Homeಮುಖಪುಟಬಿಜೆಪಿ ಗೆಲುವಿಗೆ ಆರೆಸ್ಸೆಸ್‌‌ ಭಾರತದಾದ್ಯಂತ ಬಾಂಬ್ ಸ್ಫೋಟ ನಡೆಸಿದೆ: ಕಾರ್ಯಕರ್ತನ ಸ್ಪೋಟಕ ಹೇಳಿಕೆ

ಬಿಜೆಪಿ ಗೆಲುವಿಗೆ ಆರೆಸ್ಸೆಸ್‌‌ ಭಾರತದಾದ್ಯಂತ ಬಾಂಬ್ ಸ್ಫೋಟ ನಡೆಸಿದೆ: ಕಾರ್ಯಕರ್ತನ ಸ್ಪೋಟಕ ಹೇಳಿಕೆ

- Advertisement -
- Advertisement -

ಬಿಜೆಪಿ ಚುನಾವಣೆಯಲ್ಲಿ ಗೆಲ್ಲಲು ಸಹಾಯ ಮಾಡುವ ಉದ್ದೇಶದಿಂದ ಆರೆಸ್ಸೆಸ್‌ ದೇಶಾದ್ಯಂತ ಸರಣಿ ಬಾಂಬ್ ಸ್ಪೋಟ ನಡೆಸಿದೆ ಎಂದು ಆರ್‌ಎಸ್‌ಎಸ್ ಪದಾಧಿಕಾರಿಯೊಬ್ಬರು ನಾಂದೇಡ್ ನ್ಯಾಯಾಲಯಕ್ಕೆ ಸಲ್ಲಿಸಿದ ಅಫಿಡವಿಟ್‌ನಲ್ಲಿ ಬಹಿರಂಗಪಡಿಸಿದ್ದಾರೆ. ತಾನು RSS ಕಾರ್ಯಕರ್ತ ಎಂದು ಹೇಳಿಕೊಂಡಿರುವ ಯಶವಂತ್‌ ಶಿಂಧೆ, “ಆರ್‌ಎಸ್‌ಎಸ್‌ ಮತ್ತು ಅದಕ್ಕೆ ಸಂಬಂಧಿಸಿದ ಸಂಘಟನೆಗಳೇ ದೇಶಾದ್ಯಂತ ಸರಣಿ ಬಾಂಬ್‌ ಸ್ಫೋಟ ನಡೆಸಿದ್ದು, ಬಾಂಬ್‌ ಸ್ಫೋಟಕ್ಕೆ ತರಬೇತಿ ನೀಡುತ್ತಿರುವ ಶಿಬಿರಗಳಲ್ಲಿ ತಾನೂ ಹಾಜರಿದ್ದೆ” ಎಂದು ಅಫಿಡವಿಟ್‌ನಲ್ಲಿ ಉಲ್ಲೇಖಿಸಿದ್ದಾರೆ.

ಕೋರ್ಟ್‌ಗೆ ಸಲ್ಲಿಸಿರುವ ಅಫಿಡವಿಟ್‌ನಲ್ಲಿ, ಶಿಂಧೆ ಹಲವಾರು ಆರ್‌ಎಸ್‌ಎಸ್ ಮತ್ತು ವಿಎಚ್‌ಪಿ ಪದಾಧಿಕಾರಿಗಳನ್ನು ಹೆಸರಿಸಿದ್ದಾರೆ. ಸಂಘಟನೆಯಿಂದ ಹೋರಾಟಗಾರರನ್ನು ಆಯ್ಕೆ ಮಾಡುವವರೆಗೆ ಹಾಗೂ ಯೋಜನೆಯನ್ನು ಕಾರ್ಯಗತಗೊಳಿಸುವವರೆ ಈ ಪದಾಧಿಕಾರಿಗಳು ಬಾಂಬ್ ಸ್ಫೋಟ ಯೋಜನೆಯ ಹಲವು ಹಂತಗಳಲ್ಲಿ ಭಾಗವಹಿಸಿದ್ದಾರೆ ಎಂದು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ತಾನು ಹಿಂದುತ್ವದಲ್ಲಿ ಕಟ್ಟಾ ನಂಬಿಕೆಯುಳ್ಳವನೆಂದು ಹೇಳಿಕೊಳ್ಳುವ ಮತ್ತು ಭಯೋತ್ಪಾದಕ ಪ್ರವೃತ್ತಿಯಿಲ್ಲದ ಹಿಂದೂ ಧರ್ಮವನ್ನು ಶ್ರೇಷ್ಠವೆಂದು ಪರಿಗಣಿಸುವ ಶಿಂಧೆ, ಆರ್‌ಎಸ್‌ಎಸ್ ಮತ್ತು ವಿಎಚ್‌ಪಿ ನಡೆಸಿರುವ ಸ್ಫೋಟಗಳ ಮಾಸ್ಟರ್ ಮೈಂಡ್ ಆಗಿರುವ ಮೂವರನ್ನು ಹೆಸರಿಸಿದ್ದಾರೆ.

