Homeಮುಖಪುಟಬಿಜೆಪಿ ಗೆಲುವಿಗೆ ಆರೆಸ್ಸೆಸ್‌‌ ಭಾರತದಾದ್ಯಂತ ಬಾಂಬ್ ಸ್ಫೋಟ ನಡೆಸಿದೆ: ಕಾರ್ಯಕರ್ತನ ಸ್ಪೋಟಕ ಹೇಳಿಕೆ

ಬಿಜೆಪಿ ಗೆಲುವಿಗೆ ಆರೆಸ್ಸೆಸ್‌‌ ಭಾರತದಾದ್ಯಂತ ಬಾಂಬ್ ಸ್ಫೋಟ ನಡೆಸಿದೆ: ಕಾರ್ಯಕರ್ತನ ಸ್ಪೋಟಕ ಹೇಳಿಕೆ

- Advertisement -
- Advertisement -

ಬಿಜೆಪಿ ಚುನಾವಣೆಯಲ್ಲಿ ಗೆಲ್ಲಲು ಸಹಾಯ ಮಾಡುವ ಉದ್ದೇಶದಿಂದ ಆರೆಸ್ಸೆಸ್‌ ದೇಶಾದ್ಯಂತ ಸರಣಿ ಬಾಂಬ್ ಸ್ಪೋಟ ನಡೆಸಿದೆ ಎಂದು ಆರ್‌ಎಸ್‌ಎಸ್ ಪದಾಧಿಕಾರಿಯೊಬ್ಬರು ನಾಂದೇಡ್ ನ್ಯಾಯಾಲಯಕ್ಕೆ ಸಲ್ಲಿಸಿದ ಅಫಿಡವಿಟ್‌ನಲ್ಲಿ ಬಹಿರಂಗಪಡಿಸಿದ್ದಾರೆ. ತಾನು RSS ಕಾರ್ಯಕರ್ತ ಎಂದು ಹೇಳಿಕೊಂಡಿರುವ ಯಶವಂತ್‌ ಶಿಂಧೆ, “ಆರ್‌ಎಸ್‌ಎಸ್‌ ಮತ್ತು ಅದಕ್ಕೆ ಸಂಬಂಧಿಸಿದ ಸಂಘಟನೆಗಳೇ ದೇಶಾದ್ಯಂತ ಸರಣಿ ಬಾಂಬ್‌ ಸ್ಫೋಟ ನಡೆಸಿದ್ದು, ಬಾಂಬ್‌ ಸ್ಫೋಟಕ್ಕೆ ತರಬೇತಿ ನೀಡುತ್ತಿರುವ ಶಿಬಿರಗಳಲ್ಲಿ ತಾನೂ ಹಾಜರಿದ್ದೆ” ಎಂದು ಅಫಿಡವಿಟ್‌ನಲ್ಲಿ ಉಲ್ಲೇಖಿಸಿದ್ದಾರೆ.

ಕೋರ್ಟ್‌ಗೆ ಸಲ್ಲಿಸಿರುವ ಅಫಿಡವಿಟ್‌ನಲ್ಲಿ, ಶಿಂಧೆ ಹಲವಾರು ಆರ್‌ಎಸ್‌ಎಸ್ ಮತ್ತು ವಿಎಚ್‌ಪಿ ಪದಾಧಿಕಾರಿಗಳನ್ನು ಹೆಸರಿಸಿದ್ದಾರೆ. ಸಂಘಟನೆಯಿಂದ ಹೋರಾಟಗಾರರನ್ನು ಆಯ್ಕೆ ಮಾಡುವವರೆಗೆ ಹಾಗೂ ಯೋಜನೆಯನ್ನು ಕಾರ್ಯಗತಗೊಳಿಸುವವರೆ ಈ ಪದಾಧಿಕಾರಿಗಳು ಬಾಂಬ್ ಸ್ಫೋಟ ಯೋಜನೆಯ ಹಲವು ಹಂತಗಳಲ್ಲಿ ಭಾಗವಹಿಸಿದ್ದಾರೆ ಎಂದು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ತಾನು ಹಿಂದುತ್ವದಲ್ಲಿ ಕಟ್ಟಾ ನಂಬಿಕೆಯುಳ್ಳವನೆಂದು ಹೇಳಿಕೊಳ್ಳುವ ಮತ್ತು ಭಯೋತ್ಪಾದಕ ಪ್ರವೃತ್ತಿಯಿಲ್ಲದ ಹಿಂದೂ ಧರ್ಮವನ್ನು ಶ್ರೇಷ್ಠವೆಂದು ಪರಿಗಣಿಸುವ ಶಿಂಧೆ, ಆರ್‌ಎಸ್‌ಎಸ್ ಮತ್ತು ವಿಎಚ್‌ಪಿ ನಡೆಸಿರುವ ಸ್ಫೋಟಗಳ ಮಾಸ್ಟರ್ ಮೈಂಡ್ ಆಗಿರುವ ಮೂವರನ್ನು ಹೆಸರಿಸಿದ್ದಾರೆ.

