Homeಮುಖಪುಟಜನತಾ ಕರ್ಫ್ಯೂ ನಂತರ ಅಥವಾ ಮೊದಲು ಶಾಖೆ ನಡೆಸಲು ಆರೆಸ್ಸೆಸ್ ಕರೆ : ಉಳಿದ ಸಮಯದಲ್ಲಿ...

ಜನತಾ ಕರ್ಫ್ಯೂ ನಂತರ ಅಥವಾ ಮೊದಲು ಶಾಖೆ ನಡೆಸಲು ಆರೆಸ್ಸೆಸ್ ಕರೆ : ಉಳಿದ ಸಮಯದಲ್ಲಿ ವೈರಸ್‌ ಹರಡುವುದಿಲ್ಲವೇ?

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿಯವರು ಭಾನುವಾರ ಸಾರ್ವಜನಿಕ ಕರ್ಫ್ಯೂಗಾಗಿ ಕರೆ ನೀಡಿದ್ದನ್ನು ಗಮನದಲ್ಲಿಟ್ಟುಕೊಂಡು ಆರೆಸ್ಸೆಸ್ ಶಾಖೆಗಳನ್ನು ಬೆಳಿಗ್ಗೆ 6.30 ಕ್ಕೆ ಮೊದಲು ಅಥವಾ ಭಾನುವಾರ ರಾತ್ರಿ 9.30 ರ ನಂತರ ನಡೆಸಲಾಗುವುದು ಎಂದು ಆರ್‌ಎಸ್‌ಎಸ್ ಪ್ರಧಾನ ಕಾರ್ಯದರ್ಶಿ ಸುರೇಶ್ ಭಯಾಜಿ ಜೋಶಿ ಹೇಳಿಕೆ ನೀಡಿದ್ದಾರೆ.

“ಸ್ವಯಂಸೇವಕರು ತಮ್ಮ ಅನುಕೂಲಕ್ಕೆ ಅನುಗುಣವಾಗಿ ತಮ್ಮ ಪ್ರದೇಶಲ್ಲಿ ಒಟ್ಟುಗೂಡಬಹುದು ಮತ್ತು ಪ್ರಾರ್ಥಿಸಬಹುದು” ಎಂದು ಜೋಶಿ ಹೇಳಿದ್ದಾರೆ. ಭಾನುವಾರ ಬೆಳಿಗ್ಗೆ 7 ರಿಂದ ರಾತ್ರಿ 9 ರವರೆಗೆ 14 ಗಂಟೆಗಳ ಕಾಲ ಜನತಾ ಕರ್ಫ್ಯೂ ಸಮಯದಲ್ಲಿ ಜನರು ರಸ್ತೆ ಮತ್ತು ಸಾರ್ವಜನಿಕ ಸ್ಥಳಗಳಿಂದ ದೂರವಿರಲು ಪ್ರಧಾನ ಮಂತ್ರಿ ತಮ್ಮ ಭಾಷಣದಲ್ಲಿ ತಿಳಿಸಿದ್ದರು.

ವೈರಸ್ ಹರಡುವುದನ್ನು ತಡೆಯಲು ಸಭೆಗಳನ್ನು ರದ್ದುಗೊಳಿಸುವ ಸರ್ಕಾರದ ನಿರ್ದೇಶನದ ನಂತರ ಆರ್‌ಎಸ್‌ಎಸ್ ಅಖಿಲ ಭಾರತೀಯ ಪ್ರತಿನಿಧಿ ಸಭೆಯನ್ನು ಕಳೆದ ವಾರ ರದ್ದುಗೊಳಿಸಿತ್ತು. ವೈರಸ್ ಹರಡುವುದನ್ನು ತೆಡೆಗಟ್ಟಲು ಸರ್ಕಾರದ ಮಾರ್ಗಸೂಚಿಗಳನ್ನು ಅನುಸರಿಸಲು ಎಲ್ಲಾ ರಾಜ್ಯ ಘಟಕಗಳಿಗೆ ಸೂಚನೆಗಳನ್ನು ಆರೆಸ್ಸೆಸ್ ನೀಡಿದೆ ಎನ್ನಲಾಗಿದೆ. ಆದರೆ ಕೆಲವು ಪ್ರದೇಶಗಳ ಜಿಲ್ಲೆ ಹಾಗೂ ರಾಜ್ಯ ಘಟಕಗಳು ಭಾನುವಾರ ಶಾಖೆಗಳಲ್ಲಿ ಅನುಸರಿಸಬೇಕಾದ ಕಾರ್ಯಕ್ರಮಗಳು ರೂಪಿಸಿದೆ.