ಇದನ್ನೂ ಓದಿ: ಗುಜರಾತ್‌: NEP ಮೂಲಕ 1ನೇ ತರಗತಿಯಿಂದಲೇ ಸಂಸ್ಕೃತ ಕಡ್ಡಾಯಕ್ಕೆ ಪ್ರಯತ್ನಿಸುತ್ತಿರುವ ಆರೆಸ್ಸೆಸ್‌‌

ಇಂದ್ರೇಶ್ ಕುಮಾರ್, ಹಿಮಾಂಶು ಪಾನ್ಸೆ, ಮಿಲಿಂದ್ ಪರಾಂಡೆ, ರಾಕೇಶ್ ಧಾವಡೆ ಮತ್ತು ರವಿ ದೇವ್ (ಮಿಥುನ್ ಚಕ್ರವರ್ತಿ) ಈ ಪ್ರಕರಣದ ಪ್ರಮುಖ ಸಂಚುಕೋರರು ಎಂದು ಅಫಿಡವಿಟ್‌ನಲ್ಲಿ ಹೆಸರಿಸಲಾಗಿದೆ. ಮಿಲಿಂದ್ ಪರಾಂಡೆ ಮತ್ತು ರಾಕೇಶ್ ಧಾವಡ್ ತರಬೇತಿ ಶಿಬಿರಗಳನ್ನು ಆಯೋಜಿಸಿದರೆ, ರವಿ ದೇವ್ ಬಾಂಬ್ ತಯಾರಿಕೆಯಲ್ಲಿ ತರಬೇತಿ ನೀಡಿದ್ದಾನೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಆರೆಸ್ಸೆಸ್‌‌ನಂತೆ ಪಿಎಫ್‌‌ಐ ಕೂಡಾ ದೈಹಿಕ ಶಿಕ್ಷಣದ ನೆಪದಲ್ಲಿ ಯುವಕರ ಬ್ರೈನ್ ವಾಶ್‌ ಮಾಡುತ್ತಿದೆ: ಬಿಹಾರದ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ

ಶಿಂಧೆ ತಾನು ತಮ್ಮ ನಾಯಕರ ಪರವಾಗಿಲ್ಲ ಎಂದು ಹೇಳಿದ್ದು, ಅವರ ಮಾಡುವ ಘೋರ ಅಪರಾಧಗಳ ಭಾಗವಾಗಲು ಬಯಸುವುದಿಲ್ಲ ಎಂದು ಹೇಳಿದ್ದಾರೆ. ಸಂಘಟನೆಯಲ್ಲಿ ತನಗೆ ಉತ್ತಮ ಸಂಪರ್ಕ ಹೊಂದಿರುವವರನ್ನು ಬಾಂಬ್ ಸ್ಫೋಟಗಳನ್ನು ನಡೆಸದಂತೆ ಮನಪರಿವರ್ತನೆ ಮಾಡಿದ್ದೇನೆ, ಇದರಿಂದಾಗಿ ಅನೇಕ ಅಮಾಯಕ ಹಿಂದೂಗಳು, ಮುಸ್ಲಿಮರು ಮತ್ತು ಕ್ರಿಶ್ಚಿಯನ್ನರ ಪ್ರಾಣ ಉಳಿಸಲಾಗಿದೆ ಎಂದು ಅವರು ಅಫಿಡವಿಟ್‌ನಲ್ಲಿ ಹೇಳಿದ್ದಾರೆ.