ಇದನ್ನೂ ಓದಿ: ಗುಜರಾತ್‌: NEP ಮೂಲಕ 1ನೇ ತರಗತಿಯಿಂದಲೇ ಸಂಸ್ಕೃತ ಕಡ್ಡಾಯಕ್ಕೆ ಪ್ರಯತ್ನಿಸುತ್ತಿರುವ ಆರೆಸ್ಸೆಸ್‌‌

ಇಂದ್ರೇಶ್ ಕುಮಾರ್, ಹಿಮಾಂಶು ಪಾನ್ಸೆ, ಮಿಲಿಂದ್ ಪರಾಂಡೆ, ರಾಕೇಶ್ ಧಾವಡೆ ಮತ್ತು ರವಿ ದೇವ್ (ಮಿಥುನ್ ಚಕ್ರವರ್ತಿ) ಈ ಪ್ರಕರಣದ ಪ್ರಮುಖ ಸಂಚುಕೋರರು ಎಂದು ಅಫಿಡವಿಟ್‌ನಲ್ಲಿ ಹೆಸರಿಸಲಾಗಿದೆ. ಮಿಲಿಂದ್ ಪರಾಂಡೆ ಮತ್ತು ರಾಕೇಶ್ ಧಾವಡ್ ತರಬೇತಿ ಶಿಬಿರಗಳನ್ನು ಆಯೋಜಿಸಿದರೆ, ರವಿ ದೇವ್ ಬಾಂಬ್ ತಯಾರಿಕೆಯಲ್ಲಿ ತರಬೇತಿ ನೀಡಿದ್ದಾನೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಆರೆಸ್ಸೆಸ್‌‌ನಂತೆ ಪಿಎಫ್‌‌ಐ ಕೂಡಾ ದೈಹಿಕ ಶಿಕ್ಷಣದ ನೆಪದಲ್ಲಿ ಯುವಕರ ಬ್ರೈನ್ ವಾಶ್‌ ಮಾಡುತ್ತಿದೆ: ಬಿಹಾರದ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ

ಶಿಂಧೆ ತಾನು ತಮ್ಮ ನಾಯಕರ ಪರವಾಗಿಲ್ಲ ಎಂದು ಹೇಳಿದ್ದು, ಅವರ ಮಾಡುವ ಘೋರ ಅಪರಾಧಗಳ ಭಾಗವಾಗಲು ಬಯಸುವುದಿಲ್ಲ ಎಂದು ಹೇಳಿದ್ದಾರೆ. ಸಂಘಟನೆಯಲ್ಲಿ ತನಗೆ ಉತ್ತಮ ಸಂಪರ್ಕ ಹೊಂದಿರುವವರನ್ನು ಬಾಂಬ್ ಸ್ಫೋಟಗಳನ್ನು ನಡೆಸದಂತೆ ಮನಪರಿವರ್ತನೆ ಮಾಡಿದ್ದೇನೆ, ಇದರಿಂದಾಗಿ ಅನೇಕ ಅಮಾಯಕ ಹಿಂದೂಗಳು, ಮುಸ್ಲಿಮರು ಮತ್ತು ಕ್ರಿಶ್ಚಿಯನ್ನರ ಪ್ರಾಣ ಉಳಿಸಲಾಗಿದೆ ಎಂದು ಅವರು ಅಫಿಡವಿಟ್‌ನಲ್ಲಿ ಹೇಳಿದ್ದಾರೆ.