ಇಡೀ ದೇಶವೇ ಕೊರೊನ ಭೀತಿಯಲ್ಲಿರುವಾಗ ಇವರು ಶಾಖೆಗಳನ್ನು ನಡೆಸುವುದಾದರೂ ಏಕೆ? ಇವರು ಶಾಖೆಗಳನ್ನು ಜನತಾ ಕರ್ಫ್ಯೂ ಪ್ರಾರಂಭ ಅಥವಾ ಮುಗಿದ ನಂತರ ಮಾಡಿದರೆ ಸೋಂಕು ಹರಡುವುದಿಲ್ಲವೇ ? ಸರಕಾರದ ಆದೇಶವನ್ನು ಮೀರಿ ಸಭೆ ಸೇರುವುದು ಸರಿಯೇ? ಸಾರ್ವಜನಿಕರಿಗೊಂದು ನ್ಯಾಯ? ಆರ್‌ಎಸ್‌ಎಸ್‌ಗೆ ಒಂದು ನ್ಯಾಯ ಸರಿಯೇ? ಶಾಖೆಗಳಲ್ಲಿ ನೂರಾರು ಜನ ಸೇರುವುದು ಅಪಾಯಕ್ಕೆ ಆಸ್ಪದವಲ್ಲವೇ ಎಂಬ ಪ್ರಶ್ನೆಗಳು ಸಾಮಾಜಿಕ ಜಾಲತಾಣಗಳಲ್ಲಿ ಎದ್ದಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆಪರೇಷನ್ ಡೆಮಾಲಿಶ್‌ಮೆಂಟ್ ಅಡಿಯಲ್ಲಿ 200ಕ್ಕೂ ಹೆಚ್ಚು ನಕ್ಸಲ್ ಸ್ಮಾರಕಗಳನ್ನು ನೆಲಸಮಗೊಳಿಸಿದ ಭದ್ರತಾ ಪಡೆಗಳು 

ನವದೆಹಲಿ: ನಕ್ಸಲ್ ಚಟುವಟಿಕೆಗಳ ವಿರುದ್ಧ ತೀವ್ರಗೊಂಡ ಕಾರ್ಯಾಚರಣೆ ನಿರ್ಣಾಯಕ ಹಂತವನ್ನು ಪ್ರವೇಶಿಸಿರುವುದಾಗಿ ಭದ್ರತಾಪಡೆಯ ಅಧಿಕಾರಿಗಳು ತಿಳಿಸಿದ್ದಾರೆ.  ಆಪರೇಷನ್ ಡೆಮಾಲಿಶ್‌ಮೆಂಟ್ ಎಂದು ಕರೆಯಲ್ಪಡುವ ಇತ್ತೀಚಿನ ಕಾರ್ಯಾಚರಣೆಯ ಅಡಿಯಲ್ಲಿ ನಕ್ಸಲ್ ಕಾರ್ಯಕರ್ತರು ತಮ್ಮ ನಾಯಕರನ್ನು ಸ್ಮರಿಸಲು ಮತ್ತು...

ಮುಸ್ಲಿಮರಿಗೆ ನೀಡಿದ್ದ 5% ಮೀಸಲಾತಿ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಕ್ರಮ ಪ್ರಶ್ನಿಸಿ ಬಾಂಬೆ ಹೈಕೋರ್ಟ್ ಗೆ ಅರ್ಜಿ 

ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮುಸ್ಲಿಮರಿಗೆ 5% ಮೀಸಲಾತಿಯನ್ನು ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಇತ್ತೀಚಿನ ನಿರ್ಧಾರವನ್ನು ಮುಂಬೈ ಮೂಲದ ವಕೀಲರು ಬಾಂಬೆ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ವಕೀಲ ಸೈಯದ್ ಎಜಾಜ್ ಅಬ್ಬಾಸ್ ನಖ್ವಿ ಅವರು ವಕೀಲ...