“ದೇಶದಾದ್ಯಂತ ಸ್ಫೋಟಗಳನ್ನು ಮಾಡುವ ಆರ್‌ಎಸ್‌ಎಸ್ ಮತ್ತು ವಿಎಚ್‌ಪಿಯ ಯೋಜನೆ ನಿರೀಕ್ಷಿತ ಮಟ್ಟದಲ್ಲಿ ಯಶಸ್ವಿಯಾಗದ ಕಾರಣ ಬಿಜೆಪಿಗೆ ರಾಜಕೀಯವಾಗಿ ಲಾಭವಾಗಲಿಲ್ಲ. ಪರಿಣಾಮವಾಗಿ, 2004 ರ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಬಹುಮತ ಸಿಕ್ಕಿತು” ಎಂದು ಅವರು ಹೇಳಿದ್ದಾರೆ.

“ಇದರ ನಂತರ ಮಿಲಿಂದ್ ಪರಾಂಡೆ ಅವರಂತಹ ಪ್ರಮುಖ ಸಂಚುಕೋರರು, ಭಯಭೀತರಾಗಿ ಭೂಗತರಾದರು. ಆದರೆ ಅವರು ರಹಸ್ಯವಾಗಿ ಷಡ್ಯಂತ್ರಗಳನ್ನು ಹೆಣೆಯುವುದನ್ನು ಮುಂದುವರೆಸಿದರು. ಅವರು ಭೂಗತರಾಗಿ ದೇಶಾದ್ಯಂತ ಅನೇಕ ಬಾಂಬ್ ಸ್ಫೋಟಗಳನ್ನು ನಡೆಸಿದರು. ಪಕ್ಷಪಾತಿ ಪೋಲಿಸರು ಮತ್ತು ಏಕಪಕ್ಷೀಯ ಮಾಧ್ಯಮಗಳ ಸಹಾಯದಿಂದ ಇವುಗಳನ್ನು ಮುಸ್ಲಿಮರ ಮೇಲೆ ಆರೋಪಿಸಲಾಯಿತು. ಅದು ಅವರಿಗೆ 2014 ರ ಲೋಕಸಭೆ ಚುನಾವಣೆಯಲ್ಲಿ ಸಹಾಯ ಮಾಡಿತು” ಎಂದು ಅಫಿಡವಿಟ್‌ ಹೇಳಿದೆ.

ಇದನ್ನೂ ಓದಿ: ಮಾತು ಮರೆತ ಭಾರತ; ಊನಾ ಫೈಲ್: ಆರೆಸ್ಸೆಸ್-ಬಿಜೆಪಿಯ ದನದ ರಾಜಕಾರಣ ಮತ್ತು ದಲಿತರು

“2014 ರಲ್ಲಿ ಬಿಜೆಪಿ ಕೇಂದ್ರದಲ್ಲಿ ಅಧಿಕಾರವನ್ನು ವಶಪಡಿಸಿಕೊಂಡು ನರೇಂದ್ರ ಮೋದಿ ಪ್ರಧಾನಿಯಾದರು. ಇದು ವಿಶ್ವ ಹಿಂದೂ ಪರಿಷತ್ ಮತ್ತು ಆರ್‌ಎಸ್‌ಎಸ್‌ಗೆ ಸೇರಿದ ಎಲ್ಲಾ ಭೂಗತ ವಿಧ್ವಂಸಕ ಶಕ್ತಿಗಳ ಹಠಾತ್ ಸಕ್ರಿಯಗೊಳಿಸುವಿಕೆಗೆ ಕಾರಣವಾಯಿತು. 2006ರ ನಾಂದೇಡ್ ಸ್ಫೋಟ ಪ್ರಕರಣದಲ್ಲಿ ಉಲ್ಲೇಖಿಸಿರುವ ಮೂವರು ಪ್ರಮುಖ ಸಂಚುಕೋರರನ್ನು ಕಾನೂನಿನ ಮುಂದೆ ತರಬೇಕು” ಎಂದು ಅವರು ಮನವಿ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...