“ದೇಶದಾದ್ಯಂತ ಸ್ಫೋಟಗಳನ್ನು ಮಾಡುವ ಆರ್‌ಎಸ್‌ಎಸ್ ಮತ್ತು ವಿಎಚ್‌ಪಿಯ ಯೋಜನೆ ನಿರೀಕ್ಷಿತ ಮಟ್ಟದಲ್ಲಿ ಯಶಸ್ವಿಯಾಗದ ಕಾರಣ ಬಿಜೆಪಿಗೆ ರಾಜಕೀಯವಾಗಿ ಲಾಭವಾಗಲಿಲ್ಲ. ಪರಿಣಾಮವಾಗಿ, 2004 ರ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಬಹುಮತ ಸಿಕ್ಕಿತು” ಎಂದು ಅವರು ಹೇಳಿದ್ದಾರೆ.

“ಇದರ ನಂತರ ಮಿಲಿಂದ್ ಪರಾಂಡೆ ಅವರಂತಹ ಪ್ರಮುಖ ಸಂಚುಕೋರರು, ಭಯಭೀತರಾಗಿ ಭೂಗತರಾದರು. ಆದರೆ ಅವರು ರಹಸ್ಯವಾಗಿ ಷಡ್ಯಂತ್ರಗಳನ್ನು ಹೆಣೆಯುವುದನ್ನು ಮುಂದುವರೆಸಿದರು. ಅವರು ಭೂಗತರಾಗಿ ದೇಶಾದ್ಯಂತ ಅನೇಕ ಬಾಂಬ್ ಸ್ಫೋಟಗಳನ್ನು ನಡೆಸಿದರು. ಪಕ್ಷಪಾತಿ ಪೋಲಿಸರು ಮತ್ತು ಏಕಪಕ್ಷೀಯ ಮಾಧ್ಯಮಗಳ ಸಹಾಯದಿಂದ ಇವುಗಳನ್ನು ಮುಸ್ಲಿಮರ ಮೇಲೆ ಆರೋಪಿಸಲಾಯಿತು. ಅದು ಅವರಿಗೆ 2014 ರ ಲೋಕಸಭೆ ಚುನಾವಣೆಯಲ್ಲಿ ಸಹಾಯ ಮಾಡಿತು” ಎಂದು ಅಫಿಡವಿಟ್‌ ಹೇಳಿದೆ.

ಇದನ್ನೂ ಓದಿ: ಮಾತು ಮರೆತ ಭಾರತ; ಊನಾ ಫೈಲ್: ಆರೆಸ್ಸೆಸ್-ಬಿಜೆಪಿಯ ದನದ ರಾಜಕಾರಣ ಮತ್ತು ದಲಿತರು

“2014 ರಲ್ಲಿ ಬಿಜೆಪಿ ಕೇಂದ್ರದಲ್ಲಿ ಅಧಿಕಾರವನ್ನು ವಶಪಡಿಸಿಕೊಂಡು ನರೇಂದ್ರ ಮೋದಿ ಪ್ರಧಾನಿಯಾದರು. ಇದು ವಿಶ್ವ ಹಿಂದೂ ಪರಿಷತ್ ಮತ್ತು ಆರ್‌ಎಸ್‌ಎಸ್‌ಗೆ ಸೇರಿದ ಎಲ್ಲಾ ಭೂಗತ ವಿಧ್ವಂಸಕ ಶಕ್ತಿಗಳ ಹಠಾತ್ ಸಕ್ರಿಯಗೊಳಿಸುವಿಕೆಗೆ ಕಾರಣವಾಯಿತು. 2006ರ ನಾಂದೇಡ್ ಸ್ಫೋಟ ಪ್ರಕರಣದಲ್ಲಿ ಉಲ್ಲೇಖಿಸಿರುವ ಮೂವರು ಪ್ರಮುಖ ಸಂಚುಕೋರರನ್ನು ಕಾನೂನಿನ ಮುಂದೆ ತರಬೇಕು” ಎಂದು ಅವರು ಮನವಿ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...