ವಿಧಾನಸಭಾ ಚುನಾವಣೆಯಲ್ಲಿ ನೇಮಮ್ ನಿಂದ ಸ್ಪರ್ಧಿಸುವ ಬಯಕೆಯನ್ನು ಪುನರುಚ್ಚರಿಸಿದ ಬಿಜೆಪಿ ಕೇರಳ ಅಧ್ಯಕ್ಷ ರಾಜೀವ್ ಚಂದ್ರಶೇಖರ್ 

ತಿರುವನಂತಪುರಂ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೇರಳದ ನೇಮಮ್ ಕ್ಷೇತ್ರದಿಂದ ಸ್ಪರ್ಧಿಸುವ ತಮ್ಮ ಇಚ್ಛೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಭಾನುವಾರ ಪುನರುಚ್ಚರಿಸಿದ್ದಾರೆ. ನೇಮಮ್‌ನಲ್ಲಿ ಬಿಜೆಪಿಯ ಚುನಾವಣಾ ಗೋಡೆ ಬರಹ ಅಭಿಯಾನಕ್ಕೆ ಚಾಲನೆ ನೀಡಿದ ನಂತರ...

ಯುವತಿಯನ್ನು ಬಂಧಿಸಿಟ್ಟು ಚಿತ್ರಹಿಂಸೆ : ಆರೋಪಿಯ ಬಂಧನ

ಯುವಕನೋರ್ವ ತನ್ನ ಲಿವ್-ಇನ್ ಸಂಗಾತಿಯಾದ 19 ವರ್ಷದ ಯುವತಿಯನ್ನು ಕೊಠಡಿಯಲ್ಲಿ ಬಂಧಿಸಿಟ್ಟು ಚಿತ್ರಹಿಂಸೆ ನೀಡಿರುವ ಘಟನೆ ಗುರುಗಾಂವ್‌ನ ಸೆಕ್ಟರ್ 69ರಲ್ಲಿ ನಡೆದಿದೆ. ಆರೋಪಿಯನ್ನು ದೆಹಲಿಯ ನರೇಲಾ ನಿವಾಸಿ 19 ವರ್ಷದ ಶಿವಂ ಎಂದು ಗುರುತಿಸಲಾಗಿದೆ....

ಕೋಝಿಕ್ಕೋಡ್‌: ಆಹಾರ ಸೇವಿಸಿ, ಬಿಲ್ ಪಾವತಿಸಲು ನಿರಾಕರಿಸಿದ ಮೂವರ ತಂಡದಿಂದ ರೆಸ್ಟೋರೆಂಟ್ ಧ್ವಂಸ

ಕೋಝಿಕ್ಕೋಡ್ (ಕೇರಳ): ಆಹಾರ ಸೇವಿಸಿ, ಹಣ ನೀಡಲು ನಿರಾಕರಿಸಿದ ಮೂವರು ಸದಸ್ಯರ ಗುಂಪೊಂದು ಬಿಲ್ ಕೇಳಿದ್ದಕ್ಕೆ ರೆಸ್ಟೋರೆಂಟ್ ಅನ್ನು ಧ್ವಂಸಗೊಳಿಸಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಪ್ರಕರಣ ಸಂಬಂಧ ಒಬ್ಬ ವ್ಯಕ್ತಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದ್ದು,...

ಲೈಂಗಿಕ ದೌರ್ಜನ್ಯ ಆರೋಪ : ಸ್ವಾಮಿ ಅವಿಮುಕ್ತೇಶ್ವರಾನಂದ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ

ಇಬ್ಬರು ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಜ್ಯೋತಿಷ್ ಪೀಠದ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಮತ್ತು ಅವರ ಶಿಷ್ಯ ಮುಕುಂದಾನಂದ ಬ್ರಹ್ಮಚಾರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ವಿಶೇಷ ಪೋಕ್ಸೋ ನ್ಯಾಯಾಲಯ...

ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಶಿಕ್ಷಕಿಯಿಂದ ಹಲ್ಲೆ

ಶಾಲಾ ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಹಲ್ಲೆ ನಡೆಸಿದ ಶಿಕ್ಷಕಿ, ಆಕೆಯ ಹೆಸರನ್ನು ದಾಖಲಾತಿಯಿಂದ ತೆಗೆದು ಹಾಕುವುದಾಗಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಉತ್ತರ ಪ್ರದೇಶದ ಅಲೀಗಢ ಜಿಲ್ಲೆಯ...

ಚಿಕ್ಕಮಗಳೂರಿನಲ್ಲಿ ಒಂದೇ ವಾರದಲ್ಲಿ ಕಾಡಾನೆ ದಾಳಿಗೆ ಎರಡನೇ ಸಾವು; ಆನೆ ಸೆರೆ; ಸರ್ಕಾರದ ವಿರುದ್ಧ ಸ್ಥಳೀಯರ ಪ್ರತಿಭಟನೆ

ಚಿಕ್ಕಮಗಳೂರಿನ ವ್ಯಾಪ್ತಿಯಲ್ಲಿ ದಿನದಿಂದ ದಿನಕ್ಕೆ ಮಾನವ ಹಾಗೂ ಪ್ರಾಣಿಗಳ ಸಂಘರ್ಷ ಹೆಚ್ಚಾಗುತ್ತಿದ್ದು, ಒಂದೇ ವಾರದಲ್ಲಿ ಕಾಡಾನೆ ದಾಳಿಯಿಂದ ಇಬ್ಬರು ಮೃತಪಟ್ಟಿದ್ದಾರೆ. ಭಾನುವಾರ ಬೆಳಗ್ಗೆ ತೋಟದ ಕೆಲಸಕ್ಕೆ ತೆರಳಿದಾಗ ಹೊಸಪೇಟೆ ಮೂಲದ ಬೋರಮ್ಮ(34), ಕಾಡಾನೆ...

ಬಿಜೆಪಿ ಸೇರ್ಪಡೆಯಾದ ಅಸ್ಸಾಂ ಕಾಂಗ್ರೆಸ್ ಮಾಜಿ ಅಧ್ಯಕ್ಷ ಭೂಪೇನ್ ಬೋರಾ

ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಮಾಜಿ ರಾಜ್ಯಾಧ್ಯಕ್ಷ ಭೂಪೇನ್ ಬೋರಾ ಭಾನುವಾರ (ಫೆ.22) ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಬೋರಾ ಫೆ. 16ರಂದು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಪಕ್ಷದಲ್ಲಿ ತಮ್ಮನ್ನು ನಿರ್ಲಕ್ಷಿಸಲಾಗುತ್ತಿದೆ...

ದೆಹಲಿಯಲ್ಲಿ ಭಯೋತ್ಪಾದನಾ ಸಂಚು ಆರೋಪ: ಬಾಂಗ್ಲಾದೇಶಿ ಪ್ರಜೆಗಳು ಸೇರಿ ಎಂಟು ಮಂದಿ ಬಂಧನ

ನವದೆಹಲಿ: ಪಾಕಿಸ್ತಾನದ ಐಎಸ್‌ಐ ಮತ್ತು ಬಾಂಗ್ಲಾದೇಶ ಮೂಲದ ಉಗ್ರಗಾಮಿ ಸಂಘಟನೆಗಳ ಸೂಚನೆಯ ಮೇರೆಗೆ ದೆಹಲಿಯಲ್ಲಿ ಪ್ರಮುಖ ಭಯೋತ್ಪಾದಕ ಪಿತೂರಿ ನಡೆಸಲು ಸಂಚು ರೂಪಿಸಿದ್ದ ಆರೋಪದ ಮೇಲೆ ಎಂಟು ಶಂಕಿತರನ್ನು ಬಂಧಿಸಲಾಗಿದೆ ಎಂದು ಪೊಲೀಸ್...