು ಕ್ರಿಶ್ಚಿಯನ್ನರ ಪ್ರಾಣ ಉಳಿಸಲಾಗಿದೆ ಎಂದು ಅವರು ಅಫಿಡವಿಟ್‌ನಲ್ಲಿ ಹೇಳಿದ್ದಾರೆ.

“ದೇಶದಾದ್ಯಂತ ಸ್ಫೋಟಗಳನ್ನು ಮಾಡುವ ಆರ್‌ಎಸ್‌ಎಸ್ ಮತ್ತು ವಿಎಚ್‌ಪಿಯ ಯೋಜನೆ ನಿರೀಕ್ಷಿತ ಮಟ್ಟದಲ್ಲಿ ಯಶಸ್ವಿಯಾಗದ ಕಾರಣ ಬಿಜೆಪಿಗೆ ರಾಜಕೀಯವಾಗಿ ಲಾಭವಾಗಲಿಲ್ಲ. ಪರಿಣಾಮವಾಗಿ, 2004 ರ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಬಹುಮತ ಸಿಕ್ಕಿತು” ಎಂದು ಅವರು ಹೇಳಿದ್ದಾರೆ.

“ಇದರ ನಂತರ ಮಿಲಿಂದ್ ಪರಾಂಡೆ ಅವರಂತಹ ಪ್ರಮುಖ ಸಂಚುಕೋರರು, ಭಯಭೀತರಾಗಿ ಭೂಗತರಾದರು. ಆದರೆ ಅವರು ರಹಸ್ಯವಾಗಿ ಷಡ್ಯಂತ್ರಗಳನ್ನು ಹೆಣೆಯುವುದನ್ನು ಮುಂದುವರೆಸಿದರು. ಅವರು ಭೂಗತರಾಗಿ ದೇಶಾದ್ಯಂತ ಅನೇಕ ಬಾಂಬ್ ಸ್ಫೋಟಗಳನ್ನು ನಡೆಸಿದರು. ಪಕ್ಷಪಾತಿ ಪೋಲಿಸರು ಮತ್ತು ಏಕಪಕ್ಷೀಯ ಮಾಧ್ಯಮಗಳ ಸಹಾಯದಿಂದ ಇವುಗಳನ್ನು ಮುಸ್ಲಿಮರ ಮೇಲೆ ಆರೋಪಿಸಲಾಯಿತು. ಅದು ಅವರಿಗೆ 2014 ರ ಲೋಕಸಭೆ ಚುನಾವಣೆಯಲ್ಲಿ ಸಹಾಯ ಮಾಡಿತು” ಎಂದು ಅಫಿಡವಿಟ್‌ ಹೇಳಿದೆ.

ಇದನ್ನೂ ಓದಿ: ಮಾತು ಮರೆತ ಭಾರತ; ಊನಾ ಫೈಲ್: ಆರೆಸ್ಸೆಸ್-ಬಿಜೆಪಿಯ ದನದ ರಾಜಕಾರಣ ಮತ್ತು ದಲಿತರು

“2014 ರಲ್ಲಿ ಬಿಜೆಪಿ ಕೇಂದ್ರದಲ್ಲಿ ಅಧಿಕಾರವನ್ನು ವಶಪಡಿಸಿಕೊಂಡು ನರೇಂದ್ರ ಮೋದಿ ಪ್ರಧಾನಿಯಾದರು. ಇದು ವಿಶ್ವ ಹಿಂದೂ ಪರಿಷತ್ ಮತ್ತು ಆರ್‌ಎಸ್‌ಎಸ್‌ಗೆ ಸೇರಿದ ಎಲ್ಲಾ ಭೂಗತ ವಿಧ್ವಂಸಕ ಶಕ್ತಿಗಳ ಹಠಾತ್ ಸಕ್ರಿಯಗೊಳಿಸುವಿಕೆಗೆ ಕಾರಣವಾಯಿತು. 2006ರ ನಾಂದೇಡ್ ಸ್ಫೋಟ ಪ್ರಕರಣದಲ್ಲಿ ಉಲ್ಲೇಖಿಸಿರುವ ಮೂವರು ಪ್ರಮುಖ ಸಂಚುಕೋರರನ್ನು ಕಾನೂನಿನ ಮುಂದೆ ತರಬೇಕು” ಎಂದು ಅವರು ಮನವಿ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...